AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು-ಮೈಸೂರು ರಸ್ತೆ ಎಕ್ಸಪ್ರೆಸ್​ ವೇ ಅಲ್ಲ ಪ್ರವೇಶ ನಿಯಂತ್ರಿತ ಹೆದ್ದಾರಿ: ಎನ್​ಹೆಚ್​ಎಐ

ಬೆಂಗಳೂರು-ಮೈಸೂರು 100 ಕಿಮೀ ವೇಗದ ಮಿತಿ ಇರುವ ರಾಷ್ಟ್ರೀಯ ಹೆದ್ದಾರಿ ಹೊರತು ಸದ್ಯ ಬಿಂಬಿತವಾಗಿರುವ 120 ಕಿಮೀ ವೇಗದಲ್ಲಿ ವಾಹನ ಓಡಿಸುವ ಎಕ್ಸಪ್ರೆಸ್​ ವೇ ಅಲ್ಲ ಎಂದು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸ್ಪಷ್ಟಪಡಿಸಿದೆ.

ಬೆಂಗಳೂರು-ಮೈಸೂರು ರಸ್ತೆ ಎಕ್ಸಪ್ರೆಸ್​ ವೇ ಅಲ್ಲ ಪ್ರವೇಶ ನಿಯಂತ್ರಿತ ಹೆದ್ದಾರಿ: ಎನ್​ಹೆಚ್​ಎಐ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ
Follow us
ವಿವೇಕ ಬಿರಾದಾರ
|

Updated on:Aug 04, 2023 | 11:21 AM

ಬೆಂಗಳೂರು: ಬೆಂಗಳೂರು-ಮೈಸೂರು  ರಸ್ತೆ 100 ಕಿಮೀ ವೇಗದ ಮಿತಿ ಇರುವ ರಾಷ್ಟ್ರೀಯ ಹೆದ್ದಾರಿ ಹೊರತು ಸದ್ಯ ಬಿಂಬಿತವಾಗಿರುವ 120 ಕಿಮೀ ವೇಗದಲ್ಲಿ ವಾಹನ ಓಡಿಸುವ ಎಕ್ಸಪ್ರೆಸ್​ ವೇ ಅಲ್ಲ ಎಂದು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI ) ಸ್ಪಷ್ಟಪಡಿಸಿದೆ. ಅಗಸ್ಟ್​ 1 ರಿಂದ ದ್ವಿಚಕ್ರ ಮತ್ತು ತ್ರಿಚಕ್ರ ಹಾಗೂ ಮೋಟಾರು ರಹಿತ ವಾಹನಗಳಿಗೆ ನಿರ್ಬಂಧಿಸಿದ್ದನ್ನು ಪ್ರಯಾಣಿಕರು ಪ್ರಶ್ನಿಸಿದ ನಂತರ ಎನ್​ಹೆಚ್​ಎಐ ಈ ಸ್ಪಷ್ಟೀಕರಣ ನೀಡಿದೆ.

ಬೆಂಗಳೂರು-ಮೈಸೂರು ಪ್ರವೇಶ ನಿಯಂತ್ರಿತ ಹೆದ್ದಾರಿಯಲ್ಲಿ ಗರಿಷ್ಠ ವೇಗದ ಮಿತಿ 100 ಕಿಮೀ ಆಗಿದೆ. ದೇಶದ ಇತರ ಕಡೆಗಳಲ್ಲಿ ಇರುವ ಎಕ್ಸ್​ಪ್ರೆಸ್​​ವೇಯಂತೆ ಇದು ಕೂಡ ಎಂದು ಜನರು ಗೊಂದಲ ಮಾಡಿಕೊಂಡು ಗರಿಷ್ಠ ವೇಗದ ಮಿತಿ ಗಂಟೆಗೆ 120 ಕಿಮೀ ಇದೆ ಎಂದು ಭಾವಿಸಿದ್ದಾರೆ. ನಮ್ಮ ಅಧಿಸೂಚನೆಗಳು ಇದು ಪ್ರವೇಶ ನಿಯಂತ್ರಿತ ಹೆದ್ದಾರಿ ಹೊರತು ಎಕ್ಸ್‌ಪ್ರೆಸ್‌ವೇ ಅಲ್ಲ ಎಂದು ಸ್ಪಷ್ಟವಾಗಿ ಹೇಳುತ್ತವೆ. ಹೆದ್ದಾರಿಯನ್ನು 100 ಕಿಮೀ ಗರಿಷ್ಠ ವೇಗ ಮಿತಿಗಾಗಿ ವಿನ್ಯಾಸಗೊಳಿಸಲಾಗಿದೆ, 120 ಕಿಮೀ ಅಲ್ಲ. ಮೂಲಸೌಕರ್ಯವು ಎಕ್ಸ್‌ಪ್ರೆಸ್‌ವೇಯಂತೆ ಕಾಣುವುದರಿಂದ, ಜನರು ಇದನ್ನು ಎಕ್ಸ್‌ಪ್ರೆಸ್‌ವೇ ಎಂದು ಕರೆಯುತ್ತಿರಬಹುದು ಎಂದು ಎನ್​ಹೆಚ್​ಎಐ ಪ್ರಾದೇಶಿಕ ಅಧಿಕಾರಿ ವಿವೇಕ್​ ಜೈಸ್ವಾಲ್​ ಸ್ಪಷ್ಟನೆ ನೀಡಿದ್ದಾರೆ.

ಆಟೋಗಳು, ಬೈಕ್‌ಗಳು ಮತ್ತು ಇತರ ನಿಧಾನವಾಗಿ ಚಲಿಸುವ ವಾಹನಗಳ ವೇಗದ ಮಿತಿಯು 80 ಗಂಟೆಗೆ ಕಿಮೀ ಇರುತ್ತದೆ. ಹೀಗಾಗಿ ಹೆದ್ದಾರಿಯಲ್ಲಿ ನಿರ್ಭಂದಿಸಲಾಗಿದೆ. ಹೆದ್ದಾರಿ ಉದ್ಘಾಟನೆ ಒಂದು ದಿನ ಮೊದಲು ಪ್ರಧಾನಿಯವರ ಟ್ವಿಟರ್ ಹ್ಯಾಂಡಲ್‌ನಲ್ಲಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಅನ್ನು ರಾಷ್ಟ್ರಕ್ಕೆ ಸಮರ್ಪಿಸಲಾಗುವುದು ಎಂದು ಫೋಸ್ಟ್​್ ಮಾಡಲಾಗಿತ್ತು. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಕೂಡ ಯೋಜನೆಯ ಪ್ರಗತಿಯ ಬಗ್ಗೆ ನವೀಕರಿಸುವಾಗ ಮತ್ತು ಅದರ ವೈಶಿಷ್ಟ್ಯಗಳ ವಿವರಗಳನ್ನು ಹಂಚಿಕೊಳ್ಳುವಾಗ ಎಕ್ಸ್‌ಪ್ರೆಸ್‌ವೇ ಎಂದು ಕರೆದಿದ್ದರು.

ಇದನ್ನೂ ಓದಿ: NHAI ಅಧಿಕಾರಿಗಳ ನಿರ್ಲಕ್ಷ್ಯ, ಬೆಂಗಳೂರು-ಮೈಸೂರು ಹೆದ್ದಾರಿಗೆ ಅವಳಡಿಸಿದ್ದ ಎಎನ್​ಪಿಆರ್ ಕ್ಯಾಮರಾಗಳು ಮೂರೇ ದಿನಕ್ಕೆ ಬಂದ್

ರಸ್ತೆ ಉದ್ಘಾಟನೆಗೂ ಮುನ್ನ ರಾಜ್ಯದಲ್ಲಿನ ಬಿಜೆಪಿ ಸರ್ಕಾರವು ಪ್ರಕಟಿಸಿದ ಜಾಹೀರಾತುಗಳಲ್ಲಿ ಇದು ಎಕ್ಸ್‌ಪ್ರೆಸ್‌ವೇ ಎಂದು ಉಲ್ಲೇಖಿಸಲಾಗಿದೆ. ರಸ್ತೆಯಲ್ಲಿ ವೇಗವಾಗಿ ಚಲಿಸುವವರಿಗೆ ದಂಡ ವಿಧಿಸಲು ಪೊಲೀಸರು AI ಆಧಾರಿತ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.

ಅಲ್ಲದೇ ಸಂಚಾರ ಮತ್ತು ರಸ್ತೆ ಸುರಕ್ಷತೆ ಎಡಿಜಿಪಿ ಅಲೋಕ್ ಕುಮಾರ್ ಹೊಸ ಆರು ಪಥಗಳ ಬೆಂಗಳೂರುಮೈಸೂರು ರಸ್ತೆ ಎಕ್ಸ್‌ಪ್ರೆಸ್‌ವೇ ಅಲ್ಲ. ಇದು ಪ್ರವೇಶ-ನಿಯಂತ್ರಿತ NH-275 ಮತ್ತು NHAI ನಿಂದ ನಿರ್ವಹಿಸಲ್ಪಡುತ್ತದೆ ಎಂದು ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:19 am, Fri, 4 August 23

ರಾಗಿಣಿ ಹಾಗೂ ಕುರಿ ಸೇರಿದ್ರೆ ‘ಕುರಾಗಿಣಿ’; ಪ್ರತಾಪ್ ಲೆಕ್ಕಾಚಾರ ನೋಡಿ
ರಾಗಿಣಿ ಹಾಗೂ ಕುರಿ ಸೇರಿದ್ರೆ ‘ಕುರಾಗಿಣಿ’; ಪ್ರತಾಪ್ ಲೆಕ್ಕಾಚಾರ ನೋಡಿ
ಬರೋಬ್ಬರಿ 90.23 ಮೀಟರ್: ಹೊಸ ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ
ಬರೋಬ್ಬರಿ 90.23 ಮೀಟರ್: ಹೊಸ ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ
ಸೂರ್ಯ ವೃಷಭ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
ಸೂರ್ಯ ವೃಷಭ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ