AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

136ನೇ ಜಯಂತಿಯ ಸಂಭ್ರವನ್ನ ಮುಸುಕಾಗಿಸಿದೆ.. ಕೆಟ್ಟುನಿಂತ ದೊಡ್ಡ ಗಡಿಯಾರ!

ಮೈಸೂರು: ನಾಲ್ವಡಿ ಕೃಷ್ಣರಾಜ ಒಡೆಯರ್ ಆಡಳಿತಕ್ಕೆ 25 ವರ್ಷ ತುಂಬಿದ ನೆನಪಿಗಾಗಿ ನಿರ್ಮಿಸಿದ್ದ ಮೈಸೂರಿನ ದೊಡ್ಡ ಗಡಿಯಾರ ಇದೀಗ ಕೆಟ್ಟು ನಿಂತಿದೆ. ಅಷ್ಟೆ ಅಲ್ಲದೆ ಗೋಡೆಯಲ್ಲಿ ಬಿರುಕು ಸಹ ಕಾಣಿಸಿಕೊಂಡಿದೆ. ಮೈಸೂರಿನ ದೊಡ್ಡ ಗಡಿಯಾರ ಅರಮನೆಗಳ ನಗರಿಗೆ ಪಾರಂಪರಿಕ ಕಟ್ಟಡಗಳಲ್ಲೇ ಅತ್ಯಂತ ವಿಶೇಷವಾದದ್ದು. ಮೈಸೂರು ಅರಮನೆಗೆ ಕಣ್ಣಳತೆ ದೂರದಲ್ಲಿರುವ ಈ ದೊಡ್ಡ ಗಡಿಯಾರ ಪ್ರವಾಸಿಗರನ್ನ ಸೂಜಿ ಗಲ್ಲಿನಂತೆ ಸೆಳೆಯುತ್ತೆ. ಇದೀಗ ಗಡಿಯಾರ ಗೋಪುರ ಭಾಗದಲ್ಲಿ ಬಿರುಕು ಕಾಣಿಸಿಕೊಂಡಿದ್ದು ಜೊತೆಗೆ ಗಡಿಯಾರವು ಸಹ ನಿಂತುಹೋಗಿದೆ. 90 ಅಡಿ ಎತ್ತರದ […]

136ನೇ ಜಯಂತಿಯ ಸಂಭ್ರವನ್ನ ಮುಸುಕಾಗಿಸಿದೆ.. ಕೆಟ್ಟುನಿಂತ ದೊಡ್ಡ ಗಡಿಯಾರ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: ಆಯೇಷಾ ಬಾನು|

Updated on:Jun 04, 2020 | 3:40 PM

Share

ಮೈಸೂರು: ನಾಲ್ವಡಿ ಕೃಷ್ಣರಾಜ ಒಡೆಯರ್ ಆಡಳಿತಕ್ಕೆ 25 ವರ್ಷ ತುಂಬಿದ ನೆನಪಿಗಾಗಿ ನಿರ್ಮಿಸಿದ್ದ ಮೈಸೂರಿನ ದೊಡ್ಡ ಗಡಿಯಾರ ಇದೀಗ ಕೆಟ್ಟು ನಿಂತಿದೆ. ಅಷ್ಟೆ ಅಲ್ಲದೆ ಗೋಡೆಯಲ್ಲಿ ಬಿರುಕು ಸಹ ಕಾಣಿಸಿಕೊಂಡಿದೆ. ಮೈಸೂರಿನ ದೊಡ್ಡ ಗಡಿಯಾರ ಅರಮನೆಗಳ ನಗರಿಗೆ ಪಾರಂಪರಿಕ ಕಟ್ಟಡಗಳಲ್ಲೇ ಅತ್ಯಂತ ವಿಶೇಷವಾದದ್ದು. ಮೈಸೂರು ಅರಮನೆಗೆ ಕಣ್ಣಳತೆ ದೂರದಲ್ಲಿರುವ ಈ ದೊಡ್ಡ ಗಡಿಯಾರ ಪ್ರವಾಸಿಗರನ್ನ ಸೂಜಿ ಗಲ್ಲಿನಂತೆ ಸೆಳೆಯುತ್ತೆ.

ಇದೀಗ ಗಡಿಯಾರ ಗೋಪುರ ಭಾಗದಲ್ಲಿ ಬಿರುಕು ಕಾಣಿಸಿಕೊಂಡಿದ್ದು ಜೊತೆಗೆ ಗಡಿಯಾರವು ಸಹ ನಿಂತುಹೋಗಿದೆ. 90 ಅಡಿ ಎತ್ತರದ ದೊಡ್ಡ ಗಡಿಯಾರ ಎರಡು ತಿಂಗಳಿಂದಲೂ ಕೆಟ್ಟುನಿಂತಿದ್ದು, ಇದರ ನಿರ್ವಹಣೆ ಮಾಡುತ್ತಿರು‌ವ ಮಹಾನಗರ ಪಾಲಿಕೆ ಸರಿಪಡಿಸಿಲ್ಲ. ಇದರ ಜೊತೆಗೆ ಕಳೆದ ಒಂದು ವರ್ಷದ ಹಿಂದೆಯೇ ಗಡಿಯಾರದ ಗೋಡೆಯಲ್ಲಿ ಬಿರುಕು ಬಿಟ್ಟಿರುವ ಬಗ್ಗೆ ಪಾಲಿಕೆ ಗಮನಕ್ಕೆ ತರಲಾಗಿತ್ತು. ಆದರೆ ಈವರೆಗೆ ಇದರ ರಿಪೇರಿ ಕಾರ್ಯ ಸಹ ನಡೆದಿಲ್ಲ. ಪಾಲಿಕೆ ನಡೆಗೆ ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಟೀಕೆಗಳು ಸಹ ವ್ಯಕ್ತವಾಗುತ್ತಿದೆ.

ರಾಜಶ್ರೀ ಕೃಷ್ಣರಾಜ ಒಡೆಯರ್ ಹೆಸರಲ್ಲಿ 10 ಜನರಿಗೆ ಪ್ರಶಸ್ತಿ: YSV ದತ್ತಾ ಮಾತ್ನಾಡಿದ್ದಾರೆ ಕೇಳಿ

ದೊಡ್ಡ ಗಡಿಯಾರದ ಇತಿಹಾಸ: ದೊಡ್ಡ ಗಡಿಯಾರಕ್ಕೆ ಬಹುದೊಡ್ಡ ಇತಿಹಾಸವಿದೆ. ನಾಲ್ವಡಿ ಕೃಷ್ಣರಾಜ ಒಡೆಯರ್​ ಅವರು, ಜನಪರ ಆಡಳಿತ, ಕ್ರಾಂತಿಕಾರ ಸಾಮಾಜಿಕ ಬದಲಾವಣೆ ಹಾಗೂ ಅಭಿವೃದ್ಧಿ ಕಾರ್ಯಗಳ ಮೂಲಕ ಜನಮನ್ನಣೆ ಗಳಿಸಿದ್ದರು. ನಾಲ್ವಡಿ ಅವರ ಪಟ್ಟಾಭಿಷೇಕದ ಬೆಳ್ಳಿಹಬ್ಬದ ನೆನಪಿಗಾಗಿ 1927ರಲ್ಲಿ ಅರಮನೆ ಸಿಬ್ಬಂದಿಗಳೇ ದೇಣಿಗೆ ಸಂಗ್ರಹಿಸಿ ದೊಡ್ಡ ಗಡಿಯಾರ ನಿರ್ಮಿಸಿದ್ದರು. ಅಷ್ಟೆ ಅಲ್ಲದೆ ದೊಡ್ಡ ಗಡಿಯಾರದಲ್ಲಿ ಬೃಹತ್ ಗಾತ್ರದ ಗಂಟೆಯು ಸಹ ಇದ್ದು ಪ್ರತಿಗಂಟೆಗೊಮ್ಮೆ ಶಬ್ದ ಮಾಡುತ್ತಿತ್ತು. ಆದರೆ ಕಟ್ಟಡದ ಸುರಕ್ಷತೆ ದೃಷ್ಟಿಯಿಂದ 1990 ರಲ್ಲಿ ಗಂಟೆ ಬಾರಿಸುವುದನ್ನು ನಿಲ್ಲಿಸಲಾಯಿತು.

Published On - 1:17 pm, Thu, 4 June 20

Follow Us
ಬಿಗ್​​ಬಾಸ್ ಕೊಟ್ಟ ಶಿಕ್ಷೆಗೆ ಗಳ-ಗಳನೆ ಅತ್ತ ಕಿರಣ್ ಶಾಸ್ತ್ರಿ: ವಿಡಿಯೋ
ಬಿಗ್​​ಬಾಸ್ ಕೊಟ್ಟ ಶಿಕ್ಷೆಗೆ ಗಳ-ಗಳನೆ ಅತ್ತ ಕಿರಣ್ ಶಾಸ್ತ್ರಿ: ವಿಡಿಯೋ
ಫಾಲ್ಕೆ ಪ್ರಶಸ್ತಿ ಲಭಿಸಿರುವುದಕ್ಕೆ ಅನಂತ್‌ನಾಗ್‌ ಫಸ್ಟ್ ರಿಯಾಕ್ಷನ್
ಫಾಲ್ಕೆ ಪ್ರಶಸ್ತಿ ಲಭಿಸಿರುವುದಕ್ಕೆ ಅನಂತ್‌ನಾಗ್‌ ಫಸ್ಟ್ ರಿಯಾಕ್ಷನ್
ಟಿವಿ9 ಕಚೇರಿಯಲ್ಲಿ ಗಣೇಶೋತ್ಸವ: ಅದ್ಧೂರಿ ಮೆರವಣಿಗೆಯೊಂದಿಗೆ ಗಣೇಶ ವಿಸರ್ಜನೆ
ಟಿವಿ9 ಕಚೇರಿಯಲ್ಲಿ ಗಣೇಶೋತ್ಸವ: ಅದ್ಧೂರಿ ಮೆರವಣಿಗೆಯೊಂದಿಗೆ ಗಣೇಶ ವಿಸರ್ಜನೆ
ಬಿಕೆ ಹರಿಪ್ರಸಾದ್ ಕೈಗೆ ಬಲ ತುಂಬಿದ ಸುರ್ಜೆವಾಲಾ, ವೇಣುಗೋಪಾಲ್
ಬಿಕೆ ಹರಿಪ್ರಸಾದ್ ಕೈಗೆ ಬಲ ತುಂಬಿದ ಸುರ್ಜೆವಾಲಾ, ವೇಣುಗೋಪಾಲ್
ಯುಪಿಐ ವಹಿವಾಟುಗಳಿಗೆ ಹೊಸ ಶುಲ್ಕ: ಯಾರು ಶುಲ್ಕ ಕಟ್ಟಬೇಕು? ಇಲ್ಲಿದೆ ಉತ್ತರ
ಯುಪಿಐ ವಹಿವಾಟುಗಳಿಗೆ ಹೊಸ ಶುಲ್ಕ: ಯಾರು ಶುಲ್ಕ ಕಟ್ಟಬೇಕು? ಇಲ್ಲಿದೆ ಉತ್ತರ
ಬೀದರ್​ನ ಪ್ರವಾಸಿ ತಾಣಗಳಲ್ಲಿ ಇರುವ ಕುಂದು ಕೊರತೆಗಳು ಒಂದಾ, ಎರಡಾ? ವಿಡಿಯೋ
ಬೀದರ್​ನ ಪ್ರವಾಸಿ ತಾಣಗಳಲ್ಲಿ ಇರುವ ಕುಂದು ಕೊರತೆಗಳು ಒಂದಾ, ಎರಡಾ? ವಿಡಿಯೋ
ಮೈಸೂರು ಹೊಸ ಮನೆ ಹಿಂದಿನ ರಹಸ್ಯ ಬಿಚ್ಚಿಟ್ಟ ಯತೀಂದ್ರ ಸಿದ್ದರಾಮಯ್ಯ
ಮೈಸೂರು ಹೊಸ ಮನೆ ಹಿಂದಿನ ರಹಸ್ಯ ಬಿಚ್ಚಿಟ್ಟ ಯತೀಂದ್ರ ಸಿದ್ದರಾಮಯ್ಯ
ಪಿಎಂ ಕಿಸಾನ್ ಸಮ್ಮಾನ್ ನಿಧಿ: ಇ-ಕೆವೈಸಿ ಮಾಡಿಸೋದೇಗೆ?; ಇಲ್ಲಿದೆ ಮಾಹಿತಿ
ಪಿಎಂ ಕಿಸಾನ್ ಸಮ್ಮಾನ್ ನಿಧಿ: ಇ-ಕೆವೈಸಿ ಮಾಡಿಸೋದೇಗೆ?; ಇಲ್ಲಿದೆ ಮಾಹಿತಿ
ಗಣೇಶ ಹಬ್ಬಕ್ಕೆ ಡಿಪೋ, ಬಸ್ ನಿಲ್ದಾಣದಲ್ಲಿ ಪ್ರಸಾದ ಸಿದ್ದಗೊಳಿಸದಂತೆ ಆದೇಶ
ಗಣೇಶ ಹಬ್ಬಕ್ಕೆ ಡಿಪೋ, ಬಸ್ ನಿಲ್ದಾಣದಲ್ಲಿ ಪ್ರಸಾದ ಸಿದ್ದಗೊಳಿಸದಂತೆ ಆದೇಶ
ತಾವರೆಕೆರೆ ಮೆಟ್ರೋ ಸ್ಟೇಷನ್ ಹೆಸರು ಬದಲಿಸದಂತೆ ಸ್ಥಳೀಯರು ಬಿಗಿಪಟ್ಟು
ತಾವರೆಕೆರೆ ಮೆಟ್ರೋ ಸ್ಟೇಷನ್ ಹೆಸರು ಬದಲಿಸದಂತೆ ಸ್ಥಳೀಯರು ಬಿಗಿಪಟ್ಟು