AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ತವರಲ್ಲಿ ಕಾಲರಾ ಪತ್ತೆ; ಒಂದೇ ಗ್ರಾಮದ ಮೂವರಲ್ಲಿ ಕಾಣಿಸಿಕೊಂಡ ರೋಗ​

ಇದೇ ಏಪ್ರಿಲ್​ 06 ರಂದು ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ 49 ವೈದ್ಯಕೀಯ ​ವಿದ್ಯಾರ್ಥಿನಿಯರ ಪೈಕಿ ಇಬ್ಬರಲ್ಲಿ ಕಾಲರಾ ಅಂಶ ಪತ್ತೆಯಾಗಿತ್ತು. ಇದರ ಬೆನ್ನಲ್ಲೆ ವರುಣ ಕ್ಷೇತ್ರದ ತಗಡೂರು(Tagadur) ಗ್ರಾಮದ ಮೂವರಲ್ಲಿ ಕಾಲರಾ ಕಾಣಿಸಿಕೊಂಡಿದೆ.

ಸಿಎಂ ತವರಲ್ಲಿ ಕಾಲರಾ ಪತ್ತೆ; ಒಂದೇ ಗ್ರಾಮದ ಮೂವರಲ್ಲಿ ಕಾಣಿಸಿಕೊಂಡ ರೋಗ​
ಸಿಎಂ ತವರಲ್ಲಿ ಕಾಲರಾ ಪತ್ತೆ;
ದಿಲೀಪ್​, ಚೌಡಹಳ್ಳಿ
| Edited By: |

Updated on:May 18, 2024 | 9:05 PM

Share

ಮೈಸೂರು, ಮೇ.18: ಮುಖ್ಯಮಂತ್ರಿ ಸಿದ್ದರಾಮಯ್ಯ ತವರಿನಲ್ಲಿಯೇ ಕಾಲರಾ(Cholera) ಪತ್ತೆಯಾಗಿದೆ. ವರುಣ ಕ್ಷೇತ್ರದ ತಗಡೂರು(Tagadur) ಗ್ರಾಮದ ಮೂವರಲ್ಲಿ ಕಾಲರಾ ಕಾಣಿಸಿಕೊಂಡಿದೆ. ಗ್ರಾಮದ ಕೆಲವರಲ್ಲಿ ವಾಂತಿ-ಭೇದಿ ಕಾಣಿಸಿಕೊಂಡ ಹಿನ್ನೆಲೆ ಮುಂಜಾಗೃತ ಕ್ರಮವಾಗಿ ಪರೀಕ್ಷೆ ನಡೆಸಲು ಆರೋಗ್ಯ ಇಲಾಖೆ ಮುಂದಾಗಿತ್ತು. ಅದರಂತೆ ಕಳೆದ ಒಂದು ವಾರದಿಂದ ಸತತ 114 ಜನರನ್ನ ಪರೀಕ್ಷೆಗೊಳಪಡಿಸಲಾಗಿತ್ತು. ಈ ವೇಳೆ ಮೂವರಲ್ಲಿ ಕಾಲರಾ ಕಾಣಿಸಿಕೊಂಡಿದೆ.

ಬೋರ್​ವೆಲ್ ನೀರಿನಿಂದ ಕಾಲರಾ ಬಂದಿರುವ ಶಂಕೆ

ಇನ್ನು ಕಾಲರಾ ಪತ್ತೆಯಾಗುತ್ತಿದ್ದಂತೆ ಗ್ರಾಮಕ್ಕೆ ಡಿಎಚ್ಒ ಶಿವಕುಮಾರಸ್ವಾಮಿ ಸೇರಿದಂತೆ ಹಿರಿಯ ಆರೋಗ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೇಲ್ನೋಟಕ್ಕೆ ಬೋರ್​ವೆಲ್ ನೀರಿನಿಂದ ಕಾಲರ ಬಂದಿರುವ ಶಂಕೆ ವ್ಯಕ್ತವಾಗಿದೆ. ಇದರಿಂದ ಗ್ರಾಮದ ನಾಲ್ಕು ಬೋರ್​ವೆಲ್ ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿದ್ದು, ನೀರಿನ ಸ್ಯಾಂಪಲ್​ನ್ನು ಆರೋಗ್ಯ ಅಧಿಕಾರಿಗಳು ಪರೀಕ್ಷೆಗೆ ಕಳುಹಿಸಿದ್ದಾರೆ. ಗ್ರಾಮದ ಸಮುದಾಯ ಆಸ್ಪತ್ರೆಯಲ್ಲಿ ಮುಂಜಾಗೃತ ಕ್ರಮವಾಗಿ 6 ಜನ ವೈದ್ಯರು, ಆಂಬ್ಯುಲೆನ್ಸ್ ವಾಹನ ನಿಯೋಜನೆ ಮಾಡಲಾಗಿದೆ.

ಇದನ್ನೂ ಓದಿ:Cholera: ಬೆಂಗಳೂರಿನಲ್ಲಿ ಮತ್ತೊಂದು ಕಾಲರಾ ಪ್ರಕರಣ ಪತ್ತೆ, ರೋಗಿಗಳ ಸಂಖ್ಯೆ 41ಕ್ಕೆ ಏರಿಕೆ

ಏ.06 ರಂದು ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ 49 ವೈದ್ಯಕೀಯ ​ವಿದ್ಯಾರ್ಥಿನಿಯರ ಪೈಕಿ ಇಬ್ಬರಲ್ಲಿ ಕಾಲರಾ ಅಂಶ ಪತ್ತೆಯಾಗಿತ್ತು. ಹೌದು, ವಾಂತಿ-ಭೇದಿಯಿಂದ ತೀವ್ರ ಅಸ್ವಸ್ಥಗೊಂಡ ಹಿನ್ನಲೆ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಈ ವೇಲೆ ಕಾಲರಾ ಪತ್ತೆಯಾಗಿತ್ತು. ಇದರ ಬೆನ್ನಲ್ಲೆ ಇದೀಗ ವರುಣ ಕ್ಷೇತ್ರದ ತಗಡೂರು ಗ್ರಾಮದ ಮೂವರಲ್ಲಿ ಕಾಲರಾ ಕಾಣಿಸಿಕೊಂಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:42 pm, Sat, 18 May 24

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ