ಮೈಸೂರಿನಲ್ಲಿ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ​​ ಕೇಸ್​: ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆಗೆ ನೋಟಿಸ್!

ಮೈಸೂರಿನಲ್ಲಿ ನಡೆದ ಬಾಲಕಿ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆ ಕುರಿತು ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ರೇಣುಕಾರಾಜು ಸಾಮಾಜಿಕ ಜಾಲತಾಣದಲ್ಲಿ ಆಧಾರರಹಿತ ಪೋಸ್ಟ್ ಮಾಡಿದ್ದಕ್ಕಾಗಿ ಅವರಿಗೆ ಪೊಲೀಸ್ ನೋಟಿಸ್ ಜಾರಿ ಮಾಡಲಾಗಿದೆ. ಹೀಗಾಗಿ ಕೂಡಲೇ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಸೂಚಿಸಿದ್ದಾರೆ.

ಮೈಸೂರಿನಲ್ಲಿ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ​​ ಕೇಸ್​: ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆಗೆ ನೋಟಿಸ್!
ಅಧ್ಯಕ್ಷೆ ರೇಣುಕಾರಾಜು
Edited By:

Updated on: Oct 13, 2025 | 6:01 PM

ಮೈಸೂರು, ಅಕ್ಟೋಬರ್​ 13: ಮೈಸೂರಿನಲ್ಲಿ (Mysuru) ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಪ್ರಕರಣ ಸದ್ಯ ರಾಜ್ಯದಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ. ಘಟನೆ ನಡೆದ 24 ಗಂಟೆಯೊಳಗೆ ಪೊಲೀಸರು ಆರೋಪಿ ಹೆಡೆಮುರಿಕಟ್ಟಿದ್ದಾರೆ. ಸದ್ಯ ಈ ಕೇಸ್​ಗೆ ಸಂಬಂಧಿಸಿದಂತೆ ಬಿಜೆಪಿ (bjp) ಮಹಿಳಾ ಮೋರ್ಚಾ ಅಧ್ಯಕ್ಷೆ ರೇಣುಕಾರಾಜುಗೆ ಪೊಲೀಸರು ನೋಟಿಸ್ ನೀಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ.

ಅಧ್ಯಕ್ಷೆ ರೇಣುಕಾರಾಜು ಮಾಡಿದ್ದ ಪೋಸ್ಟ್ ಏನು?

ಪ್ರಕರಣ ನಡೆದು 24 ಗಂಟೆಯೊಳಗೆ ಪೊಲೀಸರು ಓರ್ವ ಆರೋಪಿಯನ್ನ ಬಂಧಿಸಿದ್ದರು. ಈ ವಿಚಾರವಾಗಿ ‘ಪ್ರಕರಣದ ನಿಜವಾದ ಆರೋಪಿಯನ್ನು ಪೊಲೀಸರು ಬಂಧಿಸಿಲ್ಲ. ಆರೋಪಿ ಬಂಧನ ಎಂದು ಹೇಳಿರುವ ವಿಚಾರದಲ್ಲಿ ವಿಶ್ವಾಸವಿಲ್ಲ. ಈ ಬಗ್ಗೆ ಕೂಲಂಕಷವಾಗಿ ತನಿಖೆಯಾಗಬೇಕು’ ಎಂದು ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ರೇಣುಕಾರಾಜು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು.

ಇದನ್ನೂ ಓದಿ: ಮೈಸೂರು ದಸರೆಗೆ ಬಲೂನ್ ಮಾರಲು ಬಂದಿದ್ದ ಬಾಲಕಿ ಅತ್ಯಾಚಾರ ಕೊಲೆ:ಕೀಚಕನಿಗೆ ಪೊಲೀಸ್ ಗುಂಡೇಟು

ಸದರಿ ಹೇಳಿಕೆ ಜಾಲತಾಣದಲ್ಲಿ ವ್ಯಾಪಕವಾಗಿ ವೈರಲ್ ಆಗುತ್ತಿದೆ. ಈ ಪ್ರಕರಣವು ಘೋರ, ಅತಿಸೂಕ್ಷ್ಮ, ಗಂಭೀರ ಪ್ರಕರಣವಾಗಿದ್ದು, ವೈಜ್ಞಾನಿಕ ಹಾಗೂ ಪಾರದರ್ಶಕವಾಗಿ ತನಿಖೆ ಮಾಡುತ್ತಿದ್ದರೂ ನೀವು ಪೊಲೀಸರ ಬಗ್ಗೆ ಸಾರ್ವಜನಿಕರಿಗೆ ತಪ್ಪು ಸಂದೇಶ ನೀಡಿ, ಆಧಾರ ರಹಿತ ಹೇಳಿಕೆ ನೀಡಿದ್ದು ಮೇಲ್ನೋಟಕ್ಕೆ ಕಂಡುಬರುತ್ತಿದ್ದು, ನಿಮ್ಮ ಮೇಲೆ ಏಕೆ ಕ್ರಮ ತೆಗೆದುಕೊಳ್ಳಬಾರದೆಂದು ಪೊಲೀಸರು ನೋಟಿಸ್ ನೀಡಿದ್ದಾರೆ. ಈ ನೋಟಿಸ್ ತಲುಪಿದ ಕೂಡಲೇ ವಿಚಾರಣೆಗೆ ಹಾಜರಾಗುವಂತೆ ತನಿಖಾಧಿಕಾರಿ ಸೂಚಿಸಿದ್ದಾರೆ.

ಘಟನೆ ಹಿನ್ನೆಲೆ

ಅದ್ಧೂರಿಯಾಗಿ ನಡೆದ ದಸರಾ ಅಂತ್ಯವಾಗಿತ್ತು. ಮೈಸೂರಿನ ದಸರಾ ಜನರ ಪಾಲಿಗೆ ಕೇವಲ ಕಣ್ಮನ ಸೆಳೆಯೋ ಹಬ್ಬವಾದರೆ, ವ್ಯಾಪಾರಿಗಳ ಪಾಲಿಗೆ ಇದು ಹೊಟ್ಟೆ ತುಂಬಿಸುವ ಕಾರ್ಯಕ್ರಮ. ಇದೇ ದಸರಾದಲ್ಲಿ ವ್ಯಾಪಾರಕ್ಕೆ ಅಂತಾ ದೂರದ ಊರುಗಳಿಂದ ಜನ ಬರ್ತಾರೆ. ಹೀಗೆ ಬಲೂನ್‌ ಬೊಂಬೆ ಮಾರಾಟಕ್ಕೆ ಹಕ್ಕಿಬಿಕ್ಕಿ ಜನಾಂಗದವರು ಬಂದಿದ್ದರು.

ಇದನ್ನೂ ಓದಿ: ಮೈಸೂರು ದಸರೆಗೆ ಬಲೂನ್‌ ಮಾರಲು ಬಂದಿದ್ದ ಬಾಲಕಿ ಶವ ಪತ್ತೆ, ಅತ್ಯಾಚಾರ ಶಂಕೆ

ಅರಮನೆ ಮುಂಭಾಗ ದೊಡ್ಡಕೆರೆ ಮೈದಾನದಲ್ಲಿ ತಾತ್ಕಾಲಿಕ ಟೆಂಟ್‌ ಹಾಕಿಕೊಂಡು ವಾಸವಾಗಿದ್ದರು. ಹೀಗಿರುವಾಗಲೇ ಅಕ್ಟೋಬರ್‌ 9 ರ ಬೆಳಗಿನಜಾವ ಘೋರವೇ ನಡೆದಿತ್ತು. ಫೋಷಕರ ಜತೆಗಿದ್ದ ಬಾಲಕಿಯನ್ನ ಎಳೆದೊಯ್ದಿದ್ದ ಅದೊಬ್ಬ ದುರುಳ ಅತ್ಯಾಚಾರ ಎಸಗಿ ಕೊಲೆ ಮಾಡಿ ಎಸ್ಕೇಪ್ ಆಗಿದ್ದ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ರಾಮ್​, ಮೈಸೂರು

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
Follow Us