AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಿಂದ 300 ಕೋಟಿ ರೂ. ಅಕ್ರಮ: ತನಿಖೆ ಶುರು ಮಾಡಿದ ಸಿಬಿಐ

KSOU Scam:ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ (ಕೆಎಸ್‌ಒಯು) ಶಿಕ್ಷಣ ಸಂಸ್ಥೆಗಳಿಂದ ಭಾರೀ ಗೋಲ್​ಮಾಲ್ ನಡೆದಿದೆ. 300 ಕೋಟಿ ರೂಪಾಯಿಗೂ ಅಧಿಕ ಹಣ ದುರುಪಯೋಗಕ್ಕೆ ಸಂಬಂಧಿಸಿ ಸಿಬಿಐ ಎಫ್​ಐಆರ್​ ದಾಖಲಿಸಿ ತನಿಖೆ ಶುರು ಮಾಡಿದೆ.

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಿಂದ 300 ಕೋಟಿ ರೂ. ಅಕ್ರಮ: ತನಿಖೆ ಶುರು ಮಾಡಿದ ಸಿಬಿಐ
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ
TV9 Web
| Edited By: |

Updated on:Oct 06, 2023 | 7:27 AM

Share

ನವದೆಹಲಿ/ಮೈಸೂರು, (ಅಕ್ಟೋಬರ್ .06): ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ (ಕೆಎಸ್‌ಒಯು) (Karnataka State Open University) ಶಿಕ್ಷಣ ಸಂಸ್ಥೆಗಳ ಸಹಭಾಗಿತ್ವ ಯೋಜನೆಯಡಿ ಸುಮಾರು 300 ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ದುರ್ಬಳಕೆ ಮಾಡಿರುವ ಆರೋಪ ಮೇಲೆ ಅಧಿಕಾರಿಗಳ ವಿರುದ್ಧ ಕೇಂದ್ರ ತನಿಖಾ ದಳ (ಸಿಬಿಐ) ಪ್ರಕರಣ ದಾಖಲಿಸಿದೆ.

ಮೈಸೂರು (Mysuru) ಮೂಲದ ಮುಕ್ತ ವಿಶ್ವವಿದ್ಯಾಲಯವು ಶಿಕ್ಷಣ ಸಂಸ್ಥೆಗಳ ಸಹಭಾಗಿತ್ವ ಯೋಜನೆಯನ್ನು ಇಡೀ ದೇಶ ಹಾಗೂ ವಿದೇಶಗಳಲ್ಲಿಯೂ ಆರಂಭಿಸಿದೆ. 2013-14 ಮತ್ತು 2014-15ನೇ ಸಾಲಿನ ಹಣಕಾಸಿನ ವರ್ಷದಲ್ಲಿ ವಿಶ್ವವಿದ್ಯಾಲಯದ ಆಯವ್ಯಯ ವರದಿ ಪರಿಶೀಲನೆ ವೇಳೆ ಇದು ಬೆಳಕಿಗೆ ಬಂದಿದೆ. ಸಹಭಾಗಿತ್ವ ಸಂಸ್ಥೆಗಳಿಂದ ಜಮೆಯಾಗಬೇಕಿದ್ದ 50 ಕೋಟಿ ರೂ. ಆಯವ್ಯಯ ವರದಿಯಲ್ಲಿ ಕಾಣೆಯಾಗಿರುವುದು ಪತ್ತೆಯಾಗಿದೆ.

ಇದನ್ನೂ ಓದಿ: 2029ರ ವರೆಗೂ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯಕ್ಕೆ ಮಾನ್ಯತೆ ಮುಂದುವರಿಸಲು ಯುಜಿಸಿ ಆದೇಶ

ಸಹಭಾಗಿತ್ವ ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳಿಂದ ದಾಖಲಾತಿ, ಪರೀಕ್ಷೆ ಹಾಗೂ ಇತರ ಶುಲ್ಕವಾಗಿ ಹಣವನ್ನು ಸಂಗ್ರಹಿಸಿವೆ. ಈ ಮೊತ್ತವನ್ನು ಸಂಸ್ಥೆಗಳು ಮುಕ್ತ ವಿಶ್ವವಿದ್ಯಾಲಯಕ್ಕೆ ಜಮೆ ಮಾಡಬೇಕು. ಆದರೆ ಕೆಲವು ಸಂಸ್ಥೆಗಳು ಜಮೆ ಮಾಡುವ ಹಣದಲ್ಲಿ ವ್ಯತ್ಯಾಸ ಮಾಡಿವೆ. 2009-10ರಿಂದ 2012-13ನೇ ಶೈಕ್ಷಣಿಕ ವರ್ಷದಲ್ಲಿಯೂ ಸುಮಾರು 250 ಕೋಟಿ ರೂ. ಜಮೆಯಾಗಿಲ್ಲ. ಹಾಗೇ 2013-14ರಿಂದ 2014-15ರ ಆರ್ಥಿಕ ವರ್ಷದಲ್ಲಿ 50 ಕೋಟಿ ರೂ. ಕಾಣೆಯಾಗಿದೆ. ಎಂದು ಲೆಕ್ಕಪರಿಶೋಧನೆ ವೇಳೆ ತಿಳಿದು ಬಂದಿದೆ’ ಎಂದು ವರದಿ ಹೇಳಿದೆ.

ಈ ಭಾರಿ ಮೊತ್ತ ತಾಳೆಯಾಗದಿರುವ ಬಗ್ಗೆ ಮುಕ್ತ ವಿಶ್ವವಿದ್ಯಾಲಯದ ನಿರ್ದೇಶಕ ಮಂಡಳಿ, ತಕ್ಷಣ ರಾಜ್ಯ ಸರ್ಕಾರದ ಗಮನಕ್ಕೆ ತಂದಿತ್ತು. ಬಳಿಕ ರಾಜ್ಯ ಸರ್ಕಾರವು 2009-10 ರಿಂದ 2015-16 ರವರೆಗಿನ ಅವಧಿಯಲ್ಲಿ ಕೆಎಸ್‌ಒಯು, ಮೈಸೂರು ಮತ್ತು ಅದರ ಸಹಯೋಗದ ಸಂಸ್ಥೆಗಳಿಂದ ಭಾರತದಾದ್ಯಂತ ಶುಲ್ಕದ ದುರುಪಯೋಗದ ಕುರಿತು ತನಿಖೆ ನಡೆಸುವಂತೆ ಸಿಬಿಐಗೆ ಕೋರಿತ್ತು.

ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್  ಮಾಡಿ

Published On - 7:22 am, Fri, 6 October 23

Follow Us
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್