AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: 19 ಕೋಟಿ ರೂ.ಗೂ ಹೆಚ್ಚು ವಿದ್ಯುತ್ ಬಿಲ್ ಬಾಕಿ; ಕಾವೇರಿ ನೀರಾವರಿ ಘಟಕಕ್ಕೆ ವಿದ್ಯುತ್ ಸಂಪರ್ಕ ಕಟ್

ಈ ಹಿಂದೆ ಅಧಿಕಾರಿಗಳು ನೋಟಿಸ್ ನೀಡಿದ್ದರೂ ಕಾವೇರಿ ನೀರಾವರಿ ಘಟಕ ಬೇಜವಾಬ್ದಾರಿ ತೋರಿದ್ದಾರೆ. ಹೀಗಾಗಿ ಕಾವೇರಿ ನೀರಾವರಿ ಘಟಕಕ್ಕೆ ವಿದ್ಯುತ್ ಸಂಪರ್ಕ ಕಡಿತ ಮಾಡಲಾಗಿದೆ.

ಮೈಸೂರು: 19 ಕೋಟಿ ರೂ.ಗೂ ಹೆಚ್ಚು ವಿದ್ಯುತ್ ಬಿಲ್ ಬಾಕಿ; ಕಾವೇರಿ ನೀರಾವರಿ ಘಟಕಕ್ಕೆ ವಿದ್ಯುತ್ ಸಂಪರ್ಕ ಕಟ್
ವಿದ್ಯುತ್ ಶುಲ್ಕ ಬಾಕಿ
TV9 Web
| Edited By: |

Updated on:Jan 05, 2022 | 8:53 AM

Share

ಮೈಸೂರು: ಕೊನೆಗೂ ಕಾವೇರಿ ನೀರಾವರಿ ಘಟಕದ ವಿದ್ಯುತ್ ಸಂಪರ್ಕ ಕಡಿತ ಮಾಡಲಾಗಿದೆ. ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ಆಲಂಬೂರು ಗ್ರಾಮದಲ್ಲಿರುವ ಕಾವೇರಿ ನೀರಾವರಿ ಇಲಾಖೆ ಘಟಕ ಕಳೆದ ಎರಡು ವರ್ಷಗಳಿಂದ ವಿದ್ಯುತ್ ಶುಲ್ಕ (Electricity Bill) ಬಾಕಿ ಇಟ್ಟಿರುವ ಹಿನ್ನಲೆಯಲ್ಲಿ ಇಂದು ( ಜನವರಿ 05) ವಿದ್ಯುತ್ ಸಂಪರ್ಕ ಕಡಿತ ಮಾಡಲಾಗಿದೆ. 19 ಕೋಟಿ ರೂಪಾಯಿಗೂ ಅಧಿಕ ಮೊತ್ತ ಬಾಕಿ ಇದೆ.  ಈ ಹಿಂದೆ ಅಧಿಕಾರಿಗಳು ನೋಟಿಸ್ ನೀಡಿದ್ದರೂ ಕಾವೇರಿ ನೀರಾವರಿ ಘಟಕ ಬೇಜವಾಬ್ದಾರಿ ತೋರಿದ್ದಾರೆ. ಹೀಗಾಗಿ ಕಾವೇರಿ ನೀರಾವರಿ ಘಟಕಕ್ಕೆ ವಿದ್ಯುತ್ ಸಂಪರ್ಕ ಕಡಿತ ಮಾಡಲಾಗಿದೆ.

2 ವರ್ಷಗಳಿಂದ ಸರ್ಕಾರಿ ಕಚೇರಿಗಳ ವಿದ್ಯುತ್ ಬಿಲ್ ಪಾವತಿಸದೆ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆ.  ಡಿಸೆಂಬರ್ ತಿಂಗಳವರೆಗೆ 19,34,36,716 ರೂಪಾಯಿ ವಿದ್ಯುತ್​ ಬಿಲ್​ ಬಾಕಿ ಇದೆ. ಸೆಪ್ಟೆಂಬರ್‌ನಿಂದ ನೀರಾವರಿ ಇಲಾಖೆ ಅಧಿಕಾರಿಗಳಿಗೆ ನೋಟಿಸ್ ಕಳಿಸಿದರು ಅಧಿಕಾರಿಗಳು ಈ ಬಗ್ಗೆ ಗಮನಹರಿಸಿಲ್ಲ. ಹೀಗಾಗಿ ವಿದ್ಯುತ್ ಕಡಿತಗೊಳಿಸುವುದಾಗಿ ಚೆಸ್ಕಾಂ (CHESCOM) ಅಧಿಕಾರಿಗಳು, ನೀರಾವರಿ ಇಲಾಖೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದರು. ಆದರೆ ಈ ಬಗ್ಗೆ ಗಮನಹರಿಸದೆ ನೀರಾವರಿ ಇಲಾಖೆ ನಿರ್ಲಕ್ಷ್ಯ ತೋರಿದೆ, ಹೀಗಾಗಿ ವಿದ್ಯುತ್​ ಸಂಪರ್ಕ ಕಡಿತ ಮಾಡಲಾಗಿದೆ.

ಕಳೆದ ವರ್ಷ ಆಗಸ್ಟ್​ 31 ರಂದು ಕೂಡ ವಿದ್ಯುತ್​ ಬಿಲ್​ ಪಾವತಿಸದೆ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದರು ಹಲವು ಸಮಯದಿಂದ ವಿದ್ಯುತ್​ ಬಿಲ್​ ಪಾವತಿಸದೇ ಬಾಕಿ ಉಳಿಸಿಕೊಂಡ ಮೈಸೂರಿನ ಸರ್ಕಾರಿ ಕಚೇರಿಗಳಿಗೆ ಚೆಸ್ಕಾಂ ಶಾಕ್​ ನೀಡಿತ್ತು. ಮೈಸೂರು ಜಿಲ್ಲಾಧಿಕಾರಿ ತಾಲ್ಲೂಕು ಕಚೇರಿ ಸೇರಿ ಒಟ್ಟು 20ಕ್ಕೂ ಹೆಚ್ಚು ಸರ್ಕಾರಿ ಕಚೇರಿಗಳಿಗೆ ಆಗಸ್ಟ್​ 31 ರಂದು ವಿದ್ಯುತ್‌ ಸಂಪರ್ಕ ಕಡಿತಗೊಳಿಸಲಾಗಿತ್ತು. ಬಾಕಿ ಬಿಲ್ ಪಾವತಿಸುವ ತನಕವೂ ವಿದ್ಯುತ್ ಸ್ಥಗಿತಗೊಳಿಸಲು ಚೆಸ್ಕಾಂ ಅಧಿಕಾರಿಗಳು ನಿರ್ಧರಿಸಿದ್ದರು. ಹಲವು ವರ್ಷಗಳಿಂದ ಬಾಕಿ ಉಳಿಸಿಕೊಂಡ ಬಿಲ್​ ಪಾವತಿಸುವಂತೆ ಮನವಿ ಮಾಡಿದರೂ ಸ್ಪಂದಿಸದ ಇಲಾಖಾ ಕಚೇರಿಗಳ ಪಟ್ಟಿಮಾಡಿಕೊಂಡ ಚೆಸ್ಕಾಂ ಈ ರೀತಿಯ ನಿರ್ಧಾರ ತೆಗೆದುಕೊಂಡಿತ್ತು.

ಚೆಸ್ಕಾಂನ ನಿರ್ಧಾರದಿಂದಾಗಿ ಮೈಸೂರು ಸರ್ಕಾರಿ ಕಚೇರಿಗಳು ಕಗ್ಗತ್ತಲಲ್ಲಿ ಮುಳುಗಿತ್ತು. ಜಿಲ್ಲಾಧಿಕಾರಿ ಕಚೇರಿ, ಮಿನಿ ವಿಧಾನ ಸೌಧ, ಸಬ್ ರಿಜಿಸ್ಟಾರ್​ ಕಚೇರಿ, PWD, ಸಣ್ಣನೀರಾವರಿ, ಮಹಾರಾಣಿ ಕಾಲೇಜು ಸೇರಿದಂತೆ ಬೇರೆ ಬೇರೆ ಸರ್ಕಾರಿ ಕಚೇರಿಗಳಿಗೆ ವಿದ್ಯುತ್​ ಸಂಪರ್ಕ ಸ್ಥಗಿತಗೊಂಡಿತ್ತು. ಇದರಿಂದಾಗಿ ಕಚೇರಿಗಳ ಕೆಲಸದಲ್ಲಿ ವ್ಯತ್ಯಯವಾಗುತ್ತಿದ್ದು, ಅಧಿಕಾರಿಗಳು ಹಾಗೂ ಕೆಲಸ ಮಾಡಿಸಿಕೊಳ್ಳಲು ಬಂದ ಜನ ಸಾಮಾನ್ಯರು ಪರದಾಡುವಂತಾಗಿತ್ತು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಒಟ್ಟು 5 ವಿದ್ಯುತ್​ ಮೀಟರ್​ಗಳಿಂದ 3 ಲಕ್ಷದ 50 ಸಾವಿರ ರೂಪಾಯಿ ಬಿಲ್ ಬಾಕಿ ಇತ್ತು. ಮಿನಿ ವಿಧಾನಸೌಧದಲ್ಲಿ ಒಟ್ಟು 6 ಮೀಟರ್​ಗಳಿಂದ 3 ಲಕ್ಷದ 90 ಸಾವಿರ ರೂಪಾಯಿ ಬಿಲ್ ಬಾಕಿ ಉಳಿದಿತ್ತು. PWD ಕಚೇರಿಯಲ್ಲಿ 56 ಸಾವಿರ ರೂ, ಸಣ್ಣ ನೀರಾವರಿ ಇಲಾಖೆ 18 ಸಾವಿರ ರೂ ಬಿಲ್ ಬಾಕಿ ಇದೆ ಎನ್ನಲಾಗಿದೆ. ವಿದ್ಯುತ್​ ಸಂಪರ್ಕ ಕಡಿತದಿಂದಾಗಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ನೊಂದಣಿ ಕೆಲಸವೂ ಸ್ಥಗಿತವಾಗಿದ್ದು, ತಾಲ್ಲೂಕು ಕಚೇರಿಯಲ್ಲಿ ಕೆಲಸ ಸ್ಥಗಿತದಿಂದ ಜನರು ಪರದಾಡಬೇಕಾಗಿತ್ತು.

ಇದನ್ನೂ ಓದಿ:

ಹೈ ವೋಲ್ಟೇಜ್​ ವಿದ್ಯುತ್​ ತಂತಿ ತಗುಲಿ ಸಹೋದರರಿಬ್ಬರ ದುರ್ಮರಣ; ರಕ್ಷಣೆಗೆ ಬಂದ ಮೂರನೇಯವನಿಗೂ ಶಾಕ್​

ಬಿಲ್​ ಪಾವತಿಸದ ಕಾರಣ ಮೈಸೂರು ಜಿಲ್ಲಾಧಿಕಾರಿ ಕಚೇರಿ ಸೇರಿ ವಿವಿಧ ಸರ್ಕಾರಿ ಕಚೇರಿಗಳಿಗೆ ವಿದ್ಯುತ್​ ಸಂಪರ್ಕ ಕಡಿತ

Published On - 8:45 am, Wed, 5 January 22

Follow Us
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು