AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸ್‌ ಹೆಡ್ ಕಾನ್ಸಟೇಬಲ್‌ಗೆ ಬೆದರಿಕೆ, ಹಲ್ಲೆ ಆರೋಪ; ಹುಣಸೂರು ನಗರಸಭೆ ಸದಸ್ಯನ ವಿರುದ್ಧ ಪ್ರಕರಣ ದಾಖಲು

ಪೊಲೀಸ್‌ ಹೆಡ್ ಕಾನ್ಸಟೇಬಲ್‌ಗೆ ಬೆದರಿಕೆ ಮತ್ತು ಹಲ್ಲೆ ಆರೋಪದಡಿ ಹುಣಸೂರು ನಗರಸಭೆ ಸದಸ್ಯನ ವಿರುದ್ಧ ಹುಣಸೂರು ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.

ಪೊಲೀಸ್‌ ಹೆಡ್ ಕಾನ್ಸಟೇಬಲ್‌ಗೆ ಬೆದರಿಕೆ, ಹಲ್ಲೆ ಆರೋಪ; ಹುಣಸೂರು ನಗರಸಭೆ ಸದಸ್ಯನ ವಿರುದ್ಧ ಪ್ರಕರಣ ದಾಖಲು
ಹುಣಸೂರು ನಗರಸಭೆ ಸದಸ್ಯ ಮನು
TV9 Web
| Edited By: |

Updated on:Aug 17, 2022 | 9:18 AM

Share

ಮೈಸೂರು: ಪೊಲೀಸ್‌ ಹೆಡ್ ಕಾನ್ಸಟೇಬಲ್‌ಗೆ (Police Head Constable) ಬೆದರಿಕೆ ಮತ್ತು ಹಲ್ಲೆ ಆರೋಪದಡಿ ಹುಣಸೂರು (Hunasuru) ನಗರಸಭೆ ಸದಸ್ಯನ (Municipal Council Member) ವಿರುದ್ಧ ಹುಣಸೂರು ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಮೈಸೂರು (Mysore) ನಗರಸಭೆ ಮೈದಾನದಲ್ಲಿ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟ ಆಯೋಜಿಸಲಾಗಿತ್ತು. ಈ ವೇಳೆ ಆಯೋಜಕರ ಮನವಿಯಂತೆ ಸಾರ್ವಜನಿಕರನ್ನು ಅಂಕಣದಿಂದ ಹೊರಗೆ ಹೋಗಲು ಹೆಡ್ ಕಾನ್ಸಟೇಬಲ್ ಮಹೇಶ್ ಹೇಳಿದ್ದರು.

ಈ ಸಂದರ್ಭದಲ್ಲಿ ಹೆಡ್ ಕಾನ್ಸಟೇಬಲ್ ಮಹೇಶ್ ಅವರು ಹುಣಸೂರು ನಗರಸಭೆಯ 17 ನೇ ವಾಡ್ ೯ ಸದಸ್ಯ ಸದಸ್ಯ ಮನುವನ್ನು ಕ್ರೀಡಾಂಗಣದಿಂದ ಹೊರ ಹೋಗಲು ಸೂಚಿಸಿದ್ದರು. ಈ ವೇಳೆ ಮನು ಏಕವಚನದಲ್ಲಿ ಕೂಗಾಡಿದ್ದ ನಂತರ ಮಹೇಶ್‌ರನ್ನು ಎಳೆದಾಡಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇದೀಗ ನಗರಸಭೆ ಸದಸ್ಯ ಮನು ವಿರುದ್ಧ ಹುಣಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಠಾಣೆಗೆ ಕರೆತರುತ್ತಿದ್ದಾಗ ಆರೋಪಿಯಿಂದ ಮಹಿಳಾ ಹೆಡ್ ಕಾನ್ಸ್​ಟೇಬಲ್​ಗೆ ಡ್ರ್ಯಾಗರ್ ನಿಂದ ಇರಿತ

ಬೆಂಗಳೂರು: ಆರೋಪಿ ರೌಡಿ ಆಸಾಮಿಯನ್ನು ಠಾಣೆಗೆ ಕರೆತರಲು ಹೋಗಿದ್ದಾಗ ಆರೋಪಿ ಮಹಿಳಾ ಹೆಡ್​ ಕಾನ್ಸ್​ಟೇಬಲ್​ಗೆ  ಡ್ರ್ಯಾಗರ್​​ನಿಂದ ಇರಿದಿದ್ದಾನೆ.  ವಿನುತಾ(45) ಇರಿತಕ್ಕೆ ಒಳಗಾದ ಮಹಿಳಾ ಪೊಲೀಸ್ ಹೆಡ್​ಕಾನ್ಸ್​ಟೇಬಲ್. ಆರೋಪಿ ರೌಡಿ ಆಸಾಮಿ ಶೇಕ್ ಶರೀಫ್ ಶರೀಫ್ (25) ನಿಂದ ಕೃತ್ಯ ನಡೆದಿದೆ. ಆರೋಪಿ ಮೇಲೆ ಕೊಲೆ ಹಾಗೂ ಕೊಲೆಯತ್ನ ಪ್ರಕರಣಗಳು ಎಚ್ ಎ ಎಲ್ ಠಾಣೆಯಲ್ಲಿ ದಾಖಲಾಗಿದ್ದವು.

ಆರೋಪಿ ಇತ್ತೀಚೆಗರ ಜಾಮೀನಿನ ಮೇಲೆ ಬಿಡುಗಡೆಯಾಗಿ ಹೊರಬಂದಿದ್ದನು. ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆ ಮರೆಸಿಕೊಂಡಿದ್ದನು. ಅಲ್ಲದೇ ಮತ್ತೆ ಕೊಲೆ ಮಾಡಲು ಸಂಚು ರೂಪಿಸಿರೋದಾಗಿ ಪೊಲೀಸರಿಗೆ ಮಾಹಿತಿ ಬಂದಿತ್ತು. ಈ ಹಿನ್ನಲೆ ಆತನನ್ನು ಠಾಣೆಗೆ ಕರೆತರಲು ಆಗಸ್ಟ್ 5 ರಂದು ಮಹಿಳಾ ಹೆಡ್​ ಕಾನ್ಸ್​ಟೇಬಲ್ ವಿನುತಾ ಮತ್ತು ತಂಡ ಹೋಗಿತ್ತು.

ಪೊಲೀಸರಿಗೆ ಆರೋಪಿ ಜ್ಯೋತಿನಗರದಿಂದ ರೆಡ್ಡಿ ಪಾಳ್ಯಕ್ಕೆ ತೆರಳ್ತಿರುವ ಬಗ್ಗೆ  ಮಾಹಿತಿ ಸಿಕ್ಕಿತ್ತು. ಮಾಹಿತಿ ಆಧಾರದ ಮೇಲೆ ರಾತ್ರಿ 9.30 ಕ್ಕೆ ಆತನನ್ನು ಕರೆದುಕೊಂಡು ಹೋಗಲು ತಂಡ ಮುಂದಾಗಿದೆ. ಈ ವೇಳೆ ಮಹಿಳಾ ಪೊಲೀಸ್ ಸಿಬ್ಬಂದಿಗೆ ಡ್ರ್ಯಾಗರ್ ನಿಂದ ಇರಿದು ಪರಾರಿಯಾಗಲು ಯತ್ನಿಸಿದ್ದಾನೆ. ಕೂಡಲೆ ಸ್ಥಳೀಯರ ಸಹಾಯದಿಂದ ಆತನ್ನನ್ನು ಹಿಡಿದು ಪೊಲೀಸರು ಠಾಣೆಗೆ ಕರೆತಂದಿದ್ದಾರೆ.

ಗಾಯಾಳು ಮಹಿಳಾ ಹೆಡ್​ ಕಾನ್ಸ್​ಟೇಬಲ್​ ಜೀವಿಕಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿದ್ದಾರೆ. ಘಟನೆ ಸಂಬಂದ ಹೆಚ್ಎಎಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಾಲ್ವರು ಅಂತಾರಾಜ್ಯ ಕಳ್ಳರನ್ನ ಬಂಧಿಸಿ ಹುಬ್ಬಳ್ಳಿ ಪೊಲೀಸ್​

ಹುಬ್ಬಳ್ಳಿ: ಹುಬ್ಬಳ್ಳಿ ಶಹರ ಠಾಣೆ ಪೊಲೀಸರು ನಾಲ್ವರು ಅಂತಾರಾಜ್ಯ ಕಳ್ಳರನ್ನು ಬಂಧಿಸಿದ್ದಾರೆ. ತಮಿಳುನಾಡು ಮೂಲದ ವೇಲೊರು ಗ್ರಾಮದ ರಕ್ಷಿತ, ಪಾವಗಡ ನಿವಾಸಿ ನಿತಿನ್, ಹೊಸಪೇಟೆ ನಿವಾಸಿಗಳಾದ ಮಂಜು ಅಲಿಯಾಸ್​ ಡಾಲಿ ಹಾಗೂ ಅರುಣ ಬಂಧಿತ ಆರೋಪಿಗಳು.  10ಕ್ಕೂ ಹೆಚ್ಚು ಅಂಗಡಿಗಳ ಶೆಟರ್ಸ್​ ಮುರಿದು ನಗದು ದೋಚಿದ್ದರು. ಈ ಚಾಲಾಕಿ ಕಳ್ಳರು ಹುಬ್ಬಳ್ಳಿ ಅಲ್ಲದೇ ಬೆಂಗಳೂರು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಪೊಲೀಸ್ ಠಾಣೆಗೆ ಬೇಕಾದವರು‌.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:47 am, Wed, 17 August 22

Follow Us
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ