AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಡಾ ಹಗರಣ: ಪತ್ನಿ ಪತ್ರ ಬರೆದಿದ್ದು ಗೊತ್ತಿದ್ದೂ ಗೊತ್ತಿಲ್ಲವೆಂದು ರಾಜ್ಯಪಾಲರಿಗೆ ಉತ್ತರಿಸಿದ ಸಿದ್ದರಾಮಯ್ಯ

ರಾಜ್ಯಪಾಲರು ಕೊಟ್ಟಿರುವ ಶೋಕಾಸ್ ನೋಟಿಸ್​ಗೆ ಉತ್ತರಿಸಿರುವ ಸಿಎಂ ಸಿದ್ದರಾಮಯ್ಯ ನನ್ನ ಪತ್ನಿ ಮುಡಾಗೆ ಯಾವ ಪತ್ರವನ್ನೂ ಬರೆದಿಲ್ಲ ಎಂದು ಸುಳ್ಳು ಮಾಹಿತಿ ನೀಡಿದ್ದಾರೆ. 23-06-2014ರಲ್ಲಿ ಮುಡಾಗೆ ಸಿಎಂ ಪತ್ನಿ ಪಾರ್ವತಿ 3.16 ಗುಂಟೆ ಜಮೀನಿಗೆ ಬದಲಿ ಜಾಗ‌ ಕೇಳಿ ಬರೆದಿರುವ ಅರ್ಜಿಯ ಸಂಪೂರ್ಣ ಮಾಹಿತಿಯ ಬಗ್ಗೆ ಸಿಎಂಗೆ ಗೊತ್ತಿದ್ರೂ, ನನ್ನ ಪತ್ನಿ ಪತ್ರ ಬರೆದಿಲ್ಲ ಎಂದು ಉಲ್ಲೇಖಿಸಿದ್ದಾರೆ.

ಮುಡಾ ಹಗರಣ: ಪತ್ನಿ ಪತ್ರ ಬರೆದಿದ್ದು ಗೊತ್ತಿದ್ದೂ ಗೊತ್ತಿಲ್ಲವೆಂದು ರಾಜ್ಯಪಾಲರಿಗೆ ಉತ್ತರಿಸಿದ ಸಿದ್ದರಾಮಯ್ಯ
ಸಿದ್ದರಾಮಯ್ಯ
ದಿಲೀಪ್​, ಚೌಡಹಳ್ಳಿ
| Edited By: |

Updated on: Aug 22, 2024 | 1:16 PM

Share

ಮೈಸೂರು, ಆಗಸ್ಟ್​.22: ಮುಡಾ ಅಕ್ರಮ (MUDA Scam) ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧ ಒಂದಿಲ್ಲಾವೊಂದು ಸಂಕಷ್ಟಗಳು ಎದುರಾಗುತ್ತಿವೆ. ರಾಜ್ಯಪಾಲರು ಕೊಟ್ಟಿರುವ ಶೋಕಾಸ್ ನೋಟಿಸ್​ಗೆ ಉತ್ತರಿಸಿರುವ ಸಿಎಂ ಸಿದ್ದರಾಮಯ್ಯ ನನ್ನ ಪತ್ನಿ ಮುಡಾಗೆ ಯಾವ ಪತ್ರವನ್ನೂ ಬರೆದಿಲ್ಲ ಎಂದು ಸುಳ್ಳು ಮಾಹಿತಿ ನೀಡಿದ್ದಾರೆ. ಪತ್ನಿ ಬರೆದಿರುವ ಅರ್ಜಿಯ ಸಂಪೂರ್ಣ ಮಾಹಿತಿ ಗೊತ್ತಿದ್ದರೂ ನನ್ನ ಪತ್ನಿ ಪತ್ರ ಬರೆದಿಲ್ಲ ಎಂದು ಸುಳ್ಳು ಹೇಳಿದ್ದಾರೆ.

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಸಿದ್ದರಾಮಯ್ಯನವರಿಗೆ ಶೋಕಾಸ್‌ ನೋಟಿಸ್‌ ನೀಡಿದ್ದರು. ಈ ನೋಟಿಸ್‌ಗೆ ಉತ್ತರಿಸಿದ ಸಿದ್ದರಾಮಯ್ಯನವರು, ತಮ್ಮ ಪತ್ನಿ ಪಾರ್ವತಿ ಅವರು ಮುಡಾಗೆ ಬರೆದ ಪತ್ರದ ಬಗ್ಗೆ ಉಲ್ಲೇಖ ಮಾಡಿದ್ದಾರೆ. 30ನೇ ಖಂಡಿಕೆ 15ನೇ ಅನೆಕ್ಸರ್ ನಲ್ಲಿ ತಮ್ಮ ಪತ್ನಿ ಮುಡಾಗೆ ಪತ್ರ ಬರೆದಿರುವ ಬಗ್ಗೆ ಮಾಹಿತಿ ನೀಡಿದ್ದಾರೆ.

23-06-2014ರಲ್ಲಿ ಮುಡಾಗೆ ಸಿಎಂ ಪತ್ನಿ ಪಾರ್ವತಿ 3.16 ಗುಂಟೆ ಜಮೀನಿಗೆ ಬದಲಿ ಜಾಗ‌ ಕೇಳಿ ಬರೆದಿರುವ ಅರ್ಜಿಯ ಸಂಪೂರ್ಣ ಮಾಹಿತಿಯ ಬಗ್ಗೆ ಸಿಎಂಗೆ ಗೊತ್ತಿದ್ರೂ, ನನ್ನ ಪತ್ನಿ ಪತ್ರ ಬರೆದಿಲ್ಲ ಎಂದು ಉಲ್ಲೇಖಿಸಿದ್ದಾರೆ. ನನ್ನ ಪತ್ನಿ ಮುಡಾಗೆ ಯಾವ ಪತ್ರವನ್ನ ಬರೆದಿಲ್ಲ ಎಂದು ತಿಳಿಸಿದ್ದು ಸಿಎಂಗೆ ಸಂಕಷ್ಟ ಕಾದಿದ್ಯಾ ಎನ್ನಲಾಗುತ್ತಿದೆ. ಪತ್ನಿ ಮುಡಾಗೆ ಬರೆದ ಪತ್ರದ ಬಗ್ಗೆ ಗೊತ್ತಿಲ್ಲ ಎಂದು ಸಿಎಂ ಸುಳ್ಳು ಹೇಳಿದ್ದೇಕೆ ಎಂಬ ಪ್ರಶ್ನೆ ಎದ್ದಿದೆ.

ಇದನ್ನೂ ಓದಿ: ರಿಟ್ ಅರ್ಜಿಯಲ್ಲಿ ಕೋರ್ಟ್​ ಕಣ್ತಪ್ಪಿಸಿದ್ದಾರೆ ಸಿದ್ದರಾಮಯ್ಯ: ದೂರದಾರ ಸ್ನೇಹಮಹಿ ಕೃಷ್ಣ ಗಂಭೀರ ಆರೋಪ

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರು ನ್ಯಾಯಾಲಯಕ್ಕೆ ಸುಳ್ಳು ಮಾಹಿತಿ ನೀಡಿ ದಿಕ್ಕು ತಪ್ಪಿಸಿದ್ದಾರೆ ಎಂದು ದೂರುದಾರ ಸ್ನೇಹಮಯಿ ಕೃಷ್ಣ ಆರೋಪಿಸಿದ್ದಾರೆ. ಪತ್ನಿ ಪಾರ್ವತಿ ಮುಡಾಗೆ ಪತ್ರ ಬರೆದಿರುವುದು ಸಿದ್ದರಾಮಯ್ಯಗೆ ಮೊದಲೇ ಗೊತ್ತಿತ್ತು. ಸಿದ್ದರಾಮಯ್ಯ ಒಟ್ಟು 713 ಪುಟಗಳ ದಾಖಲೆ ಒಳಗೊಂಡ ರಿಟ್ ಅರ್ಜಿಯನ್ನು ಕೋರ್ಟ್‌ಗೆ ಹಾಕಿದ್ದಾರೆ. 531ನೇ ಪುಟವಾಗಿ ಪಾರ್ವತಿ ಬರೆದ ಅರ್ಜಿಯ ಮೊದಲ ಪುಟ ಇದೆ. ಆದರೆ‌ 532ನೇ ಪುಟದಲ್ಲಿ ಪಾರ್ವತಿ ಅವರು ಬರೆದ ಎರಡನೇ ಪುಟ ಇಲ್ಲ. ಅದರಲ್ಲೂ ಎರಡನೇ ಪುಟದಲ್ಲಿ ಸಾಕ್ಷ್ಯ ನಾಶ ಎನ್ನುವ ರೀತಿಯಲ್ಲಿ ವೈಟ್ನರ್‌ ಹಾಕಿ ಅಳಿಸುವ ಪ್ರಯತ್ನ ಮಾಡಲಾಗಿದೆ. 532ನೇ ಪುಟದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ನಡಾವಳಿ ಪತ್ರ ಇದೆ. ವೈಟ್ನರ್‌ ಹಾಕಿದ ಕಾರಣಕ್ಕಾಗಿ ಎರಡನೇ ಪುಟ ಬಿಟ್ಟು ಕೇವಲ ಒಂದು ಪುಟ ಮಾತ್ರ ಕೋರ್ಟ್‌ಗೆ ಕೊಟ್ಟಿದ್ದಾರೆ ಎಂದು ಸ್ನೇಹಮಯಿ ಅವರು ಆರೋಪಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Dileep CP
Dileep CP

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಅದನ್ನು ಹೊರತು ಪಡಿಸಿದರೆ ಒಂದಷ್ಟು ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್