AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chamundi Hills: ಚಾಮುಂಡಿ ಬೆಟ್ಟದಲ್ಲಿ ಮೂರನೇ ಆಷಾಢ ಮಾಸದ ಸಂಭ್ರಮ: ನಾಡ ದೇವತೆಗೆ ವಿಶೇಷ ಪೂಜೆ

Chamundeshwari: ಮುಂಜಾಗೃತ ಕ್ರಮವಾಗಿ ಬೆಟ್ಟದಲ್ಲಿ ಬಿಗಿ ಪೊಲೀಸ್ ಬಂದೂಬಸ್ತ ಒದಗಿಸಲಾಗಿದೆ. ಜಿಲ್ಲಾಡಳಿತ ಬೆಟ್ಟಕ್ಕೆ ಉಚಿತ ಬಸ್ ವ್ಯವಸ್ಥೆ ಮಾಡಿದೆ. ಚಾಮುಂಡಿಬೆಟ್ಟದ ವಾಹನ ಪಾಸ್​ಗಳು ರದ್ದು ಮಾಡಲಾಗಿದೆ.

Chamundi Hills: ಚಾಮುಂಡಿ ಬೆಟ್ಟದಲ್ಲಿ ಮೂರನೇ ಆಷಾಢ ಮಾಸದ ಸಂಭ್ರಮ: ನಾಡ ದೇವತೆಗೆ ವಿಶೇಷ ಪೂಜೆ
ಚಾಮುಂಡಿ ಬೆಟ್ಟದಲ್ಲಿ ಮೂರನೇ ಆಷಾಢ ಮಾಸದ ಸಂಭ್ರಮ
TV9 Web
| Updated By: Digi Tech Desk|

Updated on:Jul 15, 2022 | 8:49 AM

Share

ಮೈಸೂರು: ಚಾಮುಂಡಿ ಬೆಟ್ಟದಲ್ಲಿ ಮೂರನೇ ಆಷಾಢ ಮಾಸದ (Ashadha Masa) ಸಂಭ್ರಮ ಹಿನ್ನೆಲೆ ಮುಂಜಾನೆಯಿಂದಲೇ ನಾಡಿನ ಅಧಿದೇವತೆಗೆ ವಿಶೇಷ ಪೂಜೆ ಸಲ್ಲಿಸಲಾಗಿದೆ. ತಾಯಿಗೆ ರುದ್ರಾಭಿಷೇಕ, ಪಂಚಾಮೃತ ಅಭಿಷೇಕ, ಕುಂಕುಮಾರ್ಚನೆ ಮಾಡಿದ್ದು, ಬೆಳಗ್ಗೆಯಿಂದ ಭಕ್ತರಿಗೆ ಚಾಮುಂಡಿ ತಾಯಿ ದರ್ಶನಕ್ಕೆ ಅವಕಾಶ ನೀಡಿದ್ದು, ಇಂದು ರಾತ್ರಿ 9.30 ರವರೆಗೆ ದರ್ಶನಕ್ಕೆ ಅವಕಾಶವಿರಲಿದೆ. ಎಂದಿನಂತೆ ಖಾಸಗಿ ವಾಹನಗಳಿಗೆ ಬೆಟ್ಟಕ್ಕೆ ಪ್ರವೇಶ ನಿಷೇಧ ಮಾಡಿದ್ದು, ಮುಂಜಾಗೃತ ಕ್ರಮವಾಗಿ ಬೆಟ್ಟದಲ್ಲಿ ಬಿಗಿ ಪೊಲೀಸ್ ಬಂದೂಬಸ್ತ ಒದಗಿಸಲಾಗಿದೆ. ಜಿಲ್ಲಾಡಳಿತ ಬೆಟ್ಟಕ್ಕೆ ಉಚಿತ ಬಸ್ ವ್ಯವಸ್ಥೆ ಮಾಡಿದೆ. ಚಾಮುಂಡಿಬೆಟ್ಟದ ವಾಹನ ಪಾಸ್​ಗಳು ರದ್ದು ಮಾಡಲಾಗಿದ್ದು, ತುರ್ತು ಕರ್ತವ್ಯಕ್ಕಾಗಿ ಪಾಸ್ ವಿತರಿಸಲಾಗಿತ್ತು. ಕಳೆದ ವಾರ ಪಾಸ್ ಗೊಂದಲದಿಂದಾಗಿ ಸಾಕಷ್ಟು ಸಮಸ್ಯೆಯಾಗಿತ್ತು.

ಇದನ್ನೂ ಓದಿ: ಮೈಸೂರು ಚಾಮುಂಡಿ ಬೆಟ್ಟದಲ್ಲಿ ಆಷಾಢ ಶುಕ್ರವಾರ: ಖಾಸಗಿ ವಾಹನಗಳಿಗೆ ನಿರ್ಬಂಧ; ಪಾಸ್​​ ರದ್ದು

ಹಾಗಾಗಿ ಈ ವಾರ ಪಾಸ್​ಗೆ ಬ್ರೇಕ್ ಹಾಕಲಾಗಿದೆ. ಜುಲೈ 15, 22ರಂದು ಆಷಾಢ ಶುಕ್ರವಾರ ಮತ್ತು ಜುಲೈ 20ರಂದು ವರ್ಧಂತಿಗೂ ಪಾಸ್ ಕೊಡದಿರಲು ನಿರ್ಧರಿಸಲಾಗಿದೆ. ಚಾಮುಂಡಿಬೆಟ್ಟಕ್ಕೆ ತೆರಳುವವರು ಬಸ್​ನಲ್ಲೇ ತೆರಳುವಂತೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಚಾಮುಂಡಿ ಬೆಟ್ಟದಲ್ಲಿ ರೋಪ್​ವೇ ಯೋಜನೆ: ಸರ್ಕಾರದ ನಿರ್ಧಾರ ಸರಿ ಇದೆ ಎಂದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್

ನಾಡದೇವತೆ ಮಹಿಷಾಸುರ ಮರ್ದಿನಿ ಚಾಮುಂಡೇಶ್ವರಿ ತಾಯಿಗೆ ಆಷಾಢ ಮಾಸದಲ್ಲಿ ವಿಶೇಷ ಪೂಜೆಗೆ ಆಗಮಿಸುವ ಭಕ್ತರು ಕಡ್ಡಾಯವಾಗಿ ಕೊರೊನಾ  2ನೇ ಡೋಸ್​ ​ ಪಡೆದಿರುವ ಜೊತೆಗೆ ನೆಗೆಟಿವ್ ವರದಿಯ ಪ್ರತಿ ಕಡ್ಡಾಯ ತರಬೇಕು ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಸೋಮಶೇಖರ್ ಹೇಳಿದ್ದರು. ಪ್ರತಿ ವರ್ಷ ಆಷಾಢ ಮಾಸದ ಶುಕ್ರವಾರ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಮಾಡಲಾಗುತ್ತದೆ. ಈ ಪೂಜೆಯನ್ನು ಕಣ್ಣತುಂಬಿಕೊಳ್ಳಲು ಅಪಾರ ಸಂಖ್ಯೆಯ ಭಕ್ತರು ಬಂದು ತಾಯಿಯ ದರ್ಶನ ಪಡೆದರು.

Published On - 8:35 am, Fri, 15 July 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ