ಪಿಎಸ್​ಐ ಹಗರಣದಲ್ಲಿ ಸುಮ್ಮನೇ ನನ್ನ ಹೆಸರು ತೇಲಿಬಿಟ್ಟಿದ್ದಾರೆ, ಕಾಂಗ್ರೆಸ್ ಸರ್ಕಾರ ತನಿಖೆ ನಡೆಸಲಿ; ಬಿವೈ ವಿಜಯೇಂದ್ರ ಸವಾಲು

ಗ್ಯಾರಂಟಿ ಯೋಜನೆಗಳ ಜಾರಿ ವಿಚಾರದಲ್ಲಿ ಷರತ್ತು ಹಾಕಬಾರದು. ಈಗಾಗಲೇ ವಿದ್ಯುತ್ ಬಿಲ್ ದರ ಹೆಚ್ಚಳ ಮಾಡಿದ್ದಾರೆ. ಗ್ಯಾರಂಟಿ ಯೋಜನೆ ಜಾರಿಗಾಗಿ ಹೆಚ್ಚು ಹೆಚ್ಚು ತೆರಿಗೆ ವಿಧಿಸುತ್ತಿದ್ದಾರೆ. ಒಂದು ಕಡೆ ಗ್ಯಾರಂಟಿ ಜಾರಿ, ಮತ್ತೊಂದು ಕಡೆ ಪೆಟ್ಟು ಕೊಡ್ತಿದ್ದಾರೆ ಎಂದು ವಿಜಯೇಂದ್ರ ಟೀಕಿಸಿದ್ದಾರೆ.

ಪಿಎಸ್​ಐ ಹಗರಣದಲ್ಲಿ ಸುಮ್ಮನೇ ನನ್ನ ಹೆಸರು ತೇಲಿಬಿಟ್ಟಿದ್ದಾರೆ, ಕಾಂಗ್ರೆಸ್ ಸರ್ಕಾರ ತನಿಖೆ ನಡೆಸಲಿ; ಬಿವೈ ವಿಜಯೇಂದ್ರ ಸವಾಲು
ವಿಜಯೇಂದ್ರ

Updated on: Jun 05, 2023 | 6:41 PM

ಮೈಸೂರು: ಪಿಎಸ್​ಐ ನೇಮಕಾತಿ ಅಕ್ರಮದಲ್ಲಿ (PSI Recruitment Scam) ಸುಮ್ಮನೇ ಕಾಂಗ್ರೆಸ್​​ನವರು ನನ್ನ ಹೆಸರನ್ನು ತೇಲಿಬಿಟ್ಟಿದ್ದಾರೆ. ಹೇಗೂ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವೇ ಅಸ್ತಿತ್ವದಲ್ಲಿದೆ. ತನಿಖೆ ನಡೆಸಲಿ ಎಂದು ಶಿಕಾರಿಪುರ ಕ್ಷೇತ್ರದ ಬಿಜೆಪಿ ಶಾಸಕ ಬಿವೈ ವಿಜಯೇಂದ್ರ (BY Vijayendra) ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಪಿಎಸ್​ಐ ಹಗರಣದ ಬಗ್ಗೆ ಪಾರದರ್ಶಕವಾಗಿ ತನಿಖೆ ಮಾಡಬೇಕು. ವಿಪಕ್ಷವನ್ನು ಬಗ್ಗುಬಡಿಯಬೇಕೆಂದು ಸೇಡಿನಿಂದ ಮಾಡುವುದು ಸರಿಯಲ್ಲ. ಪಾರದರ್ಶಕವಾಗಿ ತನಿಖೆ ಮಾಡಿದರೆ ನಾವು ಸ್ವಾಗತ ಮಾಡುತ್ತೇವೆ ಎಂದು ಹೇಳಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹೆಚ್ಚು ಸ್ಥಾನ ಗೆಲ್ಲುವ ದೃಷ್ಟಿಯಿಂದ ಕೆಲಸ ಮಾಡಲಾಗುವುದು ಎಂದೂ ಅವರು ಹೇಳಿದ್ದಾರೆ.

ಗ್ಯಾರಂಟಿ ಯೋಜನೆಗಳ ಜಾರಿ ವಿಚಾರದಲ್ಲಿ ಷರತ್ತು ಹಾಕಬಾರದು. ಈಗಾಗಲೇ ವಿದ್ಯುತ್ ಬಿಲ್ ದರ ಹೆಚ್ಚಳ ಮಾಡಿದ್ದಾರೆ. ಗ್ಯಾರಂಟಿ ಯೋಜನೆ ಜಾರಿಗಾಗಿ ಹೆಚ್ಚು ಹೆಚ್ಚು ತೆರಿಗೆ ವಿಧಿಸುತ್ತಿದ್ದಾರೆ. ಒಂದು ಕಡೆ ಗ್ಯಾರಂಟಿ ಜಾರಿ, ಮತ್ತೊಂದು ಕಡೆ ಪೆಟ್ಟು ಕೊಡ್ತಿದ್ದಾರೆ ಎಂದು ವಿಜಯೇಂದ್ರ ಟೀಕಿಸಿದ್ದಾರೆ.

ಗ್ಯಾರಂಟಿ ಯೋಜನೆಗಳಿಗೆ ಎಷ್ಟು ಹಣ ಬೇಕಾಗುತ್ತದೆ ಎಂದು ಪ್ರಶ್ನಿಸಿದ ವಿಜಯೇಂದ್ರ, ಹಣವನ್ನು ಹೇಗೆ ಹೊಂದಿಸಿಕೊಳ್ಳುತ್ತಾರೆ? ಹೊಸ ತೆರಿಗೆ ಹಾಕುತ್ತಾರಾ ಅಥವಾ ಸಾಲ ಮಾಡುತ್ತಾರಾ? ಇದೆಲ್ಲವನ್ನೂ ಬಿಜೆಪಿ ಗಮನಿಸುತ್ತಿದೆ. ಜವಾಬ್ದಾರಿಯುತ ವಿರೋಧ ಪಕ್ಷವಾಗಿ ಹೋರಾಟ ಮಾಡುತ್ತೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕಟುಕರ ರೀತಿ ಮಾತನಾಡುವುದು ಸರಿಯಲ್ಲ: ಸಚಿವ ವೆಂಕಟೇಶ್​ಗೆ ಆರಗ ಜ್ಞಾನೇಂದ್ರ ತಿರುಗೇಟು

ಪಶುಸಂಗೋಪನೆ ಸಚಿವರಿಗೆ ದೇಶದ ಸಂಸ್ಕೃತಿ ಬಗ್ಗೆ ಅರಿವಿಲ್ಲ; ವಿಜಯೇಂದ್ರ

ಎಮ್ಮೆ, ಕೋಣ ಕಡಿದು ಹಾಕುವುದಾದ್ರೆ ಹಸು ಏಕೆ ಕಡಿಯಬಾರದು ಎಂಬ ಪಶುಸಂಗೋಪನೆ ಸಚಿವ ಕೆ ವೆಂಕಟೇಶ್ ಹೇಳಿಕೆಗೆ ಪ್ರತಿಕ್ರಿಯಿಸಿದ ವಿಜಯೇಂದ್ರ, ಸಚಿವರ ಹೇಳಿಕೆ ನೋಡಿದರೆ ಅವರಿಗೆ ದೇಶದ ಸಂಸ್ಕೃತಿ ಬಗ್ಗೆ ಅರಿವಿಲ್ಲ ಅನಿಸುತ್ತೆ. ಇಂತಹ ಉಡಾಫೆ ಹೇಳಿಕೆಯನ್ನು ರಾಜ್ಯದ ಜನ ನಿರೀಕ್ಷೆ ಮಾಡಿರಲಿಲ್ಲ. ಸಚಿವರೇ ರಾಜ್ಯದಲ್ಲಿ ಅಶಾಂತಿ ಸೃಷ್ಟಿಯಾಗುವ ರೀತಿ ನಡೆದುಕೊಳ್ಳುತ್ತಾರೆ. ಹಿಂದೂ ಸಂಸ್ಕೃತಿ, ಪರಂಪರೆ ಗೊತ್ತಿದ್ದರೆ ಈ ರೀತಿ ಮಾತನಾಡುತ್ತಿರಲಿಲ್ಲ. ನಾಳೆಯಿಂದ ಜಿಲ್ಲಾಮಟ್ಟದಲ್ಲಿ ಬಿಜೆಪಿಯಿಂದ ಹೋರಾಟ ಮಾಡುತ್ತದೆ. ಜನಸಾಮಾನ್ಯರು ಕೂಡ ಬೀಗಿಗಿಳಿದು ಹೋರಾಟ ಮಾಡುತ್ತಾರೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
Follow Us