AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

3 ಸಾವಿರ ರೂ.ಗೆ ಮುಡಾ ಸೈಟ್ ಖರೀದಿ​ ಆರೋಪಕ್ಕೆ ಬಿಲ್ಡರ್ ಮಂಜುನಾಥ್ ಸ್ಫಷ್ಟನೆ

MUDA Scam Case: ಮುಡಾ ಸೈಟ್ ಅಕ್ರಮ ಹಗರಣ ಬಗೆದಷ್ಟು ಬಯಲಾಗುತ್ತಿದೆ. ಕೋಟಿ ಬೆಲೆ ಬಾಳುವ ನಿವೇಶನಗಳನ್ನು ಕೇವಲ 3,000, 6,000 ರೂ.ಗೆ ಮಾರಾಟ ಮಾಡಲಾಗಿತ್ತು ಎನ್ನುವ ಅಂಶ ಬೆಳಕಿಗೆ ಬಂದಿತ್ತು. ಆದ್ರೆ, ಇದೀಗ ಇದಕ್ಕೆ ಬಿಲ್ಡರ್ ಮಂಜುನಾಥ್ ಎನ್ನುವರು ಸ್ಪಷ್ಟೀಕರಣ ನೀಡಿದ್ದಾರೆ.

3 ಸಾವಿರ ರೂ.ಗೆ ಮುಡಾ ಸೈಟ್ ಖರೀದಿ​ ಆರೋಪಕ್ಕೆ ಬಿಲ್ಡರ್ ಮಂಜುನಾಥ್ ಸ್ಫಷ್ಟನೆ
ಮುಡಾ
ದಿಲೀಪ್​, ಚೌಡಹಳ್ಳಿ
| Edited By: |

Updated on: Dec 08, 2024 | 11:37 AM

Share

ಮೈಸೂರು, (ಡಿಸೆಂಬರ್ 08): ಮುಡಾ ಸೈಟ್ (MUDA Site) ಅಕ್ರಮ ಹಗರಣದಲ್ಲಿ ತಮ್ಮ ಮೇಲಿನ ಆರೋಪಗಳಿಗೆ ಬಿಲ್ಡರ್ ಮಂಜುನಾಥ್ ಸ್ಪಷ್ಟನೆ ನೀಡಿದ್ದಾರೆ. ಮುಡಾ ಸೈಟ್‌ಗಾಗಿ ನಾನು ಕಟ್ಟಿರುವ 3,000 ರೂಪಾಯಿ ಸಾಂಕೇತಿಕ ಮೊತ್ತ. ಪರಿಹಾರ ರೂಪದಲ್ಲಿ ಪ್ರಾಧಿಕಾರದಿಂದ ನಿವೇಶನ ಪಡೆಯುವಾಗ ಸಾಂಕೇತಿಕವಾಗಿ ಅಷ್ಟೇ ಹಣ ನೀಡುವ ನಿಯಮ ಇದೆ ಎಂದು ಸ್ಪಷ್ಟಪಡಿಸಿದ್ದಾರೆ.

ತಮ್ಮ ಮೇಲಿನ ಆರೋಪಗಳ ಬಗ್ಗೆ ಮೊದಲ ಬಾರಿಗೆ ಮಾಧ್ಯಮ ಪ್ರಕಟಣೆ ಮೂಲಕ ಸ್ಪಷ್ಟೀಕರಣ ನೀಡಿರುವ ಮಂಜುನಾಥ್, ಪ್ರಾಧಿಕಾರಕ್ಕೆ ನಾನು ಕಟ್ಟಿರುವುದು 3,000 ರೂ. ಸಾಂಕೇತಿಕವಾದ ಮೊತ್ತ. ಪರಿಹಾರ ರೂಪದಲ್ಲಿ ಪ್ರಾಧಿಕಾರದಿಂದ ನಿವೇಶನ ಪಡೆಯುವಾಗ ಸಾಂಕೇತಿಕವಾಗಿ ಅಷ್ಟೇ ಹಣ ನೀಡುವ ನಿಯಮ ಇದೆ. ನಾನು ಜಿಪಿಐ ಮಾಡಿಕೊಂಡಿದ್ದ ಜಮೀನಿನಲ್ಲಿ ಬಡಾವಣೆ ಮಾಡಿದ್ದೆ. ಅದರಲ್ಲಿ ಒಳಚರಂಡಿಗೆ ಬಹಳಷ್ಟು ಜಮೀನನ್ನು ಮುಡಾ ಬಳಸಿಕೊಂಡಿತ್ತು. ಇದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿ ನ್ಯಾಯಾಲಯದ ಆದೇಶದಂತೆ ಪರಿಹಾರವಾಗಿ ಸೈಟ್ ಪಡೆದಿದ್ದೇನೆ. ಕೆಲವರು ಪ್ರಚಾರಕ್ಕಾಗಿ ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಇದನ್ನೂ ಓದಿ: ಮುಡಾದ ಮತ್ತೊಂದು ಹಗರಣ ಬಯಲು: ಸರ್ಕಾರದ ಬೊಕ್ಕಸಕ್ಕೆ 300 ಕೋಟಿ ರೂ. ನಷ್ಟ

ದಟ್ಟಗಳ್ಳಿಯಲ್ಲಿ ನಾವು ಭೂಮಿ ಕಳೆದುಕೊಂಡಿದ್ದೆವು. ಅದಕ್ಕೆ ವಿಜಯನಗರದ ನಾಲ್ಕನೆ ಹಂತದಲ್ಲಿ ಸೈಟ್ ಕೊಡಲಾಗಿದೆ. ಬಡಾವಣೆ ಮಾಡುವಾಗ ನಮಗೆ ಶೇ.58 ರಷ್ಟು ಸೈಟ್‌ಗಳು ಸಿಗಬೇಕಿತ್ತು. ಆದರೆ ಸಿಕ್ಕಿದ್ದು, ಶೇ.38 ರಷ್ಟು ಮಾತ್ರ. ಹೀಗಾಗಿ, ಆ ಭೂಮಿಗೆ ಪ್ರಾಧಿಕಾರ 23 ಸೈಟ್ ಪರಿಹಾರವಾಗಿ ಕೊಟ್ಟಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಐದು ದಿನದಲ್ಲಿ 23 ಸೈಟ್ ಪಡೆದ ವಿಚಾರದ ಬಗ್ಗೆ ಕಾರ್ತಿಕ್ ಬಡಾವಣೆಯ ಮಂಜುನಾಥ್ ಸ್ಪಷ್ಟೀಕರಣ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಸುದ್ದಿಗೋಷ್ಠಿ ನೇರಪ್ರಸಾರ
ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಸುದ್ದಿಗೋಷ್ಠಿ ನೇರಪ್ರಸಾರ
ಮಂಗಳೂರು-ಕಾರ್ಕಳ ಹೆದ್ದಾರಿಯಲ್ಲಿ ಭೂಕುಸಿತ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ
ಮಂಗಳೂರು-ಕಾರ್ಕಳ ಹೆದ್ದಾರಿಯಲ್ಲಿ ಭೂಕುಸಿತ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ
ವಯನಾಡು ಭೂಕುಸಿತ: ಭಯಾನಕ ದೃಶ್ಯದಲ್ಲಿ ಸೆರೆಯಾದ ಟ್ಯಾಂಕರ್ ಕರ್ನಾಟಕದ್ದು!
ವಯನಾಡು ಭೂಕುಸಿತ: ಭಯಾನಕ ದೃಶ್ಯದಲ್ಲಿ ಸೆರೆಯಾದ ಟ್ಯಾಂಕರ್ ಕರ್ನಾಟಕದ್ದು!