AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಸ್ಲಿಮರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: ಪ್ರತಾಪ್ ಸಿಂಹ ವಿರುದ್ಧ ಎಫ್ಐಆರ್ ದಾಖಲು

ಮೈಸೂರಿನಲ್ಲಿ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಮುಸ್ಲಿಂ ವಿರೋಧಿ ಹೇಳಿಕೆ ನೀಡಿದ ಆರೋಪದ ಮೇಲೆ ಎಫ್ಐಆರ್ ದಾಖಲಾಗಿದೆ. ಯೂತ್ ಕಾಂಗ್ರೆಸ್ ನಾಯಕ ಸೈಯದ್ ಅಬ್ರಾರ್ ಅವರ ದೂರಿನ ಆಧಾರದ ಮೇಲೆ ಉದಯಗಿರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾನೂನು ಕ್ರಮ ಜರುಗಿಸುವಂತೆ ಮನವಿ ಮಾಡಲಾಗಿದೆ.

ಮುಸ್ಲಿಮರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: ಪ್ರತಾಪ್ ಸಿಂಹ ವಿರುದ್ಧ ಎಫ್ಐಆರ್ ದಾಖಲು
ಮುಸ್ಲಿಮರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: ಪ್ರತಾಪ್ ಸಿಂಹ ವಿರುದ್ಧ ಎಫ್ಐಆರ್ ದಾಖಲು
Follow us
ರಾಮ್​, ಮೈಸೂರು
| Updated By: ಗಂಗಾಧರ​ ಬ. ಸಾಬೋಜಿ

Updated on:Feb 22, 2025 | 2:59 PM

ಮೈಸೂರು, ಫೆಬ್ರವರಿ 22: ಮುಸ್ಲಿಮರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪ ಮೇಲೆ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ (pratap simha) ವಿರುದ್ಧ ಎಫ್ಐಆರ್ ದಾಖಲಾಗಿದೆ. ಯೂತ್​​ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಅಬ್ರಾರ್ ನೀಡಿದ್ದ ದೂರು ಆಧರಿಸಿ ಮೈಸೂರು ಉದಯಗಿರಿ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.

ದೂರಿನಲ್ಲೇನಿದೆ?

ಮಾಜಿ ಸಂಸದ ಪ್ರತಾಪ್ ಸಿಂಹ ಫೆಬ್ರವರಿ 20 ರಂದು ಉದಯಗಿರಿ ವ್ಯಾಪ್ತಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡುವಾಗ ಮುಸ್ಲಿಂ ಸಮುದಾಯದ ವಿರುದ್ಧ ಅವಹೇಳನಕಾರಿಯಾಗಿ ಪ್ರತಿಕ್ರಿಯಿಸಿದ್ದಾರೆ. ಮುಸ್ಲಿಂ ಸಮುದಾಯದವರು ಈ ದೇಶದ ಪ್ರಜೆಗಳೇ ಅಲ್ಲ ಎಂಬ ರೀತಿಯಲ್ಲಿ ಹೇಳಿದ್ದಾರೆ. ಮುಸ್ಲಿಂ ಸಮುದಾಯದ ಜನ ಸಂಖ್ಯೆ ಜಾಸ್ತಿ ಮಾಡಿಕೊಂಡು ಹೆಚ್ಚು ಮಕ್ಕಳು ಹುಟ್ಟಿಸುತ್ತಿದ್ದಾರೆ ಎಂಬ ಹೇಳಿಕೆಯನ್ನು ನೀಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ಯೋಗಿ ಆದಿತ್ಯನಾಥ್ ಅವರಲ್ಲಿರುವ ಎದೆಗಾರಿಕೆ, ಧಾಡಸಿತನ ಸಿದ್ದರಾಮಯ್ಯ ಅವರಲ್ಲಿ ಯಾಕಿಲ್ಲ? ಪ್ರತಾಪ್ ಸಿಂಹ

ಮುಸ್ಲಿಂ ಮತ್ತು ಹಿಂದೂ ಸಮುದಾಯದ ನಡುವೆ ಕೋಮು ಘರ್ಷಣೆ ಉಂಟುಮಾಡುವ ರೀತಿಯಲ್ಲಿ ಹೇಳಿಕೆಯನ್ನು ನೀಡಿದ್ದಾರೆ. ಮುಸ್ಲಿಂ ಸಮುದಾಯದ ಜನರನ್ನು ನಿಂದಿಸುವ ರೀತಿಯಲ್ಲಿ ಪ್ರಚೋದನಾ ಭಾಷಣವನ್ನು ಮಾಡಿದ್ದಾರೆ. ಆದ್ದರಿಂದ ಪ್ರತಾಪ್ ಸಿಂಹರವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಯೂತ್​​ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಅಬ್ರಾರ್ ದೂರು ನೀಡಿದ್ದಾರೆ.

ಪ್ರತಾಪ್ ಸಿಂಹ ಹೇಳಿದ್ದೇನು?

ಮೈಸೂರಿನ ಉದಯಗಿರಿ ಠಾಣೆ ಮೇಲಿನ ಕಲ್ಲು ತೂರಾಟ ಪ್ರಕರಣ ವಿಚಾರವಾಗಿ ಇತ್ತೀಚೆಗೆ ಮಾಧ್ಯಮದವರೊಂದಿಗೆ ಮಾತನಾಡಿದ್ದ ಪ್ರತಾಪ್ ಸಿಂಹ, ದೇಶ ಇಬ್ಭಾಗ ಆದಾಗಲೇ ಮುಸ್ಲಿಂರು ಈ ದೇಶವನ್ನು ಬಿಟ್ಟು ತೊಲಗಬೇಕಿತ್ತು. ಆದರೆ ಇಲ್ಲಿ ಉಳಿದಕೊಂಡು ಮಕ್ಕಳನ್ನು ಹುಟ್ಟಿಸುವುದು ಬಿಟ್ಟು ಬೇರೇನು ಮಾಡುತ್ತಿದ್ದಾರೆ ಹೇಳಿ? ಎಂದಿದ್ದರು. ಸದ್ಯ ಪ್ರತಾಪ್ ಸಿಂಹರ ಈ ಹೇಳಿಕೆ ಸಾಕಷ್ಟು ಚರ್ಚೆಗೆ ಗ್ರಾಸವಾಗುತ್ತಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 2:58 pm, Sat, 22 February 25

ಅವಳೇ ನನ್ನ ಹೆಂಡತಿ, ತಾಳೆ ಕಟ್ಟಿದ್ದೇನೆ: ಮಡೆನೂರು ಮನು ಶಾಕಿಂಗ್ ಆಡಿಯೋ
ಅವಳೇ ನನ್ನ ಹೆಂಡತಿ, ತಾಳೆ ಕಟ್ಟಿದ್ದೇನೆ: ಮಡೆನೂರು ಮನು ಶಾಕಿಂಗ್ ಆಡಿಯೋ
25 ವರ್ಷಗಳ ನಂತರ ಆಂಗ್ಲರ ವಿರುದ್ಧ ಶತಕ ದಾಖಲು
25 ವರ್ಷಗಳ ನಂತರ ಆಂಗ್ಲರ ವಿರುದ್ಧ ಶತಕ ದಾಖಲು
ಆಸ್ಪತ್ರೆಗೆ ಹೋಗಲು ರಸ್ತೆಯಿಲ್ಲದೇ ವೃದ್ಧೆ ಪರದಾಟ
ಆಸ್ಪತ್ರೆಗೆ ಹೋಗಲು ರಸ್ತೆಯಿಲ್ಲದೇ ವೃದ್ಧೆ ಪರದಾಟ
ಗಂಡ-ಹೆಂಡ್ತಿ ಜಗಳದಲ್ಲಿ ಮದ್ವೆ ಮಾಡಿಸಿದ್ದ ಬ್ರೋಕರ್ ಕೊಲೆ
ಗಂಡ-ಹೆಂಡ್ತಿ ಜಗಳದಲ್ಲಿ ಮದ್ವೆ ಮಾಡಿಸಿದ್ದ ಬ್ರೋಕರ್ ಕೊಲೆ
ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?