AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ತವರಲ್ಲಿ ಕಾಲರಾ ಪತ್ತೆ; ಒಂದೇ ಗ್ರಾಮದ ಮೂವರಲ್ಲಿ ಕಾಣಿಸಿಕೊಂಡ ರೋಗ​

ಇದೇ ಏಪ್ರಿಲ್​ 06 ರಂದು ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ 49 ವೈದ್ಯಕೀಯ ​ವಿದ್ಯಾರ್ಥಿನಿಯರ ಪೈಕಿ ಇಬ್ಬರಲ್ಲಿ ಕಾಲರಾ ಅಂಶ ಪತ್ತೆಯಾಗಿತ್ತು. ಇದರ ಬೆನ್ನಲ್ಲೆ ವರುಣ ಕ್ಷೇತ್ರದ ತಗಡೂರು(Tagadur) ಗ್ರಾಮದ ಮೂವರಲ್ಲಿ ಕಾಲರಾ ಕಾಣಿಸಿಕೊಂಡಿದೆ.

ಸಿಎಂ ತವರಲ್ಲಿ ಕಾಲರಾ ಪತ್ತೆ; ಒಂದೇ ಗ್ರಾಮದ ಮೂವರಲ್ಲಿ ಕಾಣಿಸಿಕೊಂಡ ರೋಗ​
ಸಿಎಂ ತವರಲ್ಲಿ ಕಾಲರಾ ಪತ್ತೆ;
ದಿಲೀಪ್​, ಚೌಡಹಳ್ಳಿ
| Edited By: ಕಿರಣ್ ಹನುಮಂತ್​ ಮಾದಾರ್|

Updated on:May 18, 2024 | 9:05 PM

Share

ಮೈಸೂರು, ಮೇ.18: ಮುಖ್ಯಮಂತ್ರಿ ಸಿದ್ದರಾಮಯ್ಯ ತವರಿನಲ್ಲಿಯೇ ಕಾಲರಾ(Cholera) ಪತ್ತೆಯಾಗಿದೆ. ವರುಣ ಕ್ಷೇತ್ರದ ತಗಡೂರು(Tagadur) ಗ್ರಾಮದ ಮೂವರಲ್ಲಿ ಕಾಲರಾ ಕಾಣಿಸಿಕೊಂಡಿದೆ. ಗ್ರಾಮದ ಕೆಲವರಲ್ಲಿ ವಾಂತಿ-ಭೇದಿ ಕಾಣಿಸಿಕೊಂಡ ಹಿನ್ನೆಲೆ ಮುಂಜಾಗೃತ ಕ್ರಮವಾಗಿ ಪರೀಕ್ಷೆ ನಡೆಸಲು ಆರೋಗ್ಯ ಇಲಾಖೆ ಮುಂದಾಗಿತ್ತು. ಅದರಂತೆ ಕಳೆದ ಒಂದು ವಾರದಿಂದ ಸತತ 114 ಜನರನ್ನ ಪರೀಕ್ಷೆಗೊಳಪಡಿಸಲಾಗಿತ್ತು. ಈ ವೇಳೆ ಮೂವರಲ್ಲಿ ಕಾಲರಾ ಕಾಣಿಸಿಕೊಂಡಿದೆ.

ಬೋರ್​ವೆಲ್ ನೀರಿನಿಂದ ಕಾಲರಾ ಬಂದಿರುವ ಶಂಕೆ

ಇನ್ನು ಕಾಲರಾ ಪತ್ತೆಯಾಗುತ್ತಿದ್ದಂತೆ ಗ್ರಾಮಕ್ಕೆ ಡಿಎಚ್ಒ ಶಿವಕುಮಾರಸ್ವಾಮಿ ಸೇರಿದಂತೆ ಹಿರಿಯ ಆರೋಗ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೇಲ್ನೋಟಕ್ಕೆ ಬೋರ್​ವೆಲ್ ನೀರಿನಿಂದ ಕಾಲರ ಬಂದಿರುವ ಶಂಕೆ ವ್ಯಕ್ತವಾಗಿದೆ. ಇದರಿಂದ ಗ್ರಾಮದ ನಾಲ್ಕು ಬೋರ್​ವೆಲ್ ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿದ್ದು, ನೀರಿನ ಸ್ಯಾಂಪಲ್​ನ್ನು ಆರೋಗ್ಯ ಅಧಿಕಾರಿಗಳು ಪರೀಕ್ಷೆಗೆ ಕಳುಹಿಸಿದ್ದಾರೆ. ಗ್ರಾಮದ ಸಮುದಾಯ ಆಸ್ಪತ್ರೆಯಲ್ಲಿ ಮುಂಜಾಗೃತ ಕ್ರಮವಾಗಿ 6 ಜನ ವೈದ್ಯರು, ಆಂಬ್ಯುಲೆನ್ಸ್ ವಾಹನ ನಿಯೋಜನೆ ಮಾಡಲಾಗಿದೆ.

ಇದನ್ನೂ ಓದಿ:Cholera: ಬೆಂಗಳೂರಿನಲ್ಲಿ ಮತ್ತೊಂದು ಕಾಲರಾ ಪ್ರಕರಣ ಪತ್ತೆ, ರೋಗಿಗಳ ಸಂಖ್ಯೆ 41ಕ್ಕೆ ಏರಿಕೆ

ಏ.06 ರಂದು ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ 49 ವೈದ್ಯಕೀಯ ​ವಿದ್ಯಾರ್ಥಿನಿಯರ ಪೈಕಿ ಇಬ್ಬರಲ್ಲಿ ಕಾಲರಾ ಅಂಶ ಪತ್ತೆಯಾಗಿತ್ತು. ಹೌದು, ವಾಂತಿ-ಭೇದಿಯಿಂದ ತೀವ್ರ ಅಸ್ವಸ್ಥಗೊಂಡ ಹಿನ್ನಲೆ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಈ ವೇಲೆ ಕಾಲರಾ ಪತ್ತೆಯಾಗಿತ್ತು. ಇದರ ಬೆನ್ನಲ್ಲೆ ಇದೀಗ ವರುಣ ಕ್ಷೇತ್ರದ ತಗಡೂರು ಗ್ರಾಮದ ಮೂವರಲ್ಲಿ ಕಾಲರಾ ಕಾಣಿಸಿಕೊಂಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:42 pm, Sat, 18 May 24

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ