ಮೈಸೂರು: ನಕಲಿ ಸಿಗರೇಟ್, ಹನ್ಸ್ ಉತ್ಪನ್ನಗಳ ದಾಸ್ತನು ಮೇಲೆ ಸಿಸಿಬಿ ಪೊಲೀಸರ ದಾಳಿ; ನಾಲ್ವರು ವಶಕ್ಕೆ

ನಕಲಿ ದಂಧೆಕೋರರ ಹಾವಳಿ ಮೀತಿಮೀರಿದ್ದು, ಇಂದು(ಶನಿವಾರ) ಸಾಂಸ್ಕೃತೀಕ ನಗರಿ ಮೈಸೂರಿನಲ್ಲಿ ನಕಲಿ ಸಿಗರೇಟ್ ಮತ್ತು ಹನ್ಸ್ ಉತ್ಪನ್ನಗಳ ದಾಸ್ತನು ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ, ಬರೋಬ್ಬರಿ 70 ಲಕ್ಷ ಮೌಲ್ಯದ ಐಟಿಸಿ ಕಂಪನಿಯ ನಕಲಿ ಸಿಗರೇಟ್ ಹಾಗೂ ಹನ್ಸ್ ವಶಕ್ಕೆ‌ ಪಡೆದಿದ್ದಾರೆ.

ಮೈಸೂರು: ನಕಲಿ ಸಿಗರೇಟ್, ಹನ್ಸ್ ಉತ್ಪನ್ನಗಳ ದಾಸ್ತನು ಮೇಲೆ ಸಿಸಿಬಿ ಪೊಲೀಸರ ದಾಳಿ; ನಾಲ್ವರು ವಶಕ್ಕೆ
| Updated By: ಕಿರಣ್ ಹನುಮಂತ್​ ಮಾದಾರ್

Updated on:Jul 27, 2024 | 8:27 PM

ಮೈಸೂರು, ಜು.27: ನಕಲಿ ದಂಧೆಕೋರರ ಹಾವಳಿ ಮೀತಿಮೀರಿದ್ದು, ಈ ಕುರಿತು ಎಷ್ಟೇ ಕಠಿಣ ಕ್ರಮಕೈಗೊಂಡರು ಬ್ರೇಕ್​ ಹಾಕಲಾಗುತ್ತಿಲ್ಲ. ಅದರಂತೆ ಇದೀಗ ನಕಲಿ ಸಿಗರೇಟ್ ಮತ್ತು ಹನ್ಸ್ ಉತ್ಪನ್ನಗಳ ದಾಸ್ತನು ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ, ಬರೋಬ್ಬರಿ 70 ಲಕ್ಷ ಮೌಲ್ಯದ ಐಟಿಸಿ ಕಂಪನಿಯ ನಕಲಿ ಸಿಗರೇಟ್ ಹಾಗೂ ಹನ್ಸ್ ವಶಕ್ಕೆ‌ ಪಡೆದಿದ್ದಾರೆ. ಹೌದು, ಮೈಸೂರು(Mysore) ನಗರದ ನಜರ್ ಬಾದ್ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯೊಂದರ ಮೇಲೆ ದಾಳಿ ಮಾಡಿದಾಗ ಈ ಪ್ರಕರಣ ಬೆಳಕಿಗೆ ಬಂದಿದೆ.

ನಾಲ್ವರ ಆರೋಪಿಗಳು ವಶಕ್ಕೆ

ಇಟ್ಟಿಗೆಗೂಡಿನ ಅರುಣಾಚಲಂ ಸ್ಟ್ರೀಟ್​ನಲ್ಲಿರುವ ಮನೆಯೊಂದರಲ್ಲಿ ನಕಲಿ ಸಿಗರೇಟ್ ಸಂಗ್ರಹಿಸಿದ್ದರು. ಈ ಹಿನ್ನಲೆ ಓರ್ವನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಸತ್ಯಾಂಶ ಬಾಯ್ಬಿಟ್ಟಿದ್ದಾನೆ. ಆತನ ಮಾಹಿತಿ ಮೇರೆಗೆ ನಂಜನಗೂಡಿನ ರಿಂಗ್ ರಸ್ತೆಯ ಕೋಟೆಹುಂಡಿ ಫ್ಯಾಕ್ಟರಿ ಮೇಲೆ ಸಿಸಿಬಿ ಪೊಲೀಸರ ದಾಳಿ ನಡೆಸಿ, ಲಕ್ಷಾಂತರ ಮೌಲ್ಯದ ತಂಬಾಕು ಹಾಗೂ ನಕಲಿ ಉತ್ಪನ್ನಗಳ ಪರಿಕಾರಗಳನ್ನ ವಶಕ್ಕೆ ಪಡೆಯಲಾಗಿದ್ದು, ಪ್ರಕರಣದ ಸಂಬಂಧ ನಾಲ್ವರ ಆರೋಪಿಗಳು ವಶಕ್ಕೆ ತೆಗೆದುಕೊಳ್ಳಲಾಗಿದೆ.

ಇದನ್ನೂ ಓದಿ: ಅಮೆರಿಕದಲ್ಲಿ ನಕಲಿ ಕ್ಯಾನ್ಸರ್ ಔಷಧಿ ಮಾರಾಟ; ಭಾರತೀಯ ಮೂಲದ ವ್ಯಕ್ತಿಯ ಬಂಧನ

ರಭಸದಿಂದ ಹರಿಯುತ್ತಿರುವ ನದಿಯಲ್ಲಿ ಯುವಕರ ಹುಚ್ಚಾಟ

ಮೈಸೂರು: ನದಿಯಲ್ಲಿ ನೀರು ಹೆಚ್ಚಾಗುತ್ತಿದ್ದಂತೆ ಯುವಕರ ಹುಚ್ಚು ಸಾಹಸ ಹೆಚ್ಚುತ್ತಿದೆ. ಟಿ ನರಸೀಪುರ ತಾಲ್ಲೂಕಿನ ಬನ್ನೂರು ಗ್ರಾಮದ ಬಳಿ ಸೇತುವೆಯಿಂದ ತುಂಬಿ ಹರಿಯುತ್ತಿರುವ ನದಿಗೆ ಡೈವ್ ಹೊಡೆದು ಪುಂಡಾಟ ಮೆರೆಯುತ್ತಿದ್ದಾರೆ.
ಜಲಾಶಯಗಳು ತುಂಬುತ್ತಿದ್ದಂತೆಯೇ ನದಿಗಳು ಕೂಡ ತುಂಬಿ ಹರಿಯುತ್ತಿದೆ. ಯುವಕರ ಹುಚ್ಚು ಸಾಹಸದಿಂದ ಅನಾಹುತ ಸಂಭವಿಸುವ ಸಾಧ್ಯತೆಯಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:25 pm, Sat, 27 July 24

Follow us
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್