AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಲ್​ ಪಾವತಿಸದ ಕಾರಣ ಮೈಸೂರು ಜಿಲ್ಲಾಧಿಕಾರಿ ಕಚೇರಿ ಸೇರಿ ವಿವಿಧ ಸರ್ಕಾರಿ ಕಚೇರಿಗಳಿಗೆ ವಿದ್ಯುತ್​ ಸಂಪರ್ಕ ಕಡಿತ

ಚೆಸ್ಕಾಂನ ನಿರ್ಧಾರದಿಂದಾಗಿ ಮೈಸೂರು ಸರ್ಕಾರಿ ಕಚೇರಿಗಳು ಕಗ್ಗತ್ತಲಲ್ಲಿ ಮುಳುಗಿವೆ. ಜಿಲ್ಲಾಧಿಕಾರಿ ಕಚೇರಿ, ಮಿನಿ ವಿಧಾನ ಸೌಧ, ಸಬ್ ರಿಜಿಸ್ಟಾರ್​ ಕಚೇರಿ, PWD, ಸಣ್ಣನೀರಾವರಿ, ಮಹಾರಾಣಿ ಕಾಲೇಜು ಸೇರಿದಂತೆ ಬೇರೆ ಬೇರೆ ಸರ್ಕಾರಿ ಕಚೇರಿಗಳಿಗೆ ವಿದ್ಯುತ್​ ಸಂಪರ್ಕ ಸ್ಥಗಿತಗೊಂಡಿದೆ.

ಬಿಲ್​ ಪಾವತಿಸದ ಕಾರಣ ಮೈಸೂರು ಜಿಲ್ಲಾಧಿಕಾರಿ ಕಚೇರಿ ಸೇರಿ ವಿವಿಧ ಸರ್ಕಾರಿ ಕಚೇರಿಗಳಿಗೆ ವಿದ್ಯುತ್​ ಸಂಪರ್ಕ ಕಡಿತ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Aug 31, 2021 | 8:56 AM

Share

ಮೈಸೂರು: ಹಲವು ಸಮಯದಿಂದ ವಿದ್ಯುತ್​ ಬಿಲ್​ ಪಾವತಿಸದೇ ಬಾಕಿ ಉಳಿಸಿಕೊಂಡ ಮೈಸೂರಿನ ಸರ್ಕಾರಿ ಕಚೇರಿಗಳಿಗೆ (Mysuru Government Offices) ಚೆಸ್ಕಾಂ (CHESCOM) ಶಾಕ್​ ನೀಡಿದೆ. ಮೈಸೂರು ಜಿಲ್ಲಾಧಿಕಾರಿ (Mysuru DC Office), ತಾಲ್ಲೂಕು ಕಚೇರಿ ಸೇರಿ ಒಟ್ಟು 20ಕ್ಕೂ ಹೆಚ್ಚು ಸರ್ಕಾರಿ ಕಚೇರಿಗಳಿಗೆ ಸೋಮವಾರ ಬೆಳಗ್ಗೆಯಿಂದ ವಿದ್ಯುತ್‌ ಸಂಪರ್ಕ ಕಡಿತಗೊಳಿಸಲಾಗಿದ್ದು, ಬಾಕಿ ಬಿಲ್ ಪಾವತಿಸುವ ತನಕವೂ ವಿದ್ಯುತ್ ಸ್ಥಗಿತಗೊಳಿಸಲು ಚೆಸ್ಕಾಂ ಅಧಿಕಾರಿಗಳು ನಿರ್ಧರಿಸಿದ್ದಾರೆ. ಹಲವು ವರ್ಷಗಳಿಂದ ಬಾಕಿ ಉಳಿಸಿಕೊಂಡ ಬಿಲ್​ ಪಾವತಿಸುವಂತೆ ಮನವಿ ಮಾಡಿದರೂ ಸ್ಪಂದಿಸದ ಇಲಾಖಾ ಕಚೇರಿಗಳ ಪಟ್ಟಿಮಾಡಿಕೊಂಡ ಚೆಸ್ಕಾಂ ಈ ರೀತಿಯ ನಿರ್ಧಾರ ತೆಗೆದುಕೊಂಡಿದೆ.

ಚೆಸ್ಕಾಂನ ನಿರ್ಧಾರದಿಂದಾಗಿ ಮೈಸೂರು ಸರ್ಕಾರಿ ಕಚೇರಿಗಳು ಕಗ್ಗತ್ತಲಲ್ಲಿ ಮುಳುಗಿವೆ. ಜಿಲ್ಲಾಧಿಕಾರಿ ಕಚೇರಿ, ಮಿನಿ ವಿಧಾನ ಸೌಧ, ಸಬ್ ರಿಜಿಸ್ಟಾರ್​ ಕಚೇರಿ, PWD, ಸಣ್ಣನೀರಾವರಿ, ಮಹಾರಾಣಿ ಕಾಲೇಜು ಸೇರಿದಂತೆ ಬೇರೆ ಬೇರೆ ಸರ್ಕಾರಿ ಕಚೇರಿಗಳಿಗೆ ವಿದ್ಯುತ್​ ಸಂಪರ್ಕ ಸ್ಥಗಿತಗೊಂಡಿದೆ. ಇದರಿಂದಾಗಿ ಕಚೇರಿಗಳ ಕೆಲಸದಲ್ಲಿ ವ್ಯತ್ಯಯವಾಗುತ್ತಿದ್ದು, ಅಧಿಕಾರಿಗಳು ಹಾಗೂ ಕೆಲಸ ಮಾಡಿಸಿಕೊಳ್ಳಲು ಬಂದ ಜನ ಸಾಮಾನ್ಯರು ಪರದಾಡುವಂತಾಗಿದೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಒಟ್ಟು 5 ವಿದ್ಯುತ್​ ಮೀಟರ್​ಗಳಿಂದ 3 ಲಕ್ಷದ 50 ಸಾವಿರ ರೂಪಾಯಿ ಬಿಲ್ ಬಾಕಿ ಇದೆ. ಮಿನಿ ವಿಧಾನಸೌಧದಲ್ಲಿ ಒಟ್ಟು 6 ಮೀಟರ್​ಗಳಿಂದ 3 ಲಕ್ಷದ 90 ಸಾವಿರ ರೂಪಾಯಿ ಬಿಲ್ ಬಾಕಿ ಉಳಿದಿದೆ. PWD ಕಚೇರಿಯಲ್ಲಿ 56 ಸಾವಿರ ರೂ, ಸಣ್ಣ ನೀರಾವರಿ ಇಲಾಖೆ 18 ಸಾವಿರ ರೂ ಬಿಲ್ ಬಾಕಿ ಇದೆ ಎನ್ನಲಾಗಿದೆ. ವಿದ್ಯುತ್​ ಸಂಪರ್ಕ ಕಡಿತದಿಂದಾಗಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ನೊಂದಣಿ ಕೆಲಸವೂ ಸ್ಥಗಿತವಾಗಿದ್ದು, ತಾಲ್ಲೂಕು ಕಚೇರಿಯಲ್ಲಿ ಕೆಲಸ ಸ್ಥಗಿತದಿಂದ ಜನರು ಪರದಾಡಬೇಕಾಗಿದೆ. ಇತ್ತ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜನರೇಟರ್ ಬಳಸಿ, ಮಿತವಾಗಿ ವಿದ್ಯುತ್ ಬಳಕೆ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಈ ಹಿಂದೆ ಮೈಸೂರು ಬೆಟ್ಟದ ಬಳಿ ಸುಮಾರು ದರೋಡೆ ಮಾಡಿದ್ವಿ, ಯಾರೂ ದೂರು ಕೊಡಲ್ಲ ಎಂಬ ಧೈರ್ಯವಿತ್ತು: ಆರೋಪಿಗಳು 

ಕೋಳಿ ಫಾರಂ​ಗೆ ಅಕ್ರಮ ವಿದ್ಯುತ್ ಸಂಪರ್ಕ; 1 ವರ್ಷ ಜೈಲು, 2.94 ಲಕ್ಷ ರೂಪಾಯಿ ದಂಡ ವಿಧಿಸಿದ ಕೋರ್ಟ್

(CESC Cuts Power supply to Mysuru Govt offices Including DC Office for not paying Bills)

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು