AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಲುವರಾಯಸ್ವಾಮಿ ವಿರುದ್ಧದ ಲಂಚ ಪತ್ರ ರಾಜ್ಯಪಾಲರ ಕಚೇರಿಗೆ ಹೋಗಿದ್ದು ಎಲ್ಲಿಂದ? ಸ್ಫೋಟಕ ಮಾಹಿತಿ ಬಹಿರಂಗ

ಕೃಷಿ ಸಚಿವ ಎನ್.ಚಲುವರಾಯಸ್ವಾಮಿಯವರು ವಿವಾದದ ಗೂಡಲ್ಲಿ ಸಿಲುಕಿದ್ದಾರೆ.. ಈ ಹಿಂದೆ KSRTC ಡ್ರೈವರ್​​​ ಆತ್ಮಹತ್ಯೆ ಯತ್ನದ ಕೇಸ್​​ನಲ್ಲಿ ಸಚಿವರ ಹೆಸರು ಕೇಳಿಬಂದಿತ್ತು. ಇದೀಗ ಸಹಾಯಕ ಕೃಷಿ ನಿರ್ದೇಶಕರಿಗೆ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆಂಬ ಆರೋಪ ಸಖತ್​ ಸದ್ದು​​ ಮಾಡುತ್ತಿದೆ. ಇದೀಗ ರಾಜಕೀಯ ಸಂಚಲನ ಮೂಡಿಸ್ತಿದೆ. ಇದ್ರ ಮಧ್ಯೆ ಈ ಪ್ರಕರಣದ ತನಿಖೆಯನ್ನ ಸಿಐಡಿ ನಡೆಸುತ್ತಿದ್ದು, ಅಧಿಕಾರಿಗಳು ಅಖಾಡಕ್ಕಿಳಿದಿದ್ದು, ಇದೀಗ ರಾಜ್ಯಪಾಲರಿಗೆ ಆ ಪತ್ರ ಎಲ್ಲಿಂದ ರವಾನೆಯಾಗಿದೆ ಎನ್ನುವ ಮೂಲವನ್ನು ಪತ್ತೆ ಮಾಡಿದ್ದಾರೆ.

ಚಲುವರಾಯಸ್ವಾಮಿ ವಿರುದ್ಧದ ಲಂಚ ಪತ್ರ ರಾಜ್ಯಪಾಲರ ಕಚೇರಿಗೆ ಹೋಗಿದ್ದು ಎಲ್ಲಿಂದ? ಸ್ಫೋಟಕ ಮಾಹಿತಿ ಬಹಿರಂಗ
ಮೈಸೂರಿನ ಅಂಚೆಕಚೇರಿಯಲ್ಲಿ ಸಿಐಡಿ ತಂಡ
ಪ್ರಶಾಂತ್​ ಬಿ.
| Edited By: |

Updated on:Aug 10, 2023 | 8:04 AM

Share

ಮಂಡ್ಯ/ಮೈಸೂರು (ಆಗಸ್ಟ್ 10):  ಕೃಷಿ ಸಚಿವ ಎನ್.ಚಲುವರಾಯಸ್ವಾಮಿ(N Chaluvaraya Swamy) ಸಚಿವರಾಗಿ ಇನ್ನೂ 3 ತಿಂಗಳು ಕಳೆದಿಲ್ಲ. ಆಗಲೇ ಸಚಿವರನ್ನ ಒಂದಿಲ್ಲೊಂದು ವಿವಾದಗಳು ಸುತ್ತಿಕೊಳ್ಳುತ್ತಿವೆ. ಕೆಲವು ದಿನಗಳ ಹಿಂದೆ KSRTC ಚಾಲಕ‌ನೊಬ್ಬನ ಆತ್ಮಹತ್ಯೆಗೆ ಯತ್ನಿಸಲು ಕೃಷಿ ಸಚಿವರು ಕಾರಣ ಎಂದು ಆರೋಪಿಸಲಾಗಿತ್ತು. ಇದೀಗ ಮಂಡ್ಯ(Mandya) ಜಿಲ್ಲೆಯ ಕೃಷಿ ಇಲಾಖೆ ಸಹಾಯಕ ಕೃಷಿ ನಿರ್ದೇಶಕರಿಗೆ ಸಚಿವರು ಹಣಕ್ಕೆ(Bribe) ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿ ರಾಜ್ಯಪಾಲರಿಗೆ(governor )ಪತ್ರ ಬರೆಯಲಾಗಿದ್ದು, ಈ ವಿಚಾರ ಇದೀಗ ರಾಜಕೀಯ ತಿರುವು ಪಡೆದುಕೊಂಡು, ಆಡಳಿತ ಪಕ್ಷ ಮತ್ತು ವಿಪಕ್ಷಗಳ ಮಧ್ಯ ಜಟಾಪಟಿ ಸೃಷ್ಟಿಸಿದೆ. ಇದರ ಮಧ್ಯೆ ಆರೋಪದ ಸತ್ಯಸತ್ಯತೆ ತಿಳಿಯಲು ರಾಜ್ಯ ಸರ್ಕಾರ, ಪ್ರಕರಣವನ್ನ ಸಿಐಡಿ ತನಿಖೆಗೆ ವಹಿಸಿದೆ. ಪತ್ರದ ಸತ್ಯಾಸತ್ಯತೆ ಹೊರಗೆ ತರಲು ನಿನ್ನೆಯಿಂದಲೇ CID ಅಧಿಕಾರಿಗಳು ಫಿಲ್ಡೀಗಿಳಿದಿದ್ದು, ಚಲುವರಾಯಸ್ವಾಮಿ ವಿರುದ್ಧದ ಲಂಚ ಪತ್ರ ರಾಜ್ಯಪಾಲರ ಕಚೇರಿಗೆ ಹೋಗಿದ್ದು ಎಲ್ಲಿಂದ ಎನ್ನುವ ಮಾಹಿತಿ ಸಿಕ್ಕಿದೆ.

ಇದನ್ನೂ ಒದಿ: ನನ್ನ ವಿರುದ್ಧ ರಾಜ್ಯಪಾಲರಿಗೆ ಬರೆದ ಪತ್ರ ನಕಲಿ: ಚಲುವರಾಯಸ್ವಾಮಿ

ಸಿಐಡಿ ಐಜಿಪಿ ಪ್ರವೀಣ್ ಮಧುಕರ್ ಪವಾರ್ ನೇತೃತ್ವದಲ್ಲಿ ನಿನ್ನೆ (ಆಗಸ್ಟ್ 09) ಮಂಡ್ಯದ ಕೃಷಿ ಜಂಟಿ ನಿರ್ದೇಶಕರ ಕಚೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಸುಮಾರು ಅರ್ಧ ಗಂಟೆಗಳು ಕಚೇರಿಯಲ್ಲಿ ಪರಿಶೀಲಿಸಿ, ಜಂಟಿ ನಿರ್ದೇಶಕ ಅಶೋಕ್​​​​​ರಿಂದಲೂ ಮಾಹಿತಿ ಪಡೆದುಕೊಂಡರು. ಅಷ್ಟೇ ಅಲ್ಲದೇ ರಾಜ್ಯಪಾಲರಿಗೆ ಬರೆದಿದ್ದಾರೆ ಎನ್ನಲಾದ ಪತ್ರ ಪೋಸ್ಟ್ ಆಗಿರುವುದು ಮೈಸೂರಿನ ಸರಸ್ವತಿಪುರಂ ಅಂಚೆ ಕಚೇರಿಯಿಂದ ಎಂದು ತಿಳಿದುಬಂದಿದೆ. ಹೀಗಾಗಿ ಸಿಐಡಿ ಅಧಿಕಾರಿಗಳು ಮೈಸೂರಿಗೂ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಜುಲೈ 14ರಂದು ಮೈಸೂರಿನ ಸರಸ್ವತಿಪುರಂ ಅಂಚೆ ಕಚೇರಿಯಿಂದ ರಾಜಭವನಕ್ಕೆ ಪತ್ರ ರವಾನೆಯಾಗಿದೆ ಎಂದು ತಿಳಿದುಬಂದಿದ್ದು, ಈ ಬಗ್ಗೆ ಸಿಐಡಿ ಅಧಿಕಾರಿಗಳು ಸತತ ಒಂದು ಗಂಟೆ ಕಾಲ ಅಂಚೆ ಕಚೇರಿ ಸಿಬ್ಬಂದಿ ಬಳಿ ಮಾಹಿತಿ ಪಡೆದುಕೊಂಡು ದಾಖಲೆಗಳನ್ನು ತೆಗೆದುಕೊಂಡು ತೆರೆಳಿದ್ದಾರೆ. ಅಲ್ಲದೇ ಮತ್ತಷ್ಟು ದಾಖಲೆ ಒದಗಿಸುವಂತೆ ಅಂಚೆಕಚೇರಿ ಸಿಬ್ಬಂದಿಗೆ ಸೂಚನೆ ನೀಡಿದ್ದು,  ಪತ್ರ ಯಾರು ಬರೆದರು, ನಕಲಿನಾ ಅಥವಾ ಅಸಲಿನಾ ಎಂಬ ಕೂಲಂಕುಷವಾಗಿ ತನಿಖೆ ನಡೆಸುತ್ತಿದ್ದಾರೆ.

ಸಿಐಡಿ ಅಧಿಕಾರಿಗಳಿಗೆ ನಿರಾಸೆ

ಇನ್ನು ಯಾರು ಪತ್ರ ಬಂದು ಪೋಸ್ಟ್ ಮಾಡಿದ್ದಾರೆ ಎಂದು ಸಿಐಡಿ ಅಧಿಕಾರಿಗಳು, ಮೈಸೂರಿನ ಸರಸ್ವತಿ ಪುರಂ ಪೋಸ್ಟ್ ಆಫಿಸ್ ಸಿಸಿಟಿವಿ ಪರಿಶೀಲನೆ ಮಾಡಿದ್ದಾರೆ. ಆದ್ರೆ, ಅಂದಿನ ಅಂದರೆ ಪತ್ರ ಪೋಸ್ಟ್ ಮಾಡಿದ್ದ(ಜುಲೈ 14) ದಿನದ ವೀಡಿಯೋ ಇಲ್ಲ. ಅಂದಿನ ದಿನದ ವೀಡಿಯೋ ಓವರ್ ಲ್ಯಾಪ್ ಆಗಿದ್ದರಿಂದ ಫುಟೇಜ್ ಸಿಕ್ಕಿಲ್ಲ. ಇದರಿಂದ ಸಿಐಡಿ ಅಧಿಕಾರಿಗಳಿಗೆ ನಿರಾಸೆಯಾಗಿದೆ.

ಇನ್ನಷ್ಟು ಕರ್ನಾಟಕದ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 7:49 am, Thu, 10 August 23

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್