Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಧ ವೈದ್ಯರ ಮನೆಯಲ್ಲಿ ಕಳ್ಳತನ: ಮಹಡಿಯಿಂದ ಬಿದ್ದು ಸಿಕ್ಕಿಹಾಕಿಕೊಂಡ ಹಳೆಯ ಕಳ್ಳ, ಈ ಸಿನಿಮೀಯ ಸ್ಟೋರಿ ಓದಿ

ಹೀಗೆ ಕಳ್ಳತನ ಮಾಡಲು ಬಂದಿದ್ದವನ ಹೆಸರು ರವಿ. ವೃತ್ತಿಯಲ್ಲಿ ಕಾರ್ಪೆಂಟರ್. ಈತ ತಾನು ಕೆಲಸ ಮಾಡಿದ ಡಾ ಬಾಲಾಜಿ ಎಂಬುವವರ ಮನೆಯಲ್ಲೇ ಕಳ್ಳತನ ಮಾಡಿ‌ ಸಿಕ್ಕಿ ಬಿದ್ದಿದ್ದಾನೆ. ಹೌದು ಡಾ ಬಾಲಾಜಿ ಅವರಿಗೆ ಕಣ್ಣು ಕಾಣುವುದಿಲ್ಲ. ತಮ್ಮ ಮನೆಯ ಕಾಂರ್ಪೆಂಟರ್ ಕೆಲಸವನ್ನು ರವಿಗೆ ನೀಡಿದ್ದರು. ಬೀರು ಸೇರಿ ಹಲವು ಕೆಲಸ ಮಾಡಿದ್ದ.

ಅಂಧ ವೈದ್ಯರ ಮನೆಯಲ್ಲಿ ಕಳ್ಳತನ: ಮಹಡಿಯಿಂದ ಬಿದ್ದು ಸಿಕ್ಕಿಹಾಕಿಕೊಂಡ ಹಳೆಯ ಕಳ್ಳ, ಈ ಸಿನಿಮೀಯ ಸ್ಟೋರಿ ಓದಿ
ಅಂಧ ವೈದ್ಯರ ಮನೆಯಲ್ಲಿ ಕಳ್ಳತನ: ಮಹಡಿಯಿಂದ ಬಿದ್ದು ಸಿಕ್ಕಿಹಾಕಿಕೊಂಡ ಕಳ್ಳ
Follow us
ರಾಮ್​, ಮೈಸೂರು
| Updated By: ಸಾಧು ಶ್ರೀನಾಥ್​

Updated on: May 20, 2024 | 12:34 PM

ನಿಜಕ್ಕೂ ಕಾಲ ಕೆಟ್ಟೋಗಿದೆ. ಯಾರನ್ನು ನಂಬೋದು ? ಯಾರನ್ನು ಬಿಡೋದು ಅನ್ನೋದೆ ಯಕ್ಷ ಪ್ರಶ್ನೆಯಾಗಿದೆ. ಇದಕ್ಕೆ ಸಾಕ್ಷಿ ಮೈಸೂರಿನಲ್ಲಿ ನಡೆದಿರುವ ಸಿನಿಮೀಯ ರೀತಿಯ ಈ ಘಟನೆ. ಏನು ಅಂತೀರಾ? ಹಾಗಿದ್ರೆ ಈ ಸ್ಟೋರಿ ನೋಡಿ. ಕಟ್ಟಡದಿಂದ ಕೆಳಗೆ ಇಳಿ ಬಿಟ್ಟ ಸೀರೆ. ತಲೆಯಿಂದ ರಕ್ತ ಸುರಿಯುತ್ತಿದ್ದರೂ ಸಹ ಪೆಚ್ಚಾಗಿ ಕುಳಿತ ವ್ಯಕ್ತಿ. ಈ ದೃಶ್ಯಕ್ಕೆ ಸಾಕ್ಷಿಯಾಗಿದ್ದು ಮೈಸೂರಿನ ಮಾನಸಿನಗರ. ಅಂದ್ಹಾಗೆ ಈತ ಒಬ್ಬ ಕಳ್ಳ (thief). ಮನೆಯೊಂದರಲ್ಲಿ ಕಳ್ಳತನ (house theft) ಮಾಡಲು (carpenter) ಬಂದು ಮನೆಯವರಿಗೆ ಸಿಕ್ಕಿಹಾಕಿಕೊಂಡಾಗ ತಪ್ಪಿಸಿಕೊಳ್ಳಲು ಮನೆಯ ಮಹಡಿಯ ಮೇಲಿಂದ ಜಿಗಿದು ತಪ್ಪಿಸಿಕೊಳ್ಳಲು ಹೋಗಿ ತಲೆಗೆ ಪೆಟ್ಟು‌ ಮಾಡಿಕೊಂಡಿದ್ದಾನೆ.

ಹೀಗೆ ಕಳ್ಳತನ ಮಾಡಲು ಬಂದಿದ್ದವನ ಹೆಸರು ರವಿ. ವೃತ್ತಿಯಲ್ಲಿ ಕಾರ್ಪೆಂಟರ್. ಈತ ತಾನು ಕೆಲಸ ಮಾಡಿದ ಡಾ ಬಾಲಾಜಿ ಎಂಬುವವರ ಮನೆಯಲ್ಲೇ ಕಳ್ಳತನ ಮಾಡಿ‌ ಸಿಕ್ಕಿ ಬಿದ್ದಿದ್ದಾನೆ. ಹೌದು ಡಾ ಬಾಲಾಜಿ ಅವರಿಗೆ ಕಣ್ಣು ಕಾಣುವುದಿಲ್ಲ. ತಮ್ಮ ಮನೆಯ ಕಾಂರ್ಪೆಂಟರ್ ಕೆಲಸವನ್ನು ರವಿಗೆ ನೀಡಿದ್ದರು. ಬೀರು ಸೇರಿ ಹಲವು ಕೆಲಸ ಮಾಡಿದ್ದ.

ಅಷ್ಟೇ ಅಲ್ಲ, ಜೊತೆಗೆ ಆ ಬೀರುವಿನ ಹಾಗೂ ಮನೆಯ ನಕಲಿ ಕೀ ಸಹ ಮಾಡಿ‌ ಇಟ್ಟುಕೊಂಡಿದ್ದ. ಬಾಲಾಜಿ ಹಾಗೂ ಅವರ ಮನೆಯವರು ಇಲ್ಲದಾಗ ಬಂದು ಕಳ್ಳತನ ಮಾಡಿದ್ದ. ಇದೇ ರೀತಿ ಮೂರು ಬಾರಿ ಕಳ್ಳತನ ಮಾಡಿದ್ದಾನೆ. ಇದೀಗ ನಾಲ್ಕನೆಯ ಬಾರಿಗೆ ಕಳ್ಳತನ ಮಾಡಲು ಬಂದು ಸಿಕ್ಕಿ ಬಿದ್ದಿದ್ದಾನೆ.

Also Read: ಹತ್ತಾರು ವರ್ಷದಿಂದ ಕಾಟನ್‌ವುಡ್ ಮರದಲ್ಲೇ ನೂರಾರು ಜೇನುಗೂಡು ಕಟ್ಟುತ್ತಿದೆ! ಅದರ ವಿಶೇಷ ಮಾಹಿತಿ ಇಲ್ಲಿದೆ

ರವಿ ತಾನು ಸಿಕ್ಕಿಬಿದ್ದ ಮನೆಯ ಮಹಡಿಯ ಮೇಲಿಂದ ಜಿಗಿದು ಪರಾರಿಯಾಗಲು ಮುಂದಾಗಿದ್ದಾನೆ. ಈ ಪ್ರಯತ್ನದಲ್ಲಿ ಮಹಡಿಯಿಂದ ಕೆಳಗೆ ಬಿದ್ದು ತಲೆಗೆ ಪೆಟ್ಟು‌ ಮಾಡಿಕೊಂಡಿದ್ದಾನೆ ಎಂದು ಡಾ ಬಾಲಾಜಿ ಪತ್ನಿ ಅವರ ಪತ್ನಿ ಹರಿಣಿ ಹೇಳಿದ್ದಾರೆ.

ತಕ್ಷಣ ಮೈಸೂರು ಗ್ರಾಮಾಂತರ ಪೊಲೀಸರಿಗೆ ವಿಷಯ ತಿಳಿಸಿದ ಬಾಲಾಜಿ ಅವರು ರವಿಯನ್ನು ಪೊಲೀಸರ ವಶಕ್ಕೆ ನೀಡಿದ್ದಾರೆ. ಸದ್ಯ ಅನ್ನ ಹಾಕಿದ ಮನೆಗೆ ಕನ್ನ ಹಾಕಿದ ರವಿ ಜೈಲು ಸೇರಿದ್ದಾನೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಸ್ಪೈಸ್‌ಜೆಟ್ ಪ್ರಯಾಣಿಕರೊಂದಿಗೆ ಡ್ಯಾನ್ಸ್ ಮಾಡಿ ಹೋಳಿ ಆಚರಿಸಿದ ಸಿಬ್ಬಂದಿ
ಸ್ಪೈಸ್‌ಜೆಟ್ ಪ್ರಯಾಣಿಕರೊಂದಿಗೆ ಡ್ಯಾನ್ಸ್ ಮಾಡಿ ಹೋಳಿ ಆಚರಿಸಿದ ಸಿಬ್ಬಂದಿ
ವೇದಿಕೆ ಮೇಲೆಯೇ ವಾಗ್ವಾದಕ್ಕಿಳಿದ ಸಂಸದ ಪಿಸಿ ಮೋಹನ್​, ಪ್ರದೀಪ್​ ಈಶ್ವರ್
ವೇದಿಕೆ ಮೇಲೆಯೇ ವಾಗ್ವಾದಕ್ಕಿಳಿದ ಸಂಸದ ಪಿಸಿ ಮೋಹನ್​, ಪ್ರದೀಪ್​ ಈಶ್ವರ್
ಆಶೀರ್ವಾದ ರೂಪದಲ್ಲಿ ಹಣ ನೀಡುವುದು ಮಠದ ಸಂಪ್ರದಾಯ: ಸ್ವಾಮೀಜಿ
ಆಶೀರ್ವಾದ ರೂಪದಲ್ಲಿ ಹಣ ನೀಡುವುದು ಮಠದ ಸಂಪ್ರದಾಯ: ಸ್ವಾಮೀಜಿ
ಗೋರಖ್‌ಪುರದಲ್ಲಿ ಬಣ್ಣ ಎರಚಿ ಸಿಎಂ ಯೋಗಿ ಆದಿತ್ಯನಾಥ್ ಹೋಳಿ ಸಂಭ್ರಮ
ಗೋರಖ್‌ಪುರದಲ್ಲಿ ಬಣ್ಣ ಎರಚಿ ಸಿಎಂ ಯೋಗಿ ಆದಿತ್ಯನಾಥ್ ಹೋಳಿ ಸಂಭ್ರಮ
ಆಮಿರ್- ರಣ್​ಬೀರ್ ನಡುವೆ ಬಿರುಕು ಮೂಡಿಸಿದ ರಿಷಭ್ ಪಂತ್
ಆಮಿರ್- ರಣ್​ಬೀರ್ ನಡುವೆ ಬಿರುಕು ಮೂಡಿಸಿದ ರಿಷಭ್ ಪಂತ್
ನೀವೆಲ್ಲ ಬರುವಂಗಿದಿದ್ರೆ ನಿಮ್ಮನ್ನೂ ಊಟಕ್ಕೆ ಕರೀಬಹುದಿತ್ತು: ಶಿವಕುಮಾರ್
ನೀವೆಲ್ಲ ಬರುವಂಗಿದಿದ್ರೆ ನಿಮ್ಮನ್ನೂ ಊಟಕ್ಕೆ ಕರೀಬಹುದಿತ್ತು: ಶಿವಕುಮಾರ್
‘ಅಪ್ಪು’ ಮರು ಬಿಡುಗಡೆ: ಅಣ್ಣಾವ್ರ ಅಭಿಮಾನಿಗಳಿಂದ ಮತ್ತೊಂದು ಬೇಡಿಕೆ
‘ಅಪ್ಪು’ ಮರು ಬಿಡುಗಡೆ: ಅಣ್ಣಾವ್ರ ಅಭಿಮಾನಿಗಳಿಂದ ಮತ್ತೊಂದು ಬೇಡಿಕೆ
ಶಾಸಕರು ಬಣ್ಣದಾಟ ಆಡುವಾಗ ಕೃಷ್ಣ ಭೈರೇಗೌಡ ತಪ್ಪಿಸಿಕೊಂಡಿದ್ದು ಹೇಗೆ ಗೊತ್ತಾ?
ಶಾಸಕರು ಬಣ್ಣದಾಟ ಆಡುವಾಗ ಕೃಷ್ಣ ಭೈರೇಗೌಡ ತಪ್ಪಿಸಿಕೊಂಡಿದ್ದು ಹೇಗೆ ಗೊತ್ತಾ?
ಪತಿ ಸೂರ್ಯ ಸಾವಿನ ಹಿಂದೆ ಶ್ವೇತಾಳ ಕೈವಾಡವಿದೆ ಎಂದ ಪತ್ನಿ ದೀಪಿಕಾ
ಪತಿ ಸೂರ್ಯ ಸಾವಿನ ಹಿಂದೆ ಶ್ವೇತಾಳ ಕೈವಾಡವಿದೆ ಎಂದ ಪತ್ನಿ ದೀಪಿಕಾ
ಸಿಐಡಿ ತನಿಖೆ ರಾಜ್ಯ ಸರ್ಕಾರ ಹಿಂತೆಗೆದುಕೊಂಡ ಕಾರಣ ಗೊತ್ತಿಲ್ಲ: ಅಣ್ಣಾಮಲೈ
ಸಿಐಡಿ ತನಿಖೆ ರಾಜ್ಯ ಸರ್ಕಾರ ಹಿಂತೆಗೆದುಕೊಂಡ ಕಾರಣ ಗೊತ್ತಿಲ್ಲ: ಅಣ್ಣಾಮಲೈ