AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಕಚೇರಿಗಳ ವಿದ್ಯುತ್ ಬಿಲ್ 19 ಕೋಟಿ ರೂ. ಬಾಕಿ; ವಿದ್ಯುತ್ ಕಡಿತಗೊಳಿಸುವುದಾಗಿ ನೀರಾವರಿ ಇಲಾಖೆ ಅಧಿಕಾರಿಗಳಿಗೆ ಎಚ್ಚರಿಕೆ

ಡಿಸೆಂಬರ್ ತಿಂಗಳವರೆಗೆ 19,34,36,716 ರೂಪಾಯಿ ವಿದ್ಯುತ್​ ಬಿಲ್​ ಬಾಕಿ ಇದೆ. ಸೆಪ್ಟೆಂಬರ್‌ನಿಂದ ನೀರಾವರಿ ಇಲಾಖೆ ಅಧಿಕಾರಿಗಳಿಗೆ ನೋಟಿಸ್ ಕಳಿಸಿದರು ಅಧಿಕಾರಿಗಳು ಈ ಬಗ್ಗೆ ಗಮನಹರಿಸಿಲ್ಲ.

ಸರ್ಕಾರಿ ಕಚೇರಿಗಳ ವಿದ್ಯುತ್ ಬಿಲ್ 19 ಕೋಟಿ ರೂ. ಬಾಕಿ; ವಿದ್ಯುತ್ ಕಡಿತಗೊಳಿಸುವುದಾಗಿ ನೀರಾವರಿ ಇಲಾಖೆ ಅಧಿಕಾರಿಗಳಿಗೆ ಎಚ್ಚರಿಕೆ
ವಿದ್ಯುತ್ ಬಿಲ್ ಪಾವತಿಸದೆ ಅಧಿಕಾರಿಗಳ ನಿರ್ಲಕ್ಚ್ಯ
TV9 Web
| Updated By: preethi shettigar|

Updated on:Jan 05, 2022 | 8:53 AM

Share

ಮೈಸೂರು: 2 ವರ್ಷಗಳಿಂದ ಸರ್ಕಾರಿ ಕಚೇರಿಗಳ ವಿದ್ಯುತ್ ಬಿಲ್(Electricity bill) ಪಾವತಿಸದೆ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ ಘಟನೆ ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ ನಡೆದಿದೆ. ನಂಜನಗೂಡು ವಿಭಾಗದ ಕಾವೇರಿ ನೀರಾವರಿ ನಿಗಮದ ವಿದ್ಯುತ್​ ಬಿಲ್ ಪಾವತಿಸದೆ ನಿರ್ಲಕ್ಷ್ಯ ವಹಿಸಿದೆ. ಡಿಸೆಂಬರ್ ತಿಂಗಳವರೆಗೆ 19,34,36,716 ರೂಪಾಯಿ ವಿದ್ಯುತ್​ ಬಿಲ್​ ಬಾಕಿ ಇದೆ. ಸೆಪ್ಟೆಂಬರ್‌ನಿಂದ ನೀರಾವರಿ ಇಲಾಖೆ ಅಧಿಕಾರಿಗಳಿಗೆ ನೋಟಿಸ್ ಕಳಿಸಿದರು ಅಧಿಕಾರಿಗಳು ಈ ಬಗ್ಗೆ ಗಮನಹರಿಸಿಲ್ಲ. ಹೀಗಾಗಿ ವಿದ್ಯುತ್ ಕಡಿತಗೊಳಿಸುವುದಾಗಿ ಚೆಸ್ಕಾಂ (CHESCOM) ಅಧಿಕಾರಿಗಳು, ನೀರಾವರಿ ಇಲಾಖೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

ಕಳೆದ ವರ್ಷ ಆಗಸ್ಟ್​ 31 ರಂದು ಕೂಡ ವಿದ್ಯುತ್​ ಬಿಲ್​ ಪಾವತಿಸದೆ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದರು ಹಲವು ಸಮಯದಿಂದ ವಿದ್ಯುತ್​ ಬಿಲ್​ ಪಾವತಿಸದೇ ಬಾಕಿ ಉಳಿಸಿಕೊಂಡ ಮೈಸೂರಿನ ಸರ್ಕಾರಿ ಕಚೇರಿಗಳಿಗೆ ಚೆಸ್ಕಾಂ ಶಾಕ್​ ನೀಡಿತ್ತು. ಮೈಸೂರು ಜಿಲ್ಲಾಧಿಕಾರಿ ತಾಲ್ಲೂಕು ಕಚೇರಿ ಸೇರಿ ಒಟ್ಟು 20ಕ್ಕೂ ಹೆಚ್ಚು ಸರ್ಕಾರಿ ಕಚೇರಿಗಳಿಗೆ ಆಗಸ್ಟ್​ 31 ರಂದು ವಿದ್ಯುತ್‌ ಸಂಪರ್ಕ ಕಡಿತಗೊಳಿಸಲಾಗಿತ್ತು. ಬಾಕಿ ಬಿಲ್ ಪಾವತಿಸುವ ತನಕವೂ ವಿದ್ಯುತ್ ಸ್ಥಗಿತಗೊಳಿಸಲು ಚೆಸ್ಕಾಂ ಅಧಿಕಾರಿಗಳು ನಿರ್ಧರಿಸಿದ್ದರು. ಹಲವು ವರ್ಷಗಳಿಂದ ಬಾಕಿ ಉಳಿಸಿಕೊಂಡ ಬಿಲ್​ ಪಾವತಿಸುವಂತೆ ಮನವಿ ಮಾಡಿದರೂ ಸ್ಪಂದಿಸದ ಇಲಾಖಾ ಕಚೇರಿಗಳ ಪಟ್ಟಿಮಾಡಿಕೊಂಡ ಚೆಸ್ಕಾಂ ಈ ರೀತಿಯ ನಿರ್ಧಾರ ತೆಗೆದುಕೊಂಡಿತ್ತು.

ಚೆಸ್ಕಾಂನ ನಿರ್ಧಾರದಿಂದಾಗಿ ಮೈಸೂರು ಸರ್ಕಾರಿ ಕಚೇರಿಗಳು ಕಗ್ಗತ್ತಲಲ್ಲಿ ಮುಳುಗಿತ್ತು. ಜಿಲ್ಲಾಧಿಕಾರಿ ಕಚೇರಿ, ಮಿನಿ ವಿಧಾನ ಸೌಧ, ಸಬ್ ರಿಜಿಸ್ಟಾರ್​ ಕಚೇರಿ, PWD, ಸಣ್ಣನೀರಾವರಿ, ಮಹಾರಾಣಿ ಕಾಲೇಜು ಸೇರಿದಂತೆ ಬೇರೆ ಬೇರೆ ಸರ್ಕಾರಿ ಕಚೇರಿಗಳಿಗೆ ವಿದ್ಯುತ್​ ಸಂಪರ್ಕ ಸ್ಥಗಿತಗೊಂಡಿತ್ತು. ಇದರಿಂದಾಗಿ ಕಚೇರಿಗಳ ಕೆಲಸದಲ್ಲಿ ವ್ಯತ್ಯಯವಾಗುತ್ತಿದ್ದು, ಅಧಿಕಾರಿಗಳು ಹಾಗೂ ಕೆಲಸ ಮಾಡಿಸಿಕೊಳ್ಳಲು ಬಂದ ಜನ ಸಾಮಾನ್ಯರು ಪರದಾಡುವಂತಾಗಿತ್ತು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಒಟ್ಟು 5 ವಿದ್ಯುತ್​ ಮೀಟರ್​ಗಳಿಂದ 3 ಲಕ್ಷದ 50 ಸಾವಿರ ರೂಪಾಯಿ ಬಿಲ್ ಬಾಕಿ ಇತ್ತು. ಮಿನಿ ವಿಧಾನಸೌಧದಲ್ಲಿ ಒಟ್ಟು 6 ಮೀಟರ್​ಗಳಿಂದ 3 ಲಕ್ಷದ 90 ಸಾವಿರ ರೂಪಾಯಿ ಬಿಲ್ ಬಾಕಿ ಉಳಿದಿತ್ತು. PWD ಕಚೇರಿಯಲ್ಲಿ 56 ಸಾವಿರ ರೂ, ಸಣ್ಣ ನೀರಾವರಿ ಇಲಾಖೆ 18 ಸಾವಿರ ರೂ ಬಿಲ್ ಬಾಕಿ ಇದೆ ಎನ್ನಲಾಗಿದೆ. ವಿದ್ಯುತ್​ ಸಂಪರ್ಕ ಕಡಿತದಿಂದಾಗಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ನೊಂದಣಿ ಕೆಲಸವೂ ಸ್ಥಗಿತವಾಗಿದ್ದು, ತಾಲ್ಲೂಕು ಕಚೇರಿಯಲ್ಲಿ ಕೆಲಸ ಸ್ಥಗಿತದಿಂದ ಜನರು ಪರದಾಡಬೇಕಾಗಿತ್ತು.

ಇದನ್ನೂ ಓದಿ:

ಉರಿ ಜಲವಿದ್ಯುತ್​ ಸ್ಥಾವರಗಳ ಮೇಲೆ ದಾಳಿ ನಡೆಸಲು ಸಿದ್ಧವಾಗಿದೆ ಹೊಸದೊಂದು ಉಗ್ರ ಸಂಘಟನೆ; ಸ್ಥಳದಲ್ಲಿ ಬಿಗಿ ಭದ್ರತೆ

ತಿಂಗಳಿಗೆ 20,401 ರೂಪಾಯಿ ವಿದ್ಯುತ್​ ಬಿಲ್​; ತುಮಕೂರಿನ ವ್ಯಕ್ತಿಗೆ ಬಿಲ್​ ಮೂಲಕವೇ ಶಾಕ್​ ಕೊಟ್ಟ ಬೆಸ್ಕಾಂ

Published On - 11:50 am, Sun, 2 January 22

ರಾಜಸ್ಥಾನದಲ್ಲಿ ಭಾರೀ ಪ್ರವಾಹ; ಒಂದೇ ದಿನದಲ್ಲಿ 6 ಜನ ಸಾವು
ರಾಜಸ್ಥಾನದಲ್ಲಿ ಭಾರೀ ಪ್ರವಾಹ; ಒಂದೇ ದಿನದಲ್ಲಿ 6 ಜನ ಸಾವು
ಭಾವಿ ಪತಿಯ ಜೊತೆಗೆ ಆರತಿ ಮಾಡಿದ ಆಂಕರ್ ಅನುಶ್ರೀ, ಹಳೆ ವಿಡಿಯೋ ವೈರಲ್
ಭಾವಿ ಪತಿಯ ಜೊತೆಗೆ ಆರತಿ ಮಾಡಿದ ಆಂಕರ್ ಅನುಶ್ರೀ, ಹಳೆ ವಿಡಿಯೋ ವೈರಲ್
ಭೂಪಾಲ್​ನ ಶಾಲೆಯಲ್ಲಿ ಸೀಲಿಂಗ್ ಪ್ಲಾಸ್ಟರ್ ಬಿದ್ದು ಇಬ್ಬರಿಗೆ ಗಾಯ
ಭೂಪಾಲ್​ನ ಶಾಲೆಯಲ್ಲಿ ಸೀಲಿಂಗ್ ಪ್ಲಾಸ್ಟರ್ ಬಿದ್ದು ಇಬ್ಬರಿಗೆ ಗಾಯ
ಶ್ರೀಗಳ ವಿರುದ್ಧ ಆಡಿದ ಮಾತನ್ನು ಕಾಶಪ್ಪನವರ್ ವಾಪಸ್ಸ ಪಡೆಯಬೇಕು: ವೀರಣ್ಣ
ಶ್ರೀಗಳ ವಿರುದ್ಧ ಆಡಿದ ಮಾತನ್ನು ಕಾಶಪ್ಪನವರ್ ವಾಪಸ್ಸ ಪಡೆಯಬೇಕು: ವೀರಣ್ಣ
ಬಸವರಾಜ ಆಸಂಗಿ, ಲಕ್ಷ್ಮಿ ವಿರುದ್ಧ ಪೊಲೀಸ್ ದೂರು ಸಲ್ಲಿಸಿರುವ ಸಂತ್ರಸ್ತೆ
ಬಸವರಾಜ ಆಸಂಗಿ, ಲಕ್ಷ್ಮಿ ವಿರುದ್ಧ ಪೊಲೀಸ್ ದೂರು ಸಲ್ಲಿಸಿರುವ ಸಂತ್ರಸ್ತೆ
ಎಂಎ ಸಲೀಂರನ್ನು ಐಜಿ-ಡಿಜಿಪಿ ನೇಮಕಾತಿ ಹಿಂದೆ ರಾಜಕೀಯ ಇದೆ: ಅನುಪಮಾ ಶೆಣೈ
ಎಂಎ ಸಲೀಂರನ್ನು ಐಜಿ-ಡಿಜಿಪಿ ನೇಮಕಾತಿ ಹಿಂದೆ ರಾಜಕೀಯ ಇದೆ: ಅನುಪಮಾ ಶೆಣೈ
ಹ್ಯಾಟ್ರಿಕ್ ವಿಕೆಟ್ ಉರುಳಿಸಿದ ಪಾಕ್ ಮೂಲದ ಫರ್ಹಾನ್
ಹ್ಯಾಟ್ರಿಕ್ ವಿಕೆಟ್ ಉರುಳಿಸಿದ ಪಾಕ್ ಮೂಲದ ಫರ್ಹಾನ್
ಸಮಸ್ಯೆ ಹೆಚ್ಚುತ್ತಿದೆ, ಕೂಡಲೇ ಸರ್ಕಾರ ಮಧ್ಯಪ್ರವೇಶಿಸಬೇಕು: ಧಾಬಾ ಮಾಲೀಕ
ಸಮಸ್ಯೆ ಹೆಚ್ಚುತ್ತಿದೆ, ಕೂಡಲೇ ಸರ್ಕಾರ ಮಧ್ಯಪ್ರವೇಶಿಸಬೇಕು: ಧಾಬಾ ಮಾಲೀಕ
ಸಾಧನಾ ಸಮಾವೇಶದಿಂದ ವಾಪಸ್​ ಬರುತ್ತಿದ್ದ ಡಿಕೆಶಿ ಎಸ್ಕಾರ್ಟ್​​ ವಾಹನ ಪಲ್ಟಿ
ಸಾಧನಾ ಸಮಾವೇಶದಿಂದ ವಾಪಸ್​ ಬರುತ್ತಿದ್ದ ಡಿಕೆಶಿ ಎಸ್ಕಾರ್ಟ್​​ ವಾಹನ ಪಲ್ಟಿ
ಸಿಎಂ ಸಿದ್ದರಾಮಯ್ಯರನ್ನು ವಿನಾಕಾರಣ ದೂಷಿಸಲಾಗುತ್ತಿದೆ: ಕಾಶಪ್ಪನವರ್
ಸಿಎಂ ಸಿದ್ದರಾಮಯ್ಯರನ್ನು ವಿನಾಕಾರಣ ದೂಷಿಸಲಾಗುತ್ತಿದೆ: ಕಾಶಪ್ಪನವರ್