AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಸತ್​​ನೊಳಗೆ ನುಸುಳಿ ಹಂಗಾಮ ಮಾಡಿದ ಮನೋರಂಜನ್ ಮನೆಯಲ್ಲಿ ಕೇಂದ್ರ ಗುಪ್ತಚರ ಇಲಾಖೆ ಅಧಿಕಾರಿಗಳ ಪರಿಶೀಲನೆ

ದೆಹಲಿಯ ಸಂಸತ್ ಭವನಕ್ಕೆ ನುಗ್ಗಿ ಆತಂಕ ಸೃಷ್ಟಿಸಿದ್ದ ಮನೋರಂಜನ್ ಮನೆಗೆ ಕೇಂದ್ರ ಮತ್ತು ರಾಜ್ಯ ಗುಪ್ತಚರ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ‌ ನಡೆಸಿದ್ದಾರೆ. ಅಧಿಕಾರಿಗಳು ಮನೋರಂಜನ್ ಪೂರ್ವಾಪರ ಮಾಹಿತಿ ಸಂಗ್ರಹಿಸಿದ್ದಾರೆ. ಮನೋರಂಜನ್ ಕೊಠಡಿಯಲ್ಲಿ ಇಂಚಿಂಚು ಪರಿಶೀಲನೆ ನಡೆಸಲಾಗಿದೆ.

ಸಂಸತ್​​ನೊಳಗೆ ನುಸುಳಿ ಹಂಗಾಮ ಮಾಡಿದ ಮನೋರಂಜನ್ ಮನೆಯಲ್ಲಿ ಕೇಂದ್ರ ಗುಪ್ತಚರ ಇಲಾಖೆ ಅಧಿಕಾರಿಗಳ ಪರಿಶೀಲನೆ
ಸಂಸತ್ ಭವನImage Credit source: Oneindia
ದಿಲೀಪ್​, ಚೌಡಹಳ್ಳಿ
| Edited By: |

Updated on: Dec 14, 2023 | 1:52 PM

Share

ಮೈಸೂರು, ಡಿ.14: ಲೋಕಸಭೆ ಕಲಾಪದ ವೇಳೆ ಭಾರಿ ಭದ್ರತಾ ಲೋಪ (Parliament Security Breach)   ಪ್ರಕರಣ​ಕ್ಕೆ ಸಂಬಂಧಿಸಿ ಮೈಸೂರಿನ ವಿಜಯನಗರದಲ್ಲಿರುವ ಆರೋಪಿ ಮನೋರಂಜನ್ ಮನೆಗೆ ಕೇಂದ್ರ ಗುಪ್ತಚರ ಇಲಾಖೆ ಅಧಿಕಾರಿಗಳು (Central Intelligence Agency Officials) ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾಗೂ ಮನೋರಂಜನ್ ಕುಟುಂಬಸ್ಥರಿಂದ ಮಾಹಿತಿ ಸಂಗ್ರಹಿಸಿದ್ದಾರೆ. ಸುಮಾರು 1 ಗಂಟೆಗೂ ಹೆಚ್ಚು ಸಮಯದಿಂದ ಮನೋರಂಜನ್ ಮನೆಯಲ್ಲಿ ತಪಾಸಣೆ ನಡೆಸಿ ಹಿಂದಿರುಗಿದ್ದಾರೆ.

ದೆಹಲಿಯ ಸಂಸತ್ ಭವನಕ್ಕೆ ನುಗ್ಗಿ ಆತಂಕ ಸೃಷ್ಟಿಸಿದ್ದ ಮನೋರಂಜನ್ ಮನೆಗೆ ನಿನ್ನೆ ಎಸಿಪಿ ಗಜೇಂದ್ರ ಪ್ರಸಾದ್, ವಿಜಯನಗರ ಪಿಐ ಸುರೇಶ್ ಭೇಟಿ‌ ನೀಡಿ ಪರಿಶೀಲನೆ ನಡೆಸಿದ್ದರು. ಆಗ ಮನೋರಂಜನ್ ಮನೆಯಲ್ಲಿ ಕ್ರಾಂತಿಕಾರಿ ಚಿಗುವೆರಾ ಸೇರಿದಂತೆ ಹಲವು ದಾರ್ಶನಿಕರು, ಕ್ರಾಂತಿಕಾರಿಗಳ ಬಗ್ಗೆಗಿನ ಪುಸ್ತಕಗಳು ಪತ್ತೆಯಾಗಿದ್ದವು. ಸದ್ಯ ಇಂದು ಮೈಸೂರಿನ ವಿಜಯನಗರದಲ್ಲಿರುವ ಮನೋರಂಜನ್ ಮನೆಗೆ ಕೇಂದ್ರ ಗುಪ್ತಚರ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಕುಟುಂಬಸ್ಥರಿಂದ ಮಾಹಿತಿ ಸಂಗ್ರಹಿಸಿ ಮನೆಯ ಪರಿಶೀಲನೆ ನಡೆಸಿದ್ದಾರೆ.

ಕೇಂದ್ರ ಮತ್ತು ರಾಜ್ಯ ಗುಪ್ತಚರ ಇಲಾಖೆ ಅಧಿಕಾರಿಗಳು ಪರಿಶೀಲನೆ‌ ನಡೆಸಿದ್ದಾರೆ. ಅಧಿಕಾರಿಗಳು ಮನೋರಂಜನ್ ಪೂರ್ವಾಪರ ಮಾಹಿತಿ ಸಂಗ್ರಹಿಸಿದ್ದಾರೆ. ಮನೋರಂಜನ್ ಕೊಠಡಿಯಲ್ಲಿ ಇಂಚಿಂಚು ಪರಿಶೀಲನೆ ನಡೆಸಲಾಗಿದೆ. ಮನೋರಂಜನ್ ಸಂಪರ್ಕದಲ್ಲಿದ್ದವರಿಗಾಗಿ ಐಬಿ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ. ಕೇಂದ್ರ ಗುಪ್ತಚರ ಇಲಾಖೆಯ ಮೈಸೂರು ವಿಭಾಗದ ಉಪ ನಿರ್ದೇಶಕ ಪ್ರವೀಣ್ ನೇತೃತ್ವದಲ್ಲಿ ಮನೆಯಲ್ಲಿ ಪರಿಶೀಲನೆ ನಡೆಸಲಾಗಿದೆ.

ಇದನ್ನೂ ಓದಿ: ಲೋಕಸಭೆ ಸದನದೊಳಗೆ ನುಗ್ಗಿ ಹಂಗಾಮ ಮಾಡಿದ ಮನೋರಂಜನ್​ಗೆ ಇದೆ ಬೆಂಗಳೂರಿನ ನಂಟು, ಈತ ಓದಿದ್ದು ಬೆಂಗಳೂರಿನ BITಯಲ್ಲಿ

2014 ರಲ್ಲಿ ಇಂಜಿನಿಯರಿಂಗ್ ಮುಗಿಸಿದ ಮನೋರಂಜನ್ ಅದಾದ ಬಳಿಕ ಕೆಲ ದಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡಿದ್ದಾನೆ. ಆದಾದ ಬಳಿಕ ಕೆಲಸ ಇಷ್ಟ ಇಲ್ಲದೆ ಪುಸ್ತಕ ಓದುವ ಹುಚ್ಚು ಹತ್ತಿಸಿಕೊಂಡಿದ್ದ. ಇದಕ್ಕೆ ಸಾಕ್ಷಿ ಎಂಬಂತೆ ಮನೆಯಲ್ಲಿ ಸಾಕಷ್ಟು ಪುಸ್ತಕಗಳು ಪತ್ತೆಯಾಗಿದೆ. ಅದರಲ್ಲೂ ಅನೇಕ ಪುಸ್ತಕಗಳು ಕ್ರಾಂತಿಕಾರಿಗಳ ಪುಸ್ತಕಗಳೆ ಇವೆ.

ಮನೋರಂಜನ್ ತಂದೆ‌ ಕೂಡ ಮಗನ ಕೃತ್ಯವನ್ನ ಖಂಡಿಸಿದ್ದಾರೆ.‌ ಮಗ ಮಾಡಿದ್ದು ತಪ್ಪು ಆತನನ್ನ ಗಲ್ಲಿಗೆರಿಸಿ ಅಂತನು ಹೇಳ್ತಿದ್ದಾರೆ. ಅಷ್ಟೆ ಅಲ್ಲದೆ ಆತ ಬೆಂಗಳೂರಿಗೆ ಹೋಗುತ್ತಿದ್ದ, ದೆಹಲಿಗೆ ಯಾಕಾಗಿ ಹೋಗಿದ್ದ ಅಂತ ಗೊತ್ತಿಲ್ಲ ಅಂತ ಹೇಳಿದ್ದಾರೆ. ಇನ್ನು ಬಿಇಗೆ ಸೀಟ್ ಕೊಡಿಸಿದ್ದೆ ಮಾಜಿ ಪ್ರಧಾನಿ ದೇವೇಗೌಡರು ಎಂದು ಮನೋರಂಜನ್ ತಂದೆ ದೇವರಾಜೇಗೌಡ ತಿಳಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ