AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಥಳೀಯರಿಗೆ ಕಡ್ಡಾಯವಾಗಿ ಉದ್ಯೋಗ ನೀಡಬೇಕು: ಮೈಸೂರಿನ ಕಾರ್ಖಾನೆಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಸ್ಥಳೀಯರಿಗೆ ಉದ್ಯೋಗ ಸಿಗಬೇಕು ಎಂಬ ದೃಷ್ಟಿಯಿಂದ ಕಾರ್ಖಾನೆಗಳ ಪ್ರಾರಂಭಕ್ಕೆ ಅನುಮತಿ ನೀಡಲಾಗುತ್ತದೆ. ಉದ್ಯೋಗ ಸಿಗದಿದ್ದರೆ ಸರ್ಕಾರದ ಉದ್ದೇಶ ಈಡೇರುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಸ್ಥಳೀಯರಿಗೆ ಕಡ್ಡಾಯವಾಗಿ ಉದ್ಯೋಗ ನೀಡಬೇಕು: ಮೈಸೂರಿನ ಕಾರ್ಖಾನೆಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
ಸಿಎಂ ಸಿದ್ದರಾಮಯ್ಯ
TV9 Web
| Edited By: |

Updated on: Dec 23, 2023 | 2:01 PM

Share

ಮೈಸೂರು, ಡಿಸೆಂಬರ್ 23: ಮೈಸೂರು (Mysuru) ಹಾಗೂ ಸುತ್ತಮುತ್ತ ಸ್ಥಾಪಿಸಿರುವ ಕಾರ್ಖಾನೆಗಳಲ್ಲಿ ಸ್ಥಳೀಯರಿಗೆ ಕಡ್ಡಾಯವಾಗಿ ಉದ್ಯೋಗ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಮೈಸೂರಿನಲ್ಲಿ ಇಂದು ನಡೆದ ವಿವಿಧ ಕಾರ್ಖಾನೆಗಳ ಮುಖ್ಯಸ್ಥರ ಸಭೆಯಲ್ಲಿ ಮುಖ್ಯಮಂತ್ರಿಗಳು ಮಾತನಾಡಿದರು.

ಕಾರ್ಖಾನೆಗಳಲ್ಲಿ ಉದ್ಯೋಗ ಸ್ಥಳೀಯರಿಗೆ ಆದ್ಯತೆ ಸಿಗಬೇಕು. ತಾಂತ್ರಿಕ ನೈಪುಣ್ಯ ಇರುವವರು ಇಲ್ಲಿ ಸಿಗದಿದ್ದಾಗ ಮಾತ್ರ ಹೊರಗಿನವರಿಗೆ ಅವಕಾಶ ಕೊಡಬೇಕು. ಮಾನವ ಸಂಪನ್ಮೂಲ ನಮ್ಮಲ್ಲಿ ಇದೆ. ವೃತ್ತಿ ನೈಪುಣ್ಯ ಇರುವವರೂ ನಮ್ಮಲ್ಲಿ ಇದ್ದಾರೆ. ಸುಳ್ಳು ಕಾರಣ ಕೊಟ್ಟು ಸ್ಥಳೀಯರಿಗೆ ಉದ್ಯೋಗ ಅವಕಾಶ ನಿರಾಕರಿಸಬಾರದು ಎಂದು ಸಿದ್ದರಾಮಯ್ಯ ಹೇಳಿದರು.

ಕಾರ್ಖಾನೆಗಳು ಶಾಂತಿಯುತವಾಗಿ ನಡೆಯಬೇಕು. ನಮ್ಮ ಸರ್ಕಾರ ನಿರುದ್ಯೋಗಿ ಪದವೀಧರರಿಗಾಗಿ ಯುವ ನಿಧಿ ಯೋಜನೆ ಜಾರಿಗೆ ತರುತ್ತಿದೆ. ಯೋಜನೆ ಜನವರಿ 12ರಂದು ಉದ್ಘಾಟನೆಯಾಗಲಿದೆ. ನಿಮಗೆ ಯಾವ ರೀತಿಯ ವೃತ್ತಿ ನೈಪುಣ್ಯತೆ ಇರುವವರು ಬೇಕು ಎಂಬುದನ್ನು ಮನಗಂಡು ಪದವೀಧರರಿಗೆ ಸರ್ಕಾರದ ವತಿಯಿಂದ ತರಬೇತಿ ನೀಡಲಾಗುವುದು. ಕಾರ್ಖಾನೆಗಳಿಂದ ರಾಜ್ಯದ ಅಭಿವೃದ್ಧಿ ಆಗುತ್ತದೆ. ಜಿಡಿಪಿ ಬೆಳವಣಿಗೆಗೂ ಇದು ಸಹಕಾರಿ. ಕಾರ್ಖಾನೆಗಳಿಗೆ ಜಮೀನು ನೀಡಿದ ಮಾಲೀಕರ ಕುಟುಂಬದವರಿಗೆ ಪ್ರಮುಖವಾಗಿ ಉದ್ಯೋಗ ನೀಡಬೇಕು. ಸ್ಥಳೀಯರಿಗೆ ಆದ್ಯತೆ ಸಿಗಲೇಬೇಕು. ಒಂದು ವೇಳೆ ವೃತ್ತಿ ನೈಪುಣ್ಯತೆ ಇಲ್ಲದಿದ್ದರೆ ತರಬೇತಿ ನೀಡಿ ನೇಮಕ‌ ಮಾಡಿಕೊಳ್ಳುವುದು ಸೂಕ್ತ ಎಂದು ಸಿಎಂ ಹೇಳಿದರು.

ಇದನ್ನೂ ಓದಿ: ವಿದ್ಯಾರ್ಥಿಗಳಿಂದ ಶೌಚಾಲಯ ಕ್ಲೀನಿಂಗ್: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ

ಸ್ಥಳೀಯರಿಗೆ ಉದ್ಯೋಗ ಸಿಗಬೇಕು ಎಂಬ ದೃಷ್ಟಿಯಿಂದ ಕಾರ್ಖಾನೆಗಳ ಪ್ರಾರಂಭಕ್ಕೆ ಅನುಮತಿ ನೀಡಲಾಗುತ್ತದೆ. ಉದ್ಯೋಗ ಸಿಗದಿದ್ದರೆ ಸರ್ಕಾರದ ಉದ್ದೇಶ ಈಡೇರುವುದಿಲ್ಲ. ನಮ್ಮ ಸರ್ಕಾರ ಕೈಗಾರಿಗಳಿಗೆ ಸೌಲಭ್ಯ ಒದಗಿಸಲು ಬದ್ಧವಾಗಿದೆ. ಅದೇ ರೀತಿ ಸೂಕ್ತ ರಿಯಾಯಿತಿ ನೀಡಲೂ ಸಿದ್ಧ. ನಮ್ಮ ಸರ್ಕಾರ ಕೈಗಾರಿಕೆಗಳ ವಿರುದ್ಧ ಇಲ್ಲ. ಸ್ಥಳೀಯರಿಗೆ ಉದ್ಯೋಗ ಸಿಗಬೇಕು ಎಂಬುದು ನಮ್ಮ ಆಶಯ ಎಂದು ಮುಖ್ಯಮಂತ್ರಿಗಳು ಹೇಳಿದರು.

ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಸಿ. ಮಹಾದೇವಪ್ಪ, ಆಶ್ರಯ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ, ಜಿಲ್ಲಾಡಳಿತದ ಅಧಿಕಾರಿಗಳು ಸಭೆಯಲ್ಲಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!