ಸಫಾರಿ ವೇಳೆ ಅಪರೂಪದ ಕರಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರು ಫಿದಾ!

ಮೈಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಸಫಾರಿಗೆ ತೆರಳಿದ್ದ ವೇಳೆ ಪ್ರವಾಸಿಗರಿಗೆ ಬಹು ಅಪರೂಪದ ಕರಿಚಿರತೆ ಪ್ರತ್ಯಕ್ಷವಾಗಿದ್ದು, ಪ್ರವಾಸಿಗರ ಅಚ್ಚರಿಗೆ ಕಾರಣವಾಯ್ತು. ಕರಿಚಿರತೆಯನ್ನು ಕಂಡ ಪ್ರವಾಸಿಗರು ಫಿದಾ ಆಗಿದ್ದಾರೆ. ಸಫಾರಿಗೆ ತೆರಳಿದ್ದ ಪ್ರವಾಸಿಗರು ತಮ್ಮ ಮೊಬೈಲ್​ಗಳಲ್ಲಿ ಕಾಡುಪ್ರಾಣಿಗಳನ್ನು ಸೆರೆ ಹಿಡಿದಿದ್ದಾರೆ. ಉದ್ಯಾನವನದಲ್ಲಿ ಬಿಸಿಲಿನ ಬೇಗೆಗೆ ನೀರಿನ ಹೊಂಡದಲ್ಲಿದ್ದ ಹುಲಿ ಸಫಾರಿ ತೆರಳುವ ಮಾರ್ಗದಲ್ಲಿ ಪ್ರವಾಸಿಗರ ವಾಹನಕ್ಕೆ ಅಡ್ಡ ಬಂದಿದೆ. ಪ್ರವಾಸಿಗರನ್ನ ಕಂಡರೂ ಬೆಚ್ಚಿಬೀಳದೆ ವಾಹನದ ಬಳಿಯೇ ಸುಳಿದಾಡಿದೆ. ಕಪ್ಪು ಚಿರತೆ ಸೇರಿ ಹುಲಿಗಳ ಓಡಾಟ ಮೊಬೈಲ್​ನಲ್ಲಿ ಸೆರೆಯಾಗಿದ್ದು, ಪ್ರವಾಸಿಗರು […]

ಸಫಾರಿ ವೇಳೆ ಅಪರೂಪದ ಕರಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರು ಫಿದಾ!
ಸಾಧು ಶ್ರೀನಾಥ್​

Updated on: Jan 28, 2020 | 2:03 PM

ಮೈಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಸಫಾರಿಗೆ ತೆರಳಿದ್ದ ವೇಳೆ ಪ್ರವಾಸಿಗರಿಗೆ ಬಹು ಅಪರೂಪದ ಕರಿಚಿರತೆ ಪ್ರತ್ಯಕ್ಷವಾಗಿದ್ದು, ಪ್ರವಾಸಿಗರ ಅಚ್ಚರಿಗೆ ಕಾರಣವಾಯ್ತು. ಕರಿಚಿರತೆಯನ್ನು ಕಂಡ ಪ್ರವಾಸಿಗರು ಫಿದಾ ಆಗಿದ್ದಾರೆ.

ಸಫಾರಿಗೆ ತೆರಳಿದ್ದ ಪ್ರವಾಸಿಗರು ತಮ್ಮ ಮೊಬೈಲ್​ಗಳಲ್ಲಿ ಕಾಡುಪ್ರಾಣಿಗಳನ್ನು ಸೆರೆ ಹಿಡಿದಿದ್ದಾರೆ. ಉದ್ಯಾನವನದಲ್ಲಿ ಬಿಸಿಲಿನ ಬೇಗೆಗೆ ನೀರಿನ ಹೊಂಡದಲ್ಲಿದ್ದ ಹುಲಿ ಸಫಾರಿ ತೆರಳುವ ಮಾರ್ಗದಲ್ಲಿ ಪ್ರವಾಸಿಗರ ವಾಹನಕ್ಕೆ ಅಡ್ಡ ಬಂದಿದೆ. ಪ್ರವಾಸಿಗರನ್ನ ಕಂಡರೂ ಬೆಚ್ಚಿಬೀಳದೆ ವಾಹನದ ಬಳಿಯೇ ಸುಳಿದಾಡಿದೆ. ಕಪ್ಪು ಚಿರತೆ ಸೇರಿ ಹುಲಿಗಳ ಓಡಾಟ ಮೊಬೈಲ್​ನಲ್ಲಿ ಸೆರೆಯಾಗಿದ್ದು, ಪ್ರವಾಸಿಗರು ಸಂತಸಪಟ್ಟಿದ್ದಾರೆ.



sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us