Mysore News: ವಿದ್ಯುತ್ ಪ್ರವಹಿಸಿ ಕರ್ತವ್ಯನಿರತ ಚೆಸ್ಕಾಂ ಸಿಬ್ಬಂದಿ ಸಾವು

ಮೈಸೂರಿನಲ್ಲಿ ವಿದ್ಯುತ್ ಪ್ರವಹಿಸಿ ಕರ್ತವ್ಯನಿರತ ಚೆಸ್ಕಾಂ ಸಿಬ್ಬಂದಿ ಸಾವನ್ನಪ್ಪಿದ ಘಟನೆ ನಗರದ ಹೂಟಗಳ್ಳಿ ಬಡಾವಣೆಯಲ್ಲಿ ನಡೆದಿದೆ. ಸಹಾಯಕ ಲೈನ್‌ಮ್ಯಾನ್​​​ ಸಂತೋಷ್​(26) ಮೃತ ರ್ದುದೈವಿ.

Mysore News: ವಿದ್ಯುತ್ ಪ್ರವಹಿಸಿ ಕರ್ತವ್ಯನಿರತ ಚೆಸ್ಕಾಂ ಸಿಬ್ಬಂದಿ ಸಾವು
ಮೃತ ಲೈನ್​ಮ್ಯಾನ್​
Edited By: ಕಿರಣ್ ಹನುಮಂತ್​ ಮಾದಾರ್

Updated on: Jul 23, 2023 | 7:45 AM

ಮೈಸೂರು: ವಿದ್ಯುತ್ ಪ್ರವಹಿಸಿ ಕರ್ತವ್ಯನಿರತ ಚೆಸ್ಕಾಂ ಸಿಬ್ಬಂದಿ ಸಾವನ್ನಪ್ಪಿದ ಘಟನೆ ಮೈಸೂರು(Mysore) ನಗರದ ಹೂಟಗಳ್ಳಿ ಬಡಾವಣೆಯಲ್ಲಿ ನಡೆದಿದೆ. ಸಹಾಯಕ ಲೈನ್‌ಮ್ಯಾನ್​​​ ಸಂತೋಷ್​(26) ಮೃತ ರ್ದುದೈವಿ. ಟ್ರಾನ್ಸ್​ಫಾರ್ಮರ್​​ ದುರಸ್ತಿ ವೇಳೆ ವಿದ್ಯುತ್​ ಹರಿದು ಈ ಅವಘಡ ನಡೆದಿದೆ. ಇನ್ನು ಚೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂದು ಮೃತ ಸಂತೋಷ್ ಪೋಷಕರು, ಸ್ನೇಹಿತರು ಆರೋಪಿಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ಎಸಿಪಿ ಗಜೇಂದ್ರ ಪ್ರಸಾದ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ಕುರಿತು ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಪರಿಚಿತ ವಾಹನ ಡಿಕ್ಕಿ ಪಾದಚಾರಿ ವೃದ್ದ ಸಾವು

ಮೈಸೂರು: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿಯೋರ್ವರು ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆಯ ಹುಣಸೂರು ನಗರದಲ್ಲಿ ನಡೆದಿದೆ. ನರಸಿಂಹ ಸ್ವಾಮಿ‌ ತಿಟ್ಟಿ‌ನ ಬಳಿ ನಡೆದುಕೊಂಡು ಹೋಗುವಾಗ ಈ ಅವಘಡ ನಡೆದಿದ್ದು, ಮೃತರ ಗುರುತು ಪತ್ತೆಯಾಗಿಲ್ಲ. ಇನ್ನು ಮೃತರ ಬಳಿ ಹೆಚ್​ಡಿ ಕೋಟೆಯಿಂದ ಹುಣಸೂರಿಗೆ ಪ್ರಯಾಣ ಮಾಡಿದ ಬಸ್ ಟಿಕೆಟ್ ಪತ್ತೆಯಾಗಿದ್ದು, ಸದ್ಯ ಹುಣಸೂರು ಶವಾಗಾರದಲ್ಲಿರುವ ಮೃತದೇಹ ಇಡಲಾಗಿದೆ. ಇದೀಗ ಮೃತರ ಗುರುತು ಪತ್ತೆ ಹಚ್ಚಲು ಸಹಾಯ ಮಾಡುವಂತೆ ಸಾರ್ವಜನಿಕರಿಗೆ ಹುಣಸೂರು ಪೊಲೀಸರು ಮನವಿ ಮಾಡಿದ್ದಾರೆ.

ಇದನ್ನೂ ಓದಿ:ದೇವನಹಳ್ಳಿ: ವಾಟರ್​ ಹೀಟರ್​​​ನಿಂದ ವಿದ್ಯುತ್​ ಪ್ರವಹಿಸಿ ತಾಯಿ, 4 ವರ್ಷದ ಮಗು ಸಾವು

ಬೈಕ್​​ ಕದ್ದ ಕಳ್ಳರನ್ನ 24 ಗಂಟೆಯಲ್ಲಿ ಬಂಧಿಸಿದ ಬೀದರ್​ ಪೊಲೀಸ್​

ಬೀದರ್: ಬೈಕ್ ಕಳ್ಳತನವಾದ 24 ಗಂಟೆಯಲ್ಲಿಯೇ ಬೈಕ್ ಕಳ್ಳರನ್ನ ಬಂಧಿಸುವಲ್ಲಿ ಬೀದರ್ ಪಟ್ಟಣದ ಗಾಂಧಿಗಂಜ್ ಪೊಲೀಸರು ಯಶಸ್ವಿಯಾಗಿದ್ದಾರೆ. ಹೌದು ರಾತ್ರಿ ಮನೆಯ ಮುಂದೆ ನಿಲ್ಲಿಸಿದ್ದ ಎರಡು ಬೈಕ್​ನ್ನು ಕಳ್ಳರು ಕದ್ದು ಪರಾರಾರಿಯಾಗಿದ್ದರು. ಬೈಕ್ ಕಳ್ಳತನವಾಗುತ್ತಿದ್ದಂತೆ ಬೈಕ್​ನ ಮಾಲೀಕರು ಗಾಂಧಿಗಂಜ್ ಪೊಲೀಸ್ ಠಾಣೆಯಲ್ಲಿ ದೂರು ಕೊಟ್ಟಿದ್ದರು. ಬೈಕ್ ಮಾಲೀಕರು ದೂರಿನ ಮೇರೆಗೆ ಬೈಕ್ ಕಳ್ಳತನವಾದ 24 ಗಂಟೆಯೊಳಗೆ ಕದ್ದ ಬೈಕ್​ನ್ನ ಪತ್ತೆ ಹಚ್ಚಿದ್ದು, ಪೊಲೀಸರ ಈ ಕಾರ್ಯಕ್ಕೆ ಎಸ್ಪಿ ಅವರು ಪ್ರಶಂಸೆ ವ್ಯಕ್ತ ಪಡಿಸಿ, ಸೂಕ್ತ ಬಹುಮಾನ ಘೋಷಿಸಿದ್ದಾರೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:14 am, Sun, 23 July 23

Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
Follow Us