AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಳಿ ಕಟ್ಟುವಾಗ ಕುಸಿದು ಬಿದ್ದಂತೆ ನಟಿಸಿದ ವಧು; ಕೊನೆ ಕ್ಷಣದಲ್ಲಿ ಮುರಿದುಬಿದ್ದ ಮದುವೆ; ಠಾಣೆ ಮೆಟ್ಟಿಲೇರಿದ ಪ್ರಕರಣ

ಮೈಸೂರಿನ ವಿದ್ಯಾಭಾರತಿ ಕಲ್ಯಾಣ ಮಂಟಪದಲ್ಲಿ ಮೈಸೂರಿನ ಸುಣ್ಣದಕೇರಿ ನಿವಾಸಿಯಾಗಿರುವ ವಧು ಸಿಂಚನ ಮತ್ತು ಹೆಚ್.ಡಿ.ಕೋಟೆಯ ಯುವಕನ ಜತೆ ಮದುವೆ ನಡೆಯಬೇಕಿತ್ತು. ಆದ್ರೆ ತಾಳಿ ಕಟ್ಟುವ ಸಮಯದಲ್ಲಿ ಮದುವೆ ಮುರಿದು ಬಿದ್ದಿದೆ.

ತಾಳಿ ಕಟ್ಟುವಾಗ ಕುಸಿದು ಬಿದ್ದಂತೆ ನಟಿಸಿದ ವಧು; ಕೊನೆ ಕ್ಷಣದಲ್ಲಿ ಮುರಿದುಬಿದ್ದ ಮದುವೆ; ಠಾಣೆ ಮೆಟ್ಟಿಲೇರಿದ ಪ್ರಕರಣ
ತಾಳಿ ಕಟ್ಟುವಾಗ ಕುಸಿದು ಬಿದ್ದಂತೆ ನಟಿಸಿದ ವಧು; ಕೊನೆ ಕ್ಷಣದಲ್ಲಿ ಮುರಿದುಬಿದ್ದ ಮದುವೆ; ಠಾಣೆ ಮೆಟ್ಟಿಲೇರಿದ ಪ್ರಕರಣ
TV9 Web
| Edited By: |

Updated on:May 22, 2022 | 4:14 PM

Share

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕೊನೆ ಕ್ಷಣದಲ್ಲಿ ಮದುವೆ ಮುರಿದುಬಿದ್ದ ಘಟನೆ ನಡೆದಿದೆ. ತಾಳಿ ಕಟ್ಟುವ ಸಂದರ್ಭದಲ್ಲಿ ಮದುವೆ ಮಂಟಪದಲ್ಲಿ ಕುಸಿದು ಬಿದ್ದಂತೆ ವಧು ನಾಟಕವಾಡಿದ್ದು ಪ್ರಿಯಕರನನ್ನು ಮದುವೆಯಾಗುವುದಾಗಿ ಹೈಡ್ರಾಮಾ ಮಾಡಿದ್ದಾಳೆ.

ಮೈಸೂರಿನ ವಿದ್ಯಾಭಾರತಿ ಕಲ್ಯಾಣ ಮಂಟಪದಲ್ಲಿ ಮೈಸೂರಿನ ಸುಣ್ಣದಕೇರಿ ನಿವಾಸಿಯಾಗಿರುವ ವಧು ಸಿಂಚನ ಮತ್ತು ಹೆಚ್.ಡಿ.ಕೋಟೆಯ ಯುವಕನ ಜತೆ ಮದುವೆ ನಡೆಯಬೇಕಿತ್ತು. ಆದ್ರೆ ತಾಳಿ ಕಟ್ಟುವ ಸಮಯದಲ್ಲಿ ಮದುವೆ ಮುರಿದು ಬಿದ್ದಿದೆ. ಸುಣ್ಣದಕೇರಿಯಲ್ಲಿ ನೆರೆಮನೆ ಯುವಕನನ್ನು ಸಿಂಚನ ಪ್ರೀತಿಸುತ್ತಿದ್ದಳು. ಸಿಂಚನ ಪ್ರಿಯಕರ ತನ್ನ ಪ್ರೇಯಸಿಯನ್ನು ನೀನು ಮದುವೆಯಾಗಬೇಡ ಎಂದು ವರನಿಗೆ ಮೆಸೇಜ್ ಮಾಡಿದ್ದ. ಈ ವೇಳೆ ವರನ ಪೋಷಕರು ವಧುವಿನ ಪೋಷಕರಿಗೆ ತೀವ್ರ ತರಾಟೆಗೆ ತೆಗೆದುಕೊಂಡಿದ್ದರು. ಮದುವೆಗಾಗಿ 5 ಲಕ್ಷ ಹಣ ಖರ್ಚು ಮಾಡಿದ್ದೇವೆಂದು ವಾಗ್ದಾಳಿ ನಡೆಸಿದ್ದರು. ಖರ್ಚು ಮಾಡಿದ್ದ ಹಣ ಕೊಡುವಂತೆ ವರನ ಪೋಷಕರು ಆಗ್ರಹಿಸಿದ್ದು ಮದುವೆ ನಿಲ್ಲಿಸಿ ವಧು, ವರನ ಪೋಷಕರು ಮೈಸೂರಿನ ಕೃಷ್ಣರಾಜ ಪೊಲೀಸ್ ಠಾಣೆಗೆ ಬಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಕೆ.ಆರ್​.ಠಾಣೆ ಪೊಲೀಸರ ಮಧ್ಯಸ್ಥಿಕೆಯಲ್ಲಿ ಪ್ರಕರಣ ಸುಖಾಂತ್ಯ ಠಾಣೆ ಮೆಟ್ಟಿಲೇರಿದ್ದ ಪೋಷಕರು ಪರಸ್ಪರ ದೂರು ದಾಖಲಿಸದೆ ಠಾಣೆಯಿಂದ ತೆರಳಿದ್ದಾರೆ. ಕೆ.ಆರ್​.ಠಾಣೆ ಪೊಲೀಸರ ಮಧ್ಯಸ್ಥಿಕೆಯಲ್ಲಿ ಪ್ರಕರಣ ಸುಖಾಂತ್ಯ ಕಂಡಿದೆ. ಮಾತುಕತೆ ಮೂಲಕ ಪೋಷಕರು ಸಮಸ್ಯೆ ಬಗೆಹರಿಸಿಕೊಂಡಿದ್ದಾರೆ. ಯುವತಿ ಪೋಷಕರು ಚಿನ್ನ, ಬೆಳ್ಳಿ ಆಭರಣಗಳ ಖರ್ಚು ನೀಡಿದ್ದಾರೆ. ಖರ್ಚಿನ ಹಣ ಪಡೆದು ಹುಡುಗನ ಮನೆಯವರು ತೆರಳಿದ್ದಾರೆ. ಪೊಲೀಸ್ ಠಾಣೆಯಲ್ಲೇ ವಧುವಿನ‌ ಪೋಷಕರು ನಷ್ಟ ಭರಿಸಿಕೊಟ್ಟಿದ್ದಾರೆ. ಸದ್ಯ ಪೋಷಕರ ಜೊತೆ ಯುವತಿ ಆಟೋದಲ್ಲಿ ಮನೆಗೆ ವಾಪಸಾಗಿದ್ದಾಳೆ.

Published On - 3:57 pm, Sun, 22 May 22

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!