AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭ್ರೂಣಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣ: ಆರೋಪ ಕೇಳಿಬರುತ್ತಿದ್ದಂತೆಯೇ ಮಾತಾ ಆಸ್ಪತ್ರೆಯ ಕರೆಂಟ್ ಕಟ್

ಮೈಸೂರು ಜಿಲ್ಲೆಯಲ್ಲಿ ಭ್ರೂಣಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣವನ್ನು ಎದುರಿಸುತ್ತಿರುವ ಮೈಸೂರಿನ ಮಾತಾ ಆಸ್ಪತ್ರೆಯ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿದೆ. ಭ್ರೂಣಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣ ಕೇಳಿಬಂದ ಹಿನ್ನೆಲೆಯಲ್ಲಿ ಮಾತಾ ಆಸ್ಪತ್ರೆ ಪರಿಶೀಲನೆ ಮಾಡಲಾಗಿದ್ದು, ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿದೆ. ಹೀಗಾಗಿ ಚೆಸ್ಕಾಂ ಕರೆಂಟ್ ಕಟ್ ಮಾಡಿದೆ.

ಭ್ರೂಣಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣ: ಆರೋಪ ಕೇಳಿಬರುತ್ತಿದ್ದಂತೆಯೇ ಮಾತಾ ಆಸ್ಪತ್ರೆಯ ಕರೆಂಟ್ ಕಟ್
ಮಾತಾ ಆಸ್ಪತ್ರೆ
ದಿಲೀಪ್​, ಚೌಡಹಳ್ಳಿ
| Edited By: |

Updated on: Nov 30, 2023 | 11:32 AM

Share

ಮೈಸೂರು, (ನವೆಂಬರ್ 30): ಭ್ರೂಣಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ಮಾತಾ ಆಸ್ಪತ್ರೆಯ (matha hospital )ವಿದ್ಯುತ್​ ಸಂಪರ್ಕವನ್ನು ಕಡಿತಗೊಳಿಸಿದ್ದಾರೆ. ಕಳೆದ 4 ತಿಂಗಳಿಂದ ಮಾತಾ ಆಸ್ಪತ್ರೆ ವಿದ್ಯುತ್ ಬಿಲ್ ಪಾವತಿಸಿರಲಿಲ್ಲ. ಬರೋಬ್ಬರಿ 20 ಸಾವಿರ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿದೆ. ಹೀಗಾಗಿ ಚೆಸ್ಕಾಂ(chescom) ಸಿಬ್ಬಂದಿ ಮಾತಾ ಆಸ್ಪತ್ರೆ ಕರೆಂಟ್​ ಕಟ್ ಮಾಡಿದೆ.

ಮಂಡ್ಯದ ಆಲೆಮನೆಯಲ್ಲಿ ಗರ್ಭದ ಸ್ಕ್ಯಾನಿಂಗ್‌ ಮಾಡಿ ಲಿಂಗಪತ್ತೆ ಮಾಡುತ್ತಿದ್ದ ಕಿರಾತಕರು, ಮೈಸೂರಿನ ಮಾತಾ ಆಸ್ಪತ್ರೆಯಲ್ಲಿ ಭ್ರೂಣಹತ್ಯೆ ಮಾಡುತ್ತಿದ್ದರು. ಇದು ದೊಡ್ಡ ಮಟ್ಟದಲ್ಲಿ ದಂಧೆಯಾಗಿದೆ. ಇದೀಗ ಆಸ್ಪತ್ರೆ ವಿರುದ್ಧ ದೂರುಗಳು ಕೇಳಿಬರುತ್ತಿದ್ದಂತೆಯೇ ಚೆಸ್ಕಾಂ ವಿದ್ಯುತ್ ಸಂಪರ್ಕ ಕಡಿತಗೊಳಿಸಿದೆ.

ಇದನ್ನೂ ಓದಿ: ಹೆಣ್ಣು ಭ್ರೂಣ ಹತ್ಯೆ ಪ್ರಕರಣ: ರಾತ್ರೋ ರಾತ್ರಿ ಮಾತಾ ಆಸ್ಪತ್ರೆ ಗೋಡೆ ಮೇಲೆ 5 ತಿಂಗಳ ಹಳೆ ನೋಟಿಸ್; ಅನುಮಾನಕ್ಕೆ ಕಾರಣವಾದ ಅಧಿಕಾರಿಗಳ ನಡೆ

ಮಂಡ್ಯದ ಆಲೆಮನೆಯಲ್ಲಿ ಗರ್ಭದ ಸ್ಕ್ಯಾನಿಂಗ್‌ ಮಾಡಿ ಲಿಂಗಪತ್ತೆ ಮಾಡ್ತಿದ್ದ ಕಿರಾತಕರು, ಮೈಸೂರಿನ ಮಾತಾ ಆಸ್ಪತ್ರೆಯಲ್ಲಿ ಭ್ರೂಣಹತ್ಯೆ ಮಾಡ್ತಿದ್ರು. ಮೂರು ತಿಂಗಳ ಹಿಂದೆಯೇ ಈ ಆಸ್ಪತ್ರೆ ಕ್ಲೋಸ್ ಆಗಿದೆ. ಆದ್ರೆ ಆರೋಗ್ಯ ಇಲಾಖೆ ಅಧಿಕಾರಿಗಳು ಮಾತ್ರ ಮಂಗಳವಾರ ರಾತ್ರಿ ಆಸ್ಪತ್ರೆ ಗೋಡೆಗೆ ನೋಟಿಸ್ ಅಂಟಿಸಿದ್ದಾರೆ. ನೋಟಿಸ್‌ನಲ್ಲಿ ಐದು ತಿಂಗಳ ಹಿಂದಿನ ದಿನಾಂಕ ನಮೂದು ಮಾಡಲಾಗಿದ್ದು, ಮೈಸೂರು ತಾಲೂಕು ಆರೋಗ್ಯಧಿಕಾರಿ ಸಹಿ ಕೂಡಾ ಇದೆ. ಇಷ್ಟಾದ್ರೂ ನೋಟಿಸ್ ಯಾರು ಕೊಟ್ಟಿದ್ದಾರೆ ಗೊತ್ತಿಲ್ಲ ಎಂದು ಡಿಹೆಚ್‌ಒ ಹೇಳುತ್ತಿದ್ದಾರೆ. ಇದನ್ನೆಲ್ಲಾ ನೋಡುತ್ತಿದ್ದರೆ ಆರೋಗ್ಯ ಅಧಿಕಾರಿಗಳೇ ಈ ಕೇಸ್‌ನಲ್ಲಿ ಭಾಗಿಯಾಗಿದ್ದಾರಾ ಎನ್ನುವ ಅನುಮಾನಗಳು ವ್ಯಕ್ತವಾಗಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್