AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಸ್ಲಿಮರಿಂದ ಪೆಟ್ರೋಲ್ ಬಾಂಬ್, ತಲ್ವಾರ್ ಕಿತ್ತುಕೊಳ್ಳದಿದ್ದರೆ ನಾವು ಹಿಡಿಯಬೇಕಾಗುತ್ತೆ: ಪ್ರತಾಪ್ ಸಿಂಹ

ಮಂಡ್ಯ ನಾಗಮಂಗಲದಲ್ಲಿ ಸಂಭವಿಸಿದ ಕೋಮು ಗಲಭೆ ಬಗ್ಗೆ ಬಿಜೆಪಿ ನಾಯಕರು ಒಬ್ಬರಾದ ಮೇಲೊಬ್ಬರಂತೆ ರಾಜ್ಯ ಸರ್ಕಾರದ ವಿರುದ್ಧ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇದೀಗ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ಇನ್ನೂ ಒಂದು ಹೆಜ್ಜೆ ಮುಂದಿಟ್ಟಿದ್ದು, ಮುಸ್ಲಿಮರಿಂದ ಪೆಟ್ರೋಲ್ ಬಾಂಬ್, ತಲ್ವಾರ್ ಕಿತ್ತುಕೊಳ್ಳದಿದ್ದರೆ ಗಣೇಶ ಮೆರವಣಿಗೆ ವೇಳೆ ನಾವೇ ಅದನ್ನು ಹಿಡಿಯಬೇಕಾಗುತ್ತದೆ ಎಂದಿದ್ದಾರೆ.

ಮುಸ್ಲಿಮರಿಂದ ಪೆಟ್ರೋಲ್ ಬಾಂಬ್, ತಲ್ವಾರ್ ಕಿತ್ತುಕೊಳ್ಳದಿದ್ದರೆ ನಾವು ಹಿಡಿಯಬೇಕಾಗುತ್ತೆ: ಪ್ರತಾಪ್ ಸಿಂಹ
ಪ್ರತಾಪ್ ಸಿಂಹImage Credit source: Facebook
ರಾಮ್​, ಮೈಸೂರು
| Edited By: |

Updated on:Sep 13, 2024 | 10:20 AM

Share

ಮೈಸೂರು, ಸೆಪ್ಟೆಂಬರ್ 13: ಮುಸ್ಲಿಮರ ಬಳಿ ಇರುವ ಪೆಟ್ರೋಲ್ ಬಾಂಬ್, ತಲ್ವಾರ್ ಕಿತ್ತುಕೊಳ್ಳಬೇಕು. ಇಲ್ಲದಿದ್ದರೆ ನಾವು ಪೆಟ್ರೋಲ್ ಬಾಂಬ್, ತಲ್ವಾರ್ ಹಿಡಿಯಬೇಕಾಗುತ್ತದೆ. ಗಣೇಶ ಮೆರವಣಿಗೆ ವೇಳೆ ಪೆಟ್ರೋಲ್ ಬಾಂಬ್, ತಲ್ವಾರ್ ಹಿಡಿಯಬೇಕಾಗುತ್ತದೆ ಎಂದು ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ ನೀಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಕಾನೂನು ಸುವ್ಯವಸ್ಥೆ ಹದಗೆಟ್ಟರೆ ಅದಕ್ಕೆ ಸರ್ಕಾರವೇ ನೇರ ಹೊಣೆಯಾಗಲಿದೆ ಎಂದರು.

ಬೇರೆ ಜಿಲ್ಲೆಗಳಲ್ಲಿ ಅದ್ದೂರಿಯಾಗಿ ಗಣೇಶ ಮೆರವಣಿಗೆಗಳು ನಡೆಯುತ್ತವೆ. ಅಷ್ಟರೊಳಗೆ ಸರ್ಕಾರ ಮುಸ್ಲಿಂ ಪುಂಡರ ಮೇಲೆ ನಿಯಂತ್ರಣ ಹೇರಬೇಕು. ನಿಯಂತ್ರಣ ಹೇರದಿದ್ದರೆ ನಮ್ಮ ರಕ್ಷಣೆ ಜವಾಬ್ದಾರಿ ನಮಗೆ ಗೊತ್ತಿದೆ ಎಂದು ಪ್ರತಾಪ್ ಸಿಂಹ ಎಚ್ಚರಿಕೆ ನೀಡಿದ್ದಾರೆ.

ಮಂಡ್ಯದ ನಾಗಮಂಗಲದಲ್ಲಿ ಗಣೇಶೋತ್ಸವ ಮೆರವಣಿಗೆ ಮೇಲೆ ನಡೆದ ಕಲ್ಲು ತೂರಾಟ ಹಾಗೂ ನಂತರದ ಗಲಭೆಯ ಬೆನ್ನಲ್ಲೇ ಪ್ರತಾಪ್ ಸಿಂಹ ಈ ಹೇಳಿಕೆ ನೀಡಿದ್ದಾರೆ.

ಸಿದ್ದರಾಮಯ್ಯ ತಲೆದಂಡ ಖಚಿತ: ಪ್ರತಾಪ್ ಸಿಂಹ

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ತಲೆದಂಡ ಖಚಿತ ಎಂದು ಪ್ರತಾಪ್ ಸಿಂಹ ಅಭಿಪ್ರಾಯಪಟ್ಟಿದ್ದಾರೆ. ಮುಡಾ ಹಗರಣ ವಿಚಾರ ಕೋರ್ಟ್‌ನಲ್ಲಿದೆ. ಆ ಕೇಸ್ ವಿಚಾರ ಏನೇ ಆಗಲಿ ಅದು ಬೇರೆ ವಿಚಾರ. ಆದರೆ, ವಾಲ್ಮೀಕಿ ಹಗರಣದಲ್ಲಿ ಸಿಎಂ ತಲೆದಂಡ ನಿಶ್ಚಿತ. ಅರ್ಥಿಕ ಹಗರಣ ಆದಾಗ ಅದಕ್ಕೆ ಅರ್ಥಿಕ ಸಚಿವರೇ ಹೊಣೆಗಾರರು. ಸಿಎಂ ಅವರೇ 88 ಕೋಟಿ ರೂಪಾಯಿ ಅವ್ಯವಹಾರ ಆಗಿರುವುದನ್ನು ಒಪ್ಪಿಕೊಂಡಿದ್ದಾರೆ ಎಂದು ಅವರು ಹೇಳಿದರು.

ವಾಲ್ಮೀಕಿ ನಿಗಮದ ದುಡ್ಡಲ್ಲಿ ಬಳ್ಳಾರಿ ಲೋಕಸಭಾ ಚುನಾವಣೆ ಮಾಡಲಾಗಿದೆ. ಆ ಹಣವನ್ನು ಮದ್ಯ ಖರೀದಿಗೆ ಬಳಸಿರುವುದು ಸಾಬೀತಾಗಿದೆ. ಹೀಗಾಗಿ ಸಿದ್ದರಾಮಯ್ಯ ರಾಜೀನಾಮೆ ನಿಶ್ಚಿತ ಎಂದು ಪ್ರತಾಪ್ ಸಿಂಹ ಹೇಳಿದರು.

ಇದನ್ನೂ ಓದಿ: ನಾಗಮಂಗಲ ದಳ್ಳುರಿ, ಸಿಸಿಟಿವಿ ದೃಶ್ಯ ಆಧರಿಸಿ 97 ಆರೋಪಿಗಳಿಗಾಗಿ ಪೊಲೀಸರ ಹುಡುಕಾಟ

ಮುಡಾ ವಿಚಾರದಲ್ಲಿ ನಾನು ಮೊದಲೇ ಸೈಟ್ ವಾಪಾಸ್ ಕೊಡಿ ಎಂದು ಹೇಳಿದ್ದೆ. ನನ್ನ ಕಾಳಜಿಯುತ ಸಲಹೆಯನ್ನು ಸಿಎಂ ಕೇಳಲಿಲ್ಲ. ಈಗ ಈ ವಿಚಾರವಾಗಿ ಮುಂಚಿತವಾಗಿಯೇ ರಾಜೀನಾಮೆ ಕೊಡಿ ಅಂದರೆ ನನ್ನಂತಹ ಸಣ್ಣವನ ಮಾತು ಅವರು ಕೇಳುತ್ತಾರಾ ಎಂದು ಅವರು ಪ್ರಶ್ನಿಸಿದರು.

ಮಹಿಷಾ ದಸರಾಗೆ ವಿರೋಧ

ನಾನು ಸಂಸದನಾಗಿದ್ದರೂ ಅಷ್ಟೇ ಆಗಿಲ್ಲದಿದ್ದರೂ ಅಷ್ಟೆಮ ತಾಯಿ ಚಾಮುಂಡಿಗೆ ಅವಮಾನವಾಗುವುದಕ್ಕೆ ಬಿಡುವುದಿಲ್ಲ. ಬೆಟ್ಟದಲ್ಲಿ ಮಹಿಷಾ ದಸರಾ ನಡೆಸಲು ಬಿಡುವುದಿಲ್ಲ. ಯಾರ ನಿಲುವುಗಳು ಏನೇ ಇರಲಿ. ನನ್ನ ನಿಲುವು ಮಾತ್ರ ಯಾವತ್ತಿಗೂ ಒಂದೇ. ಮಹಿಷಾ ದಸರಾ ನಡೆಸುವವರು ಅವರ ಮನೆಗಳಲ್ಲಿ ನಡೆಸಲಿ. ‘ನಮಗೆ ಮಹಿಷನಂಥ ಮಕ್ಕಳೇ’ ಹುಟ್ಟಲ್ಲಿ ಎಂದು ದಿನವೂ ಪೂಜೆ ಮಾಡಲಿ. ಅದಕ್ಕೆ ನಮದೇನು ವಿರೋಧ ಇಲ್ಲ ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:20 am, Fri, 13 September 24

ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ