AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಫ್ಘಾನಿಸ್ತಾನ ತಾಲಿಬಾನ್ ವಶ: ನರೇಂದ್ರ ಮೋದಿ ಈ ಪರಿಸ್ಥಿತಿ ಊಹಿಸಿದ್ದರು; ಹಾಗಾಗಿ ಭಾರತದಲ್ಲಿ ಸಿಎಎ ಜಾರಿ: ಪ್ರತಾಪ್ ಸಿಂಹ

Pratap Simha: ಷರಿಯಾ, ತಾಲಿಬಾನ್ ಮಾನವ ವಿರೋಧಿ ಎಂದು ಸಾಬೀತು ಆಗಿದೆ. ಆಫ್ಘನ್ ಘಟನೆಯ ಬಳಿಕ ಇದು ಸಾಬೀತಾಗಿದೆ. ಕೇವಲ ಅಫ್ಘಾನಿಸ್ತಾನದಲ್ಲಿ ಮಾತ್ರ ಇಂತಹ ಪರಿಸ್ಥಿತಿ ಇಲ್ಲ. ಭಾರತದಲ್ಲೂ ಇದೇ ಮನಸ್ಥಿತಿಯ ಜನರಿದ್ದಾರೆ ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ.

ಅಫ್ಘಾನಿಸ್ತಾನ ತಾಲಿಬಾನ್ ವಶ: ನರೇಂದ್ರ ಮೋದಿ ಈ ಪರಿಸ್ಥಿತಿ ಊಹಿಸಿದ್ದರು; ಹಾಗಾಗಿ ಭಾರತದಲ್ಲಿ ಸಿಎಎ ಜಾರಿ: ಪ್ರತಾಪ್ ಸಿಂಹ
ಪ್ರತಾಪ್ ಸಿಂಹ
TV9 Web
| Edited By: |

Updated on:Aug 18, 2021 | 3:35 PM

Share

ಮೈಸೂರು: ಅಫ್ಘಾನಿಸ್ತಾನವನ್ನು ತಾಲಿಬಾನ್ ವಶಕ್ಕೆ ಪಡೆದಿರುವ ವಿಚಾರವಾಗಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಬುಧವಾರ (ಆಗಸ್ಟ್ 18) ಪ್ರತಿಕ್ರಿಯೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಇಂತಹ ಪರಿಸ್ಥಿತಿ ಮೊದಲೇ ಊಹಿಸಿದ್ದರು. ಹೀಗಾಗಿಯೇ ಭಾರತದಲ್ಲಿ ಸಿಎಎ ಕಾಯ್ದೆ ಜಾರಿಗೊಳಿಸಿದರು ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಷರಿಯಾ, ತಾಲಿಬಾನ್ ಮಾನವ ವಿರೋಧಿ ಎಂದು ಸಾಬೀತು ಆಗಿದೆ. ಆಫ್ಘನ್ ಘಟನೆಯ ಬಳಿಕ ಇದು ಸಾಬೀತಾಗಿದೆ. ಕೇವಲ ಅಫ್ಘಾನಿಸ್ತಾನದಲ್ಲಿ ಮಾತ್ರ ಇಂತಹ ಪರಿಸ್ಥಿತಿ ಇಲ್ಲ. ಭಾರತದಲ್ಲೂ ಇದೇ ಮನಸ್ಥಿತಿಯ ಜನರಿದ್ದಾರೆ ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ.

ಇತರ ಕಡೆಗಳಲ್ಲೂ ಇಂತಹ ಅನಾಹುತಗಳಾಗಬಹುದು. ಎಲ್ಲರೂ ಸೇರಿ ಇದನ್ನು ಎದುರಿಸಬೇಕಾಗಿದೆ. ಆಫ್ಘನ್‌ನ ಇತ್ತೀಚಿನ ಬೆಳವಣಿಗೆ ಅಪಾಯಕಾರಿಯಾಗಬಹುದು. ಮುಸ್ಲಿಂ ರಾಷ್ಟ್ರಗಳಿಗೆ ಅಪಾಯಕಾರಿಯಾಗಿ ಪರಿಣಮಿಸಬಹುದು ಎಂದು ಮೈಸೂರಿನಲ್ಲಿ ಸಂಸದ ಪ್ರತಾಪ್ ಸಿಂಹ ಅಭಿಪ್ರಾಯಪಟ್ಟಿದ್ದಾರೆ.

ಭಾರತೀಯರಿಗೆ ಸಿಎಎ ಕಾಯ್ದೆಯನ್ನು ಏಕೆ ಜಾರಿಗೆ ತರಲಾಯಿತು ಎಂಬುದು ಈಗ ಅರ್ಥವಾಗಬೇಕು. ಮೋದಿಯವರು ಪರಿಸ್ಥಿತಿಯನ್ನು ಮೊದಲೇ ಅರ್ಥ ಮಾಡಿಕೊಂಡು ಸಿಎಎ ಕಾಯ್ದೆಯನ್ನು ಜಾರಿಗೊಳಿಸಿದರು. ಪ್ರತಿಯೊಬ್ಬ ಭಾರತೀಯರು ಇದನ್ನು ಅರ್ಥ ಮಾಡಿಕೊಳ್ಳಬೇಕು. ಇವತ್ತು ಆಫ್ಘಾನಿಸ್ತಾನದ ಸುತ್ತಮುತ್ತ ಹಲವಾರು ಮುಸ್ಲಿಂ ರಾಷ್ಟ್ರಗಳಿದ್ದರೂ ಅವರನ್ನು ಕರೆಸಿಕೊಳ್ಳುತ್ತಿಲ್ಲ. ಸಿಎಎ ಜಾರಿಗೆ ತಂದದ್ದು ಆಫ್ಘಾನಿಸ್ತಾನದ ಕಾರಣಕ್ಕಾಗಿ ಮಾತ್ರವಲ್ಲ. ಇತರ ಕಡೆಗಳಲ್ಲಿ ಈ ರೀತಿಯ ಅನಾಹುತಗಳಾಗಬಹುದು. ಎಲ್ಲರೂ ಸೇರಿ ಇದನ್ನು ಎದುರಿಸಬೇಕಾಗಿದೆ ಎಂದು ಪ್ರತಾಪ್ ಸಿಂಹ ತಿಳಿಸಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಮೋದಿ ದಿನದ 18 ಗಂಟೆ ಕೆಲಸ ಮಾಡುತ್ತಾರೆ; ಒಂದು ಸೂಟ್​ಕೇಸ್ ಬಟ್ಟೆ ಮಾತ್ರ ಅವರ ಆಸ್ತಿ: ಶೋಭಾ ಕರಂದ್ಲಾಜೆ

ರಾಷ್ಟ್ರೀಯ ಹೆದ್ದಾರಿ 275 ಯೋಜನೆ ತನ್ನದು ಅಂತ ಸಂಸದ ಪ್ರತಾಪ್ ಸಿಂಹ ಸಾಬೀತು ಮಾಡಿದರೆ ಅವರು ಹೇಳಿದಂತೆ ಕೇಳುತ್ತೇನೆ: ಲಕ್ಷ್ಮಣ, ಕೆಪಿಸಿಸಿ ವಕ್ತಾರ

Published On - 3:33 pm, Wed, 18 August 21