AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Church Attack Case: ಪಿರಿಯಾಪಟ್ಟಣದ ಚರ್ಚ್​ ಮೇಲೆ ದಾಳಿ ಪ್ರಕರಣ: ಸಂಬಳ ನೀಡದಿದ್ದಕ್ಕೆ ಕಳ್ಳತನ, ಓರ್ವನ ಬಂಧನ

ಪಿರಿಯಾಪಟ್ಟಣದ ಸೆಂಟ್‌ ಮೇರಿಸ್ ಚರ್ಚ್‌​ ಮೇಲಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಟ್ವಿಸ್ಟ್ ಒಂದು ಸಿಕ್ಕಿದ್ದು, ಓರ್ವ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

Church Attack Case: ಪಿರಿಯಾಪಟ್ಟಣದ ಚರ್ಚ್​ ಮೇಲೆ ದಾಳಿ ಪ್ರಕರಣ: ಸಂಬಳ ನೀಡದಿದ್ದಕ್ಕೆ ಕಳ್ಳತನ, ಓರ್ವನ ಬಂಧನ
ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್
TV9 Web
| Edited By: |

Updated on:Jan 02, 2023 | 7:35 PM

Share

ಮೈಸೂರು: ಜಿಲ್ಲೆಯ ಪಿರಿಯಾಪಟ್ಟಣದ (Priyapatnam) ಸೆಂಟ್‌ ಮೇರಿಸ್ ಚರ್ಚ್‌​ (St. Mary’s Church) ಮೇಲಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಟ್ವಿಸ್ಟ್ ಒಂದು ಸಿಕ್ಕಿದೆ. ಈ ಕುರಿತಾಗಿ ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ಹೇಳಿಕೆ ನೀಡಿದ್ದಾರೆ. ಚರ್ಚ್​​ನ ಪೌರಕಾರ್ಮಿಕನಿಗೆ ಸಂಬಳ ನೀಡದಿದ್ದಕ್ಕೆ ಕಳ್ಳತನ ಮಾಡಲಾಗಿದೆ ಎಂಬ ಸಂಗತಿ ಬಯಲಾಗಿದೆ. ಪ್ರಕರಣದ ಸಂಬಂಧ ಮೂರು ತಂಡ ರಚನೆ ಮಾಡಲಾಗಿತ್ತು. ಬ್ಲೂ ಕಲರ್ ಹ್ಯಾಂಡ್ ಗ್ಲೌಸ್ ಸ್ಥಳದಲ್ಲಿ ಸಿಕಿತ್ತು. ಇದರ ಆಧಾರದ ಮೇಲೆ ವಿಶ್ವ ಎಂಬ ಪೌರ ಕಾರ್ಮಿಕನನ್ನ ವಶಕ್ಕೆ ಪಡೆದು ವಿಚಾರಣೆ ಮಾಡಲಾಗಿದೆ. ಚರ್ಚ್‌ನಲ್ಲಿ ಪೌರ ಕಾರ್ಮಿಕನಾಗಿ ವಿಶ್ವ ಕೆಲಸ ಮಾಡುತ್ತಿದ್ದು, ಪಿರಿಯಾಪಟ್ಟಣದ ಮಹದೇಶ್ವರ ಬಡವಾಣೆ ನಿವಾಸಿಯಾಗಿದ್ದಾನೆ. ಎರಡು ತಿಂಗಳಿನಿಂದ ಚರ್ಚ್​ನಲ್ಲಿ ಸಂಬಳ ನೀಡರಲಿಲ್ಲ. ಕ್ರಿಸ್ ಮಸ್ ಸಂಧರ್ಭದಲ್ಲಿ ಫಾದರ್ ಜೊತೆ ಮಾತನಾಡಲು ಚರ್ಚ್​​ಗೆ ಬಂದಿದ್ದ. ಈ ವೇಳೆ ಫಾದರ್ ಭೇಟಿಯ ಅವಕಾಶ ಸಿಕ್ಕಿರಲಿಲ್ಲ. ಹೀಗಾಗಿ ಹುಂಡಿ ಕಳ್ಳತನ ಮಾಡಲು ನಿರ್ಧಾರ ಮಾಡಿದ್ದ.

ಬಳಿಕ ಮೂರು ಹುಂಡಿಗಳಿಂದ ಕಳ್ಳತನ ಮಾಡಿದ್ದು, ಅಂದಾಜು 2 ರಿಂದ 3 ಸಾವಿರ ಹಣ ಕಳ್ಳತನ ಮಾಡಿದ್ದಾನೆ. ಬಾಲ ಏಸುವಿನ ಮೂರ್ತಿಯನ್ನ ಟೇಬಲ್ ಮೇಲೆ ಇಡಲಾಗಿತ್ತು. ಅದರ ಕೆಳಗೆ ಹಣ ಇರಬಹುದು ಎಂದು ಬಟ್ಟೆ ಎಳೆದಿದ್ದಾನೆ. ಈ ವೇಳೆ ಬಾಲ ಏಸುವಿನ ಮೂರ್ತಿ ಒಡೆದಿದೆ ಎಂದು ಘಟನೆಯ ಸಂಪೂರ್ಣ ಮಾಹಿತಿಯನ್ನು ಎಸ್​.ಪಿ ಸೀಮಾ ಲಾಟ್ಕರ್ ನೀಡಿದರು.

ಇದನ್ನೂ ಓದಿ: Church Attack: ಪಿರಿಯಾಪಟ್ಟಣದ ಚರ್ಚ್​ಗೆ ನುಗ್ಗಿ ಏಸು ಮೂರ್ತಿ ಧ್ವಂಸಗೊಳಿಸಿದ ದುಷ್ಕರ್ಮಿಗಳು: ಸ್ಥಳಕ್ಕೆ ಪೊಲೀಸರು ದೌಡು

ಘಟನೆ ಹಿನ್ನೆಲೆ

ಜಿಲ್ಲೆಯ ಪಿರಿಯಾಪಟ್ಟಣದ ಸೆಂಟ್‌ ಮೇರಿಸ್ ಚರ್ಚ್‌ ಮೇಲೆ ದುಷ್ಕರ್ಮಿಗಳು ದಾಳಿ ಮಾಡಿರುವಂತಹ ಘಟನೆ ಡಿ. 28ರಂದು ನಡೆದಿದೆ. ದುಷ್ಕರ್ಮಿಗಳು ಚರ್ಚ್ ಒಳಗೆ ನುಗ್ಗಿ ಬಾಲ ಏಸುವಿನ ಮೂರ್ತಿ ಹಾಗೂ ತೊಟ್ಟಿಲನ್ನು ಒಡೆದು ಹಾಕಿದ್ದರು. ಕ್ರಿಸ್‌ಮಸ್​ ಹಬ್ಬಕೆಂದು ಚರ್ಚ್ ಒಳಗಿನ ಟೇಬಲ್ ಮೇಲೆ ಬುಟ್ಟಿಯಲ್ಲಿನ, ತೊಟ್ಟಿಲಲ್ಲಿ ಬಾಲ ಏಸು ಅನ್ನು ಮಲಗಿಸಲಾಗಿತ್ತು.

ಇದನ್ನೂ ಓದಿ: ಪ್ರಧಾನಿ ಮೋದಿ ಸಹೋದರನ ಕಾರು ಅಪಘಾತ, ಏರ್ ಬ್ಯಾಗ್ ಓಪನ್, ಪ್ರಾಣಾಪಾಯದಿಂದ ಪಾರು: ಇಲ್ಲಿವೆ ಫೋಟೋಸ್

ಚರ್ಚ್​ನಲ್ಲಿ ಯಾರು ಇಲ್ಲದ ವೇಳೆ ದುಷ್ಕರ್ಮಿಗಳಿಂದ ದಾಳಿ ಮಾಡಿ, ಬಾಲ ಏಸುವಿನ‌ ಮೂರ್ತಿಯನ್ನ ಪುಡಿ ಪುಡಿ ಮಾಡಿದ್ದರು. ಹಾಗೇ ಚರ್ಚ್ ಹೊರಗೆ ಇದ್ದ ಹುಂಡಿ ಕೂಡ ಕಳ್ಳತನವಾಗಿದೆ. ಚರ್ಚ್​ನ ಫಾದರ್ ಜಾನ್ ಪೌಲ್ ಮೈಸೂರಿಗೆ ತೆರಳಿದ ವೇಳೆಯಲ್ಲಿ ಘಟನೆ ಸಂಭವಿಸಿದೆ. ಸ್ಥಳಕ್ಕೆ ಪಿರಿಯಾಪಟ್ಟಣ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:33 pm, Mon, 2 January 23

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್