Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ದಸರಾ ಆಚರಣೆ, ಕೊವಿಡ್ 3ನೇ ಅಲೆಯ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಮಹತ್ವದ ಸುದ್ದಿಗೋಷ್ಠಿಯ ವಿವರ ಇಲ್ಲಿದೆ

ಮೈಸೂರು, ಕೊಡಗು ಜಿಲ್ಲೆಯಲ್ಲಿ ಟೆಸ್ಟಿಂಗ್ ಹೆಚ್ಚಿಸಬೇಕು. ಮೈಸೂರು ಜಿಲ್ಲೆಗೆ 14 ಆಕ್ಸಿಜನ್ ಜನರೇಟರ್ ಮಂಜೂರು ಮಾಡುತ್ತೇವೆ. ತಜ್ಞರ ಸಲಹೆಯಿಂದ ಗಡಿ ಭಾಗದಲ್ಲಿ ಎಲ್ಲರಿಗೂ ತಪಾಸಣೆ ಮಾಡಲಿದ್ದೇವೆ ಎಂದು ಅವರು ತಿಳಿಸಿದರು.

ಮೈಸೂರು ದಸರಾ ಆಚರಣೆ, ಕೊವಿಡ್ 3ನೇ ಅಲೆಯ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಮಹತ್ವದ ಸುದ್ದಿಗೋಷ್ಠಿಯ ವಿವರ ಇಲ್ಲಿದೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Follow us
TV9 Web
| Updated By: guruganesh bhat

Updated on:Aug 09, 2021 | 5:52 PM

ಮೈಸೂರು: ಮುಂದಿನ ಒಂದೆರಡು ವಾರಗಳಲ್ಲಿ ಕೊವಿಡ್ ಹೆಚ್ಚಾಗಲಿದೆಯೋ ಕಡಿಮೆ ಆಗಲಿದೆಯೇ ನೋಡುತ್ತೇವೆ. ಹೈ ಪವರ್ ಕಮಿಟಿಯಲ್ಲಿ ಮೈಸೂರು ದಸರಾ ಬಗ್ಗೆ ಚರ್ಚೆ ಮಾಡುತ್ತೇವೆ. ಕೊರೊನಾ ಸ್ಥಿತಿಗತಿ ಬಗ್ಗೆ ಅಧಿಕಾರಿಗಳ ಜತೆ ಸಭೆ ನಡೆಸಿದ್ದೇನೆ. ಆನಂತರ ಒಂದು ಸ್ಪಷ್ಟ ಚಿತ್ರಣ ದೊರೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿವರಿಸಿದರು. ಕೊರೊನಾ 3ನೇ ಅಲೆ ಬರದಂತೆ ಪ್ರಾರ್ಥನೆ ಮಾಡೋಣ. 3ನೇ ಅಲೆ ಬರದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಕೇರಳ, ಮಹಾರಾಷ್ಟ್ರದಲ್ಲಿ ಕೊರೊನಾ ಕೇಸ್ ಹೆಚ್ಚಾಗುತ್ತಿದೆ. ಮುಂಜಾಗ್ರತಾ ಕ್ರಮಕೈಗೊಳ್ಳುವಂತೆ ಡಿಸಿಗಳಿಗೆ ಸೂಚಿಸಿದ್ದೇನೆ. ಕಡ್ಡಾಯವಾಗಿ ಕೊವಿಡ್-19 ಟೆಸ್ಟ್ ಮಾಡುವಂತೆ ಸೂಚನೆ ನೀಡಿದ್ದೇನೆ ಎಂದು ದಸರಾ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. 

ರಾಜ್ಯಕ್ಕೆ 63ರಿಂದ 64 ಲಕ್ಷ ಡೋಸ್ ಲಸಿಕೆ (Covid Vaccine) ಬರುತ್ತಿದೆ. ಮುಂದಿನ ತಿಂಗಳಿಂದ 1.5 ಕೋಟಿ ಡೋಸ್ ಲಸಿಕೆಗೆ ಮನವಿ ಮಾಡಿದ್ದೇನೆ. ಮೈಸೂರು, ಕೊಡಗು ಜಿಲ್ಲೆಯಲ್ಲಿ ಟೆಸ್ಟಿಂಗ್ ಹೆಚ್ಚಿಸಬೇಕು. ಮೈಸೂರು ಜಿಲ್ಲೆಗೆ 14 ಆಕ್ಸಿಜನ್ ಜನರೇಟರ್ ಮಂಜೂರು ಮಾಡುತ್ತೇವೆ. ತಜ್ಞರ ಸಲಹೆಯಿಂದ ಗಡಿ ಭಾಗದಲ್ಲಿ ಎಲ್ಲರಿಗೂ ತಪಾಸಣೆ ಮಾಡಲಿದ್ದೇವೆ. ರಾಜ್ಯದ ಗಡಿ ಜಿಲ್ಲೆಗಳಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗಿದೆ ಮತ್ತು ಗಡಿ ಭಾಗದ ಗ್ರಾಮಗಳ ಜನರಿಗೆ ಆದ್ಯತೆ ಮೇರೆಗೆ ಲಸಿಕೆ ವಿತರಿಸುತ್ತೇವೆ ಎಂದು ತಿಳಿಸಿದರು.

ಮೂರನೇ ಅಲೆಯಲ್ಲಿ ಮಕ್ಕಳ ಮೇಲೆ ಪರಿಣಾಮ ವಿಚಾರವಾಗಿಯೂ ಮಾಹಿತಿ ನೀಡಿದ ಅವರು,ಪ್ರತಿ ಗ್ರಾಮದಲ್ಲಿ ಮಕ್ಕಳ ಹೆಲ್ತ್ ಕ್ಯಾಂಪ್ ಮಾಡಲಾಗುತ್ತೆ. ಶಾಲೆಗೆ ಬರುವ ಎಲ್ಲಾ ಮಕ್ಕಳ ತಪಾಸಣೆ ವ್ಯವಸ್ಥೆ ಮಾಡಲುತ್ತದೆ. ಅಪೌಷ್ಟಿಕ ಮಕ್ಕಳ ಬಗ್ಗೆ ಕಿಟ್ ನೀಡುವ ವ್ಯವಸ್ಥೆ ಮಾಡ್ತೇವೆ ಎಂದು ತಿಳಿಸಿದರು.

ಮೈಸೂರು ಜಿಲ್ಲೆಯಲ್ಲಿ ವೀಕೆಂಡ್ ಲಾಕ್‌ಡೌನ್​ಗೆ ವಿರೋಧಿಸಿ ಗಡಿ ಬಂದ್ ಮಾಡಿ, ನಗರ ಬಂದ್ ಮಾಡಬೇಡಿ  ಅಭಿಯಾನ ವಿಚಾರವಾಗಿಯೂ ಪ್ರತಿಕ್ರಿಯಿಸಿದ ಅವರು, ಮೈಸೂರಿನ ಹಿತದೃಷ್ಟಿಯಿಂದ ಈ ನಿರ್ಧಾರ ಮಾಡಲಾಗಿದೆ. ಮೈಸೂರಿಗೆ ಕೇರಳ ಮಹಾರಾಷ್ಟ್ರ ಮಾತ್ರವಲ್ಲ ಹೊರಗಿನಿಂದ ಹೆಚ್ಚು ಜನ ಬರುತ್ತಾರೆ. ನಮಗೆ ಮೈಸೂರು ಜನರ ಸುರಕ್ಷತೆ ಮುಖ್ಯ. ಇದನ್ನು ಎಲ್ಲರೂ ಅರ್ಥ ಮಾಡಿಕೊಂಡು ಸಹಕರಿಸಬೇಕು. ಮೈಸೂರಿಗರ ಅಭಿಪ್ರಾಯ ಸಂಗ್ರಹ ಮಾಡಿ ತಜ್ಞರ ಜೊತೆ ಚರ್ಚೆ ಮಾಡಿ ನಿರ್ಧಾರ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.

ಮೇಕೆದಾಟು ಯೋಜನೆಯನ್ನು ಅನುಷ್ಠಾನಗೊಳಿಸಿಯೇ ಸಿದ್ಧ ಮೇಕೆದಾಟು ವಿಚಾರ ನಾನು ಹತ್ತು ದಿನಗಳಲ್ಲಿ ದೆಹಲಿಗೆ ಹೋಗುತ್ತೇನೆ. ಕಾನೂನು ತಂಡದ ಮೂಲಕ ಮೇಕೆದಾಟು ವಿಚಾರವಾಗಿ ದೆಹಲಿಯಲ್ಲಿ ಚರ್ಚೆ ಮಾಡುತ್ತೇನೆ. ನಮ್ಮ ಉದ್ದೇಶ ಮೊದಲು ಡಿಪಿಆರ್ ಕ್ಲಿಯರ್ ಆಗಬೇಕು. ಮೇಕೆದಾಟು ಯೋಜನೆಗೆ ತಮಿಳುನಾಡು ವಿರೋಧ ವ್ಯಕ್ತಪಡಿಸಿದಂತಹ ಹಲವು ಸಂದರ್ಭಗಳನ್ನ ನಾವು ಎದುರಿಸಿದ್ದೇವೆ. ತಮಿಳುನಾಡಿನ ಒತ್ತಡದಿಂದ ಡಿಪಿಆರ್ಗೆ ಸಮ್ಮತಿ ಸಿಕ್ಕಿಲ್ಲ ಅನ್ನೋದು ಸರಿಯಲ್ಲ. ನಾವು ಶೀಘ್ರವೇ ಮೇಕೆದಾಟು ಪ್ರಾಜೆಕ್ಟ್ ಡಿಪಿಆರ್ ಗೆ ಅನುಮತಿ ಪಡೆಯುತ್ತೇವೆ. ಸುಪ್ರೀಂ ಕೋರ್ಟ್ ನಿರ್ದೇಶನ ಸಂಬಂಧ ನಾವು ಕೇಂದ್ರಕ್ಕೆ ಒಂದಷ್ಟು ಅಂಶಗಳನ್ನ ಮನವರಿಕೆ ಮಾಡಲಿದ್ದೇವೆ. ಆದರೆ ತಮಿಳುನಾಡು ಸುಪ್ರೀಂ ಕೋರ್ಟ್ ಆದೇಶ ವಿರುದ್ದವಾಗಿ ನಡೆದುಕೊಳ್ಳುತ್ತಿದೆ ಎಂದು ಮೈಸೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

ಇದನ್ನೂ ಓದಿ:

SSLC Results 2021: ಲೋಡ್ ಆಗುತ್ತಿಲ್ಲ ವೆಬ್​ಸೈಟ್; ಸಂಜೆಯ ವೇಳೆಗೆ ವಿದ್ಯಾರ್ಥಿಗಳಿಗೆ ಎಸ್​ಎಸ್​ಎಲ್​ಸಿ ಫಲಿತಾಂಶ ಕೈತಲುಪುವ ಸಾಧ್ಯತೆ

CM Basavaraj Bommai: ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡ ಸಿಎಂ ಬಸವರಾಜ ಬೊಮ್ಮಾಯಿ, ಸಚಿವರ ಜೊತೆ ನಾಡದೇವತೆ ಚಾಮುಂಡಿ ದರ್ಶನ

(CM Basavaraj Bommai says will decide Mysuru Dasara celebration after look covid situation in state)

Published On - 5:50 pm, Mon, 9 August 21

ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ವೇದಿಕೆಯ ಗಾಂಭೀರ್ಯತೆಯನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು: ಶಿವಕುಮಾರ್
ವೇದಿಕೆಯ ಗಾಂಭೀರ್ಯತೆಯನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು: ಶಿವಕುಮಾರ್