AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮುಂಡಿ ಬೆಟ್ಟದಲ್ಲಿ ರೋಪ್​ವೇ ಯೋಜನೆ: ಸರ್ಕಾರದ ನಿರ್ಧಾರ ಸರಿ ಇದೆ ಎಂದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್

ಆಷಾಢ ಮಾಸದ ಎರಡನೇ ಶುಕ್ರವಾರದ ಪ್ರಯಕ್ತ ಚಾಮುಂಡಿಬೆಟ್ಟಕ್ಕೆ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ರಿಂದ ವಿಶೇಷ ಪೂಜೆ ಸಲ್ಲಿಸಿ, ನಾಡದೇವತೆ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದರು.

ಚಾಮುಂಡಿ ಬೆಟ್ಟದಲ್ಲಿ ರೋಪ್​ವೇ ಯೋಜನೆ: ಸರ್ಕಾರದ ನಿರ್ಧಾರ ಸರಿ ಇದೆ ಎಂದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್
ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್
TV9 Web
| Edited By: |

Updated on: Jul 08, 2022 | 12:37 PM

Share

ಮೈಸೂರು: ಚಾಮುಂಡಿ ಬೆಟ್ಟ (Chamundi Hill) ದಲ್ಲಿ ರೋಪ್​ವೇ (Rope Way) ಯೋಜನೆ ಜಿಲ್ಲಾಡಳಿತ ಕೈಬಿಟ್ಟ ವಿಚಾರವಾಗಿ ಸರ್ಕಾರದ ನಿರ್ಧಾರ ಸರಿ ಇದೆ. ಪರಿಸರ ಸಂರಕ್ಷಣೆಯ ಜೊತೆಗೆ ಚಾಮುಂಡಿ ಬೆಟ್ಟದ ಅಭಿವೃದ್ಧಿಯಾಗಬೇಕು. ಇದು ಪ್ರವಾಸಿ ತಾಣವಲ್ಲ ಧಾರ್ಮಿಕ ಸ್ಥಳ. ಇದನ್ನ ಹಾಗೇಯೇ ಸರ್ಕಾರ ಕಾಪಾಡಿ ಕೊಳ್ಳಬೇಕು. ಈ ನಿಟ್ಟಿನಲ್ಲಿ ಸರ್ಕಾರದ ನಿರ್ಣಯಗಳು ಸರಿ ಇದೆ ಎಂದು ಚಾಮುಂಡಿ ಬೆಟ್ಟದಲ್ಲಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿಕೆ ನೀಡಿದರು. ಚಾಮುಂಡಿ ಬೆಟ್ಟದಲ್ಲಿ ಎರಡನೇ ಆಷಾಢ ಮಾಸದ ಸಂಭ್ರಮ ನಡೆಯುತ್ತಿದ್ದು, ಮುಂಜಾನೆಯಿಂದಲೇ ನಾಡಿನ ಅಧಿದೇವತೆಗೆ ವಿಶೇಷ ಪೂಜೆ ಸಲ್ಲಿಸಲಾಗಿದೆ. ನಾಗಲಕ್ಷ್ಮಿ ಅಲಂಕಾರದಲ್ಲಿ ತಾಯಿ ಚಾಮುಂಡೇಶ್ವರಿ ಕಂಗೊಳಿಸುತ್ತಿದ್ದು, ತಾಯಿಗೆ ರುದ್ರಾಭಿಷೇಕ, ಪಂಚಾಮೃತ ಅಭಿಷೇಕ, ಕುಂಕುಮಾರ್ಚನೆ ಮಾಡಲಾಗಿದೆ. ಇಂದು ಬೆಳಗ್ಗೆಯಿಂದ ರಾತ್ರಿ 9.30ರವರೆಗೆ ಚಾಮುಂಡಿ ತಾಯಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಎಂದಿನಂತೆ ಖಾಸಗಿ ವಾಹನಗಳಿಗೆ ಬೆಟ್ಟಕ್ಕೆ ಪ್ರವೇಶ ನಿಷೇಧಿಸಲಾಗಿದ್ದು, ಮುಂಜಾಗೃತ ಕ್ರಮವಾಗಿ ಬೆಟ್ಟದಲ್ಲಿ ಬಿಗಿ ಪೊಲೀಸ್ ಬಂದೂಬಸ್ತ ಒದಗಿಸಲಾಗಿದೆ.

ಇದನ್ನೂ ಓದಿ: Chamundi Hills Ropeway: ಚಾಮುಂಡಿಬೆಟ್ಟಕ್ಕೆ ರೋಪ್​ವೇ ಬೇಕಿತ್ತು, ಯೋಜನೆ ಕೈಬಿಟ್ಟಿದ್ದಕ್ಕೆ ಉದ್ಯಮಿಗಳು ಗರಂ

ಆಷಾಢ ಮಾಸದ ಎರಡನೇ ಶುಕ್ರವಾರದ ಪ್ರಯಕ್ತ ಚಾಮುಂಡಿಬೆಟ್ಟಕ್ಕೆ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ರಿಂದ ವಿಶೇಷ ಪೂಜೆ ಸಲ್ಲಿಸಿ, ನಾಡದೇವತೆ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದರು. ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜು, ಸಚಿವರಿಗೆ ಪಾಲಿಕೆ ಆಯುಕ್ತ ಲಕ್ಷ್ಮೀಕಾಂತರೆಡ್ಡಿ, ಮೇಯರ್ ಸುನಂದಾ ಪಾಲನೇತ್ರ ಸಾಥ್ ನೀಡಿದರು.

ಚಾಮುಂಡಿಬೆಟ್ಟಕ್ಕೆ ರೋಪ್​ವೇ ಬೇಕಿತ್ತು, ಯೋಜನೆ ಕೈಬಿಟ್ಟಿದ್ದಕ್ಕೆ ಉದ್ಯಮಿಗಳು ಗರಂ

ಚಾಮುಂಡಿ ಬೆಟ್ಟಕ್ಕೆ  ರೋಪ್​​​ವೇ  ನಿರ್ಮಿಸುವ ಪ್ರಸ್ತಾವಕ್ಕೆ ಜನರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಈ ವಿಚಾರವನ್ನೇ ಕೈಬಿಟ್ಟಿತ್ತು. ಆದರೆ ಈಗ ಈ ಯೋಜನೆ ಕೈ ಬಿಟ್ಟಿದ್ದಕ್ಕೆ ಪ್ರವಾಸೋದ್ಯಮಿಗಳ ತೀವ್ರ ವಿರೋಧ ವ್ಯಕ್ತವಾಗಿದೆ. ರೋಪ್​ವೇ ನಿರ್ಮಾಣದಿಂದಾಗಿ ಪರಿಸರ ನಾಶವಾಗುವುದಿಲ್ಲ. ಆದರೂ ರಾಜ್ಯಸರ್ಕಾರ ಹಲವರ ಒತ್ತಡಕ್ಕೆ ಮಣಿದು ಕೈಬಿಟ್ಟಿದ್ದು, ಪ್ರವಾಸೋದ್ಯಮಿಗಳಿಗೆ ಬೇಸರ ತರಿಸಿದೆ. ರೋಪ್​ವೇದಿಂದ ಪ್ರವಾಸೋದ್ಯಮ ಅಭಿವೃದ್ಧಿಯಾಗುತ್ತಿತ್ತು. ಬೆಟ್ಟದ ಮೇಲೆ ವಾಹನ ಸಂಚಾರ, ಮಾಲಿನ್ಯ ಕಡಿಮೆಯಾಗುತಿತ್ತು. ತಜ್ಞರ ಅಭಿಪ್ರಾಯ ಪಡೆದು ನಿರ್ಧಾರ ಮರುಪರಿಶೀಲಿಸಲು ರಾಜ್ಯ ಸರ್ಕಾರಕ್ಕೆ ಪ್ರವಾಸೋದ್ಯಮಿಗಳು ಪತ್ರವನ್ನು ಬರೆಯಲಾಗಿದೆ.

ಇದನ್ನೂ ಓದಿ: Chamundi Hills Ropeway: ಚಾಮುಂಡಿ ಬೆಟ್ಟಕ್ಕೆ ರೋಪ್​ವೇ ಪ್ರಸ್ತಾವ ಕೈಬಿಟ್ಟ ಮೈಸೂರು ಜಿಲ್ಲಾಡಳಿತ

ಈ ಸಂಬಂಧ ನಡೆದ ಸಭೆಯ ಬಳಿಕ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್​.ಟಿ.ಸೋಮಶೇಖರ್, ಮೈಸೂರಿನ ಚಾಮುಂಡಿ ಬೆಟ್ಟ ಧಾರ್ಮಿಕ ಸ್ಥಳ ಆಗಬೇಕು. ಪ್ರವಾಸಿ ಸ್ಥಳ ಆಗುವುದಕ್ಕಿಂತ ಅದು ಬಹಳ ಮುಖ್ಯವಾಗುತ್ತದೆ ಎಂದು ಹೇಳಿದ್ದಾರೆ. ಚಾಮುಂಡಿ ಬೆಟ್ಟಕ್ಕೆ ಪ್ರವಾಸಿಗರು, ಧಾರ್ಮಿಕ ಭಾವನೆಯಿಂದ ಬರುತ್ತಾರೆ. ಜನಾಭಿಪ್ರಾಯಕ್ಕೆ ಮನ್ನಣೆ ನೀಡಿ ರೋಪ್ ವೇ ಕೈ ಬಿಟ್ಟಿದ್ದೇವೆ. ಬೆಟ್ಟಕ್ಕೆ ಹೋಗಲು ರಸ್ತೆ ಮಾರ್ಗ, ಮೆಟ್ಟಿಲುಗಳೇ ಸಾಕು. ರೋಪ್​ವೇ ಬೇಡ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಹೀಗಾಗಿ ರೋಪ್​ವೇ ಯೋಜನೆ ಕೈಬಿಟ್ಟಿದ್ದೇವೆ ಎಂದು ತಿಳಿಸಿದ್ದಾರೆ.

Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!