3 ಸಾವಿರ ರೂ.ಗೆ ಮುಡಾ ಸೈಟ್ ಖರೀದಿ​ ಆರೋಪಕ್ಕೆ ಬಿಲ್ಡರ್ ಮಂಜುನಾಥ್ ಸ್ಫಷ್ಟನೆ

MUDA Scam Case: ಮುಡಾ ಸೈಟ್ ಅಕ್ರಮ ಹಗರಣ ಬಗೆದಷ್ಟು ಬಯಲಾಗುತ್ತಿದೆ. ಕೋಟಿ ಬೆಲೆ ಬಾಳುವ ನಿವೇಶನಗಳನ್ನು ಕೇವಲ 3,000, 6,000 ರೂ.ಗೆ ಮಾರಾಟ ಮಾಡಲಾಗಿತ್ತು ಎನ್ನುವ ಅಂಶ ಬೆಳಕಿಗೆ ಬಂದಿತ್ತು. ಆದ್ರೆ, ಇದೀಗ ಇದಕ್ಕೆ ಬಿಲ್ಡರ್ ಮಂಜುನಾಥ್ ಎನ್ನುವರು ಸ್ಪಷ್ಟೀಕರಣ ನೀಡಿದ್ದಾರೆ.

3 ಸಾವಿರ ರೂ.ಗೆ ಮುಡಾ ಸೈಟ್ ಖರೀದಿ​ ಆರೋಪಕ್ಕೆ ಬಿಲ್ಡರ್ ಮಂಜುನಾಥ್ ಸ್ಫಷ್ಟನೆ
ಮುಡಾ
Edited By:

Updated on: Dec 08, 2024 | 11:37 AM

ಮೈಸೂರು, (ಡಿಸೆಂಬರ್ 08): ಮುಡಾ ಸೈಟ್ (MUDA Site) ಅಕ್ರಮ ಹಗರಣದಲ್ಲಿ ತಮ್ಮ ಮೇಲಿನ ಆರೋಪಗಳಿಗೆ ಬಿಲ್ಡರ್ ಮಂಜುನಾಥ್ ಸ್ಪಷ್ಟನೆ ನೀಡಿದ್ದಾರೆ. ಮುಡಾ ಸೈಟ್‌ಗಾಗಿ ನಾನು ಕಟ್ಟಿರುವ 3,000 ರೂಪಾಯಿ ಸಾಂಕೇತಿಕ ಮೊತ್ತ. ಪರಿಹಾರ ರೂಪದಲ್ಲಿ ಪ್ರಾಧಿಕಾರದಿಂದ ನಿವೇಶನ ಪಡೆಯುವಾಗ ಸಾಂಕೇತಿಕವಾಗಿ ಅಷ್ಟೇ ಹಣ ನೀಡುವ ನಿಯಮ ಇದೆ ಎಂದು ಸ್ಪಷ್ಟಪಡಿಸಿದ್ದಾರೆ.

ತಮ್ಮ ಮೇಲಿನ ಆರೋಪಗಳ ಬಗ್ಗೆ ಮೊದಲ ಬಾರಿಗೆ ಮಾಧ್ಯಮ ಪ್ರಕಟಣೆ ಮೂಲಕ ಸ್ಪಷ್ಟೀಕರಣ ನೀಡಿರುವ ಮಂಜುನಾಥ್, ಪ್ರಾಧಿಕಾರಕ್ಕೆ ನಾನು ಕಟ್ಟಿರುವುದು 3,000 ರೂ. ಸಾಂಕೇತಿಕವಾದ ಮೊತ್ತ. ಪರಿಹಾರ ರೂಪದಲ್ಲಿ ಪ್ರಾಧಿಕಾರದಿಂದ ನಿವೇಶನ ಪಡೆಯುವಾಗ ಸಾಂಕೇತಿಕವಾಗಿ ಅಷ್ಟೇ ಹಣ ನೀಡುವ ನಿಯಮ ಇದೆ. ನಾನು ಜಿಪಿಐ ಮಾಡಿಕೊಂಡಿದ್ದ ಜಮೀನಿನಲ್ಲಿ ಬಡಾವಣೆ ಮಾಡಿದ್ದೆ. ಅದರಲ್ಲಿ ಒಳಚರಂಡಿಗೆ ಬಹಳಷ್ಟು ಜಮೀನನ್ನು ಮುಡಾ ಬಳಸಿಕೊಂಡಿತ್ತು. ಇದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿ ನ್ಯಾಯಾಲಯದ ಆದೇಶದಂತೆ ಪರಿಹಾರವಾಗಿ ಸೈಟ್ ಪಡೆದಿದ್ದೇನೆ. ಕೆಲವರು ಪ್ರಚಾರಕ್ಕಾಗಿ ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಇದನ್ನೂ ಓದಿ: ಮುಡಾದ ಮತ್ತೊಂದು ಹಗರಣ ಬಯಲು: ಸರ್ಕಾರದ ಬೊಕ್ಕಸಕ್ಕೆ 300 ಕೋಟಿ ರೂ. ನಷ್ಟ

ದಟ್ಟಗಳ್ಳಿಯಲ್ಲಿ ನಾವು ಭೂಮಿ ಕಳೆದುಕೊಂಡಿದ್ದೆವು. ಅದಕ್ಕೆ ವಿಜಯನಗರದ ನಾಲ್ಕನೆ ಹಂತದಲ್ಲಿ ಸೈಟ್ ಕೊಡಲಾಗಿದೆ. ಬಡಾವಣೆ ಮಾಡುವಾಗ ನಮಗೆ ಶೇ.58 ರಷ್ಟು ಸೈಟ್‌ಗಳು ಸಿಗಬೇಕಿತ್ತು. ಆದರೆ ಸಿಕ್ಕಿದ್ದು, ಶೇ.38 ರಷ್ಟು ಮಾತ್ರ. ಹೀಗಾಗಿ, ಆ ಭೂಮಿಗೆ ಪ್ರಾಧಿಕಾರ 23 ಸೈಟ್ ಪರಿಹಾರವಾಗಿ ಕೊಟ್ಟಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಐದು ದಿನದಲ್ಲಿ 23 ಸೈಟ್ ಪಡೆದ ವಿಚಾರದ ಬಗ್ಗೆ ಕಾರ್ತಿಕ್ ಬಡಾವಣೆಯ ಮಂಜುನಾಥ್ ಸ್ಪಷ್ಟೀಕರಣ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Dileep CP

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಅದನ್ನು ಹೊರತು ಪಡಿಸಿದರೆ ಒಂದಷ್ಟು ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More
Follow Us