AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನಧಿಕೃತ ಧಾರ್ಮಿಕ ಕೇಂದ್ರ ತೆರವು ವಿಚಾರ: ಎಷ್ಟು ದರ್ಗಾ, ಮಸೀದಿ ತೆರವು ಮಾಡಿದ್ದೀರಿ?- ಸಂಸದ ಪ್ರತಾಪ್ ಸಿಂಹ ಗರಂ

Mysuru News: ನಿಮ್ಮ ಕೈಲಿ ಆಗದಿದ್ರೆ ಹೇಳಿ ನಾವೇ ಬೀದಿಗಿಳಿಯುತ್ತೇವೆ. ನಮ್ಮ ಮೇಲೆ ಕೇಸ್ ದಾಖಲಿಸಿದರೂ ಯೋಚನೆ ಇಲ್ಲ. ಆದ್ರೆ ಹಿಂದೂ ದೇಗುಲ ಮಾತ್ರ ಟಾರ್ಗೆಟ್ ಆಗಬಾರದು ಎಂದು ಕೆಡಿಪಿ ಸಭೆಯಲ್ಲಿ ಬಿಜೆಪಿ ಸಂಸದ ಪ್ರತಾಪ ಸಿಂಹ ಎಚ್ಚರಿಕೆ ನೀಡಿದ್ದಾರೆ.

ಅನಧಿಕೃತ ಧಾರ್ಮಿಕ ಕೇಂದ್ರ ತೆರವು ವಿಚಾರ: ಎಷ್ಟು ದರ್ಗಾ, ಮಸೀದಿ ತೆರವು ಮಾಡಿದ್ದೀರಿ?- ಸಂಸದ ಪ್ರತಾಪ್ ಸಿಂಹ ಗರಂ
ಪ್ರತಾಪ್​ ಸಿಂಹ (ಸಂಗ್ರಹ ಚಿತ್ರ)
Follow us
TV9 Web
| Updated By: ganapathi bhat

Updated on:Sep 08, 2021 | 7:47 PM

ಮೈಸೂರು: ಮೈಸೂರಿನಲ್ಲಿ ಅನಧಿಕೃತ ಧಾರ್ಮಿಕ ಕೇಂದ್ರ ತೆರವು ವಿಚಾರವಾಗಿ ಕೆಡಿಪಿ ಸಭೆಯಲ್ಲಿ ಜಿಲ್ಲಾಡಳಿತದ ವಿರುದ್ಧ ಸಂಸದರು ಗರಂ ಆಗಿದ್ದಾರೆ. ಕೆಡಿಪಿ ಸಭೆಯಲ್ಲಿ ಸಂಸದ ಪ್ರತಾಪ್ ಸಿಂಹ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಒಂದು ಧರ್ಮ ಟಾರ್ಗೆಟ್ ಮಾಡಿ ತೆರವು ಮಾಡುತ್ತಿದ್ದೀರಿ. ಹಿಂದೂ ದೇವಸ್ಥಾನಗಳನ್ನ ಮಾತ್ರ ತೆರವು ಮಾಡುತ್ತಿದ್ದೀರಿ. ಈವರೆಗೂ ಎಷ್ಟು ದರ್ಗಾ, ಮಸೀದಿ ತೆರವು ಮಾಡಿದ್ದೀರಿ? ಎಷ್ಟು ಅನಧಿಕೃತ ದರ್ಗಾ, ಮಸೀದಿ ತೆರವು ಮಾಡಿದ್ದೀರಿ? ಹಿಂದೂಗಳು ಕತ್ತಿ ಹಿಡಿಯಲ್ಲವೆಂದು ಹೀಗೆ ಮಾಡ್ತಿದ್ದೀರಾ? ಅವರು ಚೂರಿ ಚುಚ್ತಾರೆ ಎಂದು ನಿಮಗೆ ನಡುಕವಾಗುತ್ತ ಎಂದು ಪ್ರತಾಪ್ ಸಿಂಹ ಆಕ್ರೋಶ ಹೊರಹಾಕಿದ್ದಾರೆ.

ಅನಧಿಕೃತ ದರ್ಗಾಗಳ ತೆರವಿಗೆ ನಿಮಗೆ ನಡುಕವಾಗುತ್ತಾ? ಇರ್ವಿನ್ ರಸ್ತೆ ಅಗಲೀಕರಣಕ್ಕೆ ಮಸೀದಿ ತಡೆಯಾಗಿದೆ. ಮಸೀದಿ ಗೋಪುರವನ್ನ ತೆರವು ಮಾಡಲು ಆಗಿಲ್ಲ ನಿಮಗೆ. ದೇವರಾಜ ಅರಸು ರಸ್ತೆಯಲ್ಲಿ ಅನಧಿಕೃತ ದರ್ಗಾ ಇದೆ. ಆ ಅನಧಿಕೃತ ದರ್ಗಾ ಯಾವಾಗ ತೆರವು ಮಾಡುತ್ತೀರಾ? ಹಿಂದೂ ದೇಗುಲ ಮುಟ್ಟುವ ಮೊದಲು ದರ್ಗಾ ತೆರವು ಮಾಡಿ. ಇದು ಮನವಿಯಲ್ಲ ಎಚ್ಚರಿಕೆ ಎಂದು ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ.

ನಿಮ್ಮ ಕೈಲಿ ಆಗದಿದ್ರೆ ಹೇಳಿ ನಾವೇ ಬೀದಿಗಿಳಿಯುತ್ತೇವೆ. ನಮ್ಮ ಮೇಲೆ ಕೇಸ್ ದಾಖಲಿಸಿದರೂ ಯೋಚನೆ ಇಲ್ಲ. ಆದ್ರೆ ಹಿಂದೂ ದೇಗುಲ ಮಾತ್ರ ಟಾರ್ಗೆಟ್ ಆಗಬಾರದು ಎಂದು ಕೆಡಿಪಿ ಸಭೆಯಲ್ಲಿ ಬಿಜೆಪಿ ಸಂಸದ ಪ್ರತಾಪ ಸಿಂಹ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಮೈಸೂರು ದಸರಾ ಮಹೋತ್ಸವ 2021: ಈ ಬಾರಿಯ ದಸರಾ ಬಗ್ಗೆ ವಿವರಣೆ ನೀಡಿದ ಸಚಿವ ಎಸ್​ಟಿ ಸೋಮಶೇಖರ್

ಇದನ್ನೂ ಓದಿ: Mysuru Dasara 2021: ಮೈಸೂರು ದಸರಾ ಉತ್ಸವದಲ್ಲಿ ಪಾಲ್ಗೊಳ್ಳಲಿರುವ ಆನೆಗಳ ಪಟ್ಟಿ ಹೀಗಿದೆ

Published On - 7:46 pm, Wed, 8 September 21

ಅಬ್ಬಬ್ಬಾ...ಒಂದೇ ಬೈಕ್​​ ನಲ್ಲಿ 5 ಜನ ಸವಾರಿ, ಈ ವಿಡಿಯೋ ನೋಡ್ರಿ
ಅಬ್ಬಬ್ಬಾ...ಒಂದೇ ಬೈಕ್​​ ನಲ್ಲಿ 5 ಜನ ಸವಾರಿ, ಈ ವಿಡಿಯೋ ನೋಡ್ರಿ
ಗಮನಸೆಳೆದ ಶತಾಯುಷಿ ಅಜ್ಜಿಯ 100ನೇ ಬರ್ತಡೇ ಸಂಭ್ರಮಾಚರಣೆ
ಗಮನಸೆಳೆದ ಶತಾಯುಷಿ ಅಜ್ಜಿಯ 100ನೇ ಬರ್ತಡೇ ಸಂಭ್ರಮಾಚರಣೆ
ಒಳ್ಳೆಯದಕ್ಕೂ, ಕೆಟ್ಟದ್ದಕ್ಕೂ ಓಕೆ ಅಂತಾಳೆ; ಪತ್ನಿ ಬಗ್ಗೆ ಮಾತಾಡಿದ ಹಂಸಲೇಖ
ಒಳ್ಳೆಯದಕ್ಕೂ, ಕೆಟ್ಟದ್ದಕ್ಕೂ ಓಕೆ ಅಂತಾಳೆ; ಪತ್ನಿ ಬಗ್ಗೆ ಮಾತಾಡಿದ ಹಂಸಲೇಖ
ರಾಷ್ಟ್ರಪತಿಯವರನ್ನು ಭೇಟಿಯಾಗಿ ಮಸೂದೆಗಳ ಅನುಮೋದನೆ ಜ್ಞಾಪಿಸಿದೆವು: ಸಿಎಂ
ರಾಷ್ಟ್ರಪತಿಯವರನ್ನು ಭೇಟಿಯಾಗಿ ಮಸೂದೆಗಳ ಅನುಮೋದನೆ ಜ್ಞಾಪಿಸಿದೆವು: ಸಿಎಂ
ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು: ಸಚಿವ
ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು: ಸಚಿವ
ಈಗ ಅನುಮತಿ ನೀಡಿದರೆ ಏನು ಪ್ರಯೋಜನ? ಪತ್ರಕ್ಕೆ ಉತ್ತರ ಕೂಡ ಇಲ್ಲ: ಖರ್ಗೆ
ಈಗ ಅನುಮತಿ ನೀಡಿದರೆ ಏನು ಪ್ರಯೋಜನ? ಪತ್ರಕ್ಕೆ ಉತ್ತರ ಕೂಡ ಇಲ್ಲ: ಖರ್ಗೆ
ಗುತ್ತಿಗೆದಾರನ ಹತ್ಯೆ: ಕೊಚ್ಚಿ ಕೊಲ್ಲುತ್ತಿರುವ ಭಯಾನಕ ದೃಶ್ಯ ಇಲ್ಲಿದೆ!
ಗುತ್ತಿಗೆದಾರನ ಹತ್ಯೆ: ಕೊಚ್ಚಿ ಕೊಲ್ಲುತ್ತಿರುವ ಭಯಾನಕ ದೃಶ್ಯ ಇಲ್ಲಿದೆ!
ರೀಲ್ಸ್ ಮಾಡುತ್ತಿದ್ದ ಯುವತಿಗೆ ಮಾಡೆಲಿಂಗ್​ನಲ್ಲಿ ಆಸಕ್ತಿಯಿತ್ತು: ಸಂಬಂಧಿ
ರೀಲ್ಸ್ ಮಾಡುತ್ತಿದ್ದ ಯುವತಿಗೆ ಮಾಡೆಲಿಂಗ್​ನಲ್ಲಿ ಆಸಕ್ತಿಯಿತ್ತು: ಸಂಬಂಧಿ
ನನ್ನನ್ನು ರಾಜನಾಗಿ ಮೆರೆಸಿದ್ದು ಹಂಸಲೇಖ: ರವಿಚಂದ್ರನ್
ನನ್ನನ್ನು ರಾಜನಾಗಿ ಮೆರೆಸಿದ್ದು ಹಂಸಲೇಖ: ರವಿಚಂದ್ರನ್
ಜಮೀರ್ ಅಹ್ಮದ್ ಕರೆದರೆ ಹೋಗಿ ಮಾತಾಡುತ್ತೇನೆ: ಬಿಆರ್ ಪಾಟೀಲ್
ಜಮೀರ್ ಅಹ್ಮದ್ ಕರೆದರೆ ಹೋಗಿ ಮಾತಾಡುತ್ತೇನೆ: ಬಿಆರ್ ಪಾಟೀಲ್