AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಲ್​ ಪಾವತಿಸದ ಕಾರಣ ಮೈಸೂರು ಜಿಲ್ಲಾಧಿಕಾರಿ ಕಚೇರಿ ಸೇರಿ ವಿವಿಧ ಸರ್ಕಾರಿ ಕಚೇರಿಗಳಿಗೆ ವಿದ್ಯುತ್​ ಸಂಪರ್ಕ ಕಡಿತ

ಚೆಸ್ಕಾಂನ ನಿರ್ಧಾರದಿಂದಾಗಿ ಮೈಸೂರು ಸರ್ಕಾರಿ ಕಚೇರಿಗಳು ಕಗ್ಗತ್ತಲಲ್ಲಿ ಮುಳುಗಿವೆ. ಜಿಲ್ಲಾಧಿಕಾರಿ ಕಚೇರಿ, ಮಿನಿ ವಿಧಾನ ಸೌಧ, ಸಬ್ ರಿಜಿಸ್ಟಾರ್​ ಕಚೇರಿ, PWD, ಸಣ್ಣನೀರಾವರಿ, ಮಹಾರಾಣಿ ಕಾಲೇಜು ಸೇರಿದಂತೆ ಬೇರೆ ಬೇರೆ ಸರ್ಕಾರಿ ಕಚೇರಿಗಳಿಗೆ ವಿದ್ಯುತ್​ ಸಂಪರ್ಕ ಸ್ಥಗಿತಗೊಂಡಿದೆ.

ಬಿಲ್​ ಪಾವತಿಸದ ಕಾರಣ ಮೈಸೂರು ಜಿಲ್ಲಾಧಿಕಾರಿ ಕಚೇರಿ ಸೇರಿ ವಿವಿಧ ಸರ್ಕಾರಿ ಕಚೇರಿಗಳಿಗೆ ವಿದ್ಯುತ್​ ಸಂಪರ್ಕ ಕಡಿತ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Aug 31, 2021 | 8:56 AM

Share

ಮೈಸೂರು: ಹಲವು ಸಮಯದಿಂದ ವಿದ್ಯುತ್​ ಬಿಲ್​ ಪಾವತಿಸದೇ ಬಾಕಿ ಉಳಿಸಿಕೊಂಡ ಮೈಸೂರಿನ ಸರ್ಕಾರಿ ಕಚೇರಿಗಳಿಗೆ (Mysuru Government Offices) ಚೆಸ್ಕಾಂ (CHESCOM) ಶಾಕ್​ ನೀಡಿದೆ. ಮೈಸೂರು ಜಿಲ್ಲಾಧಿಕಾರಿ (Mysuru DC Office), ತಾಲ್ಲೂಕು ಕಚೇರಿ ಸೇರಿ ಒಟ್ಟು 20ಕ್ಕೂ ಹೆಚ್ಚು ಸರ್ಕಾರಿ ಕಚೇರಿಗಳಿಗೆ ಸೋಮವಾರ ಬೆಳಗ್ಗೆಯಿಂದ ವಿದ್ಯುತ್‌ ಸಂಪರ್ಕ ಕಡಿತಗೊಳಿಸಲಾಗಿದ್ದು, ಬಾಕಿ ಬಿಲ್ ಪಾವತಿಸುವ ತನಕವೂ ವಿದ್ಯುತ್ ಸ್ಥಗಿತಗೊಳಿಸಲು ಚೆಸ್ಕಾಂ ಅಧಿಕಾರಿಗಳು ನಿರ್ಧರಿಸಿದ್ದಾರೆ. ಹಲವು ವರ್ಷಗಳಿಂದ ಬಾಕಿ ಉಳಿಸಿಕೊಂಡ ಬಿಲ್​ ಪಾವತಿಸುವಂತೆ ಮನವಿ ಮಾಡಿದರೂ ಸ್ಪಂದಿಸದ ಇಲಾಖಾ ಕಚೇರಿಗಳ ಪಟ್ಟಿಮಾಡಿಕೊಂಡ ಚೆಸ್ಕಾಂ ಈ ರೀತಿಯ ನಿರ್ಧಾರ ತೆಗೆದುಕೊಂಡಿದೆ.

ಚೆಸ್ಕಾಂನ ನಿರ್ಧಾರದಿಂದಾಗಿ ಮೈಸೂರು ಸರ್ಕಾರಿ ಕಚೇರಿಗಳು ಕಗ್ಗತ್ತಲಲ್ಲಿ ಮುಳುಗಿವೆ. ಜಿಲ್ಲಾಧಿಕಾರಿ ಕಚೇರಿ, ಮಿನಿ ವಿಧಾನ ಸೌಧ, ಸಬ್ ರಿಜಿಸ್ಟಾರ್​ ಕಚೇರಿ, PWD, ಸಣ್ಣನೀರಾವರಿ, ಮಹಾರಾಣಿ ಕಾಲೇಜು ಸೇರಿದಂತೆ ಬೇರೆ ಬೇರೆ ಸರ್ಕಾರಿ ಕಚೇರಿಗಳಿಗೆ ವಿದ್ಯುತ್​ ಸಂಪರ್ಕ ಸ್ಥಗಿತಗೊಂಡಿದೆ. ಇದರಿಂದಾಗಿ ಕಚೇರಿಗಳ ಕೆಲಸದಲ್ಲಿ ವ್ಯತ್ಯಯವಾಗುತ್ತಿದ್ದು, ಅಧಿಕಾರಿಗಳು ಹಾಗೂ ಕೆಲಸ ಮಾಡಿಸಿಕೊಳ್ಳಲು ಬಂದ ಜನ ಸಾಮಾನ್ಯರು ಪರದಾಡುವಂತಾಗಿದೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಒಟ್ಟು 5 ವಿದ್ಯುತ್​ ಮೀಟರ್​ಗಳಿಂದ 3 ಲಕ್ಷದ 50 ಸಾವಿರ ರೂಪಾಯಿ ಬಿಲ್ ಬಾಕಿ ಇದೆ. ಮಿನಿ ವಿಧಾನಸೌಧದಲ್ಲಿ ಒಟ್ಟು 6 ಮೀಟರ್​ಗಳಿಂದ 3 ಲಕ್ಷದ 90 ಸಾವಿರ ರೂಪಾಯಿ ಬಿಲ್ ಬಾಕಿ ಉಳಿದಿದೆ. PWD ಕಚೇರಿಯಲ್ಲಿ 56 ಸಾವಿರ ರೂ, ಸಣ್ಣ ನೀರಾವರಿ ಇಲಾಖೆ 18 ಸಾವಿರ ರೂ ಬಿಲ್ ಬಾಕಿ ಇದೆ ಎನ್ನಲಾಗಿದೆ. ವಿದ್ಯುತ್​ ಸಂಪರ್ಕ ಕಡಿತದಿಂದಾಗಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ನೊಂದಣಿ ಕೆಲಸವೂ ಸ್ಥಗಿತವಾಗಿದ್ದು, ತಾಲ್ಲೂಕು ಕಚೇರಿಯಲ್ಲಿ ಕೆಲಸ ಸ್ಥಗಿತದಿಂದ ಜನರು ಪರದಾಡಬೇಕಾಗಿದೆ. ಇತ್ತ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜನರೇಟರ್ ಬಳಸಿ, ಮಿತವಾಗಿ ವಿದ್ಯುತ್ ಬಳಕೆ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಈ ಹಿಂದೆ ಮೈಸೂರು ಬೆಟ್ಟದ ಬಳಿ ಸುಮಾರು ದರೋಡೆ ಮಾಡಿದ್ವಿ, ಯಾರೂ ದೂರು ಕೊಡಲ್ಲ ಎಂಬ ಧೈರ್ಯವಿತ್ತು: ಆರೋಪಿಗಳು 

ಕೋಳಿ ಫಾರಂ​ಗೆ ಅಕ್ರಮ ವಿದ್ಯುತ್ ಸಂಪರ್ಕ; 1 ವರ್ಷ ಜೈಲು, 2.94 ಲಕ್ಷ ರೂಪಾಯಿ ದಂಡ ವಿಧಿಸಿದ ಕೋರ್ಟ್

(CESC Cuts Power supply to Mysuru Govt offices Including DC Office for not paying Bills)

Follow Us
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?