AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮುಂಡಿ ಬೆಟ್ಟದಲ್ಲಿ ರೋಪ್ವೇ ಅಗತ್ಯವಿಲ್ಲ; ಸರ್ಕಾರಕ್ಕೆ ಗಣ್ಯರ ಮೂಲಕ ಪತ್ರ ಬರೆಸಲು ಮುಂದಾದ ಚಾಮುಂಡಿಬೆಟ್ಟ ಉಳಿಸಿ ಸಮಿತಿ

Chamundi Betta Ropeway: ಚಾಮುಂಡಿ ಬೆಟ್ಟದಲ್ಲಿ ಅಭಿವೃದ್ಧಿ ಹೆಸರಿನಲ್ಲಿ ಪರಿಸರ ನಾಶ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಸರ್ಕಾರಕ್ಕೆ ಗಣ್ಯರ ಮೂಲಕ ಪತ್ರ ಬರೆಸಲು ಚಾಮುಂಡಿಬೆಟ್ಟ ಉಳಿಸಿ ಸಮಿತಿ ಮುಂದಾಗಿದೆ.

ಚಾಮುಂಡಿ ಬೆಟ್ಟದಲ್ಲಿ ರೋಪ್ವೇ ಅಗತ್ಯವಿಲ್ಲ; ಸರ್ಕಾರಕ್ಕೆ ಗಣ್ಯರ ಮೂಲಕ ಪತ್ರ ಬರೆಸಲು ಮುಂದಾದ ಚಾಮುಂಡಿಬೆಟ್ಟ ಉಳಿಸಿ ಸಮಿತಿ
ಚಾಮುಂಡಿ ಬೆಟ್ಟದ ವಿಹಂಗಮ ನೋಟ (ಸಂಗ್ರಹ ಚಿತ್ರ)
TV9 Web
| Edited By: |

Updated on: Apr 10, 2022 | 7:52 AM

Share

ಮೈಸೂರು: ಜಿಲ್ಲೆಯ ಚಾಮುಂಡಿ ಬೆಟ್ಟಕ್ಕೆ ರೋಪ್ವೇಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಚಾಮುಂಡಿ ಬೆಟ್ಟದಲ್ಲಿ ಅಭಿವೃದ್ಧಿ ಹೆಸರಿನಲ್ಲಿ ಪರಿಸರ ನಾಶ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಸರ್ಕಾರಕ್ಕೆ ಗಣ್ಯರ ಮೂಲಕ ಪತ್ರ ಬರೆಸಲು ಚಾಮುಂಡಿಬೆಟ್ಟ ಉಳಿಸಿ ಸಮಿತಿ ಮುಂದಾಗಿದೆ. ರೋಪ್ವೇಗೆ ದಿನದಿಂದ ದಿನಕ್ಕೆ ವಿರೋಧ ಹೆಚ್ಚಾಗುತ್ತಿದೆ. ಈ ಹಿಂದೆ ಕೂಡ ರೋಪ್‌ವೇ ಬೇಡ ಎಂದು ರಾಜವಂಶಸ್ಥೆ ಪ್ರಮೋದಾದೇವಿ ಕೂಡ ವಿರೋಧ ವ್ಯಕ್ತಪಡಿಸಿದ್ದರು.

ಸರ್ಕಾರ ಚಾಮುಂಡಿ ಬೆಟ್ಟದಲ್ಲಿ ರೋಪ್ ವೇ ನಿರ್ಮಾಣ ಮಾಡಲು ಮುಂದಾಗಿದೆ. ಆದ್ರೆ ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ಚಾಮುಂಡಿ ಬೆಟ್ಟದಲ್ಲಿ ರೋಪ್ ವೇ ನಿರ್ಮಾಣದ ಅವಶ್ಯಕತೆ ಇಲ್ಲ. ನಗರದಿಂದ ಬೆಟ್ಟಕ್ಕೆ ಹೋಗಲು ಕೇವಲ 20 ನಿಮಿಷ ಸಾಕು. ಪರಿಸರ ನಾಶ ಮಾಡಿ ರೋಪ್ ವೇ ಮಾಡುವ ಅಗತ್ಯವಿಲ್ಲ. ಚಾಮುಂಡಿ ಬೆಟ್ಟ ಧಾರ್ಮಿಕ ಕ್ಷೇತ್ರವಾಗಿ ಉಳಿಯಬೇಕು. ಪ್ರವಾಸೋದ್ಯಮ ದೃಷ್ಟಿಯಿಂದ ಅಭಿವೃದ್ಧಿ ಮಾಡಿದ್ರೆ ನಾಶವಾಗುತ್ತೆ. ಈಗಾಗಲೇ ಚಾಮುಂಡಿ ಬೆಟ್ಟದ ಪರಿಸರಕ್ಕೆ ಡ್ಯಾಮೇಜ್ ಆಗಿದೆ. ಈ ಹಿಂದೆ ಬೆರಳೆಣಿಕೆಯಷ್ಟಿದ್ದ ಮನೆ ಇಂದು ಗ್ರಾಮವಾಗಿದೆ. ಬೆಟ್ಟದ ಮೇಲೆಯೇ ನಗರ ಪ್ರದೇಶ ನಿರ್ಮಾಣವಾಗುತ್ತಿದೆ. ಚಾಮುಂಡಿ ಬೆಟ್ಟದ ಪರಿಸರ ಸಂರಕ್ಷಣೆಗೆ ಒತ್ತು ನೀಡಬೇಕು. ಆಲ್ಲಿ ಕಮರ್ಷಿಯಲ್ ಮಳಿಗೆಗಳ ಅವಶ್ಯಕತೆಯೂ ಇಲ್ಲ. ಬೆಟ್ಟದಲ್ಲಿ ಮೂಲಭೂತ ಸೌಕರ್ಯಗಳ ನೀಡಿದರೆ ಸಾಕು ಎಂದು ಮೈಸೂರಿನಲ್ಲಿ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಹೇಳಿಕೆ ನೀಡಿದ್ದರು.

ಈ ಮೊದಲು ಕೂಡ ಮೈಸೂರು ಚಾಮುಂಡಿ ಬೆಟ್ಟದಲ್ಲಿ ರೋಪ್ ವೇ ನಿರ್ಮಾಣ ಯೋಜನೆಗೆ ಹಲವು ಸಂಘಟನೆಗಳಿಂದ ವಿರೋಧ ವ್ಯಕ್ತವಾಗಿತ್ತು. ಚಾಮುಂಡಿ ಬೆಟ್ಟದಲ್ಲಿ ರೋಪ್ ವೇ ನಿರ್ಮಾಣ ವಿಚಾರಕ್ಕೆ ವಿರೋಧ ವ್ಯಕ್ತವಾಗಿತ್ತು. ರೋಪ್ ವೇ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿ ಮೈಸೂರು ಕನ್ನಡ ವೇದಿಕೆಯಿಂದ ಪ್ರತಿಭಟನೆ ನಡೆಸಲಾಗಿತ್ತು. ಚಾಮುಂಡಿಬೆಟ್ಟದ ತಪ್ಪಲಿನ ಬಳಿ ಪ್ರತಿಭಟನೆ ನಡೆಸಲಾಗಿತ್ತು. ಸರ್ಕಾರದ ನಡೆ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು.

ಚಾಮುಂಡಿ ಬೆಟ್ಟಕ್ಕೆ ಸಾಕಷ್ಟು ಮಾರ್ಗಗಳು ಇವೆ. ಸರ್ಕಾರ ಹಣ ಮಾಡುವ ಉದ್ದೇಶದಿಂದ ಈ ಯೋಜನೆ ಜಾರಿಗೆ ತರುತ್ತಿದೆ ಎಂದು ಆರೋಪ ಮಾಡಲಾಗಿತ್ತು. ಪ್ರವಾಸೋದ್ಯಮ ಅಭಿವೃದ್ಧಿ ನೆಪದಲ್ಲಿ ಅರಣ್ಯ ಸಂಪತ್ತು ಹಾಳು ಮಾಡಲು ಸರ್ಕಾರ ಹೊರಟಿದೆ ಎಂದು ಆಕ್ರೋಶ ಕೇಳಿಬಂದಿತ್ತು. ರೋಪ್ ವೇ ನಿರ್ಮಾಣದಿಂದ ಸಾವಿರಾರು ಮರ ಕಾಡು ನಾಶ ಆಗುತ್ತದೆ. ಚಾಮುಂಡಿ ಬೆಟ್ಟ ಹಾಳು ಮಾಡುವುದು ಬೇಡ. ಯಾವುದೇ ಕಾರಣಕ್ಕೂ ಸರ್ಕಾರ ಈ ಯೋಜನೆ ಜಾರಿ ಮಾಡಬಾರದು ಎಂದು ಪ್ರತಿಭಟನಾನಿರತರು ಒತ್ತಾಯ ಮಾಡಿದ್ದರು.

ಇದನ್ನೂ ಓದಿ: ಗೋಕರ್ಣದಲ್ಲಿ ನಡೆಯಿತು ಆಶ್ಚರ್ಯಕರ ಘಟನೆ ? ಇಲ್ಲಿ ಬೆಳೆದು ನಿಂತ ರುದ್ರಾಕ್ಷಿ ಮರ

Ram Navami 2022: ರಾಮನ ಕಾಣಲು ರಾಮನೇ‌ ಕೊಟ್ಟ ಉಪಾಯ

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?