AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನಧಿಕೃತ ಧಾರ್ಮಿಕ ಕೇಂದ್ರ ತೆರವು ವಿಚಾರ: ಎಷ್ಟು ದರ್ಗಾ, ಮಸೀದಿ ತೆರವು ಮಾಡಿದ್ದೀರಿ?- ಸಂಸದ ಪ್ರತಾಪ್ ಸಿಂಹ ಗರಂ

Mysuru News: ನಿಮ್ಮ ಕೈಲಿ ಆಗದಿದ್ರೆ ಹೇಳಿ ನಾವೇ ಬೀದಿಗಿಳಿಯುತ್ತೇವೆ. ನಮ್ಮ ಮೇಲೆ ಕೇಸ್ ದಾಖಲಿಸಿದರೂ ಯೋಚನೆ ಇಲ್ಲ. ಆದ್ರೆ ಹಿಂದೂ ದೇಗುಲ ಮಾತ್ರ ಟಾರ್ಗೆಟ್ ಆಗಬಾರದು ಎಂದು ಕೆಡಿಪಿ ಸಭೆಯಲ್ಲಿ ಬಿಜೆಪಿ ಸಂಸದ ಪ್ರತಾಪ ಸಿಂಹ ಎಚ್ಚರಿಕೆ ನೀಡಿದ್ದಾರೆ.

ಅನಧಿಕೃತ ಧಾರ್ಮಿಕ ಕೇಂದ್ರ ತೆರವು ವಿಚಾರ: ಎಷ್ಟು ದರ್ಗಾ, ಮಸೀದಿ ತೆರವು ಮಾಡಿದ್ದೀರಿ?- ಸಂಸದ ಪ್ರತಾಪ್ ಸಿಂಹ ಗರಂ
ಪ್ರತಾಪ್​ ಸಿಂಹ (ಸಂಗ್ರಹ ಚಿತ್ರ)
TV9 Web
| Updated By: ganapathi bhat|

Updated on:Sep 08, 2021 | 7:47 PM

Share

ಮೈಸೂರು: ಮೈಸೂರಿನಲ್ಲಿ ಅನಧಿಕೃತ ಧಾರ್ಮಿಕ ಕೇಂದ್ರ ತೆರವು ವಿಚಾರವಾಗಿ ಕೆಡಿಪಿ ಸಭೆಯಲ್ಲಿ ಜಿಲ್ಲಾಡಳಿತದ ವಿರುದ್ಧ ಸಂಸದರು ಗರಂ ಆಗಿದ್ದಾರೆ. ಕೆಡಿಪಿ ಸಭೆಯಲ್ಲಿ ಸಂಸದ ಪ್ರತಾಪ್ ಸಿಂಹ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಒಂದು ಧರ್ಮ ಟಾರ್ಗೆಟ್ ಮಾಡಿ ತೆರವು ಮಾಡುತ್ತಿದ್ದೀರಿ. ಹಿಂದೂ ದೇವಸ್ಥಾನಗಳನ್ನ ಮಾತ್ರ ತೆರವು ಮಾಡುತ್ತಿದ್ದೀರಿ. ಈವರೆಗೂ ಎಷ್ಟು ದರ್ಗಾ, ಮಸೀದಿ ತೆರವು ಮಾಡಿದ್ದೀರಿ? ಎಷ್ಟು ಅನಧಿಕೃತ ದರ್ಗಾ, ಮಸೀದಿ ತೆರವು ಮಾಡಿದ್ದೀರಿ? ಹಿಂದೂಗಳು ಕತ್ತಿ ಹಿಡಿಯಲ್ಲವೆಂದು ಹೀಗೆ ಮಾಡ್ತಿದ್ದೀರಾ? ಅವರು ಚೂರಿ ಚುಚ್ತಾರೆ ಎಂದು ನಿಮಗೆ ನಡುಕವಾಗುತ್ತ ಎಂದು ಪ್ರತಾಪ್ ಸಿಂಹ ಆಕ್ರೋಶ ಹೊರಹಾಕಿದ್ದಾರೆ.

ಅನಧಿಕೃತ ದರ್ಗಾಗಳ ತೆರವಿಗೆ ನಿಮಗೆ ನಡುಕವಾಗುತ್ತಾ? ಇರ್ವಿನ್ ರಸ್ತೆ ಅಗಲೀಕರಣಕ್ಕೆ ಮಸೀದಿ ತಡೆಯಾಗಿದೆ. ಮಸೀದಿ ಗೋಪುರವನ್ನ ತೆರವು ಮಾಡಲು ಆಗಿಲ್ಲ ನಿಮಗೆ. ದೇವರಾಜ ಅರಸು ರಸ್ತೆಯಲ್ಲಿ ಅನಧಿಕೃತ ದರ್ಗಾ ಇದೆ. ಆ ಅನಧಿಕೃತ ದರ್ಗಾ ಯಾವಾಗ ತೆರವು ಮಾಡುತ್ತೀರಾ? ಹಿಂದೂ ದೇಗುಲ ಮುಟ್ಟುವ ಮೊದಲು ದರ್ಗಾ ತೆರವು ಮಾಡಿ. ಇದು ಮನವಿಯಲ್ಲ ಎಚ್ಚರಿಕೆ ಎಂದು ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ.

ನಿಮ್ಮ ಕೈಲಿ ಆಗದಿದ್ರೆ ಹೇಳಿ ನಾವೇ ಬೀದಿಗಿಳಿಯುತ್ತೇವೆ. ನಮ್ಮ ಮೇಲೆ ಕೇಸ್ ದಾಖಲಿಸಿದರೂ ಯೋಚನೆ ಇಲ್ಲ. ಆದ್ರೆ ಹಿಂದೂ ದೇಗುಲ ಮಾತ್ರ ಟಾರ್ಗೆಟ್ ಆಗಬಾರದು ಎಂದು ಕೆಡಿಪಿ ಸಭೆಯಲ್ಲಿ ಬಿಜೆಪಿ ಸಂಸದ ಪ್ರತಾಪ ಸಿಂಹ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಮೈಸೂರು ದಸರಾ ಮಹೋತ್ಸವ 2021: ಈ ಬಾರಿಯ ದಸರಾ ಬಗ್ಗೆ ವಿವರಣೆ ನೀಡಿದ ಸಚಿವ ಎಸ್​ಟಿ ಸೋಮಶೇಖರ್

ಇದನ್ನೂ ಓದಿ: Mysuru Dasara 2021: ಮೈಸೂರು ದಸರಾ ಉತ್ಸವದಲ್ಲಿ ಪಾಲ್ಗೊಳ್ಳಲಿರುವ ಆನೆಗಳ ಪಟ್ಟಿ ಹೀಗಿದೆ

Published On - 7:46 pm, Wed, 8 September 21

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ