AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭ್ರೂಣಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣ: ಆರೋಪ ಕೇಳಿಬರುತ್ತಿದ್ದಂತೆಯೇ ಮಾತಾ ಆಸ್ಪತ್ರೆಯ ಕರೆಂಟ್ ಕಟ್

ಮೈಸೂರು ಜಿಲ್ಲೆಯಲ್ಲಿ ಭ್ರೂಣಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣವನ್ನು ಎದುರಿಸುತ್ತಿರುವ ಮೈಸೂರಿನ ಮಾತಾ ಆಸ್ಪತ್ರೆಯ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿದೆ. ಭ್ರೂಣಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣ ಕೇಳಿಬಂದ ಹಿನ್ನೆಲೆಯಲ್ಲಿ ಮಾತಾ ಆಸ್ಪತ್ರೆ ಪರಿಶೀಲನೆ ಮಾಡಲಾಗಿದ್ದು, ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿದೆ. ಹೀಗಾಗಿ ಚೆಸ್ಕಾಂ ಕರೆಂಟ್ ಕಟ್ ಮಾಡಿದೆ.

ಭ್ರೂಣಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣ: ಆರೋಪ ಕೇಳಿಬರುತ್ತಿದ್ದಂತೆಯೇ ಮಾತಾ ಆಸ್ಪತ್ರೆಯ ಕರೆಂಟ್ ಕಟ್
ಮಾತಾ ಆಸ್ಪತ್ರೆ
ದಿಲೀಪ್​, ಚೌಡಹಳ್ಳಿ
| Edited By: |

Updated on: Nov 30, 2023 | 11:32 AM

Share

ಮೈಸೂರು, (ನವೆಂಬರ್ 30): ಭ್ರೂಣಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ಮಾತಾ ಆಸ್ಪತ್ರೆಯ (matha hospital )ವಿದ್ಯುತ್​ ಸಂಪರ್ಕವನ್ನು ಕಡಿತಗೊಳಿಸಿದ್ದಾರೆ. ಕಳೆದ 4 ತಿಂಗಳಿಂದ ಮಾತಾ ಆಸ್ಪತ್ರೆ ವಿದ್ಯುತ್ ಬಿಲ್ ಪಾವತಿಸಿರಲಿಲ್ಲ. ಬರೋಬ್ಬರಿ 20 ಸಾವಿರ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿದೆ. ಹೀಗಾಗಿ ಚೆಸ್ಕಾಂ(chescom) ಸಿಬ್ಬಂದಿ ಮಾತಾ ಆಸ್ಪತ್ರೆ ಕರೆಂಟ್​ ಕಟ್ ಮಾಡಿದೆ.

ಮಂಡ್ಯದ ಆಲೆಮನೆಯಲ್ಲಿ ಗರ್ಭದ ಸ್ಕ್ಯಾನಿಂಗ್‌ ಮಾಡಿ ಲಿಂಗಪತ್ತೆ ಮಾಡುತ್ತಿದ್ದ ಕಿರಾತಕರು, ಮೈಸೂರಿನ ಮಾತಾ ಆಸ್ಪತ್ರೆಯಲ್ಲಿ ಭ್ರೂಣಹತ್ಯೆ ಮಾಡುತ್ತಿದ್ದರು. ಇದು ದೊಡ್ಡ ಮಟ್ಟದಲ್ಲಿ ದಂಧೆಯಾಗಿದೆ. ಇದೀಗ ಆಸ್ಪತ್ರೆ ವಿರುದ್ಧ ದೂರುಗಳು ಕೇಳಿಬರುತ್ತಿದ್ದಂತೆಯೇ ಚೆಸ್ಕಾಂ ವಿದ್ಯುತ್ ಸಂಪರ್ಕ ಕಡಿತಗೊಳಿಸಿದೆ.

ಇದನ್ನೂ ಓದಿ: ಹೆಣ್ಣು ಭ್ರೂಣ ಹತ್ಯೆ ಪ್ರಕರಣ: ರಾತ್ರೋ ರಾತ್ರಿ ಮಾತಾ ಆಸ್ಪತ್ರೆ ಗೋಡೆ ಮೇಲೆ 5 ತಿಂಗಳ ಹಳೆ ನೋಟಿಸ್; ಅನುಮಾನಕ್ಕೆ ಕಾರಣವಾದ ಅಧಿಕಾರಿಗಳ ನಡೆ

ಮಂಡ್ಯದ ಆಲೆಮನೆಯಲ್ಲಿ ಗರ್ಭದ ಸ್ಕ್ಯಾನಿಂಗ್‌ ಮಾಡಿ ಲಿಂಗಪತ್ತೆ ಮಾಡ್ತಿದ್ದ ಕಿರಾತಕರು, ಮೈಸೂರಿನ ಮಾತಾ ಆಸ್ಪತ್ರೆಯಲ್ಲಿ ಭ್ರೂಣಹತ್ಯೆ ಮಾಡ್ತಿದ್ರು. ಮೂರು ತಿಂಗಳ ಹಿಂದೆಯೇ ಈ ಆಸ್ಪತ್ರೆ ಕ್ಲೋಸ್ ಆಗಿದೆ. ಆದ್ರೆ ಆರೋಗ್ಯ ಇಲಾಖೆ ಅಧಿಕಾರಿಗಳು ಮಾತ್ರ ಮಂಗಳವಾರ ರಾತ್ರಿ ಆಸ್ಪತ್ರೆ ಗೋಡೆಗೆ ನೋಟಿಸ್ ಅಂಟಿಸಿದ್ದಾರೆ. ನೋಟಿಸ್‌ನಲ್ಲಿ ಐದು ತಿಂಗಳ ಹಿಂದಿನ ದಿನಾಂಕ ನಮೂದು ಮಾಡಲಾಗಿದ್ದು, ಮೈಸೂರು ತಾಲೂಕು ಆರೋಗ್ಯಧಿಕಾರಿ ಸಹಿ ಕೂಡಾ ಇದೆ. ಇಷ್ಟಾದ್ರೂ ನೋಟಿಸ್ ಯಾರು ಕೊಟ್ಟಿದ್ದಾರೆ ಗೊತ್ತಿಲ್ಲ ಎಂದು ಡಿಹೆಚ್‌ಒ ಹೇಳುತ್ತಿದ್ದಾರೆ. ಇದನ್ನೆಲ್ಲಾ ನೋಡುತ್ತಿದ್ದರೆ ಆರೋಗ್ಯ ಅಧಿಕಾರಿಗಳೇ ಈ ಕೇಸ್‌ನಲ್ಲಿ ಭಾಗಿಯಾಗಿದ್ದಾರಾ ಎನ್ನುವ ಅನುಮಾನಗಳು ವ್ಯಕ್ತವಾಗಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ