ತಾಳಿ ಕಟ್ಟುವಾಗ ಕುಸಿದು ಬಿದ್ದಂತೆ ನಟಿಸಿದ ವಧು; ಕೊನೆ ಕ್ಷಣದಲ್ಲಿ ಮುರಿದುಬಿದ್ದ ಮದುವೆ; ಠಾಣೆ ಮೆಟ್ಟಿಲೇರಿದ ಪ್ರಕರಣ

| Updated By: ಆಯೇಷಾ ಬಾನು

Updated on: May 22, 2022 | 4:14 PM

ಮೈಸೂರಿನ ವಿದ್ಯಾಭಾರತಿ ಕಲ್ಯಾಣ ಮಂಟಪದಲ್ಲಿ ಮೈಸೂರಿನ ಸುಣ್ಣದಕೇರಿ ನಿವಾಸಿಯಾಗಿರುವ ವಧು ಸಿಂಚನ ಮತ್ತು ಹೆಚ್.ಡಿ.ಕೋಟೆಯ ಯುವಕನ ಜತೆ ಮದುವೆ ನಡೆಯಬೇಕಿತ್ತು. ಆದ್ರೆ ತಾಳಿ ಕಟ್ಟುವ ಸಮಯದಲ್ಲಿ ಮದುವೆ ಮುರಿದು ಬಿದ್ದಿದೆ.

ತಾಳಿ ಕಟ್ಟುವಾಗ ಕುಸಿದು ಬಿದ್ದಂತೆ ನಟಿಸಿದ ವಧು; ಕೊನೆ ಕ್ಷಣದಲ್ಲಿ ಮುರಿದುಬಿದ್ದ ಮದುವೆ; ಠಾಣೆ ಮೆಟ್ಟಿಲೇರಿದ ಪ್ರಕರಣ
ತಾಳಿ ಕಟ್ಟುವಾಗ ಕುಸಿದು ಬಿದ್ದಂತೆ ನಟಿಸಿದ ವಧು; ಕೊನೆ ಕ್ಷಣದಲ್ಲಿ ಮುರಿದುಬಿದ್ದ ಮದುವೆ; ಠಾಣೆ ಮೆಟ್ಟಿಲೇರಿದ ಪ್ರಕರಣ
Follow us on

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕೊನೆ ಕ್ಷಣದಲ್ಲಿ ಮದುವೆ ಮುರಿದುಬಿದ್ದ ಘಟನೆ ನಡೆದಿದೆ. ತಾಳಿ ಕಟ್ಟುವ ಸಂದರ್ಭದಲ್ಲಿ ಮದುವೆ ಮಂಟಪದಲ್ಲಿ ಕುಸಿದು ಬಿದ್ದಂತೆ ವಧು ನಾಟಕವಾಡಿದ್ದು ಪ್ರಿಯಕರನನ್ನು ಮದುವೆಯಾಗುವುದಾಗಿ ಹೈಡ್ರಾಮಾ ಮಾಡಿದ್ದಾಳೆ.

ಮೈಸೂರಿನ ವಿದ್ಯಾಭಾರತಿ ಕಲ್ಯಾಣ ಮಂಟಪದಲ್ಲಿ ಮೈಸೂರಿನ ಸುಣ್ಣದಕೇರಿ ನಿವಾಸಿಯಾಗಿರುವ ವಧು ಸಿಂಚನ ಮತ್ತು ಹೆಚ್.ಡಿ.ಕೋಟೆಯ ಯುವಕನ ಜತೆ ಮದುವೆ ನಡೆಯಬೇಕಿತ್ತು. ಆದ್ರೆ ತಾಳಿ ಕಟ್ಟುವ ಸಮಯದಲ್ಲಿ ಮದುವೆ ಮುರಿದು ಬಿದ್ದಿದೆ. ಸುಣ್ಣದಕೇರಿಯಲ್ಲಿ ನೆರೆಮನೆ ಯುವಕನನ್ನು ಸಿಂಚನ ಪ್ರೀತಿಸುತ್ತಿದ್ದಳು. ಸಿಂಚನ ಪ್ರಿಯಕರ ತನ್ನ ಪ್ರೇಯಸಿಯನ್ನು ನೀನು ಮದುವೆಯಾಗಬೇಡ ಎಂದು ವರನಿಗೆ ಮೆಸೇಜ್ ಮಾಡಿದ್ದ. ಈ ವೇಳೆ ವರನ ಪೋಷಕರು ವಧುವಿನ ಪೋಷಕರಿಗೆ ತೀವ್ರ ತರಾಟೆಗೆ ತೆಗೆದುಕೊಂಡಿದ್ದರು. ಮದುವೆಗಾಗಿ 5 ಲಕ್ಷ ಹಣ ಖರ್ಚು ಮಾಡಿದ್ದೇವೆಂದು ವಾಗ್ದಾಳಿ ನಡೆಸಿದ್ದರು. ಖರ್ಚು ಮಾಡಿದ್ದ ಹಣ ಕೊಡುವಂತೆ ವರನ ಪೋಷಕರು ಆಗ್ರಹಿಸಿದ್ದು ಮದುವೆ ನಿಲ್ಲಿಸಿ ವಧು, ವರನ ಪೋಷಕರು ಮೈಸೂರಿನ ಕೃಷ್ಣರಾಜ ಪೊಲೀಸ್ ಠಾಣೆಗೆ ಬಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಕೆ.ಆರ್​.ಠಾಣೆ ಪೊಲೀಸರ ಮಧ್ಯಸ್ಥಿಕೆಯಲ್ಲಿ ಪ್ರಕರಣ ಸುಖಾಂತ್ಯ
ಠಾಣೆ ಮೆಟ್ಟಿಲೇರಿದ್ದ ಪೋಷಕರು ಪರಸ್ಪರ ದೂರು ದಾಖಲಿಸದೆ ಠಾಣೆಯಿಂದ ತೆರಳಿದ್ದಾರೆ. ಕೆ.ಆರ್​.ಠಾಣೆ ಪೊಲೀಸರ ಮಧ್ಯಸ್ಥಿಕೆಯಲ್ಲಿ ಪ್ರಕರಣ ಸುಖಾಂತ್ಯ ಕಂಡಿದೆ. ಮಾತುಕತೆ ಮೂಲಕ ಪೋಷಕರು ಸಮಸ್ಯೆ ಬಗೆಹರಿಸಿಕೊಂಡಿದ್ದಾರೆ. ಯುವತಿ ಪೋಷಕರು ಚಿನ್ನ, ಬೆಳ್ಳಿ ಆಭರಣಗಳ ಖರ್ಚು ನೀಡಿದ್ದಾರೆ. ಖರ್ಚಿನ ಹಣ ಪಡೆದು ಹುಡುಗನ ಮನೆಯವರು ತೆರಳಿದ್ದಾರೆ. ಪೊಲೀಸ್ ಠಾಣೆಯಲ್ಲೇ ವಧುವಿನ‌ ಪೋಷಕರು ನಷ್ಟ ಭರಿಸಿಕೊಟ್ಟಿದ್ದಾರೆ. ಸದ್ಯ ಪೋಷಕರ ಜೊತೆ ಯುವತಿ ಆಟೋದಲ್ಲಿ ಮನೆಗೆ ವಾಪಸಾಗಿದ್ದಾಳೆ.

Published On - 3:57 pm, Sun, 22 May 22