AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭ್ರೂಣಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣ: ಆರೋಪ ಕೇಳಿಬರುತ್ತಿದ್ದಂತೆಯೇ ಮಾತಾ ಆಸ್ಪತ್ರೆಯ ಕರೆಂಟ್ ಕಟ್

ಮೈಸೂರು ಜಿಲ್ಲೆಯಲ್ಲಿ ಭ್ರೂಣಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣವನ್ನು ಎದುರಿಸುತ್ತಿರುವ ಮೈಸೂರಿನ ಮಾತಾ ಆಸ್ಪತ್ರೆಯ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿದೆ. ಭ್ರೂಣಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣ ಕೇಳಿಬಂದ ಹಿನ್ನೆಲೆಯಲ್ಲಿ ಮಾತಾ ಆಸ್ಪತ್ರೆ ಪರಿಶೀಲನೆ ಮಾಡಲಾಗಿದ್ದು, ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿದೆ. ಹೀಗಾಗಿ ಚೆಸ್ಕಾಂ ಕರೆಂಟ್ ಕಟ್ ಮಾಡಿದೆ.

ಭ್ರೂಣಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣ: ಆರೋಪ ಕೇಳಿಬರುತ್ತಿದ್ದಂತೆಯೇ ಮಾತಾ ಆಸ್ಪತ್ರೆಯ ಕರೆಂಟ್ ಕಟ್
ಮಾತಾ ಆಸ್ಪತ್ರೆ
ದಿಲೀಪ್​, ಚೌಡಹಳ್ಳಿ
| Updated By: ರಮೇಶ್ ಬಿ. ಜವಳಗೇರಾ|

Updated on: Nov 30, 2023 | 11:32 AM

Share

ಮೈಸೂರು, (ನವೆಂಬರ್ 30): ಭ್ರೂಣಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ಮಾತಾ ಆಸ್ಪತ್ರೆಯ (matha hospital )ವಿದ್ಯುತ್​ ಸಂಪರ್ಕವನ್ನು ಕಡಿತಗೊಳಿಸಿದ್ದಾರೆ. ಕಳೆದ 4 ತಿಂಗಳಿಂದ ಮಾತಾ ಆಸ್ಪತ್ರೆ ವಿದ್ಯುತ್ ಬಿಲ್ ಪಾವತಿಸಿರಲಿಲ್ಲ. ಬರೋಬ್ಬರಿ 20 ಸಾವಿರ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿದೆ. ಹೀಗಾಗಿ ಚೆಸ್ಕಾಂ(chescom) ಸಿಬ್ಬಂದಿ ಮಾತಾ ಆಸ್ಪತ್ರೆ ಕರೆಂಟ್​ ಕಟ್ ಮಾಡಿದೆ.

ಮಂಡ್ಯದ ಆಲೆಮನೆಯಲ್ಲಿ ಗರ್ಭದ ಸ್ಕ್ಯಾನಿಂಗ್‌ ಮಾಡಿ ಲಿಂಗಪತ್ತೆ ಮಾಡುತ್ತಿದ್ದ ಕಿರಾತಕರು, ಮೈಸೂರಿನ ಮಾತಾ ಆಸ್ಪತ್ರೆಯಲ್ಲಿ ಭ್ರೂಣಹತ್ಯೆ ಮಾಡುತ್ತಿದ್ದರು. ಇದು ದೊಡ್ಡ ಮಟ್ಟದಲ್ಲಿ ದಂಧೆಯಾಗಿದೆ. ಇದೀಗ ಆಸ್ಪತ್ರೆ ವಿರುದ್ಧ ದೂರುಗಳು ಕೇಳಿಬರುತ್ತಿದ್ದಂತೆಯೇ ಚೆಸ್ಕಾಂ ವಿದ್ಯುತ್ ಸಂಪರ್ಕ ಕಡಿತಗೊಳಿಸಿದೆ.

ಇದನ್ನೂ ಓದಿ: ಹೆಣ್ಣು ಭ್ರೂಣ ಹತ್ಯೆ ಪ್ರಕರಣ: ರಾತ್ರೋ ರಾತ್ರಿ ಮಾತಾ ಆಸ್ಪತ್ರೆ ಗೋಡೆ ಮೇಲೆ 5 ತಿಂಗಳ ಹಳೆ ನೋಟಿಸ್; ಅನುಮಾನಕ್ಕೆ ಕಾರಣವಾದ ಅಧಿಕಾರಿಗಳ ನಡೆ

ಮಂಡ್ಯದ ಆಲೆಮನೆಯಲ್ಲಿ ಗರ್ಭದ ಸ್ಕ್ಯಾನಿಂಗ್‌ ಮಾಡಿ ಲಿಂಗಪತ್ತೆ ಮಾಡ್ತಿದ್ದ ಕಿರಾತಕರು, ಮೈಸೂರಿನ ಮಾತಾ ಆಸ್ಪತ್ರೆಯಲ್ಲಿ ಭ್ರೂಣಹತ್ಯೆ ಮಾಡ್ತಿದ್ರು. ಮೂರು ತಿಂಗಳ ಹಿಂದೆಯೇ ಈ ಆಸ್ಪತ್ರೆ ಕ್ಲೋಸ್ ಆಗಿದೆ. ಆದ್ರೆ ಆರೋಗ್ಯ ಇಲಾಖೆ ಅಧಿಕಾರಿಗಳು ಮಾತ್ರ ಮಂಗಳವಾರ ರಾತ್ರಿ ಆಸ್ಪತ್ರೆ ಗೋಡೆಗೆ ನೋಟಿಸ್ ಅಂಟಿಸಿದ್ದಾರೆ. ನೋಟಿಸ್‌ನಲ್ಲಿ ಐದು ತಿಂಗಳ ಹಿಂದಿನ ದಿನಾಂಕ ನಮೂದು ಮಾಡಲಾಗಿದ್ದು, ಮೈಸೂರು ತಾಲೂಕು ಆರೋಗ್ಯಧಿಕಾರಿ ಸಹಿ ಕೂಡಾ ಇದೆ. ಇಷ್ಟಾದ್ರೂ ನೋಟಿಸ್ ಯಾರು ಕೊಟ್ಟಿದ್ದಾರೆ ಗೊತ್ತಿಲ್ಲ ಎಂದು ಡಿಹೆಚ್‌ಒ ಹೇಳುತ್ತಿದ್ದಾರೆ. ಇದನ್ನೆಲ್ಲಾ ನೋಡುತ್ತಿದ್ದರೆ ಆರೋಗ್ಯ ಅಧಿಕಾರಿಗಳೇ ಈ ಕೇಸ್‌ನಲ್ಲಿ ಭಾಗಿಯಾಗಿದ್ದಾರಾ ಎನ್ನುವ ಅನುಮಾನಗಳು ವ್ಯಕ್ತವಾಗಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಯೋಜನೆಯ ಸುರಂಗ ನಿರ್ಮಾಣ ಪೂರ್ಣ
ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಯೋಜನೆಯ ಸುರಂಗ ನಿರ್ಮಾಣ ಪೂರ್ಣ
ಯಾರದ್ದೋ ಜಿದ್ದಿನ ಮೇಲೆ ಸಿನಿಮಾ ನಿರ್ಮಿಸುತ್ತಿದ್ದಾರಾ ಯಶ್ ತಾಯಿ?
ಯಾರದ್ದೋ ಜಿದ್ದಿನ ಮೇಲೆ ಸಿನಿಮಾ ನಿರ್ಮಿಸುತ್ತಿದ್ದಾರಾ ಯಶ್ ತಾಯಿ?
ದೇವೇಗೌಡರನ್ನು ಪಕ್ಷ ಯಾವತ್ತೂ ನಿರ್ಲಕ್ಷಿಸಿಲ್ಲ: ನಿಖಿಲ್ ಕುಮಾರಸ್ವಾಮಿ
ದೇವೇಗೌಡರನ್ನು ಪಕ್ಷ ಯಾವತ್ತೂ ನಿರ್ಲಕ್ಷಿಸಿಲ್ಲ: ನಿಖಿಲ್ ಕುಮಾರಸ್ವಾಮಿ
ಗ್ರಾಹಕರಿಂದ ಆನ್ಲೈನ್ ಪೇಮೆಂಟ್ಸ್ ಸ್ವೀಕರಿಸಿದ್ದು ವ್ಯಾಪಾರಿಗಳ ಅಪರಾಧ!
ಗ್ರಾಹಕರಿಂದ ಆನ್ಲೈನ್ ಪೇಮೆಂಟ್ಸ್ ಸ್ವೀಕರಿಸಿದ್ದು ವ್ಯಾಪಾರಿಗಳ ಅಪರಾಧ!
ದಲೈಲಾಮಾ ಹುಟ್ಟುಹಬ್ಬಕ್ಕೆ ವಿಶೇಷ ಹಾಡು ನಿರ್ಮಿಸಿದ ವಿಐಪಿ ಮೋಷನ್ ಪಿಕ್ಚರ್ಸ್
ದಲೈಲಾಮಾ ಹುಟ್ಟುಹಬ್ಬಕ್ಕೆ ವಿಶೇಷ ಹಾಡು ನಿರ್ಮಿಸಿದ ವಿಐಪಿ ಮೋಷನ್ ಪಿಕ್ಚರ್ಸ್
ಖರ್ಗೆಯವರನ್ನು ಭೇಟಿಯಾಗುವುದು 3-ದಿನ ಹಿಂದೆ ನಿಗದಿಯಾಗಿತ್ತು: ಜಾರಕಿಹೊಳಿ
ಖರ್ಗೆಯವರನ್ನು ಭೇಟಿಯಾಗುವುದು 3-ದಿನ ಹಿಂದೆ ನಿಗದಿಯಾಗಿತ್ತು: ಜಾರಕಿಹೊಳಿ
ಸಿಎಂ ಬದಲಾವಣೆ ವಿಷಯದಲ್ಲಿ ಸುರ್ಜೇವಾಲಾ ಚರ್ಚಿಸಿಲ್ಲ: ರಂಗನಾಥ್
ಸಿಎಂ ಬದಲಾವಣೆ ವಿಷಯದಲ್ಲಿ ಸುರ್ಜೇವಾಲಾ ಚರ್ಚಿಸಿಲ್ಲ: ರಂಗನಾಥ್
ಸುರ್ಜೆವಾಲಾ ಜೊತೆ ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಚರ್ಚೆಯಾಗಿಲ್ಲ: ಸಿಎಂ
ಸುರ್ಜೆವಾಲಾ ಜೊತೆ ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಚರ್ಚೆಯಾಗಿಲ್ಲ: ಸಿಎಂ
ವರಿಷ್ಠರ ಮಟ್ಟದಲ್ಲಿ ನಡೆಯುವ ಚರ್ಚೆ ಬಿಎಸ್​ವೈ ಗೊತ್ತಿಲ್ಲದಿರುತ್ತದೆಯೇ?
ವರಿಷ್ಠರ ಮಟ್ಟದಲ್ಲಿ ನಡೆಯುವ ಚರ್ಚೆ ಬಿಎಸ್​ವೈ ಗೊತ್ತಿಲ್ಲದಿರುತ್ತದೆಯೇ?
ಕೋರ್ಟ್​ ಎದುರು ನೆರೆದ ದರ್ಶನ್ ಫ್ಯಾನ್ಸ್; ನಟನಿಗೆ ಜೈಕಾರ
ಕೋರ್ಟ್​ ಎದುರು ನೆರೆದ ದರ್ಶನ್ ಫ್ಯಾನ್ಸ್; ನಟನಿಗೆ ಜೈಕಾರ