AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಎಸ್​ಐ ಹಗರಣದಲ್ಲಿ ಸುಮ್ಮನೇ ನನ್ನ ಹೆಸರು ತೇಲಿಬಿಟ್ಟಿದ್ದಾರೆ, ಕಾಂಗ್ರೆಸ್ ಸರ್ಕಾರ ತನಿಖೆ ನಡೆಸಲಿ; ಬಿವೈ ವಿಜಯೇಂದ್ರ ಸವಾಲು

ಗ್ಯಾರಂಟಿ ಯೋಜನೆಗಳ ಜಾರಿ ವಿಚಾರದಲ್ಲಿ ಷರತ್ತು ಹಾಕಬಾರದು. ಈಗಾಗಲೇ ವಿದ್ಯುತ್ ಬಿಲ್ ದರ ಹೆಚ್ಚಳ ಮಾಡಿದ್ದಾರೆ. ಗ್ಯಾರಂಟಿ ಯೋಜನೆ ಜಾರಿಗಾಗಿ ಹೆಚ್ಚು ಹೆಚ್ಚು ತೆರಿಗೆ ವಿಧಿಸುತ್ತಿದ್ದಾರೆ. ಒಂದು ಕಡೆ ಗ್ಯಾರಂಟಿ ಜಾರಿ, ಮತ್ತೊಂದು ಕಡೆ ಪೆಟ್ಟು ಕೊಡ್ತಿದ್ದಾರೆ ಎಂದು ವಿಜಯೇಂದ್ರ ಟೀಕಿಸಿದ್ದಾರೆ.

ಪಿಎಸ್​ಐ ಹಗರಣದಲ್ಲಿ ಸುಮ್ಮನೇ ನನ್ನ ಹೆಸರು ತೇಲಿಬಿಟ್ಟಿದ್ದಾರೆ, ಕಾಂಗ್ರೆಸ್ ಸರ್ಕಾರ ತನಿಖೆ ನಡೆಸಲಿ; ಬಿವೈ ವಿಜಯೇಂದ್ರ ಸವಾಲು
ವಿಜಯೇಂದ್ರ
ಗಣಪತಿ ಶರ್ಮಾ
|

Updated on: Jun 05, 2023 | 6:41 PM

Share

ಮೈಸೂರು: ಪಿಎಸ್​ಐ ನೇಮಕಾತಿ ಅಕ್ರಮದಲ್ಲಿ (PSI Recruitment Scam) ಸುಮ್ಮನೇ ಕಾಂಗ್ರೆಸ್​​ನವರು ನನ್ನ ಹೆಸರನ್ನು ತೇಲಿಬಿಟ್ಟಿದ್ದಾರೆ. ಹೇಗೂ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವೇ ಅಸ್ತಿತ್ವದಲ್ಲಿದೆ. ತನಿಖೆ ನಡೆಸಲಿ ಎಂದು ಶಿಕಾರಿಪುರ ಕ್ಷೇತ್ರದ ಬಿಜೆಪಿ ಶಾಸಕ ಬಿವೈ ವಿಜಯೇಂದ್ರ (BY Vijayendra) ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಪಿಎಸ್​ಐ ಹಗರಣದ ಬಗ್ಗೆ ಪಾರದರ್ಶಕವಾಗಿ ತನಿಖೆ ಮಾಡಬೇಕು. ವಿಪಕ್ಷವನ್ನು ಬಗ್ಗುಬಡಿಯಬೇಕೆಂದು ಸೇಡಿನಿಂದ ಮಾಡುವುದು ಸರಿಯಲ್ಲ. ಪಾರದರ್ಶಕವಾಗಿ ತನಿಖೆ ಮಾಡಿದರೆ ನಾವು ಸ್ವಾಗತ ಮಾಡುತ್ತೇವೆ ಎಂದು ಹೇಳಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹೆಚ್ಚು ಸ್ಥಾನ ಗೆಲ್ಲುವ ದೃಷ್ಟಿಯಿಂದ ಕೆಲಸ ಮಾಡಲಾಗುವುದು ಎಂದೂ ಅವರು ಹೇಳಿದ್ದಾರೆ.

ಗ್ಯಾರಂಟಿ ಯೋಜನೆಗಳ ಜಾರಿ ವಿಚಾರದಲ್ಲಿ ಷರತ್ತು ಹಾಕಬಾರದು. ಈಗಾಗಲೇ ವಿದ್ಯುತ್ ಬಿಲ್ ದರ ಹೆಚ್ಚಳ ಮಾಡಿದ್ದಾರೆ. ಗ್ಯಾರಂಟಿ ಯೋಜನೆ ಜಾರಿಗಾಗಿ ಹೆಚ್ಚು ಹೆಚ್ಚು ತೆರಿಗೆ ವಿಧಿಸುತ್ತಿದ್ದಾರೆ. ಒಂದು ಕಡೆ ಗ್ಯಾರಂಟಿ ಜಾರಿ, ಮತ್ತೊಂದು ಕಡೆ ಪೆಟ್ಟು ಕೊಡ್ತಿದ್ದಾರೆ ಎಂದು ವಿಜಯೇಂದ್ರ ಟೀಕಿಸಿದ್ದಾರೆ.

ಗ್ಯಾರಂಟಿ ಯೋಜನೆಗಳಿಗೆ ಎಷ್ಟು ಹಣ ಬೇಕಾಗುತ್ತದೆ ಎಂದು ಪ್ರಶ್ನಿಸಿದ ವಿಜಯೇಂದ್ರ, ಹಣವನ್ನು ಹೇಗೆ ಹೊಂದಿಸಿಕೊಳ್ಳುತ್ತಾರೆ? ಹೊಸ ತೆರಿಗೆ ಹಾಕುತ್ತಾರಾ ಅಥವಾ ಸಾಲ ಮಾಡುತ್ತಾರಾ? ಇದೆಲ್ಲವನ್ನೂ ಬಿಜೆಪಿ ಗಮನಿಸುತ್ತಿದೆ. ಜವಾಬ್ದಾರಿಯುತ ವಿರೋಧ ಪಕ್ಷವಾಗಿ ಹೋರಾಟ ಮಾಡುತ್ತೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕಟುಕರ ರೀತಿ ಮಾತನಾಡುವುದು ಸರಿಯಲ್ಲ: ಸಚಿವ ವೆಂಕಟೇಶ್​ಗೆ ಆರಗ ಜ್ಞಾನೇಂದ್ರ ತಿರುಗೇಟು

ಪಶುಸಂಗೋಪನೆ ಸಚಿವರಿಗೆ ದೇಶದ ಸಂಸ್ಕೃತಿ ಬಗ್ಗೆ ಅರಿವಿಲ್ಲ; ವಿಜಯೇಂದ್ರ

ಎಮ್ಮೆ, ಕೋಣ ಕಡಿದು ಹಾಕುವುದಾದ್ರೆ ಹಸು ಏಕೆ ಕಡಿಯಬಾರದು ಎಂಬ ಪಶುಸಂಗೋಪನೆ ಸಚಿವ ಕೆ ವೆಂಕಟೇಶ್ ಹೇಳಿಕೆಗೆ ಪ್ರತಿಕ್ರಿಯಿಸಿದ ವಿಜಯೇಂದ್ರ, ಸಚಿವರ ಹೇಳಿಕೆ ನೋಡಿದರೆ ಅವರಿಗೆ ದೇಶದ ಸಂಸ್ಕೃತಿ ಬಗ್ಗೆ ಅರಿವಿಲ್ಲ ಅನಿಸುತ್ತೆ. ಇಂತಹ ಉಡಾಫೆ ಹೇಳಿಕೆಯನ್ನು ರಾಜ್ಯದ ಜನ ನಿರೀಕ್ಷೆ ಮಾಡಿರಲಿಲ್ಲ. ಸಚಿವರೇ ರಾಜ್ಯದಲ್ಲಿ ಅಶಾಂತಿ ಸೃಷ್ಟಿಯಾಗುವ ರೀತಿ ನಡೆದುಕೊಳ್ಳುತ್ತಾರೆ. ಹಿಂದೂ ಸಂಸ್ಕೃತಿ, ಪರಂಪರೆ ಗೊತ್ತಿದ್ದರೆ ಈ ರೀತಿ ಮಾತನಾಡುತ್ತಿರಲಿಲ್ಲ. ನಾಳೆಯಿಂದ ಜಿಲ್ಲಾಮಟ್ಟದಲ್ಲಿ ಬಿಜೆಪಿಯಿಂದ ಹೋರಾಟ ಮಾಡುತ್ತದೆ. ಜನಸಾಮಾನ್ಯರು ಕೂಡ ಬೀಗಿಗಿಳಿದು ಹೋರಾಟ ಮಾಡುತ್ತಾರೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!