AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಯುವಕ; 9 ಜನರ ಬಾಳಿಗೆ ಬೆಳಕು

ಮದನ್ ಹೃದಯ, ಶ್ವಾಸಕೋಶ, ಲಿವರ್, ಕಿಡ್ನಿ, ಕಾರ್ನಿಯಾ ಸೇರಿ ಹಲವು ಅಂಗಾಂಗ ದಾನ ಮಾಡಲಾಗಿದೆ. ಬರೋಬ್ಬರಿ 9 ಜನರ ಬಾಳಿಗೆ ಮದನ್ ಅಂಗಾಂಗಗಳನ್ನು ದಾನ ಮಾಡಲಾಗಿದೆ.

ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಯುವಕ; 9 ಜನರ ಬಾಳಿಗೆ ಬೆಳಕು
ಮದನ್
Follow us
TV9 Web
| Updated By: ಆಯೇಷಾ ಬಾನು

Updated on: Oct 08, 2022 | 12:43 PM

ಮೈಸೂರು: ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಪೆಟ್ಟು ಬಿದ್ದು ಮಿದುಳು ನಿಷ್ಕ್ರಿಯಗೊಂಡ ಹಿನ್ನೆಲೆ 27 ವರ್ಷದ ಮದನ್ ಎಂಬ ಯುವಕನ ಕುಟುಂಬಸ್ಥರು ಆತನ ಅಂಗಾಂಗ ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಮೈಸೂರಿನ ಮುನೇಶ್ವರ ನಗರದ ನಿವಾಸಿ ಮದನ್, ಕಾವೇರಿ ಆಸ್ಪತ್ರೆ ಬಳಿ ಬೈಕ್‌ ನಿಯಂತ್ರಣ ತಪ್ಪಿ ಅಪಘಾತದಲ್ಲಿ ಆಸ್ಪತ್ರೆ ಸೇರಿದ್ದ.

ಅಪಘಾತದಲ್ಲಿ ಮದನ್​ ತಲೆಗೆ ಗಂಭೀರವಾಗಿ ಪೆಟ್ಟು ಬಿದ್ದಿತ್ತು. ಮಿದುಳು ನಿಷ್ಕ್ರಿಯಗೊಂಡ ಕಾರಣ ಹೃದಯ ಸೇರಿ ಹಲವು ಅಂಗಾಂಗ ದಾನ ಮಾಡಲು ಕುಟುಂಬಸ್ಥರು ನಿರ್ಧರಿಸಿದ್ದಾರೆ. ಮದನ್ ಹೃದಯ, ಶ್ವಾಸಕೋಶ, ಲಿವರ್, ಕಿಡ್ನಿ, ಕಾರ್ನಿಯಾ ಸೇರಿ ಹಲವು ಅಂಗಾಂಗ ದಾನ ಮಾಡಲಾಗಿದೆ. ಬರೋಬ್ಬರಿ 9 ಜನರ ಬಾಳಿಗೆ ಮದನ್ ಅಂಗಾಂಗಗಳನ್ನು ದಾನ ಮಾಡಲಾಗಿದೆ. ಜೀರೋ ಟ್ರಾಫಿಕ್‌ನಲ್ಲಿ ಬೆಂಗಳೂರಿಗೆ ಹೃದಯ ರವಾನೆ ಮಾಡಲಾಗಿದೆ. ಇದನ್ನೂ ಓದಿ: Mysore: ಯುವಕನ ಅಂಗಾಂಗ ದಾನದಿಂದ 8 ಮಂದಿಯ ಬಾಳಿಗೆ ಬೆಳಕು

ಯುವಕನ ಅಂಗಾಂಗ ದಾನದಿಂದ 8 ಮಂದಿಯ ಬಾಳಿಗೆ ಬೆಳಕು

ಮೈಸೂರು: ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕನ ಮೆದುಳು ನಿಷ್ಕ್ರಿಯ (Brain Dead)ಗೊಂಡ ಹಿನ್ನೆಲೆ ಆತನ ಅಂಗಾಂಗಗಳನ್ನು ದಾನ (Organs Donate) ಮಾಡುವ ಮೂಲಕ ಕುಟುಂಬಸ್ಥರು ಮಾನವೀಯತೆ ಮರೆದಿದ್ದಾರೆ. ಯುವಕನ ಅಂಗಾಂಗ ದಾನದಿಂದಾಗಿ ಒಟ್ಟು 8 ಜನರ ಬಾಳಿಗೆ ಬೆಳಕು ನೀಡಿದಂತಾಗಿದೆ. ಮೈಸೂರು ಜಿಲ್ಲೆ ಪಿರಿಯಾಪಟ್ಟಣ ನಿವಾಸಿ ಲೋಹಿತ್ ಕಳೆದ ವಾರ ಕಾರು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಅವರು ಮೆದುಳು ನಿಷ್ಕ್ರಿಯಗೊಂಡು ಅಂಗಾಂಗ ದಾನದ ಮೂಲಕ ಸಾರ್ಥಕ ಜೀವನ ಮರೆದಿದ್ದಾರೆ.

ಕಳೆದ ವಾರ ಹುಣಸೂರು ತಾಲ್ಲೂಕು ಬಿಳಿಕೆರೆ ಬಳಿ ಕಾರು ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಕಾರು ಚಾಲಕನಾಗಿದ್ದ ಪಿರಿಯಾಪಟ್ಟಣ ನಿವಾಸಿ ಲೋಹಿತ್ ಅವರ ತಲೆಗೆ ಗಂಭೀರವಾಗಿ ಗಾಯಗಳಾಗಿದ್ದವು. ಅದರಂತೆ ಒಂದು ವಾರದಿಂದ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಲೋಹಿತ್​ನ ಮೆದುಳು ನಿಷ್ಕ್ರಿಯಗೊಂಡ ಹಿನ್ನೆಲೆ ಅಂಗಾಂಗಗಳನ್ನು ದಾನ ಮಾಡಲಾಗಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಕಾಳಿಂಗ ಸರ್ಪವನ್ನು ಇಷ್ಟು ಹತ್ತಿರದಿಂದ ನೋಡಿದ್ದೀರಾ?
ಕಾಳಿಂಗ ಸರ್ಪವನ್ನು ಇಷ್ಟು ಹತ್ತಿರದಿಂದ ನೋಡಿದ್ದೀರಾ?
ಸರಿಗಮಪ ಫಿನಾಲೆ ಟಿಕೆಟ್ ಪಡೆದ ಆರಾಧ್ಯಾ ರಾವ್ ಧ್ವನಿ ಅದೆಷ್ಟು ಸುಮಧುರ ಕೇಳಿ
ಸರಿಗಮಪ ಫಿನಾಲೆ ಟಿಕೆಟ್ ಪಡೆದ ಆರಾಧ್ಯಾ ರಾವ್ ಧ್ವನಿ ಅದೆಷ್ಟು ಸುಮಧುರ ಕೇಳಿ
ಪಂದ್ಯದ ಬಳಿಕವೂ ಮುಂದುವರೆದ ಅಭಿಷೇಕ್-ದಿಗ್ವೇಶ್ ವಾಗ್ಯುದ್ಧ
ಪಂದ್ಯದ ಬಳಿಕವೂ ಮುಂದುವರೆದ ಅಭಿಷೇಕ್-ದಿಗ್ವೇಶ್ ವಾಗ್ಯುದ್ಧ
ನಿನ್ನ ಜುಟ್ಟು ಹಿಡಿದು ಹೊಡಿತೀನಿ: ಕಿತ್ತಾಡಿಕೊಂಡ ಅಭಿಷೇಕ್ - ದಿಗ್ವೇಶ್
ನಿನ್ನ ಜುಟ್ಟು ಹಿಡಿದು ಹೊಡಿತೀನಿ: ಕಿತ್ತಾಡಿಕೊಂಡ ಅಭಿಷೇಕ್ - ದಿಗ್ವೇಶ್
ದೇವರ ದೀಪಾರಾಧನೆಗೆ ಎಷ್ಟು ಬತ್ತಿಗಳನ್ನು ಬಳಸಬೇಕು? ಇಲ್ಲಿದೆ ಮಾಹಿತಿ
ದೇವರ ದೀಪಾರಾಧನೆಗೆ ಎಷ್ಟು ಬತ್ತಿಗಳನ್ನು ಬಳಸಬೇಕು? ಇಲ್ಲಿದೆ ಮಾಹಿತಿ
ವೃಷಭ ರಾಶಿಯವರಿಗೆ 7 ಗ್ರಹಗಳ ಶುಭಫಲ! ಉಳಿದ ರಾಶಿಗಳ ಫಲಾಫಲ ಇಲ್ಲಿದೆ ನೋಡಿ
ವೃಷಭ ರಾಶಿಯವರಿಗೆ 7 ಗ್ರಹಗಳ ಶುಭಫಲ! ಉಳಿದ ರಾಶಿಗಳ ಫಲಾಫಲ ಇಲ್ಲಿದೆ ನೋಡಿ
ವಿವಾಹ ವಾರ್ಷಿಕೋತ್ಸವ: ಪತ್ನಿ ವಿಜಯಲಕ್ಷ್ಮಿ ಜೊತೆ ನಟ ದರ್ಶನ್ ಡ್ಯಾನ್ಸ್
ವಿವಾಹ ವಾರ್ಷಿಕೋತ್ಸವ: ಪತ್ನಿ ವಿಜಯಲಕ್ಷ್ಮಿ ಜೊತೆ ನಟ ದರ್ಶನ್ ಡ್ಯಾನ್ಸ್
ಒಂದಂಕಿಗೆ ಸುಸ್ತಾದ ಪಂತ್; ಕೋಪಗೊಂಡ ಮಾಲೀಕ
ಒಂದಂಕಿಗೆ ಸುಸ್ತಾದ ಪಂತ್; ಕೋಪಗೊಂಡ ಮಾಲೀಕ
ಕೆರೆಯಂತಾದ ಬೆಂಗಳೂರು ರಸ್ತೆಗಳು: ಹೊಸೂರು ಹೆದ್ದಾರಿಯಲ್ಲಿ ಫುಲ್ ಟ್ರಾಫಿಕ್!
ಕೆರೆಯಂತಾದ ಬೆಂಗಳೂರು ರಸ್ತೆಗಳು: ಹೊಸೂರು ಹೆದ್ದಾರಿಯಲ್ಲಿ ಫುಲ್ ಟ್ರಾಫಿಕ್!
5 ಲಕ್ಷ ರೂ ಮೌಲ್ಯದ ಸಿಕ್ಸರ್ ಬಾರಿಸಿದ ಮಿಚೆಲ್ ಮಾರ್ಷ್
5 ಲಕ್ಷ ರೂ ಮೌಲ್ಯದ ಸಿಕ್ಸರ್ ಬಾರಿಸಿದ ಮಿಚೆಲ್ ಮಾರ್ಷ್