AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿ ಅಲೆಗೆ ಹೆದರಿ ಚುನಾವಣೆ ಸ್ಪರ್ಧಿಸದ ಕಾಂಗ್ರೆಸ್ ಸಚಿವರು: ಬಿವೈ ವಿಜಯೇಂದ್ರ

ಸಿಎಂ ಸಿದ್ದರಾಮಯ್ಯ ಆಪರೇಷನ್ ಹಸ್ತ ಪ್ರಯತ್ನಕ್ಕೆ ಕೌಂಟರ್ ಕೊಡಲು ಮೈಸೂರಿನಲ್ಲಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪಕ್ಷದ ಅಭ್ಯರ್ಥಿ ಯದುವೀರ್ ಒಡೆಯರ್ ಜತೆ ಚಾಮುಂಡಿ ಬಿಟ್ಟಕ್ಕೆ ತೆರಳಿ ಚಾಮುಂಡೇಶ್ವರಿಯ ದರ್ಶನ ಪಡೆದರು. ನಂತರ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ವರ್ಚಸ್ಸು ಕುಂದಿರುವ ಕಾಂಗ್ರೆಸ್ ನಮ್ಮ ಪಕ್ಷದ ನಾಯಕರ ಸೆಳೆಯಲು ಮುಂದಾಗಿದೆ ಎಂದರು.

ಮೋದಿ ಅಲೆಗೆ ಹೆದರಿ ಚುನಾವಣೆ ಸ್ಪರ್ಧಿಸದ ಕಾಂಗ್ರೆಸ್ ಸಚಿವರು: ಬಿವೈ ವಿಜಯೇಂದ್ರ
ಬಿವೈ ವಿಜಯೇಂದ್ರ
TV9 Web
| Edited By: |

Updated on: Mar 27, 2024 | 10:49 AM

Share

ಮೈಸೂರು, ಮಾರ್ಚ್ 27: ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ (Lok Sabha Elections) ಸಚಿವರನ್ನೇ ಕಣಕ್ಕಿಳಿಸಬೇಕು ಎಂಬುದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಯೋಜನೆಯಾಗಿತ್ತು. ಆದರೆ, ಪ್ರಧಾನಿ ನರೇಂದ್ರ ಮೋದಿ ಅಲೆಗೆ ಹೆದರಿದ ಸಚಿವರು ಯಾರೊಬ್ಬರೂ ಸ್ಪರ್ಧಿಸಲು ಮುಂದೆ ಬರಲೇ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಟೀಕಿಸಿದರು. ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಪ್ರವಾಸದಲ್ಲಿರುವ ಅವರು, ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

18 ಮಂದಿ ಸಚಿವರನ್ನು ಲೋಕಸಭೆ ಚುನಾವಣೆಯಲ್ಲಿ ಕಣಕ್ಕಿಳಿಸಲು ಸಿಎಂ ಹಾಗೂ ಡಿಸಿಎಂ ಮುಂದಾಗಿದ್ದರು. ಆದರೆ, ಸೋಲಿನ ಭೀತಿಯಿಂದ ಸಚಿವರು ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ. ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ಶಾಪ ಎನ್ನುವ ರೀತಿಯಾಗಿದೆ. ಕಡಿಮೆ ಅವಧಿಯಲ್ಲಿ ‘ಕೈ’ ಸರ್ಕಾರ ಜನಪ್ರಿಯತೆ ಕಳೆದುಕೊಂಡಿದೆ. ಯಾರ ಪರವಾಗಿಯೂ ಈ ಸರ್ಕಾರವಿಲ್ಲ ಎಂದು ಜನ ಬೇಸತ್ತಿದ್ದಾರೆ. ಜನಪ್ರಿತೆ ಕಳೆದುಕೊಂಡಿರುವ ಕಾಂಗ್ರೆಸ್ ಪಕ್ಷವೀಗ ನಮ್ಮ ಮುಖಂಡರನ್ನು ಸೆಳೆಯುವ ಕೆಲಸ ಮಾಡುತ್ತಿದೆ ಎಂದು ವಿಜಯೇಂದ್ರ ವಾಗ್ದಾಳಿ ನಡೆಸಿದರು.

ಬಂಡಾಯ ಶಮನದ ಭರವಸೆ

ಬಿಜೆಪಿಯಲ್ಲಿನ ಬಂಡಾಯ‌ ಬಗ್ಗೆ ಪ್ರತಿಕ್ರಿಯೆ ನೀಡಿ, ಇನ್ನು 4 ದಿನಗಳಲ್ಲಿ ಮ್ಯಾಜಿಕ್ ನಡೆಯುತ್ತದೆ ನೋಡುತ್ತಿರಿ ಎಂದು ಹೇಳಿದರು. ಶಿವಮೊಗ್ಗದಲ್ಲಿ ಕೆಎಸ್ ಈಶ್ವರಪ್ಪ ಅವರದ್ದು ಸೇರಿದಂತೆ ಎಲ್ಲಾ ಬಂಡಾಯವೂ ಬಗೆಹರಿಯಲಿದೆ. ಇನ್ನು ನಾಲ್ಕು ದಿನಗಳಲ್ಲಿ ಎಲ್ಲ ಬಂಡಾಯವೂ ಬಗೆಹರಿಯುತ್ತದೆ. ಯಡಿಯೂರಪ್ಪ ಎಲ್ಲಾ ಕಡೆ ಹೋಗಿ ಬಂಡಾಯ ಶಮನ ಮಾಡುತ್ತಾರೆ. ನಾಲ್ಕು ದಿನಗಳಲ್ಲಿ ಆ ಚಮತ್ಕಾರ ನಡೆಯಲಿದೆ ನೋಡುತ್ತಾ ಇರಿ ಎಂದು ಅವರು ಹೇಳಿದ್ದಾರೆ.

‘ಪಕ್ಷದ ಎಲ್ಲಾ ನಿರ್ಧಾರ ವಿಜಯೇಂದ್ರ, ಬಿಎಸ್​ವೈದಲ್ಲ’

ಪಕ್ಷದ ಎಲ್ಲಾ ನಿರ್ಧಾರಗಳನ್ನು ನಾನಾಗಲೀ ಯಡಿಯೂರಪ್ಪನವರಾಗಲೀ ಕೈಗೊಳ್ಳುವುದಿಲ್ಲ. ಪಕ್ಷದ ವರಿಷ್ಠರ ನಿರ್ಧಾರಗಳೇ ಅಂತಿಮ. ನಮ್ಮ ಮಾತು ಕೇಳಿ ಪಕ್ಷದ ವರಿಷ್ಠರು ಎಲ್ಲ ನಿರ್ಧಾರ ಕೈಗೊಳ್ಳುತ್ತಿಲ್ಲ. ಪಕ್ಷದ ಹೈಕಮಾಂಡ್ ನಾಯಕರಿಗೆ ಎಲ್ಲವೂ ಸಹ ಗೊತ್ತಿದೆ. ಮೋದಿ ಅಲೆ ಮತ್ತು ನಾಯಕತ್ವಕ್ಕಾಗಿ ಎಲ್ಲರೂ ಕೆಲಸ ಮಾಡುತ್ತಾರೆ. ಪಕ್ಷದ ಎಲ್ಲಾ ನಾಯಕರು ಒಂದಾಗಿ ಕೆಲಸ ಮಾಡುತ್ತಾರೆ ಎಂದು ವಿಜಯೇಂದ್ರ ಭರವಸೆ ವ್ಯಕ್ತಪಡಿಸಿದರು.

ಇದನ್ನೂ ಓದಿ: ಬಿಜೆಪಿಯಲ್ಲಿ ತಣಿಯದ ಅಸಮಾಧಾನ: ಮುನಿಸು ತಣಿಸಲು ರಾಧಾಮೋಹನ್, ವಿಜಯೇಂದ್ರ ಶ್ರಮ

ಇದಕ್ಕೂ ಮುನ್ನ ವಿಜಯೇಂದ್ರ ಮೈಸೂರು ಕೊಡಗು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಜತೆ ಚಾಮುಂಡಿ ಬೆಟ್ಟಕ್ಕೆ ತೆರಳಿ ಚಾಮುಂಡೇಶ್ವರಿಯ ದರ್ಶನ ಪಡೆದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ