AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಲ್​ ಪಾವತಿಸದ ಕಾರಣ ಮೈಸೂರು ಜಿಲ್ಲಾಧಿಕಾರಿ ಕಚೇರಿ ಸೇರಿ ವಿವಿಧ ಸರ್ಕಾರಿ ಕಚೇರಿಗಳಿಗೆ ವಿದ್ಯುತ್​ ಸಂಪರ್ಕ ಕಡಿತ

ಚೆಸ್ಕಾಂನ ನಿರ್ಧಾರದಿಂದಾಗಿ ಮೈಸೂರು ಸರ್ಕಾರಿ ಕಚೇರಿಗಳು ಕಗ್ಗತ್ತಲಲ್ಲಿ ಮುಳುಗಿವೆ. ಜಿಲ್ಲಾಧಿಕಾರಿ ಕಚೇರಿ, ಮಿನಿ ವಿಧಾನ ಸೌಧ, ಸಬ್ ರಿಜಿಸ್ಟಾರ್​ ಕಚೇರಿ, PWD, ಸಣ್ಣನೀರಾವರಿ, ಮಹಾರಾಣಿ ಕಾಲೇಜು ಸೇರಿದಂತೆ ಬೇರೆ ಬೇರೆ ಸರ್ಕಾರಿ ಕಚೇರಿಗಳಿಗೆ ವಿದ್ಯುತ್​ ಸಂಪರ್ಕ ಸ್ಥಗಿತಗೊಂಡಿದೆ.

ಬಿಲ್​ ಪಾವತಿಸದ ಕಾರಣ ಮೈಸೂರು ಜಿಲ್ಲಾಧಿಕಾರಿ ಕಚೇರಿ ಸೇರಿ ವಿವಿಧ ಸರ್ಕಾರಿ ಕಚೇರಿಗಳಿಗೆ ವಿದ್ಯುತ್​ ಸಂಪರ್ಕ ಕಡಿತ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Skanda

Updated on: Aug 31, 2021 | 8:56 AM

ಮೈಸೂರು: ಹಲವು ಸಮಯದಿಂದ ವಿದ್ಯುತ್​ ಬಿಲ್​ ಪಾವತಿಸದೇ ಬಾಕಿ ಉಳಿಸಿಕೊಂಡ ಮೈಸೂರಿನ ಸರ್ಕಾರಿ ಕಚೇರಿಗಳಿಗೆ (Mysuru Government Offices) ಚೆಸ್ಕಾಂ (CHESCOM) ಶಾಕ್​ ನೀಡಿದೆ. ಮೈಸೂರು ಜಿಲ್ಲಾಧಿಕಾರಿ (Mysuru DC Office), ತಾಲ್ಲೂಕು ಕಚೇರಿ ಸೇರಿ ಒಟ್ಟು 20ಕ್ಕೂ ಹೆಚ್ಚು ಸರ್ಕಾರಿ ಕಚೇರಿಗಳಿಗೆ ಸೋಮವಾರ ಬೆಳಗ್ಗೆಯಿಂದ ವಿದ್ಯುತ್‌ ಸಂಪರ್ಕ ಕಡಿತಗೊಳಿಸಲಾಗಿದ್ದು, ಬಾಕಿ ಬಿಲ್ ಪಾವತಿಸುವ ತನಕವೂ ವಿದ್ಯುತ್ ಸ್ಥಗಿತಗೊಳಿಸಲು ಚೆಸ್ಕಾಂ ಅಧಿಕಾರಿಗಳು ನಿರ್ಧರಿಸಿದ್ದಾರೆ. ಹಲವು ವರ್ಷಗಳಿಂದ ಬಾಕಿ ಉಳಿಸಿಕೊಂಡ ಬಿಲ್​ ಪಾವತಿಸುವಂತೆ ಮನವಿ ಮಾಡಿದರೂ ಸ್ಪಂದಿಸದ ಇಲಾಖಾ ಕಚೇರಿಗಳ ಪಟ್ಟಿಮಾಡಿಕೊಂಡ ಚೆಸ್ಕಾಂ ಈ ರೀತಿಯ ನಿರ್ಧಾರ ತೆಗೆದುಕೊಂಡಿದೆ.

ಚೆಸ್ಕಾಂನ ನಿರ್ಧಾರದಿಂದಾಗಿ ಮೈಸೂರು ಸರ್ಕಾರಿ ಕಚೇರಿಗಳು ಕಗ್ಗತ್ತಲಲ್ಲಿ ಮುಳುಗಿವೆ. ಜಿಲ್ಲಾಧಿಕಾರಿ ಕಚೇರಿ, ಮಿನಿ ವಿಧಾನ ಸೌಧ, ಸಬ್ ರಿಜಿಸ್ಟಾರ್​ ಕಚೇರಿ, PWD, ಸಣ್ಣನೀರಾವರಿ, ಮಹಾರಾಣಿ ಕಾಲೇಜು ಸೇರಿದಂತೆ ಬೇರೆ ಬೇರೆ ಸರ್ಕಾರಿ ಕಚೇರಿಗಳಿಗೆ ವಿದ್ಯುತ್​ ಸಂಪರ್ಕ ಸ್ಥಗಿತಗೊಂಡಿದೆ. ಇದರಿಂದಾಗಿ ಕಚೇರಿಗಳ ಕೆಲಸದಲ್ಲಿ ವ್ಯತ್ಯಯವಾಗುತ್ತಿದ್ದು, ಅಧಿಕಾರಿಗಳು ಹಾಗೂ ಕೆಲಸ ಮಾಡಿಸಿಕೊಳ್ಳಲು ಬಂದ ಜನ ಸಾಮಾನ್ಯರು ಪರದಾಡುವಂತಾಗಿದೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಒಟ್ಟು 5 ವಿದ್ಯುತ್​ ಮೀಟರ್​ಗಳಿಂದ 3 ಲಕ್ಷದ 50 ಸಾವಿರ ರೂಪಾಯಿ ಬಿಲ್ ಬಾಕಿ ಇದೆ. ಮಿನಿ ವಿಧಾನಸೌಧದಲ್ಲಿ ಒಟ್ಟು 6 ಮೀಟರ್​ಗಳಿಂದ 3 ಲಕ್ಷದ 90 ಸಾವಿರ ರೂಪಾಯಿ ಬಿಲ್ ಬಾಕಿ ಉಳಿದಿದೆ. PWD ಕಚೇರಿಯಲ್ಲಿ 56 ಸಾವಿರ ರೂ, ಸಣ್ಣ ನೀರಾವರಿ ಇಲಾಖೆ 18 ಸಾವಿರ ರೂ ಬಿಲ್ ಬಾಕಿ ಇದೆ ಎನ್ನಲಾಗಿದೆ. ವಿದ್ಯುತ್​ ಸಂಪರ್ಕ ಕಡಿತದಿಂದಾಗಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ನೊಂದಣಿ ಕೆಲಸವೂ ಸ್ಥಗಿತವಾಗಿದ್ದು, ತಾಲ್ಲೂಕು ಕಚೇರಿಯಲ್ಲಿ ಕೆಲಸ ಸ್ಥಗಿತದಿಂದ ಜನರು ಪರದಾಡಬೇಕಾಗಿದೆ. ಇತ್ತ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜನರೇಟರ್ ಬಳಸಿ, ಮಿತವಾಗಿ ವಿದ್ಯುತ್ ಬಳಕೆ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಈ ಹಿಂದೆ ಮೈಸೂರು ಬೆಟ್ಟದ ಬಳಿ ಸುಮಾರು ದರೋಡೆ ಮಾಡಿದ್ವಿ, ಯಾರೂ ದೂರು ಕೊಡಲ್ಲ ಎಂಬ ಧೈರ್ಯವಿತ್ತು: ಆರೋಪಿಗಳು 

ಕೋಳಿ ಫಾರಂ​ಗೆ ಅಕ್ರಮ ವಿದ್ಯುತ್ ಸಂಪರ್ಕ; 1 ವರ್ಷ ಜೈಲು, 2.94 ಲಕ್ಷ ರೂಪಾಯಿ ದಂಡ ವಿಧಿಸಿದ ಕೋರ್ಟ್

(CESC Cuts Power supply to Mysuru Govt offices Including DC Office for not paying Bills)

ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಕುಳಿತು ವ್ಯಕ್ತಿಯ ಹುಚ್ಚಾಟ
ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಕುಳಿತು ವ್ಯಕ್ತಿಯ ಹುಚ್ಚಾಟ
‘ಸುಧಾರಾಣಿ ಕಣ್ಣಲ್ಲೇ ನಟಿಸ್ತಾರೆ’; ಬಾಯ್ತುಂಬ ಹೊಗಳಿದ ರವಿಚಂದ್ರನ್
‘ಸುಧಾರಾಣಿ ಕಣ್ಣಲ್ಲೇ ನಟಿಸ್ತಾರೆ’; ಬಾಯ್ತುಂಬ ಹೊಗಳಿದ ರವಿಚಂದ್ರನ್
ಮೂರುಬಾರಿ ಶಾಸಕನಾದರೆ ಮಂತ್ರಿ ಮಾಡುವ ಪರಿಪಾಠ ಇಲ್ಲವಾಗಿದೆ: ಗೋಪಾಲಕೃಷ್ಣ
ಮೂರುಬಾರಿ ಶಾಸಕನಾದರೆ ಮಂತ್ರಿ ಮಾಡುವ ಪರಿಪಾಠ ಇಲ್ಲವಾಗಿದೆ: ಗೋಪಾಲಕೃಷ್ಣ
Daily Devotional: ಬೂದುಗುಂಬಳ ಕಾಯಿಯ ಮಹತ್ವ ಹಾಗೂ ಅದರ ಉಪಯೋಗ ತಿಳಿಯಿರಿ
Daily Devotional: ಬೂದುಗುಂಬಳ ಕಾಯಿಯ ಮಹತ್ವ ಹಾಗೂ ಅದರ ಉಪಯೋಗ ತಿಳಿಯಿರಿ
Daily Horoscope: ಕೆಲಸದಲ್ಲಿನ ನಿಮ್ಮ ಚುರುಕುತನದಿಂದ ಮೆಚ್ಚುಗೆ ಗಳಿಸುವಿರಿ
Daily Horoscope: ಕೆಲಸದಲ್ಲಿನ ನಿಮ್ಮ ಚುರುಕುತನದಿಂದ ಮೆಚ್ಚುಗೆ ಗಳಿಸುವಿರಿ
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು