AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಸರಾ ನೋಡಲು ಬಂದಿದ್ದ ಬೆಂಗಳೂರಿನ ಆಟೋ ಚಾಲಕ ಮೈಸೂರಿನ ವಸತಿ ಗೃಹದಲ್ಲಿ ನೇಣಿಗೆ ಶರಣು

ಶಿವರಾಜ್, ಮೈಸೂರಿನ ಸಂಗಂ ಚಿತ್ರಮಂದಿರದ ಬಳಿಯ ಲಾಡ್ಜ್​​ನಲ್ಲಿ ಸಾವಿಗೀಡಾಗಿದ್ದು, ಅಕ್ಟೋಬರ್ 1 ರಂದು ಕೊಠಡಿ ಬಾಡಿಗೆ ಪಡೆದಿದ್ದಾನೆ. ದಸರಾ ನೋಡಲು ಬಂದಿರುವುದಾಗಿ ಕೊಠಡಿ ಪಡೆದಿದ್ದ ಶಿವರಾಜ್, ಎರಡು ದಿನಗಳು ಕೊಠಡಿ ಬಾಗಿಲು ತೆರೆದಿರಲಿಲ್ಲ. ಇದೀಗ ನೇಣಿಗೆ ಶರಣಾಗಿರುವುದು ಪತ್ತೆಯಾಗಿದೆ.

ದಸರಾ ನೋಡಲು ಬಂದಿದ್ದ ಬೆಂಗಳೂರಿನ ಆಟೋ ಚಾಲಕ ಮೈಸೂರಿನ ವಸತಿ ಗೃಹದಲ್ಲಿ ನೇಣಿಗೆ ಶರಣು
ದಸರಾ ನೋಡಲು ಬಂದಿದ್ದ ಬೆಂಗಳೂರಿನ ಆಟೋ ಚಾಲಕ ಮೈಸೂರಿನ ವಸತಿ ಗೃಹದಲ್ಲಿ ನೇಣಿಗೆ ಶರಣು
TV9 Web
| Updated By: ಸಾಧು ಶ್ರೀನಾಥ್​|

Updated on:Oct 20, 2021 | 11:51 AM

Share

ಮೈಸೂರು: ವಿಶ್ವವಿಖ್ಯಾತ ದಸರಾ ನೋಡಲು ಬಂದಿದ್ದ ಬೆಂಗಳೂರಿನ ಆಟೋ ಚಾಲಕರೊಬ್ಬರು ಮೈಸೂರಿನ ವಸತಿ ಗೃಹದಲ್ಲಿ ನೇಣಿಗೆ ಶರಣಾಗಿದ್ದಾರೆ. ಶಿವರಾಜ್ (28 ) ಮೃತ ದುರ್ದೈವಿ. ಮಂಡ್ಯ ಜಿಲ್ಲೆ ಕೆ.ಆರ್. ಪೇಟೆ ತಾಲೂಕಿನ ಶಿವರಾಜ್, ಬೆಂಗಳೂರಿನಲ್ಲಿ ಆಟೋ ಚಾಲಕರಾಗಿದ್ದರು. ಲಷ್ಕರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಿವರಾಜ್, ಮೈಸೂರಿನ ಸಂಗಂ ಚಿತ್ರಮಂದಿರದ ಬಳಿಯ ಲಾಡ್ಜ್​​ನಲ್ಲಿ ಸಾವಿಗೀಡಾಗಿದ್ದು, ಅಕ್ಟೋಬರ್ 1 ರಂದು ಕೊಠಡಿ ಬಾಡಿಗೆ ಪಡೆದಿದ್ದಾನೆ. ದಸರಾ ನೋಡಲು ಬಂದಿರುವುದಾಗಿ ಕೊಠಡಿ ಪಡೆದಿದ್ದ ಶಿವರಾಜ್, ಎರಡು ದಿನಗಳು ಕೊಠಡಿ ಬಾಗಿಲು ತೆರೆದಿರಲಿಲ್ಲ. ಇದೀಗ ನೇಣಿಗೆ ಶರಣಾಗಿರುವುದು ಪತ್ತೆಯಾಗಿದೆ.

ಪ್ರೇಮ ವೈಫಲ್ಯ: ಮಧ್ಯ ಪ್ರದೇಶದಲ್ಲಿ ಉದ್ಯೋಗದಲ್ಲಿದ್ದ ಕೊಡಗು ಮೂಲದ ಯುವಕ ಆತ್ಮಹತ್ಯೆ

ಮಡಿಕೇರಿ: ಮಧ್ಯ ಪ್ರದೇಶದಲ್ಲಿ ಕೊಡಗು ಮೂಲದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪ್ರೇಮ ವೈಫಲ್ಯದ ಹಿನ್ನೆಲೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಸುಳುಗೋಡಿನ ದರ್ಶನ್ ಮಧ್ಯಪ್ರದೇಶದ ಸಿಂಗ್ರೋಳ್ಳಿ ಎಂಬಲ್ಲಿ ಉದ್ಯೋಗದಲ್ಲಿದ್ದ ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿ ಎಂದು ತಿಳಿದುಬಂದಿದೆ. ತನ್ನ ಸಾವಿಗೆ ದಿವ್ಯಾ, ಅವರ ಕುಟುಂಬಸ್ಥರೇ ಕಾರಣ ಎಂದು ಡೆತ್‌ನೋಟ್ ಬರೆದಿಟ್ಟು ದರ್ಶನ್ (28) ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ದರ್ಶನ್, ತನ್ನದೇ ಊರಿನ ದಿವ್ಯಾ ಎಂಬಾಕೆಯನ್ನ 8 ವರ್ಷಗಳಿಂದ ಪ್ರೀತಿಸುತ್ತಿದ್ದ. ಆದರೆ ದರ್ಶನ್ ಜೊತೆ ವಿವಾಹ ನಿರಾಕರಿಸಿ ದಿವ್ಯಾ ಕಳೆದ ನಾಲ್ಕು ತಿಂಗಳಿನಿಂದ ಪೊಲೀಸ್ ಒಬ್ಬರನ್ನು ಪ್ರೀತಿಸುತ್ತಿದ್ದರು. ದಿವ್ಯಾ ಮೋಸದಿಂದ ತೀವ್ರ ಮನನೊಂದಿದ್ದ ದರ್ಶನ್ ಸಾವಿಗೆ ಕೊರಳೊಡ್ಡಿದ್ದಾನೆ. ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಡೆತ್ ನೋಟ್ ಬರೆದಿರುವ ದರ್ಶನ್, ತನ್ನ ಸಾವಿಗೆ ದಿವ್ಯಾ ಮತ್ತು ಮನೆಯವರು ಕಾರಣ‌ ಎಂದು ಉಲ್ಲೇಖ ಮಾಡಿದ್ದಾನೆ.

(Bangalore auto driver commits suicide in a lodge in mysuru, virajpet youth working in madhya pradesh commits suicide due to love failure)

Published On - 11:32 am, Wed, 20 October 21

ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್