AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಸ್ಲಿಮರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: ಪ್ರತಾಪ್ ಸಿಂಹ ವಿರುದ್ಧ ಎಫ್ಐಆರ್ ದಾಖಲು

ಮೈಸೂರಿನಲ್ಲಿ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಮುಸ್ಲಿಂ ವಿರೋಧಿ ಹೇಳಿಕೆ ನೀಡಿದ ಆರೋಪದ ಮೇಲೆ ಎಫ್ಐಆರ್ ದಾಖಲಾಗಿದೆ. ಯೂತ್ ಕಾಂಗ್ರೆಸ್ ನಾಯಕ ಸೈಯದ್ ಅಬ್ರಾರ್ ಅವರ ದೂರಿನ ಆಧಾರದ ಮೇಲೆ ಉದಯಗಿರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾನೂನು ಕ್ರಮ ಜರುಗಿಸುವಂತೆ ಮನವಿ ಮಾಡಲಾಗಿದೆ.

ಮುಸ್ಲಿಮರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: ಪ್ರತಾಪ್ ಸಿಂಹ ವಿರುದ್ಧ ಎಫ್ಐಆರ್ ದಾಖಲು
ಮುಸ್ಲಿಮರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: ಪ್ರತಾಪ್ ಸಿಂಹ ವಿರುದ್ಧ ಎಫ್ಐಆರ್ ದಾಖಲು
ರಾಮ್​, ಮೈಸೂರು
| Edited By: |

Updated on:Feb 22, 2025 | 2:59 PM

Share

ಮೈಸೂರು, ಫೆಬ್ರವರಿ 22: ಮುಸ್ಲಿಮರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪ ಮೇಲೆ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ (pratap simha) ವಿರುದ್ಧ ಎಫ್ಐಆರ್ ದಾಖಲಾಗಿದೆ. ಯೂತ್​​ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಅಬ್ರಾರ್ ನೀಡಿದ್ದ ದೂರು ಆಧರಿಸಿ ಮೈಸೂರು ಉದಯಗಿರಿ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.

ದೂರಿನಲ್ಲೇನಿದೆ?

ಮಾಜಿ ಸಂಸದ ಪ್ರತಾಪ್ ಸಿಂಹ ಫೆಬ್ರವರಿ 20 ರಂದು ಉದಯಗಿರಿ ವ್ಯಾಪ್ತಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡುವಾಗ ಮುಸ್ಲಿಂ ಸಮುದಾಯದ ವಿರುದ್ಧ ಅವಹೇಳನಕಾರಿಯಾಗಿ ಪ್ರತಿಕ್ರಿಯಿಸಿದ್ದಾರೆ. ಮುಸ್ಲಿಂ ಸಮುದಾಯದವರು ಈ ದೇಶದ ಪ್ರಜೆಗಳೇ ಅಲ್ಲ ಎಂಬ ರೀತಿಯಲ್ಲಿ ಹೇಳಿದ್ದಾರೆ. ಮುಸ್ಲಿಂ ಸಮುದಾಯದ ಜನ ಸಂಖ್ಯೆ ಜಾಸ್ತಿ ಮಾಡಿಕೊಂಡು ಹೆಚ್ಚು ಮಕ್ಕಳು ಹುಟ್ಟಿಸುತ್ತಿದ್ದಾರೆ ಎಂಬ ಹೇಳಿಕೆಯನ್ನು ನೀಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ಯೋಗಿ ಆದಿತ್ಯನಾಥ್ ಅವರಲ್ಲಿರುವ ಎದೆಗಾರಿಕೆ, ಧಾಡಸಿತನ ಸಿದ್ದರಾಮಯ್ಯ ಅವರಲ್ಲಿ ಯಾಕಿಲ್ಲ? ಪ್ರತಾಪ್ ಸಿಂಹ

ಮುಸ್ಲಿಂ ಮತ್ತು ಹಿಂದೂ ಸಮುದಾಯದ ನಡುವೆ ಕೋಮು ಘರ್ಷಣೆ ಉಂಟುಮಾಡುವ ರೀತಿಯಲ್ಲಿ ಹೇಳಿಕೆಯನ್ನು ನೀಡಿದ್ದಾರೆ. ಮುಸ್ಲಿಂ ಸಮುದಾಯದ ಜನರನ್ನು ನಿಂದಿಸುವ ರೀತಿಯಲ್ಲಿ ಪ್ರಚೋದನಾ ಭಾಷಣವನ್ನು ಮಾಡಿದ್ದಾರೆ. ಆದ್ದರಿಂದ ಪ್ರತಾಪ್ ಸಿಂಹರವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಯೂತ್​​ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಅಬ್ರಾರ್ ದೂರು ನೀಡಿದ್ದಾರೆ.

ಪ್ರತಾಪ್ ಸಿಂಹ ಹೇಳಿದ್ದೇನು?

ಮೈಸೂರಿನ ಉದಯಗಿರಿ ಠಾಣೆ ಮೇಲಿನ ಕಲ್ಲು ತೂರಾಟ ಪ್ರಕರಣ ವಿಚಾರವಾಗಿ ಇತ್ತೀಚೆಗೆ ಮಾಧ್ಯಮದವರೊಂದಿಗೆ ಮಾತನಾಡಿದ್ದ ಪ್ರತಾಪ್ ಸಿಂಹ, ದೇಶ ಇಬ್ಭಾಗ ಆದಾಗಲೇ ಮುಸ್ಲಿಂರು ಈ ದೇಶವನ್ನು ಬಿಟ್ಟು ತೊಲಗಬೇಕಿತ್ತು. ಆದರೆ ಇಲ್ಲಿ ಉಳಿದಕೊಂಡು ಮಕ್ಕಳನ್ನು ಹುಟ್ಟಿಸುವುದು ಬಿಟ್ಟು ಬೇರೇನು ಮಾಡುತ್ತಿದ್ದಾರೆ ಹೇಳಿ? ಎಂದಿದ್ದರು. ಸದ್ಯ ಪ್ರತಾಪ್ ಸಿಂಹರ ಈ ಹೇಳಿಕೆ ಸಾಕಷ್ಟು ಚರ್ಚೆಗೆ ಗ್ರಾಸವಾಗುತ್ತಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 2:58 pm, Sat, 22 February 25

Follow Us
ಟಿವಿ9 ವಾರ್ಷಿಕ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಸ್ಫೂರ್ತಿದಾಯಕ ಭಾಷಣ
ಟಿವಿ9 ವಾರ್ಷಿಕ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಸ್ಫೂರ್ತಿದಾಯಕ ಭಾಷಣ
ಪ್ರಧಾನಿ ಮೋದಿಗೆ ಮೈ ಹೋಮ್ ಗ್ರೂಪ್ ಚೇರ್ಮನ್ ರಾಮೇಶ್ವರ ರಾವ್ ಸನ್ಮಾನ
ಪ್ರಧಾನಿ ಮೋದಿಗೆ ಮೈ ಹೋಮ್ ಗ್ರೂಪ್ ಚೇರ್ಮನ್ ರಾಮೇಶ್ವರ ರಾವ್ ಸನ್ಮಾನ
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಅಥಣಿಯಿಂದ ಶಿವಣ್ಣನ ನೋಡಲು ಬೆಂಗಳೂರಿಗೆ ಬಂದ ವಿಶೇಷ ಚೇತನ ಅಭಿಮಾನಿ
ಅಥಣಿಯಿಂದ ಶಿವಣ್ಣನ ನೋಡಲು ಬೆಂಗಳೂರಿಗೆ ಬಂದ ವಿಶೇಷ ಚೇತನ ಅಭಿಮಾನಿ
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ