AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chamundi Hills: ಚಾಮುಂಡಿ ಬೆಟ್ಟದಲ್ಲಿ ಮೂರನೇ ಆಷಾಢ ಮಾಸದ ಸಂಭ್ರಮ: ನಾಡ ದೇವತೆಗೆ ವಿಶೇಷ ಪೂಜೆ

Chamundeshwari: ಮುಂಜಾಗೃತ ಕ್ರಮವಾಗಿ ಬೆಟ್ಟದಲ್ಲಿ ಬಿಗಿ ಪೊಲೀಸ್ ಬಂದೂಬಸ್ತ ಒದಗಿಸಲಾಗಿದೆ. ಜಿಲ್ಲಾಡಳಿತ ಬೆಟ್ಟಕ್ಕೆ ಉಚಿತ ಬಸ್ ವ್ಯವಸ್ಥೆ ಮಾಡಿದೆ. ಚಾಮುಂಡಿಬೆಟ್ಟದ ವಾಹನ ಪಾಸ್​ಗಳು ರದ್ದು ಮಾಡಲಾಗಿದೆ.

Chamundi Hills: ಚಾಮುಂಡಿ ಬೆಟ್ಟದಲ್ಲಿ ಮೂರನೇ ಆಷಾಢ ಮಾಸದ ಸಂಭ್ರಮ: ನಾಡ ದೇವತೆಗೆ ವಿಶೇಷ ಪೂಜೆ
ಚಾಮುಂಡಿ ಬೆಟ್ಟದಲ್ಲಿ ಮೂರನೇ ಆಷಾಢ ಮಾಸದ ಸಂಭ್ರಮ
TV9 Web
| Edited By: |

Updated on:Jul 15, 2022 | 8:49 AM

Share

ಮೈಸೂರು: ಚಾಮುಂಡಿ ಬೆಟ್ಟದಲ್ಲಿ ಮೂರನೇ ಆಷಾಢ ಮಾಸದ (Ashadha Masa) ಸಂಭ್ರಮ ಹಿನ್ನೆಲೆ ಮುಂಜಾನೆಯಿಂದಲೇ ನಾಡಿನ ಅಧಿದೇವತೆಗೆ ವಿಶೇಷ ಪೂಜೆ ಸಲ್ಲಿಸಲಾಗಿದೆ. ತಾಯಿಗೆ ರುದ್ರಾಭಿಷೇಕ, ಪಂಚಾಮೃತ ಅಭಿಷೇಕ, ಕುಂಕುಮಾರ್ಚನೆ ಮಾಡಿದ್ದು, ಬೆಳಗ್ಗೆಯಿಂದ ಭಕ್ತರಿಗೆ ಚಾಮುಂಡಿ ತಾಯಿ ದರ್ಶನಕ್ಕೆ ಅವಕಾಶ ನೀಡಿದ್ದು, ಇಂದು ರಾತ್ರಿ 9.30 ರವರೆಗೆ ದರ್ಶನಕ್ಕೆ ಅವಕಾಶವಿರಲಿದೆ. ಎಂದಿನಂತೆ ಖಾಸಗಿ ವಾಹನಗಳಿಗೆ ಬೆಟ್ಟಕ್ಕೆ ಪ್ರವೇಶ ನಿಷೇಧ ಮಾಡಿದ್ದು, ಮುಂಜಾಗೃತ ಕ್ರಮವಾಗಿ ಬೆಟ್ಟದಲ್ಲಿ ಬಿಗಿ ಪೊಲೀಸ್ ಬಂದೂಬಸ್ತ ಒದಗಿಸಲಾಗಿದೆ. ಜಿಲ್ಲಾಡಳಿತ ಬೆಟ್ಟಕ್ಕೆ ಉಚಿತ ಬಸ್ ವ್ಯವಸ್ಥೆ ಮಾಡಿದೆ. ಚಾಮುಂಡಿಬೆಟ್ಟದ ವಾಹನ ಪಾಸ್​ಗಳು ರದ್ದು ಮಾಡಲಾಗಿದ್ದು, ತುರ್ತು ಕರ್ತವ್ಯಕ್ಕಾಗಿ ಪಾಸ್ ವಿತರಿಸಲಾಗಿತ್ತು. ಕಳೆದ ವಾರ ಪಾಸ್ ಗೊಂದಲದಿಂದಾಗಿ ಸಾಕಷ್ಟು ಸಮಸ್ಯೆಯಾಗಿತ್ತು.

ಇದನ್ನೂ ಓದಿ: ಮೈಸೂರು ಚಾಮುಂಡಿ ಬೆಟ್ಟದಲ್ಲಿ ಆಷಾಢ ಶುಕ್ರವಾರ: ಖಾಸಗಿ ವಾಹನಗಳಿಗೆ ನಿರ್ಬಂಧ; ಪಾಸ್​​ ರದ್ದು

ಹಾಗಾಗಿ ಈ ವಾರ ಪಾಸ್​ಗೆ ಬ್ರೇಕ್ ಹಾಕಲಾಗಿದೆ. ಜುಲೈ 15, 22ರಂದು ಆಷಾಢ ಶುಕ್ರವಾರ ಮತ್ತು ಜುಲೈ 20ರಂದು ವರ್ಧಂತಿಗೂ ಪಾಸ್ ಕೊಡದಿರಲು ನಿರ್ಧರಿಸಲಾಗಿದೆ. ಚಾಮುಂಡಿಬೆಟ್ಟಕ್ಕೆ ತೆರಳುವವರು ಬಸ್​ನಲ್ಲೇ ತೆರಳುವಂತೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಚಾಮುಂಡಿ ಬೆಟ್ಟದಲ್ಲಿ ರೋಪ್​ವೇ ಯೋಜನೆ: ಸರ್ಕಾರದ ನಿರ್ಧಾರ ಸರಿ ಇದೆ ಎಂದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್

ನಾಡದೇವತೆ ಮಹಿಷಾಸುರ ಮರ್ದಿನಿ ಚಾಮುಂಡೇಶ್ವರಿ ತಾಯಿಗೆ ಆಷಾಢ ಮಾಸದಲ್ಲಿ ವಿಶೇಷ ಪೂಜೆಗೆ ಆಗಮಿಸುವ ಭಕ್ತರು ಕಡ್ಡಾಯವಾಗಿ ಕೊರೊನಾ  2ನೇ ಡೋಸ್​ ​ ಪಡೆದಿರುವ ಜೊತೆಗೆ ನೆಗೆಟಿವ್ ವರದಿಯ ಪ್ರತಿ ಕಡ್ಡಾಯ ತರಬೇಕು ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಸೋಮಶೇಖರ್ ಹೇಳಿದ್ದರು. ಪ್ರತಿ ವರ್ಷ ಆಷಾಢ ಮಾಸದ ಶುಕ್ರವಾರ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಮಾಡಲಾಗುತ್ತದೆ. ಈ ಪೂಜೆಯನ್ನು ಕಣ್ಣತುಂಬಿಕೊಳ್ಳಲು ಅಪಾರ ಸಂಖ್ಯೆಯ ಭಕ್ತರು ಬಂದು ತಾಯಿಯ ದರ್ಶನ ಪಡೆದರು.

Published On - 8:35 am, Fri, 15 July 22

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ