AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: 19 ಕೋಟಿ ರೂ.ಗೂ ಹೆಚ್ಚು ವಿದ್ಯುತ್ ಬಿಲ್ ಬಾಕಿ; ಕಾವೇರಿ ನೀರಾವರಿ ಘಟಕಕ್ಕೆ ವಿದ್ಯುತ್ ಸಂಪರ್ಕ ಕಟ್

ಈ ಹಿಂದೆ ಅಧಿಕಾರಿಗಳು ನೋಟಿಸ್ ನೀಡಿದ್ದರೂ ಕಾವೇರಿ ನೀರಾವರಿ ಘಟಕ ಬೇಜವಾಬ್ದಾರಿ ತೋರಿದ್ದಾರೆ. ಹೀಗಾಗಿ ಕಾವೇರಿ ನೀರಾವರಿ ಘಟಕಕ್ಕೆ ವಿದ್ಯುತ್ ಸಂಪರ್ಕ ಕಡಿತ ಮಾಡಲಾಗಿದೆ.

ಮೈಸೂರು: 19 ಕೋಟಿ ರೂ.ಗೂ ಹೆಚ್ಚು ವಿದ್ಯುತ್ ಬಿಲ್ ಬಾಕಿ; ಕಾವೇರಿ ನೀರಾವರಿ ಘಟಕಕ್ಕೆ ವಿದ್ಯುತ್ ಸಂಪರ್ಕ ಕಟ್
ವಿದ್ಯುತ್ ಶುಲ್ಕ ಬಾಕಿ
TV9 Web
| Edited By: |

Updated on:Jan 05, 2022 | 8:53 AM

Share

ಮೈಸೂರು: ಕೊನೆಗೂ ಕಾವೇರಿ ನೀರಾವರಿ ಘಟಕದ ವಿದ್ಯುತ್ ಸಂಪರ್ಕ ಕಡಿತ ಮಾಡಲಾಗಿದೆ. ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ಆಲಂಬೂರು ಗ್ರಾಮದಲ್ಲಿರುವ ಕಾವೇರಿ ನೀರಾವರಿ ಇಲಾಖೆ ಘಟಕ ಕಳೆದ ಎರಡು ವರ್ಷಗಳಿಂದ ವಿದ್ಯುತ್ ಶುಲ್ಕ (Electricity Bill) ಬಾಕಿ ಇಟ್ಟಿರುವ ಹಿನ್ನಲೆಯಲ್ಲಿ ಇಂದು ( ಜನವರಿ 05) ವಿದ್ಯುತ್ ಸಂಪರ್ಕ ಕಡಿತ ಮಾಡಲಾಗಿದೆ. 19 ಕೋಟಿ ರೂಪಾಯಿಗೂ ಅಧಿಕ ಮೊತ್ತ ಬಾಕಿ ಇದೆ.  ಈ ಹಿಂದೆ ಅಧಿಕಾರಿಗಳು ನೋಟಿಸ್ ನೀಡಿದ್ದರೂ ಕಾವೇರಿ ನೀರಾವರಿ ಘಟಕ ಬೇಜವಾಬ್ದಾರಿ ತೋರಿದ್ದಾರೆ. ಹೀಗಾಗಿ ಕಾವೇರಿ ನೀರಾವರಿ ಘಟಕಕ್ಕೆ ವಿದ್ಯುತ್ ಸಂಪರ್ಕ ಕಡಿತ ಮಾಡಲಾಗಿದೆ.

2 ವರ್ಷಗಳಿಂದ ಸರ್ಕಾರಿ ಕಚೇರಿಗಳ ವಿದ್ಯುತ್ ಬಿಲ್ ಪಾವತಿಸದೆ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆ.  ಡಿಸೆಂಬರ್ ತಿಂಗಳವರೆಗೆ 19,34,36,716 ರೂಪಾಯಿ ವಿದ್ಯುತ್​ ಬಿಲ್​ ಬಾಕಿ ಇದೆ. ಸೆಪ್ಟೆಂಬರ್‌ನಿಂದ ನೀರಾವರಿ ಇಲಾಖೆ ಅಧಿಕಾರಿಗಳಿಗೆ ನೋಟಿಸ್ ಕಳಿಸಿದರು ಅಧಿಕಾರಿಗಳು ಈ ಬಗ್ಗೆ ಗಮನಹರಿಸಿಲ್ಲ. ಹೀಗಾಗಿ ವಿದ್ಯುತ್ ಕಡಿತಗೊಳಿಸುವುದಾಗಿ ಚೆಸ್ಕಾಂ (CHESCOM) ಅಧಿಕಾರಿಗಳು, ನೀರಾವರಿ ಇಲಾಖೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದರು. ಆದರೆ ಈ ಬಗ್ಗೆ ಗಮನಹರಿಸದೆ ನೀರಾವರಿ ಇಲಾಖೆ ನಿರ್ಲಕ್ಷ್ಯ ತೋರಿದೆ, ಹೀಗಾಗಿ ವಿದ್ಯುತ್​ ಸಂಪರ್ಕ ಕಡಿತ ಮಾಡಲಾಗಿದೆ.

ಕಳೆದ ವರ್ಷ ಆಗಸ್ಟ್​ 31 ರಂದು ಕೂಡ ವಿದ್ಯುತ್​ ಬಿಲ್​ ಪಾವತಿಸದೆ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದರು ಹಲವು ಸಮಯದಿಂದ ವಿದ್ಯುತ್​ ಬಿಲ್​ ಪಾವತಿಸದೇ ಬಾಕಿ ಉಳಿಸಿಕೊಂಡ ಮೈಸೂರಿನ ಸರ್ಕಾರಿ ಕಚೇರಿಗಳಿಗೆ ಚೆಸ್ಕಾಂ ಶಾಕ್​ ನೀಡಿತ್ತು. ಮೈಸೂರು ಜಿಲ್ಲಾಧಿಕಾರಿ ತಾಲ್ಲೂಕು ಕಚೇರಿ ಸೇರಿ ಒಟ್ಟು 20ಕ್ಕೂ ಹೆಚ್ಚು ಸರ್ಕಾರಿ ಕಚೇರಿಗಳಿಗೆ ಆಗಸ್ಟ್​ 31 ರಂದು ವಿದ್ಯುತ್‌ ಸಂಪರ್ಕ ಕಡಿತಗೊಳಿಸಲಾಗಿತ್ತು. ಬಾಕಿ ಬಿಲ್ ಪಾವತಿಸುವ ತನಕವೂ ವಿದ್ಯುತ್ ಸ್ಥಗಿತಗೊಳಿಸಲು ಚೆಸ್ಕಾಂ ಅಧಿಕಾರಿಗಳು ನಿರ್ಧರಿಸಿದ್ದರು. ಹಲವು ವರ್ಷಗಳಿಂದ ಬಾಕಿ ಉಳಿಸಿಕೊಂಡ ಬಿಲ್​ ಪಾವತಿಸುವಂತೆ ಮನವಿ ಮಾಡಿದರೂ ಸ್ಪಂದಿಸದ ಇಲಾಖಾ ಕಚೇರಿಗಳ ಪಟ್ಟಿಮಾಡಿಕೊಂಡ ಚೆಸ್ಕಾಂ ಈ ರೀತಿಯ ನಿರ್ಧಾರ ತೆಗೆದುಕೊಂಡಿತ್ತು.

ಚೆಸ್ಕಾಂನ ನಿರ್ಧಾರದಿಂದಾಗಿ ಮೈಸೂರು ಸರ್ಕಾರಿ ಕಚೇರಿಗಳು ಕಗ್ಗತ್ತಲಲ್ಲಿ ಮುಳುಗಿತ್ತು. ಜಿಲ್ಲಾಧಿಕಾರಿ ಕಚೇರಿ, ಮಿನಿ ವಿಧಾನ ಸೌಧ, ಸಬ್ ರಿಜಿಸ್ಟಾರ್​ ಕಚೇರಿ, PWD, ಸಣ್ಣನೀರಾವರಿ, ಮಹಾರಾಣಿ ಕಾಲೇಜು ಸೇರಿದಂತೆ ಬೇರೆ ಬೇರೆ ಸರ್ಕಾರಿ ಕಚೇರಿಗಳಿಗೆ ವಿದ್ಯುತ್​ ಸಂಪರ್ಕ ಸ್ಥಗಿತಗೊಂಡಿತ್ತು. ಇದರಿಂದಾಗಿ ಕಚೇರಿಗಳ ಕೆಲಸದಲ್ಲಿ ವ್ಯತ್ಯಯವಾಗುತ್ತಿದ್ದು, ಅಧಿಕಾರಿಗಳು ಹಾಗೂ ಕೆಲಸ ಮಾಡಿಸಿಕೊಳ್ಳಲು ಬಂದ ಜನ ಸಾಮಾನ್ಯರು ಪರದಾಡುವಂತಾಗಿತ್ತು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಒಟ್ಟು 5 ವಿದ್ಯುತ್​ ಮೀಟರ್​ಗಳಿಂದ 3 ಲಕ್ಷದ 50 ಸಾವಿರ ರೂಪಾಯಿ ಬಿಲ್ ಬಾಕಿ ಇತ್ತು. ಮಿನಿ ವಿಧಾನಸೌಧದಲ್ಲಿ ಒಟ್ಟು 6 ಮೀಟರ್​ಗಳಿಂದ 3 ಲಕ್ಷದ 90 ಸಾವಿರ ರೂಪಾಯಿ ಬಿಲ್ ಬಾಕಿ ಉಳಿದಿತ್ತು. PWD ಕಚೇರಿಯಲ್ಲಿ 56 ಸಾವಿರ ರೂ, ಸಣ್ಣ ನೀರಾವರಿ ಇಲಾಖೆ 18 ಸಾವಿರ ರೂ ಬಿಲ್ ಬಾಕಿ ಇದೆ ಎನ್ನಲಾಗಿದೆ. ವಿದ್ಯುತ್​ ಸಂಪರ್ಕ ಕಡಿತದಿಂದಾಗಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ನೊಂದಣಿ ಕೆಲಸವೂ ಸ್ಥಗಿತವಾಗಿದ್ದು, ತಾಲ್ಲೂಕು ಕಚೇರಿಯಲ್ಲಿ ಕೆಲಸ ಸ್ಥಗಿತದಿಂದ ಜನರು ಪರದಾಡಬೇಕಾಗಿತ್ತು.

ಇದನ್ನೂ ಓದಿ:

ಹೈ ವೋಲ್ಟೇಜ್​ ವಿದ್ಯುತ್​ ತಂತಿ ತಗುಲಿ ಸಹೋದರರಿಬ್ಬರ ದುರ್ಮರಣ; ರಕ್ಷಣೆಗೆ ಬಂದ ಮೂರನೇಯವನಿಗೂ ಶಾಕ್​

ಬಿಲ್​ ಪಾವತಿಸದ ಕಾರಣ ಮೈಸೂರು ಜಿಲ್ಲಾಧಿಕಾರಿ ಕಚೇರಿ ಸೇರಿ ವಿವಿಧ ಸರ್ಕಾರಿ ಕಚೇರಿಗಳಿಗೆ ವಿದ್ಯುತ್​ ಸಂಪರ್ಕ ಕಡಿತ

Published On - 8:45 am, Wed, 5 January 22

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ