AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲಿ ಯದುವೀರ್ ಆ್ಯಕ್ಟಿವ್; ಇನ್ನೂ ಅಂತಿಮವಾಗದ ಕೈ ಅಭ್ಯರ್ಥಿ, ಯತೀಂದ್ರ ಸ್ಪರ್ಧೆಗೆ ಹೆಚ್ಚಿದ ಒತ್ತಡ

ಟಿಕೆಟ್ ಘೋಷಣೆಯಾಗುತ್ತಿದ್ದಂತೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಬಿಜೆಪಿ, ಜೆಡಿಎಸ್ ನಾಯಕರ ಮನೆಗಳಿಗೆ ಭೇಟಿ ನೀಡಿ ವಿಶ್ವಾಸಕ್ಕೆ ತೆಗೆದುಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ. ನಿನ್ನೆ ಕೊಡಗು ಪ್ರವಾಸ ಕೈಗೊಂಡಿದ್ದ ಯದುವೀರ್, ಕಾರ್ಯಕರ್ತರ ಜೊತೆ ಊಟ ಮಾಡಿದ್ದರು.

ಮೈಸೂರಿನಲ್ಲಿ ಯದುವೀರ್ ಆ್ಯಕ್ಟಿವ್; ಇನ್ನೂ ಅಂತಿಮವಾಗದ ಕೈ ಅಭ್ಯರ್ಥಿ, ಯತೀಂದ್ರ ಸ್ಪರ್ಧೆಗೆ ಹೆಚ್ಚಿದ ಒತ್ತಡ
ಮೈಸೂರಿನಲ್ಲಿ ಯದುವೀರ್ ಆ್ಯಕ್ಟಿವ್; ಇನ್ನೂ ಅಂತಿಮವಾಗದ ಕೈ ಅಭ್ಯರ್ಥಿ, ಯತೀಂದ್ರ ಸ್ಪರ್ಧೆಗೆ ಹೆಚ್ಚಿದ ಒತ್ತಡ
ರಾಮ್​, ಮೈಸೂರು
| Edited By: |

Updated on: Mar 16, 2024 | 8:18 AM

Share

ಮೈಸೂರು, ಮಾ.16: ಟಿಕೆಟ್ ಘೋಷಣೆಯಾಗುತ್ತಿದ್ದಂತೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ (Yaduveer Krishnadatta Chamaraja Wadiyar) ಅವರು ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಬಿಜೆಪಿ, ಜೆಡಿಎಸ್ ನಾಯಕರ ಮನೆಗಳಿಗೆ ಭೇಟಿ ನೀಡಿ ವಿಶ್ವಾಸಕ್ಕೆ ತೆಗೆದುಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ.

ಟಿಕೆಟ್ ಘೋಷಣೆಯಾದ ಆರಂಭದಲ್ಲೇ ಫುಲ್ ಆ್ಯಕ್ಟಿವ್ ಆದ ಯದುವೀರ್, ಮೊದಲ ದಿನ ಬಿಜೆಪಿ ನಗರಾಧ್ಯಕ್ಷ ಎಲ್. ನಾಗೇಂದ್ರ ಹಾಗೂ ಮಾಜಿ ಸಚಿವ ಎಸ್.ಎ ರಾಮದಾಸ್ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದರು. ನಿನ್ನೆ ಕೊಡಗು ಪ್ರವಾಸ ಮಾಡಿದ್ದ ಯದುವೀರ್ ಅವರು ಕಾರ್ಯಕರ್ತರೊಂದಿಗೆ ಊಟ ಮಾಡಿದ್ದರು.

ಇದನ್ನೂ ಓದಿ: ಯದುವೀರ್​ಗೆ ವೋಟ್​ ಹಾಕೋದು ಚಾಮುಂಡೇಶ್ವರಿಗೆ ಹೂವು ಹಾಕಿದಂತೆ; ಶಾಸಕ ಜಿಟಿ ದೇವೇಗೌಡ

ಅಡಿಕೆ ತಟ್ಟೆಯಲ್ಲಿ ಊಟ ಮಾಡಿದ್ದ ಯದುವೀರ್, ನಂತರ ಜೆಡಿಎಸ್ ನಾಯಕ ಜಿ.ಟಿ.ದೇವೇಗೌಡ ಅವರನ್ನು ಭೇಟಿಯಾಗಿ ಸಹಕಾರ ಕೋರಿದ್ದರು. ಫುಟ್ ಪಾತ್​ನಲ್ಲಿ ಕಾರ್ಯಕರ್ತರ ಜೊತೆ ಟೀ ಕುಡಿದು ಗಮನ ಸೆಳೆದಿದ್ದರು. ಬಹಳ ಉತ್ಸುಕತೆಯಿಂದ ಚುನಾವಣೆಯಲ್ಲಿ ಓಡಾಟ ನಡೆಸುತ್ತಿರುವ ರಾಜ ವಂಶಸ್ಥ ಯದುವೀರ್, ತಮ್ಮ ನಡೆಯ ಮೂಲಕ ಜನರ ಮಧ್ಯೆ ಇರುತ್ತೇನೆಂಬ ಸಂದೇಶ ರವಾನಿಸಿದ್ದಾರೆ.

ಯತೀಂದ್ರ ಸಿದ್ದರಾಮಯ್ಯ ಸ್ಪರ್ಧೆಗೆ ಒತ್ತಡ

ಮೈಸೂರು ಕೊಡಗು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪ್ರಚಾರ ಕಾರ್ಯ ಆರಂಭಿಸಿದ್ದರೂ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಕಸರತ್ತು ಮುಂದುವರಿದಿದೆ. ನಿನ್ನೆ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಯತೀಂದ್ರ ಸಿದ್ದರಾಮಯ್ಯ ಅವರನ್ನು ಕಣಕ್ಕಿಳಿಸುವಂತೆ ಮುಖಂಡರು ಒತ್ತಾಯಿಸಿದ್ದಾರೆ. ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಎದರು ಯತೀಂದ್ರ ಮಾತ್ರ ಪ್ರಬಲ ಅಭ್ಯರ್ಥಿಯಾಗಲಿದ್ದಾರೆ ಸಿದ್ದರಾಮಯ್ಯಗೆ ಕೈ ನಾಯಕರು ಮನದಟ್ಟು ಮಾಡುವ ಪ್ರಯತ್ನ ನಡೆಸಿದ್ದಾರೆ.

ಇಂದು ಈ ಬಗ್ಗೆ ಮಹತ್ವದ ನಿರ್ಧಾರ ಕೈಗೊಳ್ಳಲಿರುವ ಸಿಎಂ ಸಿದ್ದರಾಮಯ್ಯ, ಅಂತಿಮ ಹಂತದಲ್ಲಿ ಯಾರನ್ನು ಆಯ್ಕೆ ಮಾಡುತ್ತಾರೆ ಎಂಬುದು ಕುತೂಹಲ ಮೂಡಿಸಿದೆ. ಅಲ್ಲದೆ, ಕೊನೇ ಕ್ಷಣದಲ್ಲಿ ಯತೀಂದ್ರ ಅವರನ್ನೇ ಕಣಕ್ಕಿಳಿಸಿದರೂ ಅಚ್ಚರಿ ಪಡಬೇಕಿಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ram
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್