AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

3 ಸಾವಿರ ರೂ.ಗೆ ಮುಡಾ ಸೈಟ್ ಖರೀದಿ​ ಆರೋಪಕ್ಕೆ ಬಿಲ್ಡರ್ ಮಂಜುನಾಥ್ ಸ್ಫಷ್ಟನೆ

MUDA Scam Case: ಮುಡಾ ಸೈಟ್ ಅಕ್ರಮ ಹಗರಣ ಬಗೆದಷ್ಟು ಬಯಲಾಗುತ್ತಿದೆ. ಕೋಟಿ ಬೆಲೆ ಬಾಳುವ ನಿವೇಶನಗಳನ್ನು ಕೇವಲ 3,000, 6,000 ರೂ.ಗೆ ಮಾರಾಟ ಮಾಡಲಾಗಿತ್ತು ಎನ್ನುವ ಅಂಶ ಬೆಳಕಿಗೆ ಬಂದಿತ್ತು. ಆದ್ರೆ, ಇದೀಗ ಇದಕ್ಕೆ ಬಿಲ್ಡರ್ ಮಂಜುನಾಥ್ ಎನ್ನುವರು ಸ್ಪಷ್ಟೀಕರಣ ನೀಡಿದ್ದಾರೆ.

3 ಸಾವಿರ ರೂ.ಗೆ ಮುಡಾ ಸೈಟ್ ಖರೀದಿ​ ಆರೋಪಕ್ಕೆ ಬಿಲ್ಡರ್ ಮಂಜುನಾಥ್ ಸ್ಫಷ್ಟನೆ
ಮುಡಾ
ದಿಲೀಪ್​, ಚೌಡಹಳ್ಳಿ
| Updated By: ರಮೇಶ್ ಬಿ. ಜವಳಗೇರಾ|

Updated on: Dec 08, 2024 | 11:37 AM

Share

ಮೈಸೂರು, (ಡಿಸೆಂಬರ್ 08): ಮುಡಾ ಸೈಟ್ (MUDA Site) ಅಕ್ರಮ ಹಗರಣದಲ್ಲಿ ತಮ್ಮ ಮೇಲಿನ ಆರೋಪಗಳಿಗೆ ಬಿಲ್ಡರ್ ಮಂಜುನಾಥ್ ಸ್ಪಷ್ಟನೆ ನೀಡಿದ್ದಾರೆ. ಮುಡಾ ಸೈಟ್‌ಗಾಗಿ ನಾನು ಕಟ್ಟಿರುವ 3,000 ರೂಪಾಯಿ ಸಾಂಕೇತಿಕ ಮೊತ್ತ. ಪರಿಹಾರ ರೂಪದಲ್ಲಿ ಪ್ರಾಧಿಕಾರದಿಂದ ನಿವೇಶನ ಪಡೆಯುವಾಗ ಸಾಂಕೇತಿಕವಾಗಿ ಅಷ್ಟೇ ಹಣ ನೀಡುವ ನಿಯಮ ಇದೆ ಎಂದು ಸ್ಪಷ್ಟಪಡಿಸಿದ್ದಾರೆ.

ತಮ್ಮ ಮೇಲಿನ ಆರೋಪಗಳ ಬಗ್ಗೆ ಮೊದಲ ಬಾರಿಗೆ ಮಾಧ್ಯಮ ಪ್ರಕಟಣೆ ಮೂಲಕ ಸ್ಪಷ್ಟೀಕರಣ ನೀಡಿರುವ ಮಂಜುನಾಥ್, ಪ್ರಾಧಿಕಾರಕ್ಕೆ ನಾನು ಕಟ್ಟಿರುವುದು 3,000 ರೂ. ಸಾಂಕೇತಿಕವಾದ ಮೊತ್ತ. ಪರಿಹಾರ ರೂಪದಲ್ಲಿ ಪ್ರಾಧಿಕಾರದಿಂದ ನಿವೇಶನ ಪಡೆಯುವಾಗ ಸಾಂಕೇತಿಕವಾಗಿ ಅಷ್ಟೇ ಹಣ ನೀಡುವ ನಿಯಮ ಇದೆ. ನಾನು ಜಿಪಿಐ ಮಾಡಿಕೊಂಡಿದ್ದ ಜಮೀನಿನಲ್ಲಿ ಬಡಾವಣೆ ಮಾಡಿದ್ದೆ. ಅದರಲ್ಲಿ ಒಳಚರಂಡಿಗೆ ಬಹಳಷ್ಟು ಜಮೀನನ್ನು ಮುಡಾ ಬಳಸಿಕೊಂಡಿತ್ತು. ಇದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿ ನ್ಯಾಯಾಲಯದ ಆದೇಶದಂತೆ ಪರಿಹಾರವಾಗಿ ಸೈಟ್ ಪಡೆದಿದ್ದೇನೆ. ಕೆಲವರು ಪ್ರಚಾರಕ್ಕಾಗಿ ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಇದನ್ನೂ ಓದಿ: ಮುಡಾದ ಮತ್ತೊಂದು ಹಗರಣ ಬಯಲು: ಸರ್ಕಾರದ ಬೊಕ್ಕಸಕ್ಕೆ 300 ಕೋಟಿ ರೂ. ನಷ್ಟ

ದಟ್ಟಗಳ್ಳಿಯಲ್ಲಿ ನಾವು ಭೂಮಿ ಕಳೆದುಕೊಂಡಿದ್ದೆವು. ಅದಕ್ಕೆ ವಿಜಯನಗರದ ನಾಲ್ಕನೆ ಹಂತದಲ್ಲಿ ಸೈಟ್ ಕೊಡಲಾಗಿದೆ. ಬಡಾವಣೆ ಮಾಡುವಾಗ ನಮಗೆ ಶೇ.58 ರಷ್ಟು ಸೈಟ್‌ಗಳು ಸಿಗಬೇಕಿತ್ತು. ಆದರೆ ಸಿಕ್ಕಿದ್ದು, ಶೇ.38 ರಷ್ಟು ಮಾತ್ರ. ಹೀಗಾಗಿ, ಆ ಭೂಮಿಗೆ ಪ್ರಾಧಿಕಾರ 23 ಸೈಟ್ ಪರಿಹಾರವಾಗಿ ಕೊಟ್ಟಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಐದು ದಿನದಲ್ಲಿ 23 ಸೈಟ್ ಪಡೆದ ವಿಚಾರದ ಬಗ್ಗೆ ಕಾರ್ತಿಕ್ ಬಡಾವಣೆಯ ಮಂಜುನಾಥ್ ಸ್ಪಷ್ಟೀಕರಣ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ
ಮತಗಳ್ಳತನ, ಕಾಲ್ತುಳಿತ ಪ್ರಕರಣಗಳನ್ನೂ ಸದನದಲ್ಲಿ ಚರ್ಚಿಸುತ್ತೇವೆ: ಬಿವೈವಿ
ಮತಗಳ್ಳತನ, ಕಾಲ್ತುಳಿತ ಪ್ರಕರಣಗಳನ್ನೂ ಸದನದಲ್ಲಿ ಚರ್ಚಿಸುತ್ತೇವೆ: ಬಿವೈವಿ
ಇವತ್ತು ರಾಯರ ದರ್ಶನ ಮಾಡುವ ಭಕ್ತರಿಗೆ ವಿಶೇಷ ಅನುಗ್ರಹ ಪ್ರಾಪ್ತಿ
ಇವತ್ತು ರಾಯರ ದರ್ಶನ ಮಾಡುವ ಭಕ್ತರಿಗೆ ವಿಶೇಷ ಅನುಗ್ರಹ ಪ್ರಾಪ್ತಿ
ರಾಹುಲ್ ಗಾಂಧಿಯನ್ನು ವಶಕ್ಕೆ ಪಡೆದ ಪೊಲೀಸರು
ರಾಹುಲ್ ಗಾಂಧಿಯನ್ನು ವಶಕ್ಕೆ ಪಡೆದ ಪೊಲೀಸರು
ಬಿಜೆಪಿ ಸಂಸದರಿಗೆ ಖಾಲಿ ಡಬ್ಬಗಳಂತೆ ಸದ್ದು ಮಾಡೋದು ಮಾತ್ರ ಗೊತ್ತು: ಡಿಕೆಎಸ್
ಬಿಜೆಪಿ ಸಂಸದರಿಗೆ ಖಾಲಿ ಡಬ್ಬಗಳಂತೆ ಸದ್ದು ಮಾಡೋದು ಮಾತ್ರ ಗೊತ್ತು: ಡಿಕೆಎಸ್