AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನಧಿಕೃತ ಧಾರ್ಮಿಕ ಕೇಂದ್ರ ತೆರವು ವಿಚಾರ: ಎಷ್ಟು ದರ್ಗಾ, ಮಸೀದಿ ತೆರವು ಮಾಡಿದ್ದೀರಿ?- ಸಂಸದ ಪ್ರತಾಪ್ ಸಿಂಹ ಗರಂ

Mysuru News: ನಿಮ್ಮ ಕೈಲಿ ಆಗದಿದ್ರೆ ಹೇಳಿ ನಾವೇ ಬೀದಿಗಿಳಿಯುತ್ತೇವೆ. ನಮ್ಮ ಮೇಲೆ ಕೇಸ್ ದಾಖಲಿಸಿದರೂ ಯೋಚನೆ ಇಲ್ಲ. ಆದ್ರೆ ಹಿಂದೂ ದೇಗುಲ ಮಾತ್ರ ಟಾರ್ಗೆಟ್ ಆಗಬಾರದು ಎಂದು ಕೆಡಿಪಿ ಸಭೆಯಲ್ಲಿ ಬಿಜೆಪಿ ಸಂಸದ ಪ್ರತಾಪ ಸಿಂಹ ಎಚ್ಚರಿಕೆ ನೀಡಿದ್ದಾರೆ.

ಅನಧಿಕೃತ ಧಾರ್ಮಿಕ ಕೇಂದ್ರ ತೆರವು ವಿಚಾರ: ಎಷ್ಟು ದರ್ಗಾ, ಮಸೀದಿ ತೆರವು ಮಾಡಿದ್ದೀರಿ?- ಸಂಸದ ಪ್ರತಾಪ್ ಸಿಂಹ ಗರಂ
ಪ್ರತಾಪ್​ ಸಿಂಹ (ಸಂಗ್ರಹ ಚಿತ್ರ)
TV9 Web
| Edited By: |

Updated on:Sep 08, 2021 | 7:47 PM

Share

ಮೈಸೂರು: ಮೈಸೂರಿನಲ್ಲಿ ಅನಧಿಕೃತ ಧಾರ್ಮಿಕ ಕೇಂದ್ರ ತೆರವು ವಿಚಾರವಾಗಿ ಕೆಡಿಪಿ ಸಭೆಯಲ್ಲಿ ಜಿಲ್ಲಾಡಳಿತದ ವಿರುದ್ಧ ಸಂಸದರು ಗರಂ ಆಗಿದ್ದಾರೆ. ಕೆಡಿಪಿ ಸಭೆಯಲ್ಲಿ ಸಂಸದ ಪ್ರತಾಪ್ ಸಿಂಹ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಒಂದು ಧರ್ಮ ಟಾರ್ಗೆಟ್ ಮಾಡಿ ತೆರವು ಮಾಡುತ್ತಿದ್ದೀರಿ. ಹಿಂದೂ ದೇವಸ್ಥಾನಗಳನ್ನ ಮಾತ್ರ ತೆರವು ಮಾಡುತ್ತಿದ್ದೀರಿ. ಈವರೆಗೂ ಎಷ್ಟು ದರ್ಗಾ, ಮಸೀದಿ ತೆರವು ಮಾಡಿದ್ದೀರಿ? ಎಷ್ಟು ಅನಧಿಕೃತ ದರ್ಗಾ, ಮಸೀದಿ ತೆರವು ಮಾಡಿದ್ದೀರಿ? ಹಿಂದೂಗಳು ಕತ್ತಿ ಹಿಡಿಯಲ್ಲವೆಂದು ಹೀಗೆ ಮಾಡ್ತಿದ್ದೀರಾ? ಅವರು ಚೂರಿ ಚುಚ್ತಾರೆ ಎಂದು ನಿಮಗೆ ನಡುಕವಾಗುತ್ತ ಎಂದು ಪ್ರತಾಪ್ ಸಿಂಹ ಆಕ್ರೋಶ ಹೊರಹಾಕಿದ್ದಾರೆ.

ಅನಧಿಕೃತ ದರ್ಗಾಗಳ ತೆರವಿಗೆ ನಿಮಗೆ ನಡುಕವಾಗುತ್ತಾ? ಇರ್ವಿನ್ ರಸ್ತೆ ಅಗಲೀಕರಣಕ್ಕೆ ಮಸೀದಿ ತಡೆಯಾಗಿದೆ. ಮಸೀದಿ ಗೋಪುರವನ್ನ ತೆರವು ಮಾಡಲು ಆಗಿಲ್ಲ ನಿಮಗೆ. ದೇವರಾಜ ಅರಸು ರಸ್ತೆಯಲ್ಲಿ ಅನಧಿಕೃತ ದರ್ಗಾ ಇದೆ. ಆ ಅನಧಿಕೃತ ದರ್ಗಾ ಯಾವಾಗ ತೆರವು ಮಾಡುತ್ತೀರಾ? ಹಿಂದೂ ದೇಗುಲ ಮುಟ್ಟುವ ಮೊದಲು ದರ್ಗಾ ತೆರವು ಮಾಡಿ. ಇದು ಮನವಿಯಲ್ಲ ಎಚ್ಚರಿಕೆ ಎಂದು ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ.

ನಿಮ್ಮ ಕೈಲಿ ಆಗದಿದ್ರೆ ಹೇಳಿ ನಾವೇ ಬೀದಿಗಿಳಿಯುತ್ತೇವೆ. ನಮ್ಮ ಮೇಲೆ ಕೇಸ್ ದಾಖಲಿಸಿದರೂ ಯೋಚನೆ ಇಲ್ಲ. ಆದ್ರೆ ಹಿಂದೂ ದೇಗುಲ ಮಾತ್ರ ಟಾರ್ಗೆಟ್ ಆಗಬಾರದು ಎಂದು ಕೆಡಿಪಿ ಸಭೆಯಲ್ಲಿ ಬಿಜೆಪಿ ಸಂಸದ ಪ್ರತಾಪ ಸಿಂಹ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಮೈಸೂರು ದಸರಾ ಮಹೋತ್ಸವ 2021: ಈ ಬಾರಿಯ ದಸರಾ ಬಗ್ಗೆ ವಿವರಣೆ ನೀಡಿದ ಸಚಿವ ಎಸ್​ಟಿ ಸೋಮಶೇಖರ್

ಇದನ್ನೂ ಓದಿ: Mysuru Dasara 2021: ಮೈಸೂರು ದಸರಾ ಉತ್ಸವದಲ್ಲಿ ಪಾಲ್ಗೊಳ್ಳಲಿರುವ ಆನೆಗಳ ಪಟ್ಟಿ ಹೀಗಿದೆ

Published On - 7:46 pm, Wed, 8 September 21

300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ