AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysuru News: ಮೈಸೂರಿನಲ್ಲಿ ಮುಂದುವರಿದ ಪುಂಡರ ಅಟ್ಟಹಾಸ; ವಿವಿಧ ರಸ್ತೆಗಳಲ್ಲಿ ಪುಂಡು ಪೋಕರಿಗಳಿಂದ ಬೈಕ್ ವ್ಹೀಲಿಂಗ್​

ಘಟನೆ ನಂತರ ಬೈಕ್​ನಲ್ಲಿ ವ್ಹೀಲಿಂಗ್ ಮಾಡುತ್ತಿದ್ದ ಮೂವರು ಪರಾರಿಯಾಗಿದ್ದರು. ಸಿದ್ದಾರ್ಥನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Mysuru News: ಮೈಸೂರಿನಲ್ಲಿ ಮುಂದುವರಿದ ಪುಂಡರ ಅಟ್ಟಹಾಸ; ವಿವಿಧ ರಸ್ತೆಗಳಲ್ಲಿ ಪುಂಡು ಪೋಕರಿಗಳಿಂದ ಬೈಕ್ ವ್ಹೀಲಿಂಗ್​
ಮೈಸೂರು ಬೆಂಗಳೂರು ಎಕ್ಸ್‌ಪ್ರೆಸ್‌ವೇ ಸರ್ವಿಸ್‌ ರಸ್ತೆಯಲ್ಲಿ ವ್ಹೀಲಿಂಗ್
ರಾಮ್​, ಮೈಸೂರು
| Updated By: Ganapathi Sharma|

Updated on:Jul 20, 2023 | 10:22 PM

Share

ಮೈಸೂರು, ಜುಲೈ 20: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ (Mysuru) ಪುಂಡರ ಅಟ್ಟಹಾಸ ಮುಂದುವರಿದಿದ್ದು, ನಗರದ ವಿವಿಧ ರಸ್ತೆಗಳಲ್ಲಿ ಪುಂಡು ಪೋಕರಿಗಳು ಬೈಕ್ ವ್ಹೀಲಿಂಗ್​ ನಡೆಸುವುದು ಮುಂದುವರಿದಿದೆ. ಕೆಲವರು ವ್ಹೀಲಿಂಗ್ (Wheeling) ಮಾಡುತ್ತಲೇ ಶಿಕ್ಷಕಿಯೊಬ್ಬರ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಘಟನೆ ಜುಲೈ 18ರಂದು ನಡೆದಿದೆ. ಶಿಕ್ಷಕಿ ಶಾಲೆಯಿಂದ ಮನೆಗೆ ತೆರಳುತ್ತಿದ್ದ ವೇಳೆ ಪುಂಡರು ಗಾಯತ್ರಿಪುರಂನ ಚರ್ಚ್​ ಬಳಿ ವ್ಹೀಲಿಂಗ್ ಮಾಡುತ್ತಾ ಅವರ ದ್ವಿಚಕ್ರ ವಾಹನಕ್ಕೆ ಕೆಟಿಎಂ ಬೈಕ್ ಡಿಕ್ಕಿಹೊಡೆದಿದ್ದಾರೆ. ಇದರಿಂದ ಕೆಳಬಿದ್ದ ಶಿಕ್ಷಕಿ ತೀವ್ರ ರಕ್ತಸ್ರಾವವಾಗಿ ಪ್ರಜ್ಞೆತಪ್ಪಿದ್ದಾರೆ. ನಂತರ ರಕ್ತದ ಮಡುವಿನಲ್ಲಿ ಬಿದ್ದಿದ್ದ ಶಿಕ್ಷಕಿಯನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಸದ್ಯ ಶಿಕ್ಷಕಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಘಟನೆ ನಂತರ ಬೈಕ್​ನಲ್ಲಿ ವ್ಹೀಲಿಂಗ್ ಮಾಡುತ್ತಿದ್ದ ಮೂವರು ಪರಾರಿಯಾಗಿದ್ದರು. ಸಿದ್ದಾರ್ಥನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರು ಮೈಸೂರು ಎಕ್ಸ್​​ಪ್ರೆಸ್ ವೇಯಲ್ಲೂ ವ್ಹೀಲಿಂಗ್

ಮೈಸೂರು ಬೆಂಗಳೂರು ಎಕ್ಸ್‌ಪ್ರೆಸ್‌ವೇ ಸರ್ವಿಸ್‌ ರಸ್ತೆಯಲ್ಲಿ ವ್ಹೀಲಿಂಗ್ ಮಾಡುತ್ತಿದ್ದ ಯುವಕನನ್ನು ಬಿಡದಿ ಪೊಲೀಸರು ಗುರುವಾರ ಬಂಧಿಸಿದ್ದಾರೆ. ಆರೋಪಿಯನ್ನು ರಾಮನಗರ ಜಿಲ್ಲೆಯ ಬಾನಂದೂರು ಗ್ರಾಮದ ದರ್ಶನ್ ಎಂದು ಗುರುತಿಸಲಾಗಿದೆ.

ದರ್ಶನ್ ಕೇತಗಾನಹಳ್ಳಿ ಬಳಿ ವ್ಹೀಲಿಂಗ್ ಮಾಡಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದರು. ದರ್ಶನ್ ಪೋಸ್ಟ್ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಸಂಚಾರ ಪೊಲೀಸರು ಮೋಟಾರು ವಾಹನ ಕಾಯ್ದೆಯಡಿ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿದ್ದರು.

ಇದನ್ನೂ ಓದಿ: Bengaluru Mysuru Highway: ಎಕ್ಸ್‌ಪ್ರೆಸ್‌ ವೇನಲ್ಲೂ ಶುರುವಾಯ್ತು ವ್ಹೀಲಿಂಗ್, ಪುಂಡರ ಹೆಡೆಮುರಿ ಕಟ್ಟಿದ ಪೊಲೀಸ್ರು

ಈ ತಿಂಗಳ ಆರಂಭದಲ್ಲಿ, ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಬೈಕ್ ಸ್ಟಂಟ್‌ಗಳ ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ರಾಮನಗರ ಪೊಲೀಸರು ಇಬ್ಬರು ಯುವಕರನ್ನು ಬಂಧಿಸಿದ್ದರು.

ರಾಜ್ಯದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:22 pm, Thu, 20 July 23

ಸಾಲು ಸಾಲು ರಜೆ: ಊರಿಗೆ ತೆರಳುತ್ತಿರುವ ಜನ, ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್
ಸಾಲು ಸಾಲು ರಜೆ: ಊರಿಗೆ ತೆರಳುತ್ತಿರುವ ಜನ, ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್
‘ಖಂಡಿತವಾಗಿಯೂ ನ್ಯಾಯ ಗೆಲ್ಲುತ್ತದೆ’: ದರ್ಶನ್ ಕೇಸ್ ಬಗ್ಗೆ ರಾಗಿಣಿ ಮಾತು
‘ಖಂಡಿತವಾಗಿಯೂ ನ್ಯಾಯ ಗೆಲ್ಲುತ್ತದೆ’: ದರ್ಶನ್ ಕೇಸ್ ಬಗ್ಗೆ ರಾಗಿಣಿ ಮಾತು
ಕೊಲ್ಕತ್ತಾ ಮೆಟ್ರೋದಲ್ಲಿ ವಿದ್ಯಾರ್ಥಿಗಳು, ಕಾರ್ಮಿಕರ ಜೊತೆ ಮೋದಿ ಪ್ರಯಾಣ
ಕೊಲ್ಕತ್ತಾ ಮೆಟ್ರೋದಲ್ಲಿ ವಿದ್ಯಾರ್ಥಿಗಳು, ಕಾರ್ಮಿಕರ ಜೊತೆ ಮೋದಿ ಪ್ರಯಾಣ
ಶಾಸಕರ ಸಭೆ ಕರೆದು ಅನುದಾನ ಬಿಡುಗಡೆ ಮಾಡುವ ಭರವಸೆ ನೀಡಿದ ಸಿಎಂ
ಶಾಸಕರ ಸಭೆ ಕರೆದು ಅನುದಾನ ಬಿಡುಗಡೆ ಮಾಡುವ ಭರವಸೆ ನೀಡಿದ ಸಿಎಂ
ವೀರಶೈವ ಲಿಂಗಾಯತ ಶಾಸಕರ ಸಭೆ: ಜಾತಿ ಗಣತಿ ಬಗ್ಗೆ ಮಹತ್ವದ ನಿರ್ಣಯ
ವೀರಶೈವ ಲಿಂಗಾಯತ ಶಾಸಕರ ಸಭೆ: ಜಾತಿ ಗಣತಿ ಬಗ್ಗೆ ಮಹತ್ವದ ನಿರ್ಣಯ
ಮುಂದಿನ ಚುನಾವಣೆಯಲ್ಲಿ 175 ಸೀಟು ಗೆಲ್ಲುತ್ತೇವೆ, ಬರೆದಿಟ್ಟುಕೊಳ್ಳಿ: ಅಶೋಕ
ಮುಂದಿನ ಚುನಾವಣೆಯಲ್ಲಿ 175 ಸೀಟು ಗೆಲ್ಲುತ್ತೇವೆ, ಬರೆದಿಟ್ಟುಕೊಳ್ಳಿ: ಅಶೋಕ
ಕೊಲ್ಕತ್ತಾದಲ್ಲಿ ಹೊಸ ಮೆಟ್ರೋ ಮಾರ್ಗಗಳಿಗೆ ಪ್ರಧಾನಿ ಮೋದಿ ಚಾಲನೆ
ಕೊಲ್ಕತ್ತಾದಲ್ಲಿ ಹೊಸ ಮೆಟ್ರೋ ಮಾರ್ಗಗಳಿಗೆ ಪ್ರಧಾನಿ ಮೋದಿ ಚಾಲನೆ
ಧರ್ಮಸ್ಥಳ ಪ್ರಕರಣದ ಬಗ್ಗೆ ನಟಿ ರಮ್ಯಾ ಮಾತು
ಧರ್ಮಸ್ಥಳ ಪ್ರಕರಣದ ಬಗ್ಗೆ ನಟಿ ರಮ್ಯಾ ಮಾತು
ಚುನಾವಣಾ ಅಯೋಗದ ವಿರುದ್ಧ ಅಭಿಯಾನ ನಡೆಸುತ್ತಿರುವ ರಾಹುಲ್ ಗಾಂಧಿ
ಚುನಾವಣಾ ಅಯೋಗದ ವಿರುದ್ಧ ಅಭಿಯಾನ ನಡೆಸುತ್ತಿರುವ ರಾಹುಲ್ ಗಾಂಧಿ
ನಿಮ್ಮನ್ನೂ ದೇವೇಗೌಡ್ರು ಉಚ್ಛಾಟಿಸಿದ್ರು: ಸಿದ್ದರಾಮಯ್ಯಗೆ ಯತ್ನಾಳ್ ಚಮಕ್
ನಿಮ್ಮನ್ನೂ ದೇವೇಗೌಡ್ರು ಉಚ್ಛಾಟಿಸಿದ್ರು: ಸಿದ್ದರಾಮಯ್ಯಗೆ ಯತ್ನಾಳ್ ಚಮಕ್