AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆ ಮುಂದೂಡಲು ಸಾಧ್ಯವಿಲ್ಲ: ಸಿದ್ದರಾಮಯ್ಯ

ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ರಚನೆ ಸಂಬಂಧ ಸರ್ಕಾರ ಮತ್ತು ರಾಜಮನೆತನದ ನಡುವೆ ಗುದ್ದಾಟ ನಡೆದಿದೆ. ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆಯನ್ನು ಕಾನೂನಾತ್ಮಕವಾಗಿ ಮಾಡುತ್ತಿದ್ದೇನೆ. ಯಾರದ್ದೋ ಹೇಳಿಕೆ ಆಧರಿಸಿ ಸಭೆ ಮಾಡಲು ಆಗುವುದಿಲ್ಲ. ಸಭೆ ಮುಂದೂಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆ ಮುಂದೂಡಲು ಸಾಧ್ಯವಿಲ್ಲ: ಸಿದ್ದರಾಮಯ್ಯ
ಸಿದ್ದರಾಮಯ್ಯ
ರಾಮ್​, ಮೈಸೂರು
| Updated By: ವಿವೇಕ ಬಿರಾದಾರ|

Updated on:Sep 03, 2024 | 11:14 AM

Share

ಮೈಸೂರು, ಸೆಪ್ಟೆಂಬರ್​ 03: ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ (Chamundeshwari Development Authority) ಸಭೆಯನ್ನು ಕಾನೂನಾತ್ಮಕವಾಗಿ ಮಾಡುತ್ತಿದ್ದೇನೆ. ಯಾರದ್ದೋ ಹೇಳಿಕೆ ಆಧರಿಸಿ ಸಭೆ ಮಾಡಲು ಆಗುವುದಿಲ್ಲ. ಸಭೆ ಮುಂದೂಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದರು. ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಯದುವೀರ್ ಹೇಳಿಕೆ ಮುಖ್ಯವೋ ಕಾನೂನು ಮುಖ್ಯವೋ? ನಾನು ಕಾನೂನು ಪ್ರಕಾರವೇ ಇವತ್ತಿನ ಸಭೆ ಮಾಡುತ್ತಿದ್ದೇನೆ. ಕೋರ್ಟ್​​​ನಲ್ಲಿ ತಡೆಯಾಜ್ಞೆ ತೆರವು ಆಗಿದ್ದಕ್ಕೆ ಸಭೆ ಮಾಡುತ್ತಿದ್ದೇನೆ ಎಂದು ತಿಳಿಸಿದರು.

ಮುಡಾ ಮಾಜಿ ಆಯುಕ್ತ ದಿನೇಶ್ ಅಮಾನತು ವಿಚಾರ ಗೊತ್ತಿಲ್ಲ. 2009ರ ಹಿಂದಿನ ಬಡಾವಣೆಗೆ 50:50 ಬದಲಿ ನಿವೇಶನ ಅನ್ವಯ ಆಗುವುದಿಲ್ಲ. ಈ ಅಂಶ ಉಲ್ಲೇಖದ ಬಗ್ಗೆ ನನಗೆ ಮಾಹಿತಿ ಇಲ್ಲ. ಮುಡಾ ಆದೇಶದ ಅಂಶಗಳು ಏನು ಎಂಬುದು ಸಹ ಗೊತ್ತಿಲ್ಲ. ಗೊತ್ತಿಲ್ಲದನ್ನು ನಾನು ಹೇಗೆ ವಿವರವಾಗಿ ಹೇಳಲಿ. ಆದೇಶದಲ್ಲಿ ಏನಿದೆ ಎಂದು ನೋಡಿಕೊಂಡು ಮಾತನಾಡುತ್ತೇನೆ ಎಂದು ಹೇಳಿದರು.

ಇದನ್ನೂ ಓದಿ: ಸರ್ಕಾರ vs ರಾಜಮನೆತನ: ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆಗೆ ರಾಜಮಾತೆ ವಿರೋಧ

ಸರ್ಕಾರಕ್ಕೆ ಕೊರೊನಾ​​ ಹಗರಣದ ಮಧ್ಯಂತರ ವರದಿ ಸಲ್ಲಿಕೆ ವಿಚಾರವಾಗಿ ಮಾತನಾಡಿದ ಅವರು, ಮುಂದಿನ ಸಚಿವ ಸಂಪುಟದ ಮುಂದೆ ವರದಿ ಮಂಡಿಸುತ್ತೇನೆ. ಸಂಪುಟದಲ್ಲಿ ಚರ್ಚೆ ಮಾಡಿ ಮುಂದಿನ ತೀರ್ಮಾನ ಹೇಳುತ್ತೇನೆ. ವರದಿಯಲ್ಲಿ ಏನಿದೆ ಎಂಬುದನ್ನು ನಾನು ನೋಡಿಲ್ಲ. ಎಷ್ಟು ಪ್ರಮಾಣದ ಭ್ರಷ್ಟಾಚಾರ ಆಗಿದೆ ಎಂಬುದು ಗಮನಕ್ಕೆ ಬಂದಿಲ್ಲ. ನನ್ನ ಗಮನಕ್ಕೆ ಬರದೆ ಸುಧಾಕರ್​​ಗೆ ಮಾಹಿತಿ ಕೊಟ್ಟವರು ಯಾರು? ಕುಂಬಳಕಾಯಿ‌ ಕಳ್ಳ ಅಂದ್ರೆ ಏಕೆ ಹೆಗಲು ಮುಟ್ಟಿಕೊಳ್ಳಬೇಕು? ಕೆ.ಸುಧಾಕರ್​​ಗೆ ಸುಳ್ಳು ವರದಿ ಎಂದು ಹೇಗೆ ಗೊತ್ತಾಗುತ್ತದೆ?. ಸುಧಾಕರ್ ತಪ್ಪು ಮಾಡಿರುವುದು ಮಾನಸಿಕವಾಗಿ ಗೊತ್ತಿದೆ. ಹೀಗಾಗಿ ಅವನು ಆ ರೀತಿ ಮಾತನಾಡುತ್ತಿದ್ದಾನೆ ಎಂದರು.

ಅಂಗನವಾಡಿ ಕಾರ್ಯಕರ್ತೆಯರಿಗೆ ವೇತನ ಆಗದ ವಿಚಾರವಾಗಿ ಮಾತನಾಡಿದ ಅವರು, ಈ ಬಗ್ಗೆ ನನ್ನ ಗಮನಕ್ಕೆ ಬಂದಿಲ್ಲ, ಮಾಹಿತಿ ಪಡೆಯುತ್ತೇನೆ. ಆದರೆ, ನಾವು ಯಾವುದೇ ವೇತನ ಬಾಕಿ ಉಳಿಸಿಕೊಂಡಿಲ್ಲ. ಮಾಹಿತಿ ಪಡೆದು ಚರ್ಚೆ ಮಾಡ್ತೇನೆ ಎಂದು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:01 am, Tue, 3 September 24

‘ಕೊತ್ತಲವಾಡಿ’ ಸಿನಿಮಾದಲ್ಲಿದೆ ಯಶ್ ಬಳಸಿದ ವಿಶೇಷ ಬೈಕ್
‘ಕೊತ್ತಲವಾಡಿ’ ಸಿನಿಮಾದಲ್ಲಿದೆ ಯಶ್ ಬಳಸಿದ ವಿಶೇಷ ಬೈಕ್
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ
ನಮ್ಮ ನಿರ್ಮಾಣದ ಎರಡು ಸಿನಿಮಾಗಳ ಶೂಟಿಂಗ್ ನಡೆಯುತ್ತಿದೆ: ಹೆಬ್ಬಾಳ್ಕರ್
ನಮ್ಮ ನಿರ್ಮಾಣದ ಎರಡು ಸಿನಿಮಾಗಳ ಶೂಟಿಂಗ್ ನಡೆಯುತ್ತಿದೆ: ಹೆಬ್ಬಾಳ್ಕರ್
ಮೈಸೂರು ಮಹಾರಾಜರಿಗಿಂತಲೂ ಸಿದ್ದರಾಮಯ್ಯ ಹೆಚ್ಚು:ತಂದೆಗೆ ಮಗ ಬಹುಪರಾಕ್
ಮೈಸೂರು ಮಹಾರಾಜರಿಗಿಂತಲೂ ಸಿದ್ದರಾಮಯ್ಯ ಹೆಚ್ಚು:ತಂದೆಗೆ ಮಗ ಬಹುಪರಾಕ್